Homeಡೇಟಾ ಖೋಲಿಪೀಕ ವಿಮೆ ದಂಧೀ ಒಳಗಾ ಲಾಭ ನಷ್ಟದ ಕತಿ : ಬೈ ಡೇಟಾಮ್ಯಾಟಿಕ್ಸ್

ಪೀಕ ವಿಮೆ ದಂಧೀ ಒಳಗಾ ಲಾಭ ನಷ್ಟದ ಕತಿ : ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ನಾವು ಕಷ್ಟಪಟ್ಟು ಬೆಳೆದ ಪೀಕ ‘ದೇವರ ಕೈ’ ಆಟದಿಂದ ಹಾಳಾಗಿ ಹೋದರ ಸರಕಾರನೋ, ಖಾಸಗಿ ಕಂಪನಿನೋ ನಮ್ಮ ನಷ್ಟ ಭರ್ತಿ ಮಾಡಿಕೊಡೋ ವ್ಯವಸ್ಥೆಗೆ ಬೆಳೆವಿಮೆ ಅಂತ ಹೆಸರು. (ಈ ‘ದೇವರ ಕೈ’ ಅನ್ನೋದು ರಾಷ್ಟ್ರೀಯ ಬೆಳೆವಿಮೆ ಯೋಜನೆಯ ತಾಕೀತುಗಳಲ್ಲಿ ಒಂದು.)

ಹಂಗಾರ ಇತರ ತಾಕೀತುಗಳೇನು? ಈ ಯೋಜನೆಯ ವಿವರಗಳು ಏನು?

ಮೊದಲಿಗೆ ಈ ಯೋಜನೆ ಬಂದಿದ್ದು ಇಂದಿರಾಗಾಂಧಿಯವರ ನಿಧನದ ನಂತರ ಬಂದ ಕಾಂಗ್ರೆಸ್ ಸರಕಾರದ ತಲಿಯೊಳಗ. 1985ರಾಗ ಈ ಯೋಜನೆ ತಂದಾಗ ಬರೇ 7 ಶೇಕಡಾ ರೈತರು ಇದರ ಉಪಯೋಗ ಪಡದರು. ನಂತರ 2000ದೊಳಗ 10 ಶೇಕಡಾ ಹಾಗೂ 2018ರೊಳಗ 26 ಶೇಕಡಾ ರೈತರು ಇದರೊಳಗ ಇದ್ದಾರ. 2016ಕ್ಕೆ ಹೋಲಿಸಿದರ ಶೇಕಡಾ 15 ರೈತರು ಈ ಯೋಜನೆಯಿಂದ ಹಿಂದ ಸರದಾರ. ಭಾರತದ ಶೇಕಡಾ 30ಕ್ಕೂ ಕಮ್ಮಿ ಕೃಷಿಭೂಮಿ ಇಂತಹ ಯೋಜನೆಗಳ ಕೆಳಗ ಅದ.

ನಮಗೆಲ್ಲಾರಿಗೂ ಗೊತ್ತಿರೋ ಎಲ್‍ಐಸಿ ಹಂಗನ, ಬೆಳೆ ವಿಮೆಗೆ ಏಐಸಿ (ಅಗ್ರಿಕಲ್ಚರ್ ಇನ್ಷುರನ್ಸ ಕಾರ್ಪೊರೇಷನ್ನು ‘ಕೃವಿನಿ’) ಅಂತ ಒಂದು ಅದ. ನರೇಂದ್ರ ಅವತಾರದ ಸರಕಾರ ಬರೋವರೆಗೂ ಇಡೀ ದೇಶದ ಕೃಷಿವಿಮೆ ಜವಾಬುದಾರಿ ಅದಕ್ಕ ಇತ್ತು. ಹಂಗ ಇರಬಾರದು ಖಾಸಗಿ ಕಂಪನಿಗಳಿಗೂ ಸೇವೆಯ ಅವಕಾಶ ಸಿಗಲಿ ಅಂತಹೇಳಿ ಅವರನ್ನು ಇದರೊಳಗ ಬರಮಾಡಲಾಯಿತು. ಸುಮಾರು ಹತ್ತು ಖಾಸಗಿ ಕಂಪನಿಗಳಿಗೆ ದೇಶವನ್ನು ಕೃಷಿ -ಹವಾಮಾನ ಘಟಕಗಳಾಗಿ ಹಂಚಿಕೊಡಲಾಯಿತು. ಅದರೊಳಗ ಐಸಿಐಸಿಐ, ಇಫ್ಕೋ ಟೋಕಿಯೋ, ಎಚ್‍ಡಿಎಫ್‍ಸಿ, ಚೋಲಮಂಡಲಂ, ಬಜಾಜು, ರಿಲೈಯನ್ಸ್, ಟಾಟಾ, ಎಸ್‍ಬಿಐ, ಫ್ಯೂಚರ್, ಯುನಿವರ್ಸಲ್ ಸೊಂಪೋ ಮುಂತಾದ ಸಂಪಾದ ಕಂಪನಿಗಳು ಇದ್ದವು.

