Homeಡೇಟಾ ಖೋಲಿಪೀಕ ವಿಮೆ ದಂಧೀ ಒಳಗಾ ಲಾಭ ನಷ್ಟದ ಕತಿ : ಬೈ ಡೇಟಾಮ್ಯಾಟಿಕ್ಸ್

ಪೀಕ ವಿಮೆ ದಂಧೀ ಒಳಗಾ ಲಾಭ ನಷ್ಟದ ಕತಿ : ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ನಾವು ಕಷ್ಟಪಟ್ಟು ಬೆಳೆದ ಪೀಕ ‘ದೇವರ ಕೈ’ ಆಟದಿಂದ ಹಾಳಾಗಿ ಹೋದರ ಸರಕಾರನೋ, ಖಾಸಗಿ ಕಂಪನಿನೋ ನಮ್ಮ ನಷ್ಟ ಭರ್ತಿ ಮಾಡಿಕೊಡೋ ವ್ಯವಸ್ಥೆಗೆ ಬೆಳೆವಿಮೆ ಅಂತ ಹೆಸರು. (ಈ ‘ದೇವರ ಕೈ’ ಅನ್ನೋದು ರಾಷ್ಟ್ರೀಯ ಬೆಳೆವಿಮೆ ಯೋಜನೆಯ ತಾಕೀತುಗಳಲ್ಲಿ ಒಂದು.)

ಹಂಗಾರ ಇತರ ತಾಕೀತುಗಳೇನು? ಈ ಯೋಜನೆಯ ವಿವರಗಳು ಏನು?

ಮೊದಲಿಗೆ ಈ ಯೋಜನೆ ಬಂದಿದ್ದು ಇಂದಿರಾಗಾಂಧಿಯವರ ನಿಧನದ ನಂತರ ಬಂದ ಕಾಂಗ್ರೆಸ್ ಸರಕಾರದ ತಲಿಯೊಳಗ. 1985ರಾಗ ಈ ಯೋಜನೆ ತಂದಾಗ ಬರೇ 7 ಶೇಕಡಾ ರೈತರು ಇದರ ಉಪಯೋಗ ಪಡದರು. ನಂತರ 2000ದೊಳಗ 10 ಶೇಕಡಾ ಹಾಗೂ 2018ರೊಳಗ 26 ಶೇಕಡಾ ರೈತರು ಇದರೊಳಗ ಇದ್ದಾರ. 2016ಕ್ಕೆ ಹೋಲಿಸಿದರ ಶೇಕಡಾ 15 ರೈತರು ಈ ಯೋಜನೆಯಿಂದ ಹಿಂದ ಸರದಾರ. ಭಾರತದ ಶೇಕಡಾ 30ಕ್ಕೂ ಕಮ್ಮಿ ಕೃಷಿಭೂಮಿ ಇಂತಹ ಯೋಜನೆಗಳ ಕೆಳಗ ಅದ.

ನಮಗೆಲ್ಲಾರಿಗೂ ಗೊತ್ತಿರೋ ಎಲ್‍ಐಸಿ ಹಂಗನ, ಬೆಳೆ ವಿಮೆಗೆ ಏಐಸಿ (ಅಗ್ರಿಕಲ್ಚರ್ ಇನ್ಷುರನ್ಸ ಕಾರ್ಪೊರೇಷನ್ನು ‘ಕೃವಿನಿ’) ಅಂತ ಒಂದು ಅದ. ನರೇಂದ್ರ ಅವತಾರದ ಸರಕಾರ ಬರೋವರೆಗೂ ಇಡೀ ದೇಶದ ಕೃಷಿವಿಮೆ ಜವಾಬುದಾರಿ ಅದಕ್ಕ ಇತ್ತು. ಹಂಗ ಇರಬಾರದು ಖಾಸಗಿ ಕಂಪನಿಗಳಿಗೂ ಸೇವೆಯ ಅವಕಾಶ ಸಿಗಲಿ ಅಂತಹೇಳಿ ಅವರನ್ನು ಇದರೊಳಗ ಬರಮಾಡಲಾಯಿತು. ಸುಮಾರು ಹತ್ತು ಖಾಸಗಿ ಕಂಪನಿಗಳಿಗೆ ದೇಶವನ್ನು ಕೃಷಿ -ಹವಾಮಾನ ಘಟಕಗಳಾಗಿ ಹಂಚಿಕೊಡಲಾಯಿತು. ಅದರೊಳಗ ಐಸಿಐಸಿಐ, ಇಫ್ಕೋ ಟೋಕಿಯೋ, ಎಚ್‍ಡಿಎಫ್‍ಸಿ, ಚೋಲಮಂಡಲಂ, ಬಜಾಜು, ರಿಲೈಯನ್ಸ್, ಟಾಟಾ, ಎಸ್‍ಬಿಐ, ಫ್ಯೂಚರ್, ಯುನಿವರ್ಸಲ್ ಸೊಂಪೋ ಮುಂತಾದ ಸಂಪಾದ ಕಂಪನಿಗಳು ಇದ್ದವು.

