Homeಮುಖಪುಟಯಾಕ್ಸಾರ್ ಮೋದಿ ಖಾಲಿಬಾಟ್ಳಿ ಪ್ಲಾಸ್ಟಿಕ್ ಲೋಟ ಆಯ್ತಾಯಿದ್ರು! - ಬಿ.ಚಂದ್ರೇಗೌಡ

ಯಾಕ್ಸಾರ್ ಮೋದಿ ಖಾಲಿಬಾಟ್ಳಿ ಪ್ಲಾಸ್ಟಿಕ್ ಲೋಟ ಆಯ್ತಾಯಿದ್ರು! – ಬಿ.ಚಂದ್ರೇಗೌಡ

- Advertisement -
- Advertisement -

ಶಿವಮೊಗ್ಗದಿಂದ ಮೈಸೂರಿಗೆ ರೈಲಿನಲ್ಲಿ ಹೋಗುತ್ತಿರಬೇಕಾದರೆ, ಕೆ.ಆರ್.ನಗರದ ಬಳಿ ಮೂವರು ಮುಸ್ಲಿಂ ಯುವಕರು ಓಡಿಬಂದು ರೈಲತ್ತಿಕೊಂಡರು. ಅಲ್ಲದೆ ತಾವು ಕೂರುವುದಕ್ಕೆ ಮೊದಲು ತಮ್ಮ ಕೈಚೀಲಗಳನ್ನು ಸೀಟಿನ ಮೇಲೆ ಎಸೆದು, ಒಬ್ಬರ ಮೇಲೊಬ್ಬರು ಬಿದ್ದು ಓಡಿ ಬಂದು ದಣಿವಾರಿಸಿಕೊಳ್ಳತೊಡಗಿದರು. ಈ ಶ್ರಮಜೀವಿಗಳ ಜೀವನೋತ್ಸಾಹ ನೋಡುವಂತದ್ದು. ಅದೇ ಕಂಪನಿಗಳ, ಸರಕಾರದ ಕರ್ಮಾಚಾರಿಗಳ ನಿರುತ್ಸಾಹದ ಮುಖಗಳನ್ನ ನೋಡಿದರೆ ಅಯ್ಯೋ ಪಾಪ ಎನ್ನಿಸುತ್ತದೆ. ಆದ್ದರಿಂದ ನನ್ನೆದುರು ಕುಳಿತ ಹುಡುಗರನ್ನು ಮಾತನಾಡಬೇಕೆನಿಸಿತು.

