Homeಮುಖಪುಟಯಾಕ್ಸಾರ್ ಮೋದಿ ಖಾಲಿಬಾಟ್ಳಿ ಪ್ಲಾಸ್ಟಿಕ್ ಲೋಟ ಆಯ್ತಾಯಿದ್ರು! - ಬಿ.ಚಂದ್ರೇಗೌಡ

ಯಾಕ್ಸಾರ್ ಮೋದಿ ಖಾಲಿಬಾಟ್ಳಿ ಪ್ಲಾಸ್ಟಿಕ್ ಲೋಟ ಆಯ್ತಾಯಿದ್ರು! – ಬಿ.ಚಂದ್ರೇಗೌಡ

- Advertisement -
- Advertisement -

ಶಿವಮೊಗ್ಗದಿಂದ ಮೈಸೂರಿಗೆ ರೈಲಿನಲ್ಲಿ ಹೋಗುತ್ತಿರಬೇಕಾದರೆ, ಕೆ.ಆರ್.ನಗರದ ಬಳಿ ಮೂವರು ಮುಸ್ಲಿಂ ಯುವಕರು ಓಡಿಬಂದು ರೈಲತ್ತಿಕೊಂಡರು. ಅಲ್ಲದೆ ತಾವು ಕೂರುವುದಕ್ಕೆ ಮೊದಲು ತಮ್ಮ ಕೈಚೀಲಗಳನ್ನು ಸೀಟಿನ ಮೇಲೆ ಎಸೆದು, ಒಬ್ಬರ ಮೇಲೊಬ್ಬರು ಬಿದ್ದು ಓಡಿ ಬಂದು ದಣಿವಾರಿಸಿಕೊಳ್ಳತೊಡಗಿದರು. ಈ ಶ್ರಮಜೀವಿಗಳ ಜೀವನೋತ್ಸಾಹ ನೋಡುವಂತದ್ದು. ಅದೇ ಕಂಪನಿಗಳ, ಸರಕಾರದ ಕರ್ಮಾಚಾರಿಗಳ ನಿರುತ್ಸಾಹದ ಮುಖಗಳನ್ನ ನೋಡಿದರೆ ಅಯ್ಯೋ ಪಾಪ ಎನ್ನಿಸುತ್ತದೆ. ಆದ್ದರಿಂದ ನನ್ನೆದುರು ಕುಳಿತ ಹುಡುಗರನ್ನು ಮಾತನಾಡಬೇಕೆನಿಸಿತು.