ರೈತರು ಕೇವಲ ಶೇಕಡಾ ಎರಡು ವಿಮೆ ಕಂತು ತುಂಬಬೇಕು, ಕೇಂದ್ರ ಹಾಗೂ ರಾಜ್ಯ ತಲಾ ಶೇಕಡಾ 49 ತುಂಬಬೇಕು. ನಷ್ಟದ ಅಂದಾಜನ್ನು ರಾಜ್ಯ ಸರಕಾರ ಮಾಡಬೇಕು. ಪರಿಹಾರಧನವನ್ನು ರೈತರಿಗೆ ವಿಮಾ ಕಂಪನಿಗಳು ನೀಡಬೇಕು ಅಂತ ಯೋಜನೆ ತಯಾರಿಸಿ ಅದನ್ನು ಪ್ರಧಾನಮಂತ್ರಿಗಳ ಬ್ರ್ಯಾಂಡಿನ ಮ್ಯಾಲೆ ಹಾರಿ ಬಿಡಲಾಯಿತು. ರಾಮಾಯಣದಾಗ ಕಲ್ಲಿನ ಮ್ಯಾಲೆ ರಾಮ ಅಂತ ಬರದರ ಅವು ನೀರಾಗ ತೇಲತಿದ್ದವಂತ. ನಾಮ ಬಲ ಅಂದರ ಅಷ್ಟು ದೊಡ್ಡದು. ಹಿಂತಾ ಚಮತ್ಕಾರ ಈ ಕಲಿಯುಗದೊಳಗ ನಡೀಲೀ ಅಂತ ಅದರ ಹೆಸರು ಬದಲಾವಣೆ ಆತು. ಆ ಯೋಜನೆ ತೇಲಿತೋ ಮುಳುಗಿತೋ, ಪ್ರವಾಹದಾಗ ಬೆಳಿ ಕಳಕೊಂಡ ರೈತರ ಹೇಳಬೇಕು.

ಕಂತಿನ ಹಣ ಕೃಷಿ, ನೀರಾವರಿ ಹಾಗೂ ತೋಟಗಾರಿಕೆ ಭೂಮಿಯೊಳಗ ಪರಿಹಾರದ ಶೇಕಡಾ 1.5, 2 ಹಾಗೂ 5 ಅಂತ ನಿಗದಿ ಮಾಡಲಾಯಿತು. ಆದರ ಅದರಾಗ ಕೆಲವು ಸಮಸ್ಯಾ ಇದ್ದವು. ಉದಾಹರಣೆಗೆ ರೈತ ಹಾನಿಯಾದ 48 ಗಂಟೆಯೊಳಗ ವಿಮಾ ಕಂಪನಿಗೆ ಫೋನು ಮಾಡಿ ತಿಳಿಸಬೇಕು. ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಪ್ರವಾಹ ಬಂದಾಗ ರೈತರು 28 ಗಂಟೆ ಮಟಾ ಗಿಡದ ಕೊಂಬಿಗೆ ಜೋತಾಡುತ್ತಾ ಇದ್ದರು. ಅವರು ಹೆಂಗ ಫೋನು ಮಾಡ್ಯಾರು? ಆದರೂ ಈ ಮೂರು ವರ್ಷದೊಳಗ ಕಂಪನಿಗಳು ಬಂಗಾರದ ಅದಿರಿನ ಹಿಂದೆ ಬಿದ್ದ ದಾಹಿಗಳಂಗ ನಿರಾಸೆ ವ್ಯಕ್ತ ಪಡಿಸಿದರು.

