Homeಮುಖಪುಟಯಾಕ್ಸಾರ್ ಮೋದಿ ಖಾಲಿಬಾಟ್ಳಿ ಪ್ಲಾಸ್ಟಿಕ್ ಲೋಟ ಆಯ್ತಾಯಿದ್ರು! - ಬಿ.ಚಂದ್ರೇಗೌಡ

ಯಾಕ್ಸಾರ್ ಮೋದಿ ಖಾಲಿಬಾಟ್ಳಿ ಪ್ಲಾಸ್ಟಿಕ್ ಲೋಟ ಆಯ್ತಾಯಿದ್ರು! – ಬಿ.ಚಂದ್ರೇಗೌಡ

- Advertisement -
- Advertisement -

ಶಿವಮೊಗ್ಗದಿಂದ ಮೈಸೂರಿಗೆ ರೈಲಿನಲ್ಲಿ ಹೋಗುತ್ತಿರಬೇಕಾದರೆ, ಕೆ.ಆರ್.ನಗರದ ಬಳಿ ಮೂವರು ಮುಸ್ಲಿಂ ಯುವಕರು ಓಡಿಬಂದು ರೈಲತ್ತಿಕೊಂಡರು. ಅಲ್ಲದೆ ತಾವು ಕೂರುವುದಕ್ಕೆ ಮೊದಲು ತಮ್ಮ ಕೈಚೀಲಗಳನ್ನು ಸೀಟಿನ ಮೇಲೆ ಎಸೆದು, ಒಬ್ಬರ ಮೇಲೊಬ್ಬರು ಬಿದ್ದು ಓಡಿ ಬಂದು ದಣಿವಾರಿಸಿಕೊಳ್ಳತೊಡಗಿದರು. ಈ ಶ್ರಮಜೀವಿಗಳ ಜೀವನೋತ್ಸಾಹ ನೋಡುವಂತದ್ದು. ಅದೇ ಕಂಪನಿಗಳ, ಸರಕಾರದ ಕರ್ಮಾಚಾರಿಗಳ ನಿರುತ್ಸಾಹದ ಮುಖಗಳನ್ನ ನೋಡಿದರೆ ಅಯ್ಯೋ ಪಾಪ ಎನ್ನಿಸುತ್ತದೆ. ಆದ್ದರಿಂದ ನನ್ನೆದುರು ಕುಳಿತ ಹುಡುಗರನ್ನು ಮಾತನಾಡಬೇಕೆನಿಸಿತು.