“ಎಲ್ಲಿಂದ ಬರ್ತಾಯಿದ್ದೀರಿ” ಎಂದೆ.
“ಕೆ.ಆರ್.ನಗರದಿಂದ ಶಾರ್.”
“ಏನು ಮಾಡ್ತಿರಿ.”
“ಪೈಂಟಿಂಗ್ ಮಾಡ್ತಿವಿ ಶಾರ್.”
“ಊರ್ಯಾವುದು.”
“ಮೈಸೂರು” ಎಂದವನು ಸರಿಯಾಗಿ ಕುಳಿತು, ನನ್ನೊಡನೆ ಮಾತನಾಡುವ ಉತ್ಸಾಹ ತೋರಿದ. ಉಳಿದಿಬ್ಬರು ಬಾಗಿಲಲ್ಲಿ ನಿಂತು ಗಾಳಿಗೆ ಮೈವೊಡ್ಡಿದರು.
“ಈ ಹಾಳು ಬಿಜೆಪಿಗಳು ರೈಲಿನ ಬಣ್ಣನೂ ಬದ್ಲಾಸ್ತ ಅವೆ ಕಣಯ್ಯ” ಎಂದೆ.
“ಹೌದು ಶಾರ್, ಮದ್ಲಿಂದು ಬಣ್ಣ ಎಷ್ಟು ದೂಳು ಬಿದ್ರೂ ಕಾಣ್ತಿರಲಿಲ್ಲ. ಈಗ ರೈಲು ನೋಡಿದ್ರೆ ಮೈಮೇಲೆ ಮಣ್ಣು ಹುಯ್ಕಂಡು ಓಡಾಡ್ತವೆ.” ಎಂದ.
“ಬಿಜೆಪಿಗಳು ಬಣ್ಣ ಬದ್ಲಾಯಿಸ್ತವೆ ಅಷ್ಟೇ, ಇನ್ನೇನು ಆಗದಿಲ್ಲ ಅವುರ ಕೈಲಿ” ಎಂದೆ.
“ಈಗ ಯಾರ್ ಬರ್ತರೆ ಸಾರ್ ಸೀಟಿಗೆ.”
“ಯಾವ ಸೀಟಿಗೆ.”
“ಮೋದಿ ಸೀಟಿಗೆ ”
“ಯಾರು ಬರದಿಲ್ಲ.”
“ಮತ್ತೆ ಎಲೆಕ್ಷನ್ ಬಂದುಬಿಟ್ಟಿದೆ.”
“ಅದು ಉಪ ಚುನಾವಣೆ. ನಮ್ಮ ಸ್ಟೇಟಿಗೆ ಬಂದದೆ ಅಷ್ಟೇ.”
“ಓ ಎಡೂರಪ್ಪನ ಸೀಟಿಗೆ ಅನ್ನಿ.”
“ಹೌದು.”
“ಯಾಕ್ಸ ಮತ್ತೆ ರಿಟನ್ ಯಲಕ್ಷನ್ನು”
“ಅದೂ ನಿಮ್ಮ ಕೆ.ಆರ್.ನಗರದ ವಿಶ್ವನಾಥ್ ಗೊತ್ತ, ಅವುನಂತ ಹದಿನೇಳು ಜನನ ಬಿಜೆಪಿಗಳು ಕೊಂಡಕಂಡ್ರು.”
“ಅಂಗೆ ಮನುಸುರ್ನೆ ಕೊಳ್ಳಬವುದ ಶಾರ್.”
“ಮನುಷ್ಯರನ್ನ ಕೊಳ್ಳಕ್ಕಾಗಲ್ಲ. ಶಾಸಕರ ಕೊಳ್ಳಬವುದು.”
“ಒಳ್ಳೆ ಮಜಾ ಇದೆ ಶಾರ್ ಮ್ಯಾಟ್ರು.”
“ನಮಿಗೆ ಮಜಾ. ಸರಿ, ಅವುರ ಪಜೀತಿ ಯಾರಿಗೂ ಬ್ಯಾಡ ಅಂಗಾಗ್ಯದೆ.”
“ಯಾಕ್ ಶಾರ್ ಅಮೌಂಟು ಕೊಡ್ನಿಲ್ವಾ.”
“ಅದೇ ಡೌವುಟು.”
“ನಮ್ಗೂ ಅಂಗೆ ಆಗ್ತದೆ ಸಾ. ಪೈಂಟಿಂಗ್ ವರ್ಕು ಮಾಡಿಸಿಕ್ಯಂಡು ಕೈ ಎತ್ತಿಬಿಡ್ತರೆ. ಅದ್ಕೆ ನಾವು ಸರಿಯಾಗಿ ಅಡ್ವಾನ್ಸ್ ಕೇಳ್ತಿವಿ.”
“ಈ ಶಾಸಕರಿಗೆ ಅಡ್ವಾನ್ಸ್ ದುಡ್ಡು ಬಂದದೆ. ಆದ್ರೆ ಅಧಿಕಾರ ಬರಲಿಲ್ಲ.”
“ಯಾಕ್ಸಾ.”