‘ಇದು ನಮಗ ಲಾಭದಾಯಕ ಅಲ್ಲ, ನಮ್ಮ ಮರು ವಿಮೆ ಹಾಗೂ ಆಡಳಿತ ವೆಚ್ಚಗಳು ಭಾಳ ಆಗತಾವ. ಲಾಭಾಂಶ ಕಮ್ಮಿ. ಇದು ನಮಗ ಬ್ಯಾಡ ಅಂತ ಹೇಳಿದರು. ಸರಕಾರಿ ಸಂಸ್ಥೆಗಳಿಗೆನ ಇದರ ನೊಗ ಹೊರಸರಿ ನಾವು ಒಲ್ಲಿವಿ, ಅಂತ ಆಟ ಗೂಟ ಜೈ’ ಅಂದರು.

ಹಿಂಗಾರ ಅವರಿಗೆ ಆದ ನಷ್ಟ ಏನು ನೋಡುಣು ಬನ್ರಿಪಾ.

ಪ್ರಧಾನ ಮಂತ್ರಿ ಫಸಲು ಬೀಮಾ ಯೋಜನೆ ಆರಂಭವಾದ ಮೂರು ವರ್ಷದಾಗ (ನಂತರದ ವರ್ಷಗಳ ಡೇಟಾ ಸರಕಾರದಿಂದ ಇನ್ನೂ ಲಭ್ಯ ಆಗಿಲ್ಲ)- ಈ ಕಂಪನಿಗಳು ಸುಮಾರು 76 ಸಾವಿರ ಕೋಟಿ ಕಂತು ವಸೂಲು ಮಾಡ್ಯಾವು. ಇದರೊಳಗ ಸುಮಾರು 75 ಸಾವಿರ ಕೋಟಿ ತೆರಿಗೆದಾರರ ದುಡ್ಡು. ಬೆಳೆ ನಾಶ, ಬರ, ಪ್ರವಾಹ ಮುಂತಾದ ವೈಪರೀತ್ಯಗಳಾಗಿದ್ದಕ್ಕ ರೈತರಿಗೆ ಸಿಕ್ಕ ಪರಿಹಾರ ಸುಮಾರು 56 ಸಾವಿರ ಕೋಟಿ. ಅಂದರ ಈ ಕಂಪನಿಗಳು ನಿವ್ವಳ 27 ಶೇಕಡಾ ಲಾಭದಾಗ ಇದ್ದಾವು. ಅವು ಮರು ವಿಮೆ ಮೊತ್ತ ಶೇಕಡಾ 10 ಹಾಗೂ ಆಡಳಿತ ವೆಚ್ಚ ಶೇಕಡಾ 5 ಇದ್ದದ್ದರಿಂದ ಶೇಕಡಾ 12 ಲಾಭ ಗಳಿಸಿದಂಗ. ಆದರ ಇದು ಅವುಗಳ ಶೇರುದಾರರಿಗೆ ಕಮ್ಮಿ ಅನ್ನಿಸಿದ್ದಕ್ಕ ಆ ಮೊದಲಿನ ಹತ್ತು ಕಂಪನಿಗಳಲ್ಲಿ ಕೆಲವು ಈ ಯೋಜನೆಯಿಂದ ಹಿಂದ ಸರದಾವ. ಇನ್ನೂ ಸುಮಾರು ನಾಕು ಸಾವಿರ ಕೋಟಿ ಪರಿಹಾರ ಧನ ಕೊಡೋ ಬಾಕಿ ಉಳದೈತಿ.