“ಎಲ್ಲಿಂದ ಬರ್ತಾಯಿದ್ದೀರಿ” ಎಂದೆ.
“ಕೆ.ಆರ್.ನಗರದಿಂದ ಶಾರ್.”
“ಏನು ಮಾಡ್ತಿರಿ.”
“ಪೈಂಟಿಂಗ್ ಮಾಡ್ತಿವಿ ಶಾರ್.”
“ಊರ್ಯಾವುದು.”
“ಮೈಸೂರು” ಎಂದವನು ಸರಿಯಾಗಿ ಕುಳಿತು, ನನ್ನೊಡನೆ ಮಾತನಾಡುವ ಉತ್ಸಾಹ ತೋರಿದ. ಉಳಿದಿಬ್ಬರು ಬಾಗಿಲಲ್ಲಿ ನಿಂತು ಗಾಳಿಗೆ ಮೈವೊಡ್ಡಿದರು.
“ಈ ಹಾಳು ಬಿಜೆಪಿಗಳು ರೈಲಿನ ಬಣ್ಣನೂ ಬದ್ಲಾಸ್ತ ಅವೆ ಕಣಯ್ಯ” ಎಂದೆ.
“ಹೌದು ಶಾರ್, ಮದ್ಲಿಂದು ಬಣ್ಣ ಎಷ್ಟು ದೂಳು ಬಿದ್ರೂ ಕಾಣ್ತಿರಲಿಲ್ಲ. ಈಗ ರೈಲು ನೋಡಿದ್ರೆ ಮೈಮೇಲೆ ಮಣ್ಣು ಹುಯ್ಕಂಡು ಓಡಾಡ್ತವೆ.” ಎಂದ.
“ಬಿಜೆಪಿಗಳು ಬಣ್ಣ ಬದ್ಲಾಯಿಸ್ತವೆ ಅಷ್ಟೇ, ಇನ್ನೇನು ಆಗದಿಲ್ಲ ಅವುರ ಕೈಲಿ” ಎಂದೆ.
“ಈಗ ಯಾರ್ ಬರ್ತರೆ ಸಾರ್ ಸೀಟಿಗೆ.”
“ಯಾವ ಸೀಟಿಗೆ.”
“ಮೋದಿ ಸೀಟಿಗೆ ”
“ಯಾರು ಬರದಿಲ್ಲ.”
“ಮತ್ತೆ ಎಲೆಕ್ಷನ್ ಬಂದುಬಿಟ್ಟಿದೆ.”
“ಅದು ಉಪ ಚುನಾವಣೆ. ನಮ್ಮ ಸ್ಟೇಟಿಗೆ ಬಂದದೆ ಅಷ್ಟೇ.”
“ಓ ಎಡೂರಪ್ಪನ ಸೀಟಿಗೆ ಅನ್ನಿ.”
“ಹೌದು.”
“ಯಾಕ್ಸ ಮತ್ತೆ ರಿಟನ್ ಯಲಕ್ಷನ್ನು”
“ಅದೂ ನಿಮ್ಮ ಕೆ.ಆರ್.ನಗರದ ವಿಶ್ವನಾಥ್ ಗೊತ್ತ, ಅವುನಂತ ಹದಿನೇಳು ಜನನ ಬಿಜೆಪಿಗಳು ಕೊಂಡಕಂಡ್ರು.”
“ಅಂಗೆ ಮನುಸುರ್ನೆ ಕೊಳ್ಳಬವುದ ಶಾರ್.”
“ಮನುಷ್ಯರನ್ನ ಕೊಳ್ಳಕ್ಕಾಗಲ್ಲ. ಶಾಸಕರ ಕೊಳ್ಳಬವುದು.”
“ಒಳ್ಳೆ ಮಜಾ ಇದೆ ಶಾರ್ ಮ್ಯಾಟ್ರು.”
“ನಮಿಗೆ ಮಜಾ. ಸರಿ, ಅವುರ ಪಜೀತಿ ಯಾರಿಗೂ ಬ್ಯಾಡ ಅಂಗಾಗ್ಯದೆ.”
“ಯಾಕ್ ಶಾರ್ ಅಮೌಂಟು ಕೊಡ್ನಿಲ್ವಾ.”
“ಅದೇ ಡೌವುಟು.”
“ನಮ್ಗೂ ಅಂಗೆ ಆಗ್ತದೆ ಸಾ. ಪೈಂಟಿಂಗ್ ವರ್ಕು ಮಾಡಿಸಿಕ್ಯಂಡು ಕೈ ಎತ್ತಿಬಿಡ್ತರೆ. ಅದ್ಕೆ ನಾವು ಸರಿಯಾಗಿ ಅಡ್ವಾನ್ಸ್ ಕೇಳ್ತಿವಿ.”
“ಈ ಶಾಸಕರಿಗೆ ಅಡ್ವಾನ್ಸ್ ದುಡ್ಡು ಬಂದದೆ. ಆದ್ರೆ ಅಧಿಕಾರ ಬರಲಿಲ್ಲ.”
“ಯಾಕ್ಸಾ.”

