Homeಡೇಟಾ ಖೋಲಿಪೀಕ ವಿಮೆ ದಂಧೀ ಒಳಗಾ ಲಾಭ ನಷ್ಟದ ಕತಿ : ಬೈ ಡೇಟಾಮ್ಯಾಟಿಕ್ಸ್

ಪೀಕ ವಿಮೆ ದಂಧೀ ಒಳಗಾ ಲಾಭ ನಷ್ಟದ ಕತಿ : ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ನಾವು ಕಷ್ಟಪಟ್ಟು ಬೆಳೆದ ಪೀಕ ‘ದೇವರ ಕೈ’ ಆಟದಿಂದ ಹಾಳಾಗಿ ಹೋದರ ಸರಕಾರನೋ, ಖಾಸಗಿ ಕಂಪನಿನೋ ನಮ್ಮ ನಷ್ಟ ಭರ್ತಿ ಮಾಡಿಕೊಡೋ ವ್ಯವಸ್ಥೆಗೆ ಬೆಳೆವಿಮೆ ಅಂತ ಹೆಸರು. (ಈ ‘ದೇವರ ಕೈ’ ಅನ್ನೋದು ರಾಷ್ಟ್ರೀಯ ಬೆಳೆವಿಮೆ ಯೋಜನೆಯ ತಾಕೀತುಗಳಲ್ಲಿ ಒಂದು.)

ಹಂಗಾರ ಇತರ ತಾಕೀತುಗಳೇನು? ಈ ಯೋಜನೆಯ ವಿವರಗಳು ಏನು?

ಮೊದಲಿಗೆ ಈ ಯೋಜನೆ ಬಂದಿದ್ದು ಇಂದಿರಾಗಾಂಧಿಯವರ ನಿಧನದ ನಂತರ ಬಂದ ಕಾಂಗ್ರೆಸ್ ಸರಕಾರದ ತಲಿಯೊಳಗ. 1985ರಾಗ ಈ ಯೋಜನೆ ತಂದಾಗ ಬರೇ 7 ಶೇಕಡಾ ರೈತರು ಇದರ ಉಪಯೋಗ ಪಡದರು. ನಂತರ 2000ದೊಳಗ 10 ಶೇಕಡಾ ಹಾಗೂ 2018ರೊಳಗ 26 ಶೇಕಡಾ ರೈತರು ಇದರೊಳಗ ಇದ್ದಾರ. 2016ಕ್ಕೆ ಹೋಲಿಸಿದರ ಶೇಕಡಾ 15 ರೈತರು ಈ ಯೋಜನೆಯಿಂದ ಹಿಂದ ಸರದಾರ. ಭಾರತದ ಶೇಕಡಾ 30ಕ್ಕೂ ಕಮ್ಮಿ ಕೃಷಿಭೂಮಿ ಇಂತಹ ಯೋಜನೆಗಳ ಕೆಳಗ ಅದ.

ನಮಗೆಲ್ಲಾರಿಗೂ ಗೊತ್ತಿರೋ ಎಲ್‍ಐಸಿ ಹಂಗನ, ಬೆಳೆ ವಿಮೆಗೆ ಏಐಸಿ (ಅಗ್ರಿಕಲ್ಚರ್ ಇನ್ಷುರನ್ಸ ಕಾರ್ಪೊರೇಷನ್ನು ‘ಕೃವಿನಿ’) ಅಂತ ಒಂದು ಅದ. ನರೇಂದ್ರ ಅವತಾರದ ಸರಕಾರ ಬರೋವರೆಗೂ ಇಡೀ ದೇಶದ ಕೃಷಿವಿಮೆ ಜವಾಬುದಾರಿ ಅದಕ್ಕ ಇತ್ತು. ಹಂಗ ಇರಬಾರದು ಖಾಸಗಿ ಕಂಪನಿಗಳಿಗೂ ಸೇವೆಯ ಅವಕಾಶ ಸಿಗಲಿ ಅಂತಹೇಳಿ ಅವರನ್ನು ಇದರೊಳಗ ಬರಮಾಡಲಾಯಿತು. ಸುಮಾರು ಹತ್ತು ಖಾಸಗಿ ಕಂಪನಿಗಳಿಗೆ ದೇಶವನ್ನು ಕೃಷಿ -ಹವಾಮಾನ ಘಟಕಗಳಾಗಿ ಹಂಚಿಕೊಡಲಾಯಿತು. ಅದರೊಳಗ ಐಸಿಐಸಿಐ, ಇಫ್ಕೋ ಟೋಕಿಯೋ, ಎಚ್‍ಡಿಎಫ್‍ಸಿ, ಚೋಲಮಂಡಲಂ, ಬಜಾಜು, ರಿಲೈಯನ್ಸ್, ಟಾಟಾ, ಎಸ್‍ಬಿಐ, ಫ್ಯೂಚರ್, ಯುನಿವರ್ಸಲ್ ಸೊಂಪೋ ಮುಂತಾದ ಸಂಪಾದ ಕಂಪನಿಗಳು ಇದ್ದವು.

