Homeಡೇಟಾ ಖೋಲಿಪೀಕ ವಿಮೆ ದಂಧೀ ಒಳಗಾ ಲಾಭ ನಷ್ಟದ ಕತಿ : ಬೈ ಡೇಟಾಮ್ಯಾಟಿಕ್ಸ್

ಪೀಕ ವಿಮೆ ದಂಧೀ ಒಳಗಾ ಲಾಭ ನಷ್ಟದ ಕತಿ : ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ನಾವು ಕಷ್ಟಪಟ್ಟು ಬೆಳೆದ ಪೀಕ ‘ದೇವರ ಕೈ’ ಆಟದಿಂದ ಹಾಳಾಗಿ ಹೋದರ ಸರಕಾರನೋ, ಖಾಸಗಿ ಕಂಪನಿನೋ ನಮ್ಮ ನಷ್ಟ ಭರ್ತಿ ಮಾಡಿಕೊಡೋ ವ್ಯವಸ್ಥೆಗೆ ಬೆಳೆವಿಮೆ ಅಂತ ಹೆಸರು. (ಈ ‘ದೇವರ ಕೈ’ ಅನ್ನೋದು ರಾಷ್ಟ್ರೀಯ ಬೆಳೆವಿಮೆ ಯೋಜನೆಯ ತಾಕೀತುಗಳಲ್ಲಿ ಒಂದು.)

ಹಂಗಾರ ಇತರ ತಾಕೀತುಗಳೇನು? ಈ ಯೋಜನೆಯ ವಿವರಗಳು ಏನು?

ಮೊದಲಿಗೆ ಈ ಯೋಜನೆ ಬಂದಿದ್ದು ಇಂದಿರಾಗಾಂಧಿಯವರ ನಿಧನದ ನಂತರ ಬಂದ ಕಾಂಗ್ರೆಸ್ ಸರಕಾರದ ತಲಿಯೊಳಗ. 1985ರಾಗ ಈ ಯೋಜನೆ ತಂದಾಗ ಬರೇ 7 ಶೇಕಡಾ ರೈತರು ಇದರ ಉಪಯೋಗ ಪಡದರು. ನಂತರ 2000ದೊಳಗ 10 ಶೇಕಡಾ ಹಾಗೂ 2018ರೊಳಗ 26 ಶೇಕಡಾ ರೈತರು ಇದರೊಳಗ ಇದ್ದಾರ. 2016ಕ್ಕೆ ಹೋಲಿಸಿದರ ಶೇಕಡಾ 15 ರೈತರು ಈ ಯೋಜನೆಯಿಂದ ಹಿಂದ ಸರದಾರ. ಭಾರತದ ಶೇಕಡಾ 30ಕ್ಕೂ ಕಮ್ಮಿ ಕೃಷಿಭೂಮಿ ಇಂತಹ ಯೋಜನೆಗಳ ಕೆಳಗ ಅದ.

ನಮಗೆಲ್ಲಾರಿಗೂ ಗೊತ್ತಿರೋ ಎಲ್‍ಐಸಿ ಹಂಗನ, ಬೆಳೆ ವಿಮೆಗೆ ಏಐಸಿ (ಅಗ್ರಿಕಲ್ಚರ್ ಇನ್ಷುರನ್ಸ ಕಾರ್ಪೊರೇಷನ್ನು ‘ಕೃವಿನಿ’) ಅಂತ ಒಂದು ಅದ. ನರೇಂದ್ರ ಅವತಾರದ ಸರಕಾರ ಬರೋವರೆಗೂ ಇಡೀ ದೇಶದ ಕೃಷಿವಿಮೆ ಜವಾಬುದಾರಿ ಅದಕ್ಕ ಇತ್ತು. ಹಂಗ ಇರಬಾರದು ಖಾಸಗಿ ಕಂಪನಿಗಳಿಗೂ ಸೇವೆಯ ಅವಕಾಶ ಸಿಗಲಿ ಅಂತಹೇಳಿ ಅವರನ್ನು ಇದರೊಳಗ ಬರಮಾಡಲಾಯಿತು. ಸುಮಾರು ಹತ್ತು ಖಾಸಗಿ ಕಂಪನಿಗಳಿಗೆ ದೇಶವನ್ನು ಕೃಷಿ -ಹವಾಮಾನ ಘಟಕಗಳಾಗಿ ಹಂಚಿಕೊಡಲಾಯಿತು. ಅದರೊಳಗ ಐಸಿಐಸಿಐ, ಇಫ್ಕೋ ಟೋಕಿಯೋ, ಎಚ್‍ಡಿಎಫ್‍ಸಿ, ಚೋಲಮಂಡಲಂ, ಬಜಾಜು, ರಿಲೈಯನ್ಸ್, ಟಾಟಾ, ಎಸ್‍ಬಿಐ, ಫ್ಯೂಚರ್, ಯುನಿವರ್ಸಲ್ ಸೊಂಪೋ ಮುಂತಾದ ಸಂಪಾದ ಕಂಪನಿಗಳು ಇದ್ದವು.