“ಆಗಿನ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಈ ಖರೀದಿ ವ್ಯವಾರನೆ ರದ್ದು ಮಾಡಿಬುಟ್ರು. ಅದ್ಕೆ ಇವುರ್ಯಲ್ಲ ಎಂಎಲ್ಲೆಯೆ ಗಿರಿ ಕಳಕಂಡ್ರು.”
“ನಮಕ್ ಹರಾಮ್‍ಗಳಿಗೆ ಸರಿಯಾಗಿ ಆಗಿದೆ ಬುಡಿ ಶಾರ್.”
ಇದು ಒಟ್ಟರಾಶಿ ಅವನ ಅಭಿಪ್ರಾಯವಿದ್ದಂತೆ ಅನಿಸಿತು. ಶಾಸಕರ ಖರೀದಿ, ಸರಕಾರ ಬೀಳಿಸಿ ಅದರಿಂದಾದ ಅನಾಹುತಗಳು, ಈ ವಿವರವೆಲ್ಲಾ ಅವನ ಅಭಿಪ್ರಾಯದೊಳಗೆ ಸೇರಿರದೆ ಬಿಜೆಪಿಗೆ ಮಾರಾಟದ ವ್ಯವಹಾರದಲ್ಲಿ ಮೋಸಹೋದವರನ್ನ ಬೈದಂತೆ ಕಂಡಿತು.
“ಮೋದಿಗೆ ಏನೊ ಒಳ್ಳೆ ಎಜುಕೇಶನ್ ಇ¯ವಂತಲ್ಲ ಶಾರ್.”
“ಹೌದು.”
“ಎಗ್ಸಾಂಗೆ ಹೋಗಿಲವಂತೆ ಶಾರ್. ಪ್ರೈವೇಟ್ ಇಸ್ಕೂಲ್‍ಗೆ ಹೋಗಿ ಮಾರ್ಕ್ಸ್‌ ಕಾರ್ಡು ತಂದುಬಿಟ್ಟಿದ್ದಾರಂತೆ.”
“ಅವುರು ಪಡದಿರೋ ಶಿಕ್ಷಣದ ಬಗ್ಗೆ ಯಲ್ಲಾರಿಗೂ ಡೌಟಿದೆ.”
“ಮತ್ತೆ ಯಂಗೆ ಶಾರ್ ಪ್ರಧಾನಿ ಸೀಟು ಮ್ಯಾಲೆ ಕುಂತವುರೆ.”
“ಪ್ರಧಾನಿಯಾಗಕ್ಕೆ ತುಂಬ ಓದಿರಬೇಕು ಅಂತ ಇಲ್ಲ. ಅನುಭವ, ಹೃದಯವಂತಿಕೆ ಇರಬೇಕು. ಅಂಗೆ ನೋಡಿದ್ರೆ ನಮ್ಮ ದ್ಯಾವೇಗೌಡ್ರು ಡಿಪ್ಲಮೋ ಇಂಜಿನಿಯರ್. ಮುಖ್ಯಮಂತ್ರಿಯಾಗಿ ಎಷ್ಟು ಚನ್ನಾಗಿ ಆಡಳಿತ ಮಾಡಿದ್ರು, ಪ್ರಧಾನಿಯಾಗಿ ಕಾಶ್ಮೀರದ ಚುನಾವಣೆ ಮಾಡಿದ್ರು.”
“ಅವುರೆ ಇರಬೇಕಿತ್ತು ಶಾರ್. ಈ ಮೋದಿ ಬರ್ತಾನೆ ಇರಲಿಲ್ಲ.”
“ಬಂದುಬುಟ್ಟವುನಲ್ಲ ಸಯಿಸಗಬೇಕು.”
“ನಮ್ದು ರಫೀಕ್ ಮೊಬೈಲಿಗೆ ಒಂದು ಫಿಲಂ ಬಂದಿದೆ ಶಾರ್. ಮೋದಿ ನಮ್ಮ ಜುಬೇರ್ ಸಾಬರ ತರ ಹಳೆ ಸೀಸ, ಪ್ಲಾಸ್ಟಿಕ್ ಡಬ್ಬನೆಲ್ಲಾ ತಗ್ದಿ ತಗ್ದಿ ಚೀಲ್ದವಳಗೆ ತುಂಬಿಕಂಡು ಹೋಗ್ತಾಯಿದ್ರು. ಯಾಕ್ ಶಾರ್ ಅಂಗೆ ಮಾಡಿದಾರೆ.”
“ನೀನಾಗ್ಲೆ ಹೇಳಿದಲ್ಲಯ್ಯ ಎಜುಕೇಶನ್ ಇಲ್ಲ ಅಂತ, ಅದರ ಕೊರತೆ ಇದು. ಅಂತ ಕೆಲ್ಸ ಮಾಡಿ ಪೋಟೊ ವಡಿಸಿಗ್ಯಂಡು ಪೇಪರ್‍ಗಾಕ್ಸಿದ್ರೆ ಪ್ರಧಾನಿ ಎಷ್ಟು ಒಳ್ಳೆಯವರು, ಇಂತ ಮನ್ಸ ಹಿಂದೆ ಪ್ರಧಾನಿಯಾಗಿರಲಿಲ್ಲ ಅಂತ ತಿಳಕತಾರೆ ಅನ್ನಕಂಡು ಗಿಮಿಕ್ ಮಾಡ್ತ ಅವುರೆ.”
“ಅಂಗೆ ಮಾಡಬಾರ್ದು ಶಾರ್. ಆ ಸೀಟ್‍ಮೇಲೆ ಕುಂತಗಂಡಿ ಹಳೇ ಪೇಪರ್, ಖಾಲಿ ಸೀಸದ ಯವಾರ ಮಾಡಬಾರ್ದು.”