ರೈತರು ಕೇವಲ ಶೇಕಡಾ ಎರಡು ವಿಮೆ ಕಂತು ತುಂಬಬೇಕು, ಕೇಂದ್ರ ಹಾಗೂ ರಾಜ್ಯ ತಲಾ ಶೇಕಡಾ 49 ತುಂಬಬೇಕು. ನಷ್ಟದ ಅಂದಾಜನ್ನು ರಾಜ್ಯ ಸರಕಾರ ಮಾಡಬೇಕು. ಪರಿಹಾರಧನವನ್ನು ರೈತರಿಗೆ ವಿಮಾ ಕಂಪನಿಗಳು ನೀಡಬೇಕು ಅಂತ ಯೋಜನೆ ತಯಾರಿಸಿ ಅದನ್ನು ಪ್ರಧಾನಮಂತ್ರಿಗಳ ಬ್ರ್ಯಾಂಡಿನ ಮ್ಯಾಲೆ ಹಾರಿ ಬಿಡಲಾಯಿತು. ರಾಮಾಯಣದಾಗ ಕಲ್ಲಿನ ಮ್ಯಾಲೆ ರಾಮ ಅಂತ ಬರದರ ಅವು ನೀರಾಗ ತೇಲತಿದ್ದವಂತ. ನಾಮ ಬಲ ಅಂದರ ಅಷ್ಟು ದೊಡ್ಡದು. ಹಿಂತಾ ಚಮತ್ಕಾರ ಈ ಕಲಿಯುಗದೊಳಗ ನಡೀಲೀ ಅಂತ ಅದರ ಹೆಸರು ಬದಲಾವಣೆ ಆತು. ಆ ಯೋಜನೆ ತೇಲಿತೋ ಮುಳುಗಿತೋ, ಪ್ರವಾಹದಾಗ ಬೆಳಿ ಕಳಕೊಂಡ ರೈತರ ಹೇಳಬೇಕು.

ಕಂತಿನ ಹಣ ಕೃಷಿ, ನೀರಾವರಿ ಹಾಗೂ ತೋಟಗಾರಿಕೆ ಭೂಮಿಯೊಳಗ ಪರಿಹಾರದ ಶೇಕಡಾ 1.5, 2 ಹಾಗೂ 5 ಅಂತ ನಿಗದಿ ಮಾಡಲಾಯಿತು. ಆದರ ಅದರಾಗ ಕೆಲವು ಸಮಸ್ಯಾ ಇದ್ದವು. ಉದಾಹರಣೆಗೆ ರೈತ ಹಾನಿಯಾದ 48 ಗಂಟೆಯೊಳಗ ವಿಮಾ ಕಂಪನಿಗೆ ಫೋನು ಮಾಡಿ ತಿಳಿಸಬೇಕು. ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಪ್ರವಾಹ ಬಂದಾಗ ರೈತರು 28 ಗಂಟೆ ಮಟಾ ಗಿಡದ ಕೊಂಬಿಗೆ ಜೋತಾಡುತ್ತಾ ಇದ್ದರು. ಅವರು ಹೆಂಗ ಫೋನು ಮಾಡ್ಯಾರು? ಆದರೂ ಈ ಮೂರು ವರ್ಷದೊಳಗ ಕಂಪನಿಗಳು ಬಂಗಾರದ ಅದಿರಿನ ಹಿಂದೆ ಬಿದ್ದ ದಾಹಿಗಳಂಗ ನಿರಾಸೆ ವ್ಯಕ್ತ ಪಡಿಸಿದರು.