“ಎಲ್ಲಿಂದ ಬರ್ತಾಯಿದ್ದೀರಿ” ಎಂದೆ.
“ಕೆ.ಆರ್.ನಗರದಿಂದ ಶಾರ್.”
“ಏನು ಮಾಡ್ತಿರಿ.”
“ಪೈಂಟಿಂಗ್ ಮಾಡ್ತಿವಿ ಶಾರ್.”
“ಊರ್ಯಾವುದು.”
“ಮೈಸೂರು” ಎಂದವನು ಸರಿಯಾಗಿ ಕುಳಿತು, ನನ್ನೊಡನೆ ಮಾತನಾಡುವ ಉತ್ಸಾಹ ತೋರಿದ. ಉಳಿದಿಬ್ಬರು ಬಾಗಿಲಲ್ಲಿ ನಿಂತು ಗಾಳಿಗೆ ಮೈವೊಡ್ಡಿದರು.
“ಈ ಹಾಳು ಬಿಜೆಪಿಗಳು ರೈಲಿನ ಬಣ್ಣನೂ ಬದ್ಲಾಸ್ತ ಅವೆ ಕಣಯ್ಯ” ಎಂದೆ.
“ಹೌದು ಶಾರ್, ಮದ್ಲಿಂದು ಬಣ್ಣ ಎಷ್ಟು ದೂಳು ಬಿದ್ರೂ ಕಾಣ್ತಿರಲಿಲ್ಲ. ಈಗ ರೈಲು ನೋಡಿದ್ರೆ ಮೈಮೇಲೆ ಮಣ್ಣು ಹುಯ್ಕಂಡು ಓಡಾಡ್ತವೆ.” ಎಂದ.
“ಬಿಜೆಪಿಗಳು ಬಣ್ಣ ಬದ್ಲಾಯಿಸ್ತವೆ ಅಷ್ಟೇ, ಇನ್ನೇನು ಆಗದಿಲ್ಲ ಅವುರ ಕೈಲಿ” ಎಂದೆ.
“ಈಗ ಯಾರ್ ಬರ್ತರೆ ಸಾರ್ ಸೀಟಿಗೆ.”
“ಯಾವ ಸೀಟಿಗೆ.”
“ಮೋದಿ ಸೀಟಿಗೆ ”
“ಯಾರು ಬರದಿಲ್ಲ.”
“ಮತ್ತೆ ಎಲೆಕ್ಷನ್ ಬಂದುಬಿಟ್ಟಿದೆ.”
“ಅದು ಉಪ ಚುನಾವಣೆ. ನಮ್ಮ ಸ್ಟೇಟಿಗೆ ಬಂದದೆ ಅಷ್ಟೇ.”
“ಓ ಎಡೂರಪ್ಪನ ಸೀಟಿಗೆ ಅನ್ನಿ.”
“ಹೌದು.”
“ಯಾಕ್ಸ ಮತ್ತೆ ರಿಟನ್ ಯಲಕ್ಷನ್ನು”
“ಅದೂ ನಿಮ್ಮ ಕೆ.ಆರ್.ನಗರದ ವಿಶ್ವನಾಥ್ ಗೊತ್ತ, ಅವುನಂತ ಹದಿನೇಳು ಜನನ ಬಿಜೆಪಿಗಳು ಕೊಂಡಕಂಡ್ರು.”
“ಅಂಗೆ ಮನುಸುರ್ನೆ ಕೊಳ್ಳಬವುದ ಶಾರ್.”
“ಮನುಷ್ಯರನ್ನ ಕೊಳ್ಳಕ್ಕಾಗಲ್ಲ. ಶಾಸಕರ ಕೊಳ್ಳಬವುದು.”
“ಒಳ್ಳೆ ಮಜಾ ಇದೆ ಶಾರ್ ಮ್ಯಾಟ್ರು.”
“ನಮಿಗೆ ಮಜಾ. ಸರಿ, ಅವುರ ಪಜೀತಿ ಯಾರಿಗೂ ಬ್ಯಾಡ ಅಂಗಾಗ್ಯದೆ.”
“ಯಾಕ್ ಶಾರ್ ಅಮೌಂಟು ಕೊಡ್ನಿಲ್ವಾ.”
“ಅದೇ ಡೌವುಟು.”
“ನಮ್ಗೂ ಅಂಗೆ ಆಗ್ತದೆ ಸಾ. ಪೈಂಟಿಂಗ್ ವರ್ಕು ಮಾಡಿಸಿಕ್ಯಂಡು ಕೈ ಎತ್ತಿಬಿಡ್ತರೆ. ಅದ್ಕೆ ನಾವು ಸರಿಯಾಗಿ ಅಡ್ವಾನ್ಸ್ ಕೇಳ್ತಿವಿ.”
“ಈ ಶಾಸಕರಿಗೆ ಅಡ್ವಾನ್ಸ್ ದುಡ್ಡು ಬಂದದೆ. ಆದ್ರೆ ಅಧಿಕಾರ ಬರಲಿಲ್ಲ.”
“ಯಾಕ್ಸಾ.”