ಹಂಗಾರ ಈ ಧಂದೇನ ಹಿಂಗೇನು ಮತ್ತ? ಹಂಗೇನಿಲ್ಲ. ಸರಕಾರಿ ವಿಮಾ ಕಂಪನಿಯ ಲೆಕ್ಕ ಪಟ್ಟಿ ನೋಡಿದರ ಇದು ಗೊತ್ತಾಗತದ. ಏಐಸಿ ಅಥವಾ ‘ಕೃವಿನಿ’ ಕಳೆದ ವರ್ಷ ಸುಮಾರು 7893 ಕೋಟಿ ರೂಪಾಯಿ ಕಂತು ಪಡೆದು 7040 ಕೋಟಿ ರೂಪಾಯಿ ಪರಿಹಾರ ಕೊಟ್ಟದ. ಇದು ಸುಮಾರು ಶೇಕಡಾ 90ರಷ್ಟು. ಇವರಿಗೂ ಮರುವಿಮೆ ಹಾಗೂ ಆಡಳಿತ ವೆಚ್ಚ ಅಂತ ಅದಾವು. ಸರಕಾರಿ ಸಂಸ್ಥೆ ಆದ್ದರಿಂದ ಸಿಬ್ಬಂದಿ ವೆಚ್ಚನೂ ಅದಾನಿ- ಅಂಬಾನಿಗಿಂತ ಹೆಚ್ಚು. ಆದರೂ ಇವರು ಯಾಕ ಹೆಚ್ಚು ಕೊಡಲಿಕ್ಕೆ ಆಯಿತು. ಅವರು ಇಷ್ಟೇ ಮೊತ್ತದ ಪರಿಹಾರ ಕೊಡತಿದ್ದರು ಅಂದರ ಇವರನ್ನ ತಗದು ಖಾಸಗಿ ಕಂಪನಿಗಳನ್ನು ಕರದು ಕರದು ಕೊಟ್ಟಿದ್ದು ಯಾಕೆ? ಮೊದಲ ಮೂರು ವರ್ಷ 76 ಸಾವಿರ ಕೋಟಿ ಹಣ ಹೊಡದುಕೊಂಡು ಆಮ್ಯಾಲೆ ನಾವಲ್ಲ ಅಂದರಲ್ಲಾ, ಅದನ್ನು ಮೊದಲೇ ಯಾಕೆ ಊಹಿಸಲಿಲ್ಲ? ಐದು ವರ್ಷ- ಹತ್ತು ವರ್ಷದ ದೀರ್ಘಕಾಲೀನ ಕರಾರಿನ ಕಂಟ್ರಾಕ್ಟಗಳನ್ನ ಯಾಕೆ ಕರೀಲಿಲ್ಲ? ಸರಕಾರಿ ಸಂಸ್ಥೆಗೆ ಕೇವಲ ಶೇಕಡಾ 10 ರಷ್ಟು ಕೃಷಿಭೂಮಿಯನ್ನ ಮಾತ್ರ ಬಿಟ್ಟು ಕೊಟ್ಟರು?

ಇಲಿಗಳ ರಾಜ್ಯದಲ್ಲಿ ಬೆಕ್ಕಿಗೆ ಗಂಟೀ ಕಟ್ಟೂದಲ್ಲಾ, ಅದಕ್ಕ ಸವಾಲು ಕೇಳೋದೂ ಸಹಿತ ಸಾಧ್ಯವಿಲ್ಲ.

ವಿವರಗಳಿಗೆ:mhttps://pmfby.gov.inwww.aicofindia.com

ಪೀಕ (ಹೆಚ್ಚು ಕಡಿಮೆ ಪೀಕ್ ಎಂದು ಉಚ್ಚರಿಸುವ ಪೀಕ ಅಂದ್ರ ಬೆಳಿ – ಬೆಳೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...