‘ಇದು ನಮಗ ಲಾಭದಾಯಕ ಅಲ್ಲ, ನಮ್ಮ ಮರು ವಿಮೆ ಹಾಗೂ ಆಡಳಿತ ವೆಚ್ಚಗಳು ಭಾಳ ಆಗತಾವ. ಲಾಭಾಂಶ ಕಮ್ಮಿ. ಇದು ನಮಗ ಬ್ಯಾಡ ಅಂತ ಹೇಳಿದರು. ಸರಕಾರಿ ಸಂಸ್ಥೆಗಳಿಗೆನ ಇದರ ನೊಗ ಹೊರಸರಿ ನಾವು ಒಲ್ಲಿವಿ, ಅಂತ ಆಟ ಗೂಟ ಜೈ’ ಅಂದರು.

ಹಿಂಗಾರ ಅವರಿಗೆ ಆದ ನಷ್ಟ ಏನು ನೋಡುಣು ಬನ್ರಿಪಾ.

ಪ್ರಧಾನ ಮಂತ್ರಿ ಫಸಲು ಬೀಮಾ ಯೋಜನೆ ಆರಂಭವಾದ ಮೂರು ವರ್ಷದಾಗ (ನಂತರದ ವರ್ಷಗಳ ಡೇಟಾ ಸರಕಾರದಿಂದ ಇನ್ನೂ ಲಭ್ಯ ಆಗಿಲ್ಲ)- ಈ ಕಂಪನಿಗಳು ಸುಮಾರು 76 ಸಾವಿರ ಕೋಟಿ ಕಂತು ವಸೂಲು ಮಾಡ್ಯಾವು. ಇದರೊಳಗ ಸುಮಾರು 75 ಸಾವಿರ ಕೋಟಿ ತೆರಿಗೆದಾರರ ದುಡ್ಡು. ಬೆಳೆ ನಾಶ, ಬರ, ಪ್ರವಾಹ ಮುಂತಾದ ವೈಪರೀತ್ಯಗಳಾಗಿದ್ದಕ್ಕ ರೈತರಿಗೆ ಸಿಕ್ಕ ಪರಿಹಾರ ಸುಮಾರು 56 ಸಾವಿರ ಕೋಟಿ. ಅಂದರ ಈ ಕಂಪನಿಗಳು ನಿವ್ವಳ 27 ಶೇಕಡಾ ಲಾಭದಾಗ ಇದ್ದಾವು. ಅವು ಮರು ವಿಮೆ ಮೊತ್ತ ಶೇಕಡಾ 10 ಹಾಗೂ ಆಡಳಿತ ವೆಚ್ಚ ಶೇಕಡಾ 5 ಇದ್ದದ್ದರಿಂದ ಶೇಕಡಾ 12 ಲಾಭ ಗಳಿಸಿದಂಗ. ಆದರ ಇದು ಅವುಗಳ ಶೇರುದಾರರಿಗೆ ಕಮ್ಮಿ ಅನ್ನಿಸಿದ್ದಕ್ಕ ಆ ಮೊದಲಿನ ಹತ್ತು ಕಂಪನಿಗಳಲ್ಲಿ ಕೆಲವು ಈ ಯೋಜನೆಯಿಂದ ಹಿಂದ ಸರದಾವ. ಇನ್ನೂ ಸುಮಾರು ನಾಕು ಸಾವಿರ ಕೋಟಿ ಪರಿಹಾರ ಧನ ಕೊಡೋ ಬಾಕಿ ಉಳದೈತಿ.