ರೈತರು ಕೇವಲ ಶೇಕಡಾ ಎರಡು ವಿಮೆ ಕಂತು ತುಂಬಬೇಕು, ಕೇಂದ್ರ ಹಾಗೂ ರಾಜ್ಯ ತಲಾ ಶೇಕಡಾ 49 ತುಂಬಬೇಕು. ನಷ್ಟದ ಅಂದಾಜನ್ನು ರಾಜ್ಯ ಸರಕಾರ ಮಾಡಬೇಕು. ಪರಿಹಾರಧನವನ್ನು ರೈತರಿಗೆ ವಿಮಾ ಕಂಪನಿಗಳು ನೀಡಬೇಕು ಅಂತ ಯೋಜನೆ ತಯಾರಿಸಿ ಅದನ್ನು ಪ್ರಧಾನಮಂತ್ರಿಗಳ ಬ್ರ್ಯಾಂಡಿನ ಮ್ಯಾಲೆ ಹಾರಿ ಬಿಡಲಾಯಿತು. ರಾಮಾಯಣದಾಗ ಕಲ್ಲಿನ ಮ್ಯಾಲೆ ರಾಮ ಅಂತ ಬರದರ ಅವು ನೀರಾಗ ತೇಲತಿದ್ದವಂತ. ನಾಮ ಬಲ ಅಂದರ ಅಷ್ಟು ದೊಡ್ಡದು. ಹಿಂತಾ ಚಮತ್ಕಾರ ಈ ಕಲಿಯುಗದೊಳಗ ನಡೀಲೀ ಅಂತ ಅದರ ಹೆಸರು ಬದಲಾವಣೆ ಆತು. ಆ ಯೋಜನೆ ತೇಲಿತೋ ಮುಳುಗಿತೋ, ಪ್ರವಾಹದಾಗ ಬೆಳಿ ಕಳಕೊಂಡ ರೈತರ ಹೇಳಬೇಕು.

ಕಂತಿನ ಹಣ ಕೃಷಿ, ನೀರಾವರಿ ಹಾಗೂ ತೋಟಗಾರಿಕೆ ಭೂಮಿಯೊಳಗ ಪರಿಹಾರದ ಶೇಕಡಾ 1.5, 2 ಹಾಗೂ 5 ಅಂತ ನಿಗದಿ ಮಾಡಲಾಯಿತು. ಆದರ ಅದರಾಗ ಕೆಲವು ಸಮಸ್ಯಾ ಇದ್ದವು. ಉದಾಹರಣೆಗೆ ರೈತ ಹಾನಿಯಾದ 48 ಗಂಟೆಯೊಳಗ ವಿಮಾ ಕಂಪನಿಗೆ ಫೋನು ಮಾಡಿ ತಿಳಿಸಬೇಕು. ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಪ್ರವಾಹ ಬಂದಾಗ ರೈತರು 28 ಗಂಟೆ ಮಟಾ ಗಿಡದ ಕೊಂಬಿಗೆ ಜೋತಾಡುತ್ತಾ ಇದ್ದರು. ಅವರು ಹೆಂಗ ಫೋನು ಮಾಡ್ಯಾರು? ಆದರೂ ಈ ಮೂರು ವರ್ಷದೊಳಗ ಕಂಪನಿಗಳು ಬಂಗಾರದ ಅದಿರಿನ ಹಿಂದೆ ಬಿದ್ದ ದಾಹಿಗಳಂಗ ನಿರಾಸೆ ವ್ಯಕ್ತ ಪಡಿಸಿದರು.