“ಆಗಿನ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಈ ಖರೀದಿ ವ್ಯವಾರನೆ ರದ್ದು ಮಾಡಿಬುಟ್ರು. ಅದ್ಕೆ ಇವುರ್ಯಲ್ಲ ಎಂಎಲ್ಲೆಯೆ ಗಿರಿ ಕಳಕಂಡ್ರು.”
“ನಮಕ್ ಹರಾಮ್‍ಗಳಿಗೆ ಸರಿಯಾಗಿ ಆಗಿದೆ ಬುಡಿ ಶಾರ್.”
ಇದು ಒಟ್ಟರಾಶಿ ಅವನ ಅಭಿಪ್ರಾಯವಿದ್ದಂತೆ ಅನಿಸಿತು. ಶಾಸಕರ ಖರೀದಿ, ಸರಕಾರ ಬೀಳಿಸಿ ಅದರಿಂದಾದ ಅನಾಹುತಗಳು, ಈ ವಿವರವೆಲ್ಲಾ ಅವನ ಅಭಿಪ್ರಾಯದೊಳಗೆ ಸೇರಿರದೆ ಬಿಜೆಪಿಗೆ ಮಾರಾಟದ ವ್ಯವಹಾರದಲ್ಲಿ ಮೋಸಹೋದವರನ್ನ ಬೈದಂತೆ ಕಂಡಿತು.
“ಮೋದಿಗೆ ಏನೊ ಒಳ್ಳೆ ಎಜುಕೇಶನ್ ಇ¯ವಂತಲ್ಲ ಶಾರ್.”
“ಹೌದು.”
“ಎಗ್ಸಾಂಗೆ ಹೋಗಿಲವಂತೆ ಶಾರ್. ಪ್ರೈವೇಟ್ ಇಸ್ಕೂಲ್‍ಗೆ ಹೋಗಿ ಮಾರ್ಕ್ಸ್‌ ಕಾರ್ಡು ತಂದುಬಿಟ್ಟಿದ್ದಾರಂತೆ.”
“ಅವುರು ಪಡದಿರೋ ಶಿಕ್ಷಣದ ಬಗ್ಗೆ ಯಲ್ಲಾರಿಗೂ ಡೌಟಿದೆ.”
“ಮತ್ತೆ ಯಂಗೆ ಶಾರ್ ಪ್ರಧಾನಿ ಸೀಟು ಮ್ಯಾಲೆ ಕುಂತವುರೆ.”
“ಪ್ರಧಾನಿಯಾಗಕ್ಕೆ ತುಂಬ ಓದಿರಬೇಕು ಅಂತ ಇಲ್ಲ. ಅನುಭವ, ಹೃದಯವಂತಿಕೆ ಇರಬೇಕು. ಅಂಗೆ ನೋಡಿದ್ರೆ ನಮ್ಮ ದ್ಯಾವೇಗೌಡ್ರು ಡಿಪ್ಲಮೋ ಇಂಜಿನಿಯರ್. ಮುಖ್ಯಮಂತ್ರಿಯಾಗಿ ಎಷ್ಟು ಚನ್ನಾಗಿ ಆಡಳಿತ ಮಾಡಿದ್ರು, ಪ್ರಧಾನಿಯಾಗಿ ಕಾಶ್ಮೀರದ ಚುನಾವಣೆ ಮಾಡಿದ್ರು.”
“ಅವುರೆ ಇರಬೇಕಿತ್ತು ಶಾರ್. ಈ ಮೋದಿ ಬರ್ತಾನೆ ಇರಲಿಲ್ಲ.”
“ಬಂದುಬುಟ್ಟವುನಲ್ಲ ಸಯಿಸಗಬೇಕು.”
“ನಮ್ದು ರಫೀಕ್ ಮೊಬೈಲಿಗೆ ಒಂದು ಫಿಲಂ ಬಂದಿದೆ ಶಾರ್. ಮೋದಿ ನಮ್ಮ ಜುಬೇರ್ ಸಾಬರ ತರ ಹಳೆ ಸೀಸ, ಪ್ಲಾಸ್ಟಿಕ್ ಡಬ್ಬನೆಲ್ಲಾ ತಗ್ದಿ ತಗ್ದಿ ಚೀಲ್ದವಳಗೆ ತುಂಬಿಕಂಡು ಹೋಗ್ತಾಯಿದ್ರು. ಯಾಕ್ ಶಾರ್ ಅಂಗೆ ಮಾಡಿದಾರೆ.”
“ನೀನಾಗ್ಲೆ ಹೇಳಿದಲ್ಲಯ್ಯ ಎಜುಕೇಶನ್ ಇಲ್ಲ ಅಂತ, ಅದರ ಕೊರತೆ ಇದು. ಅಂತ ಕೆಲ್ಸ ಮಾಡಿ ಪೋಟೊ ವಡಿಸಿಗ್ಯಂಡು ಪೇಪರ್‍ಗಾಕ್ಸಿದ್ರೆ ಪ್ರಧಾನಿ ಎಷ್ಟು ಒಳ್ಳೆಯವರು, ಇಂತ ಮನ್ಸ ಹಿಂದೆ ಪ್ರಧಾನಿಯಾಗಿರಲಿಲ್ಲ ಅಂತ ತಿಳಕತಾರೆ ಅನ್ನಕಂಡು ಗಿಮಿಕ್ ಮಾಡ್ತ ಅವುರೆ.”
“ಅಂಗೆ ಮಾಡಬಾರ್ದು ಶಾರ್. ಆ ಸೀಟ್‍ಮೇಲೆ ಕುಂತಗಂಡಿ ಹಳೇ ಪೇಪರ್, ಖಾಲಿ ಸೀಸದ ಯವಾರ ಮಾಡಬಾರ್ದು.”