“ಆಗಿನ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಈ ಖರೀದಿ ವ್ಯವಾರನೆ ರದ್ದು ಮಾಡಿಬುಟ್ರು. ಅದ್ಕೆ ಇವುರ್ಯಲ್ಲ ಎಂಎಲ್ಲೆಯೆ ಗಿರಿ ಕಳಕಂಡ್ರು.”
“ನಮಕ್ ಹರಾಮ್‍ಗಳಿಗೆ ಸರಿಯಾಗಿ ಆಗಿದೆ ಬುಡಿ ಶಾರ್.”
ಇದು ಒಟ್ಟರಾಶಿ ಅವನ ಅಭಿಪ್ರಾಯವಿದ್ದಂತೆ ಅನಿಸಿತು. ಶಾಸಕರ ಖರೀದಿ, ಸರಕಾರ ಬೀಳಿಸಿ ಅದರಿಂದಾದ ಅನಾಹುತಗಳು, ಈ ವಿವರವೆಲ್ಲಾ ಅವನ ಅಭಿಪ್ರಾಯದೊಳಗೆ ಸೇರಿರದೆ ಬಿಜೆಪಿಗೆ ಮಾರಾಟದ ವ್ಯವಹಾರದಲ್ಲಿ ಮೋಸಹೋದವರನ್ನ ಬೈದಂತೆ ಕಂಡಿತು.
“ಮೋದಿಗೆ ಏನೊ ಒಳ್ಳೆ ಎಜುಕೇಶನ್ ಇ¯ವಂತಲ್ಲ ಶಾರ್.”
“ಹೌದು.”
“ಎಗ್ಸಾಂಗೆ ಹೋಗಿಲವಂತೆ ಶಾರ್. ಪ್ರೈವೇಟ್ ಇಸ್ಕೂಲ್‍ಗೆ ಹೋಗಿ ಮಾರ್ಕ್ಸ್‌ ಕಾರ್ಡು ತಂದುಬಿಟ್ಟಿದ್ದಾರಂತೆ.”
“ಅವುರು ಪಡದಿರೋ ಶಿಕ್ಷಣದ ಬಗ್ಗೆ ಯಲ್ಲಾರಿಗೂ ಡೌಟಿದೆ.”
“ಮತ್ತೆ ಯಂಗೆ ಶಾರ್ ಪ್ರಧಾನಿ ಸೀಟು ಮ್ಯಾಲೆ ಕುಂತವುರೆ.”
“ಪ್ರಧಾನಿಯಾಗಕ್ಕೆ ತುಂಬ ಓದಿರಬೇಕು ಅಂತ ಇಲ್ಲ. ಅನುಭವ, ಹೃದಯವಂತಿಕೆ ಇರಬೇಕು. ಅಂಗೆ ನೋಡಿದ್ರೆ ನಮ್ಮ ದ್ಯಾವೇಗೌಡ್ರು ಡಿಪ್ಲಮೋ ಇಂಜಿನಿಯರ್. ಮುಖ್ಯಮಂತ್ರಿಯಾಗಿ ಎಷ್ಟು ಚನ್ನಾಗಿ ಆಡಳಿತ ಮಾಡಿದ್ರು, ಪ್ರಧಾನಿಯಾಗಿ ಕಾಶ್ಮೀರದ ಚುನಾವಣೆ ಮಾಡಿದ್ರು.”
“ಅವುರೆ ಇರಬೇಕಿತ್ತು ಶಾರ್. ಈ ಮೋದಿ ಬರ್ತಾನೆ ಇರಲಿಲ್ಲ.”
“ಬಂದುಬುಟ್ಟವುನಲ್ಲ ಸಯಿಸಗಬೇಕು.”
“ನಮ್ದು ರಫೀಕ್ ಮೊಬೈಲಿಗೆ ಒಂದು ಫಿಲಂ ಬಂದಿದೆ ಶಾರ್. ಮೋದಿ ನಮ್ಮ ಜುಬೇರ್ ಸಾಬರ ತರ ಹಳೆ ಸೀಸ, ಪ್ಲಾಸ್ಟಿಕ್ ಡಬ್ಬನೆಲ್ಲಾ ತಗ್ದಿ ತಗ್ದಿ ಚೀಲ್ದವಳಗೆ ತುಂಬಿಕಂಡು ಹೋಗ್ತಾಯಿದ್ರು. ಯಾಕ್ ಶಾರ್ ಅಂಗೆ ಮಾಡಿದಾರೆ.”
“ನೀನಾಗ್ಲೆ ಹೇಳಿದಲ್ಲಯ್ಯ ಎಜುಕೇಶನ್ ಇಲ್ಲ ಅಂತ, ಅದರ ಕೊರತೆ ಇದು. ಅಂತ ಕೆಲ್ಸ ಮಾಡಿ ಪೋಟೊ ವಡಿಸಿಗ್ಯಂಡು ಪೇಪರ್‍ಗಾಕ್ಸಿದ್ರೆ ಪ್ರಧಾನಿ ಎಷ್ಟು ಒಳ್ಳೆಯವರು, ಇಂತ ಮನ್ಸ ಹಿಂದೆ ಪ್ರಧಾನಿಯಾಗಿರಲಿಲ್ಲ ಅಂತ ತಿಳಕತಾರೆ ಅನ್ನಕಂಡು ಗಿಮಿಕ್ ಮಾಡ್ತ ಅವುರೆ.”
“ಅಂಗೆ ಮಾಡಬಾರ್ದು ಶಾರ್. ಆ ಸೀಟ್‍ಮೇಲೆ ಕುಂತಗಂಡಿ ಹಳೇ ಪೇಪರ್, ಖಾಲಿ ಸೀಸದ ಯವಾರ ಮಾಡಬಾರ್ದು.”