‘ಇದು ನಮಗ ಲಾಭದಾಯಕ ಅಲ್ಲ, ನಮ್ಮ ಮರು ವಿಮೆ ಹಾಗೂ ಆಡಳಿತ ವೆಚ್ಚಗಳು ಭಾಳ ಆಗತಾವ. ಲಾಭಾಂಶ ಕಮ್ಮಿ. ಇದು ನಮಗ ಬ್ಯಾಡ ಅಂತ ಹೇಳಿದರು. ಸರಕಾರಿ ಸಂಸ್ಥೆಗಳಿಗೆನ ಇದರ ನೊಗ ಹೊರಸರಿ ನಾವು ಒಲ್ಲಿವಿ, ಅಂತ ಆಟ ಗೂಟ ಜೈ’ ಅಂದರು.

ಹಿಂಗಾರ ಅವರಿಗೆ ಆದ ನಷ್ಟ ಏನು ನೋಡುಣು ಬನ್ರಿಪಾ.

ಪ್ರಧಾನ ಮಂತ್ರಿ ಫಸಲು ಬೀಮಾ ಯೋಜನೆ ಆರಂಭವಾದ ಮೂರು ವರ್ಷದಾಗ (ನಂತರದ ವರ್ಷಗಳ ಡೇಟಾ ಸರಕಾರದಿಂದ ಇನ್ನೂ ಲಭ್ಯ ಆಗಿಲ್ಲ)- ಈ ಕಂಪನಿಗಳು ಸುಮಾರು 76 ಸಾವಿರ ಕೋಟಿ ಕಂತು ವಸೂಲು ಮಾಡ್ಯಾವು. ಇದರೊಳಗ ಸುಮಾರು 75 ಸಾವಿರ ಕೋಟಿ ತೆರಿಗೆದಾರರ ದುಡ್ಡು. ಬೆಳೆ ನಾಶ, ಬರ, ಪ್ರವಾಹ ಮುಂತಾದ ವೈಪರೀತ್ಯಗಳಾಗಿದ್ದಕ್ಕ ರೈತರಿಗೆ ಸಿಕ್ಕ ಪರಿಹಾರ ಸುಮಾರು 56 ಸಾವಿರ ಕೋಟಿ. ಅಂದರ ಈ ಕಂಪನಿಗಳು ನಿವ್ವಳ 27 ಶೇಕಡಾ ಲಾಭದಾಗ ಇದ್ದಾವು. ಅವು ಮರು ವಿಮೆ ಮೊತ್ತ ಶೇಕಡಾ 10 ಹಾಗೂ ಆಡಳಿತ ವೆಚ್ಚ ಶೇಕಡಾ 5 ಇದ್ದದ್ದರಿಂದ ಶೇಕಡಾ 12 ಲಾಭ ಗಳಿಸಿದಂಗ. ಆದರ ಇದು ಅವುಗಳ ಶೇರುದಾರರಿಗೆ ಕಮ್ಮಿ ಅನ್ನಿಸಿದ್ದಕ್ಕ ಆ ಮೊದಲಿನ ಹತ್ತು ಕಂಪನಿಗಳಲ್ಲಿ ಕೆಲವು ಈ ಯೋಜನೆಯಿಂದ ಹಿಂದ ಸರದಾವ. ಇನ್ನೂ ಸುಮಾರು ನಾಕು ಸಾವಿರ ಕೋಟಿ ಪರಿಹಾರ ಧನ ಕೊಡೋ ಬಾಕಿ ಉಳದೈತಿ.