“ಇನ್ನೂ ನೋಡಿವಿರು. ಹೋಟ್ಳಿಗೆ ಬಂದು ಕಡಕ್ ಟೀ ಮಾಡಿ, ಯಲ್ಲಾರಿಗೂ ಕೊಟ್ಟು ಪೋಟೊ ವಡಿಸಿಗ್ಯಂಡು ಪೇಪರ್‍ಗಾಕುಸ್ತರೆ.”
“ಎಜುಕೇಶನ್ ಇಲ್ಲ ಅಂದ್ರೆ ಇಂಗೆ ಅಲವ ಶಾರ್. ಮೋದಿ ಹಿಂಗೆ ಮಾಡ್ತ ಹೋದ್ರೆ ಪುನ ಇಂಗ್ಲಿಸ್‍ನೋರು ಬಂದು ಸೀಟ್ ಮೇಲೆ ಕೂರ್ತರೆ ಅಷ್ಟೇ.”
“ಅವುರೀಗ ಬರಲ್ಲ.”
“ಯಾಕ್ ಬರಲ್ಲ ಶಾರ್. ನಮ್ ನಮ್ಗೆ ಜಗಳ ತಂದುಹಾಕಿ ನಾವೆಲ್ಲ ಹಿಂಗೆ ಜಗಳ ಮಾಡ್ತಯಿದ್ರೆ ಸೈಲೆಂಟಾಗಿ ಬಂದು ಬ್ರಿಟಿಷ್ ಜನ ಸೀಟ್ ಮೇಲೆ ಕೂರ್ತರೆ. ಆಗ ನಮ್ದು ಕತೆ ಹೋಗ್ಲಿ, ಮೋದಿಗೆ ಹಳೆ ಪೇಪರ್ ಪ್ಲಾಸ್ಟಿಕ್ ಸೀಸ ಬಾಟ್ಳಿನೆ ಗತಿ” ಎಂದು ನಕ್ಕ. ಈ ಮಾತಿಗೆ ಎಲ್ಲರೂ ನಕ್ಕರು.

ಚಿಕ್ಕಮಗಳೂರು ಕಡೆಯಿಂದ ದಸರಾ ನೋಡಲು ಹೋಗುತ್ತಿದ್ದ ಕೆಲವರಿಗೆ ಈ ಸಾಬರ ಹುಡುಗ ಮಾಡುತ್ತಿರುವ ಟೀಕೆ ಸಹಿಸಲಾಗದ್ದನ್ನು ಅವರ ಮುಖಗಳೇ ಹೇಳುತ್ತಿದ್ದವು. ಅಷ್ಟರಲ್ಲಿ ಸೀತಾಫಲ ಮಾರುವ ವ್ಯಕ್ತಿ ಬಂದ. ಹುಡುಗ ಸೀತಾಫಲ ತೆಗೆದುಕೊಂಡು ಅರ್ಧರ್ಧ ಹಿಸಿದು ಎದುರು ಕುಳಿತವರಿಗೆ ಕೊಟ್ಟ. ನಂತರ ಬಂದ ಸಪೋಟವನ್ನು ತೆಗೆದುಕೊಂಡು ಕೊಡಲು ಬಂದ “ಬ್ಯಾಡ ಕಣಪ್ಪ, ಅದು ತುಂಬ ಶುಗರು” ಎಂದೆ. “ತಿನ್ನಿ ಶಾರ್ ಹಣ್ಣು ತಿಂದ್ರೆ ವಳ್ಳೇದು.” ಎಂದು ಅರ್ಧ ಭಾಗಕೊಟ್ಟ. ಅವನ ಆಂತರ್ಯದಲ್ಲಿ ಬಿಜೆಪಿ ಜನ, ಜನಾಂಗೀಯ ದ್ವೇಷವನ್ನು ಹುಟ್ಟುಹಾಕುವುದಕ್ಕೆ ದಿಗಲುಗೊಂಡು ಸಾಮರಸ್ಯದಿಂದ ಬದುಕುವ ಮನಸ್ಸು, ಹಣ್ಣು ಹಂಚಿಕೆಯ ಹಿಂದೆ ಗೋಚರಿಸಿತು. ಅಷ್ಟರಲ್ಲಿ ಎಲ್ಲ ಜನಾಂಗವೂ ಸೇರಿ ಸಂಭ್ರಮದಿಂದ ಆಚರಿಸುವ ದಸರಾ ತಾಣ ಮೈಸೂರು ಬಂತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...