ಹಂಗಾರ ಈ ಧಂದೇನ ಹಿಂಗೇನು ಮತ್ತ? ಹಂಗೇನಿಲ್ಲ. ಸರಕಾರಿ ವಿಮಾ ಕಂಪನಿಯ ಲೆಕ್ಕ ಪಟ್ಟಿ ನೋಡಿದರ ಇದು ಗೊತ್ತಾಗತದ. ಏಐಸಿ ಅಥವಾ ‘ಕೃವಿನಿ’ ಕಳೆದ ವರ್ಷ ಸುಮಾರು 7893 ಕೋಟಿ ರೂಪಾಯಿ ಕಂತು ಪಡೆದು 7040 ಕೋಟಿ ರೂಪಾಯಿ ಪರಿಹಾರ ಕೊಟ್ಟದ. ಇದು ಸುಮಾರು ಶೇಕಡಾ 90ರಷ್ಟು. ಇವರಿಗೂ ಮರುವಿಮೆ ಹಾಗೂ ಆಡಳಿತ ವೆಚ್ಚ ಅಂತ ಅದಾವು. ಸರಕಾರಿ ಸಂಸ್ಥೆ ಆದ್ದರಿಂದ ಸಿಬ್ಬಂದಿ ವೆಚ್ಚನೂ ಅದಾನಿ- ಅಂಬಾನಿಗಿಂತ ಹೆಚ್ಚು. ಆದರೂ ಇವರು ಯಾಕ ಹೆಚ್ಚು ಕೊಡಲಿಕ್ಕೆ ಆಯಿತು. ಅವರು ಇಷ್ಟೇ ಮೊತ್ತದ ಪರಿಹಾರ ಕೊಡತಿದ್ದರು ಅಂದರ ಇವರನ್ನ ತಗದು ಖಾಸಗಿ ಕಂಪನಿಗಳನ್ನು ಕರದು ಕರದು ಕೊಟ್ಟಿದ್ದು ಯಾಕೆ? ಮೊದಲ ಮೂರು ವರ್ಷ 76 ಸಾವಿರ ಕೋಟಿ ಹಣ ಹೊಡದುಕೊಂಡು ಆಮ್ಯಾಲೆ ನಾವಲ್ಲ ಅಂದರಲ್ಲಾ, ಅದನ್ನು ಮೊದಲೇ ಯಾಕೆ ಊಹಿಸಲಿಲ್ಲ? ಐದು ವರ್ಷ- ಹತ್ತು ವರ್ಷದ ದೀರ್ಘಕಾಲೀನ ಕರಾರಿನ ಕಂಟ್ರಾಕ್ಟಗಳನ್ನ ಯಾಕೆ ಕರೀಲಿಲ್ಲ? ಸರಕಾರಿ ಸಂಸ್ಥೆಗೆ ಕೇವಲ ಶೇಕಡಾ 10 ರಷ್ಟು ಕೃಷಿಭೂಮಿಯನ್ನ ಮಾತ್ರ ಬಿಟ್ಟು ಕೊಟ್ಟರು?

ಇಲಿಗಳ ರಾಜ್ಯದಲ್ಲಿ ಬೆಕ್ಕಿಗೆ ಗಂಟೀ ಕಟ್ಟೂದಲ್ಲಾ, ಅದಕ್ಕ ಸವಾಲು ಕೇಳೋದೂ ಸಹಿತ ಸಾಧ್ಯವಿಲ್ಲ.

ವಿವರಗಳಿಗೆ:mhttps://pmfby.gov.inwww.aicofindia.com

ಪೀಕ (ಹೆಚ್ಚು ಕಡಿಮೆ ಪೀಕ್ ಎಂದು ಉಚ್ಚರಿಸುವ ಪೀಕ ಅಂದ್ರ ಬೆಳಿ – ಬೆಳೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...