ಹಂಗಾರ ಈ ಧಂದೇನ ಹಿಂಗೇನು ಮತ್ತ? ಹಂಗೇನಿಲ್ಲ. ಸರಕಾರಿ ವಿಮಾ ಕಂಪನಿಯ ಲೆಕ್ಕ ಪಟ್ಟಿ ನೋಡಿದರ ಇದು ಗೊತ್ತಾಗತದ. ಏಐಸಿ ಅಥವಾ ‘ಕೃವಿನಿ’ ಕಳೆದ ವರ್ಷ ಸುಮಾರು 7893 ಕೋಟಿ ರೂಪಾಯಿ ಕಂತು ಪಡೆದು 7040 ಕೋಟಿ ರೂಪಾಯಿ ಪರಿಹಾರ ಕೊಟ್ಟದ. ಇದು ಸುಮಾರು ಶೇಕಡಾ 90ರಷ್ಟು. ಇವರಿಗೂ ಮರುವಿಮೆ ಹಾಗೂ ಆಡಳಿತ ವೆಚ್ಚ ಅಂತ ಅದಾವು. ಸರಕಾರಿ ಸಂಸ್ಥೆ ಆದ್ದರಿಂದ ಸಿಬ್ಬಂದಿ ವೆಚ್ಚನೂ ಅದಾನಿ- ಅಂಬಾನಿಗಿಂತ ಹೆಚ್ಚು. ಆದರೂ ಇವರು ಯಾಕ ಹೆಚ್ಚು ಕೊಡಲಿಕ್ಕೆ ಆಯಿತು. ಅವರು ಇಷ್ಟೇ ಮೊತ್ತದ ಪರಿಹಾರ ಕೊಡತಿದ್ದರು ಅಂದರ ಇವರನ್ನ ತಗದು ಖಾಸಗಿ ಕಂಪನಿಗಳನ್ನು ಕರದು ಕರದು ಕೊಟ್ಟಿದ್ದು ಯಾಕೆ? ಮೊದಲ ಮೂರು ವರ್ಷ 76 ಸಾವಿರ ಕೋಟಿ ಹಣ ಹೊಡದುಕೊಂಡು ಆಮ್ಯಾಲೆ ನಾವಲ್ಲ ಅಂದರಲ್ಲಾ, ಅದನ್ನು ಮೊದಲೇ ಯಾಕೆ ಊಹಿಸಲಿಲ್ಲ? ಐದು ವರ್ಷ- ಹತ್ತು ವರ್ಷದ ದೀರ್ಘಕಾಲೀನ ಕರಾರಿನ ಕಂಟ್ರಾಕ್ಟಗಳನ್ನ ಯಾಕೆ ಕರೀಲಿಲ್ಲ? ಸರಕಾರಿ ಸಂಸ್ಥೆಗೆ ಕೇವಲ ಶೇಕಡಾ 10 ರಷ್ಟು ಕೃಷಿಭೂಮಿಯನ್ನ ಮಾತ್ರ ಬಿಟ್ಟು ಕೊಟ್ಟರು?

ಇಲಿಗಳ ರಾಜ್ಯದಲ್ಲಿ ಬೆಕ್ಕಿಗೆ ಗಂಟೀ ಕಟ್ಟೂದಲ್ಲಾ, ಅದಕ್ಕ ಸವಾಲು ಕೇಳೋದೂ ಸಹಿತ ಸಾಧ್ಯವಿಲ್ಲ.

ವಿವರಗಳಿಗೆ:mhttps://pmfby.gov.inwww.aicofindia.com

ಪೀಕ (ಹೆಚ್ಚು ಕಡಿಮೆ ಪೀಕ್ ಎಂದು ಉಚ್ಚರಿಸುವ ಪೀಕ ಅಂದ್ರ ಬೆಳಿ – ಬೆಳೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...