“ಇನ್ನೂ ನೋಡಿವಿರು. ಹೋಟ್ಳಿಗೆ ಬಂದು ಕಡಕ್ ಟೀ ಮಾಡಿ, ಯಲ್ಲಾರಿಗೂ ಕೊಟ್ಟು ಪೋಟೊ ವಡಿಸಿಗ್ಯಂಡು ಪೇಪರ್‍ಗಾಕುಸ್ತರೆ.”
“ಎಜುಕೇಶನ್ ಇಲ್ಲ ಅಂದ್ರೆ ಇಂಗೆ ಅಲವ ಶಾರ್. ಮೋದಿ ಹಿಂಗೆ ಮಾಡ್ತ ಹೋದ್ರೆ ಪುನ ಇಂಗ್ಲಿಸ್‍ನೋರು ಬಂದು ಸೀಟ್ ಮೇಲೆ ಕೂರ್ತರೆ ಅಷ್ಟೇ.”
“ಅವುರೀಗ ಬರಲ್ಲ.”
“ಯಾಕ್ ಬರಲ್ಲ ಶಾರ್. ನಮ್ ನಮ್ಗೆ ಜಗಳ ತಂದುಹಾಕಿ ನಾವೆಲ್ಲ ಹಿಂಗೆ ಜಗಳ ಮಾಡ್ತಯಿದ್ರೆ ಸೈಲೆಂಟಾಗಿ ಬಂದು ಬ್ರಿಟಿಷ್ ಜನ ಸೀಟ್ ಮೇಲೆ ಕೂರ್ತರೆ. ಆಗ ನಮ್ದು ಕತೆ ಹೋಗ್ಲಿ, ಮೋದಿಗೆ ಹಳೆ ಪೇಪರ್ ಪ್ಲಾಸ್ಟಿಕ್ ಸೀಸ ಬಾಟ್ಳಿನೆ ಗತಿ” ಎಂದು ನಕ್ಕ. ಈ ಮಾತಿಗೆ ಎಲ್ಲರೂ ನಕ್ಕರು.

ಚಿಕ್ಕಮಗಳೂರು ಕಡೆಯಿಂದ ದಸರಾ ನೋಡಲು ಹೋಗುತ್ತಿದ್ದ ಕೆಲವರಿಗೆ ಈ ಸಾಬರ ಹುಡುಗ ಮಾಡುತ್ತಿರುವ ಟೀಕೆ ಸಹಿಸಲಾಗದ್ದನ್ನು ಅವರ ಮುಖಗಳೇ ಹೇಳುತ್ತಿದ್ದವು. ಅಷ್ಟರಲ್ಲಿ ಸೀತಾಫಲ ಮಾರುವ ವ್ಯಕ್ತಿ ಬಂದ. ಹುಡುಗ ಸೀತಾಫಲ ತೆಗೆದುಕೊಂಡು ಅರ್ಧರ್ಧ ಹಿಸಿದು ಎದುರು ಕುಳಿತವರಿಗೆ ಕೊಟ್ಟ. ನಂತರ ಬಂದ ಸಪೋಟವನ್ನು ತೆಗೆದುಕೊಂಡು ಕೊಡಲು ಬಂದ “ಬ್ಯಾಡ ಕಣಪ್ಪ, ಅದು ತುಂಬ ಶುಗರು” ಎಂದೆ. “ತಿನ್ನಿ ಶಾರ್ ಹಣ್ಣು ತಿಂದ್ರೆ ವಳ್ಳೇದು.” ಎಂದು ಅರ್ಧ ಭಾಗಕೊಟ್ಟ. ಅವನ ಆಂತರ್ಯದಲ್ಲಿ ಬಿಜೆಪಿ ಜನ, ಜನಾಂಗೀಯ ದ್ವೇಷವನ್ನು ಹುಟ್ಟುಹಾಕುವುದಕ್ಕೆ ದಿಗಲುಗೊಂಡು ಸಾಮರಸ್ಯದಿಂದ ಬದುಕುವ ಮನಸ್ಸು, ಹಣ್ಣು ಹಂಚಿಕೆಯ ಹಿಂದೆ ಗೋಚರಿಸಿತು. ಅಷ್ಟರಲ್ಲಿ ಎಲ್ಲ ಜನಾಂಗವೂ ಸೇರಿ ಸಂಭ್ರಮದಿಂದ ಆಚರಿಸುವ ದಸರಾ ತಾಣ ಮೈಸೂರು ಬಂತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...