“ಇನ್ನೂ ನೋಡಿವಿರು. ಹೋಟ್ಳಿಗೆ ಬಂದು ಕಡಕ್ ಟೀ ಮಾಡಿ, ಯಲ್ಲಾರಿಗೂ ಕೊಟ್ಟು ಪೋಟೊ ವಡಿಸಿಗ್ಯಂಡು ಪೇಪರ್‍ಗಾಕುಸ್ತರೆ.”
“ಎಜುಕೇಶನ್ ಇಲ್ಲ ಅಂದ್ರೆ ಇಂಗೆ ಅಲವ ಶಾರ್. ಮೋದಿ ಹಿಂಗೆ ಮಾಡ್ತ ಹೋದ್ರೆ ಪುನ ಇಂಗ್ಲಿಸ್‍ನೋರು ಬಂದು ಸೀಟ್ ಮೇಲೆ ಕೂರ್ತರೆ ಅಷ್ಟೇ.”
“ಅವುರೀಗ ಬರಲ್ಲ.”
“ಯಾಕ್ ಬರಲ್ಲ ಶಾರ್. ನಮ್ ನಮ್ಗೆ ಜಗಳ ತಂದುಹಾಕಿ ನಾವೆಲ್ಲ ಹಿಂಗೆ ಜಗಳ ಮಾಡ್ತಯಿದ್ರೆ ಸೈಲೆಂಟಾಗಿ ಬಂದು ಬ್ರಿಟಿಷ್ ಜನ ಸೀಟ್ ಮೇಲೆ ಕೂರ್ತರೆ. ಆಗ ನಮ್ದು ಕತೆ ಹೋಗ್ಲಿ, ಮೋದಿಗೆ ಹಳೆ ಪೇಪರ್ ಪ್ಲಾಸ್ಟಿಕ್ ಸೀಸ ಬಾಟ್ಳಿನೆ ಗತಿ” ಎಂದು ನಕ್ಕ. ಈ ಮಾತಿಗೆ ಎಲ್ಲರೂ ನಕ್ಕರು.

ಚಿಕ್ಕಮಗಳೂರು ಕಡೆಯಿಂದ ದಸರಾ ನೋಡಲು ಹೋಗುತ್ತಿದ್ದ ಕೆಲವರಿಗೆ ಈ ಸಾಬರ ಹುಡುಗ ಮಾಡುತ್ತಿರುವ ಟೀಕೆ ಸಹಿಸಲಾಗದ್ದನ್ನು ಅವರ ಮುಖಗಳೇ ಹೇಳುತ್ತಿದ್ದವು. ಅಷ್ಟರಲ್ಲಿ ಸೀತಾಫಲ ಮಾರುವ ವ್ಯಕ್ತಿ ಬಂದ. ಹುಡುಗ ಸೀತಾಫಲ ತೆಗೆದುಕೊಂಡು ಅರ್ಧರ್ಧ ಹಿಸಿದು ಎದುರು ಕುಳಿತವರಿಗೆ ಕೊಟ್ಟ. ನಂತರ ಬಂದ ಸಪೋಟವನ್ನು ತೆಗೆದುಕೊಂಡು ಕೊಡಲು ಬಂದ “ಬ್ಯಾಡ ಕಣಪ್ಪ, ಅದು ತುಂಬ ಶುಗರು” ಎಂದೆ. “ತಿನ್ನಿ ಶಾರ್ ಹಣ್ಣು ತಿಂದ್ರೆ ವಳ್ಳೇದು.” ಎಂದು ಅರ್ಧ ಭಾಗಕೊಟ್ಟ. ಅವನ ಆಂತರ್ಯದಲ್ಲಿ ಬಿಜೆಪಿ ಜನ, ಜನಾಂಗೀಯ ದ್ವೇಷವನ್ನು ಹುಟ್ಟುಹಾಕುವುದಕ್ಕೆ ದಿಗಲುಗೊಂಡು ಸಾಮರಸ್ಯದಿಂದ ಬದುಕುವ ಮನಸ್ಸು, ಹಣ್ಣು ಹಂಚಿಕೆಯ ಹಿಂದೆ ಗೋಚರಿಸಿತು. ಅಷ್ಟರಲ್ಲಿ ಎಲ್ಲ ಜನಾಂಗವೂ ಸೇರಿ ಸಂಭ್ರಮದಿಂದ ಆಚರಿಸುವ ದಸರಾ ತಾಣ ಮೈಸೂರು ಬಂತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...