ರೈತರು ಕೇವಲ ಶೇಕಡಾ ಎರಡು ವಿಮೆ ಕಂತು ತುಂಬಬೇಕು, ಕೇಂದ್ರ ಹಾಗೂ ರಾಜ್ಯ ತಲಾ ಶೇಕಡಾ 49 ತುಂಬಬೇಕು. ನಷ್ಟದ ಅಂದಾಜನ್ನು ರಾಜ್ಯ ಸರಕಾರ ಮಾಡಬೇಕು. ಪರಿಹಾರಧನವನ್ನು ರೈತರಿಗೆ ವಿಮಾ ಕಂಪನಿಗಳು ನೀಡಬೇಕು ಅಂತ ಯೋಜನೆ ತಯಾರಿಸಿ ಅದನ್ನು ಪ್ರಧಾನಮಂತ್ರಿಗಳ ಬ್ರ್ಯಾಂಡಿನ ಮ್ಯಾಲೆ ಹಾರಿ ಬಿಡಲಾಯಿತು. ರಾಮಾಯಣದಾಗ ಕಲ್ಲಿನ ಮ್ಯಾಲೆ ರಾಮ ಅಂತ ಬರದರ ಅವು ನೀರಾಗ ತೇಲತಿದ್ದವಂತ. ನಾಮ ಬಲ ಅಂದರ ಅಷ್ಟು ದೊಡ್ಡದು. ಹಿಂತಾ ಚಮತ್ಕಾರ ಈ ಕಲಿಯುಗದೊಳಗ ನಡೀಲೀ ಅಂತ ಅದರ ಹೆಸರು ಬದಲಾವಣೆ ಆತು. ಆ ಯೋಜನೆ ತೇಲಿತೋ ಮುಳುಗಿತೋ, ಪ್ರವಾಹದಾಗ ಬೆಳಿ ಕಳಕೊಂಡ ರೈತರ ಹೇಳಬೇಕು.

ಕಂತಿನ ಹಣ ಕೃಷಿ, ನೀರಾವರಿ ಹಾಗೂ ತೋಟಗಾರಿಕೆ ಭೂಮಿಯೊಳಗ ಪರಿಹಾರದ ಶೇಕಡಾ 1.5, 2 ಹಾಗೂ 5 ಅಂತ ನಿಗದಿ ಮಾಡಲಾಯಿತು. ಆದರ ಅದರಾಗ ಕೆಲವು ಸಮಸ್ಯಾ ಇದ್ದವು. ಉದಾಹರಣೆಗೆ ರೈತ ಹಾನಿಯಾದ 48 ಗಂಟೆಯೊಳಗ ವಿಮಾ ಕಂಪನಿಗೆ ಫೋನು ಮಾಡಿ ತಿಳಿಸಬೇಕು. ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಪ್ರವಾಹ ಬಂದಾಗ ರೈತರು 28 ಗಂಟೆ ಮಟಾ ಗಿಡದ ಕೊಂಬಿಗೆ ಜೋತಾಡುತ್ತಾ ಇದ್ದರು. ಅವರು ಹೆಂಗ ಫೋನು ಮಾಡ್ಯಾರು? ಆದರೂ ಈ ಮೂರು ವರ್ಷದೊಳಗ ಕಂಪನಿಗಳು ಬಂಗಾರದ ಅದಿರಿನ ಹಿಂದೆ ಬಿದ್ದ ದಾಹಿಗಳಂಗ ನಿರಾಸೆ ವ್ಯಕ್ತ ಪಡಿಸಿದರು.

‘ಇದು ನಮಗ ಲಾಭದಾಯಕ ಅಲ್ಲ, ನಮ್ಮ ಮರು ವಿಮೆ ಹಾಗೂ ಆಡಳಿತ ವೆಚ್ಚಗಳು ಭಾಳ ಆಗತಾವ. ಲಾಭಾಂಶ ಕಮ್ಮಿ. ಇದು ನಮಗ ಬ್ಯಾಡ ಅಂತ ಹೇಳಿದರು. ಸರಕಾರಿ ಸಂಸ್ಥೆಗಳಿಗೆನ ಇದರ ನೊಗ ಹೊರಸರಿ ನಾವು ಒಲ್ಲಿವಿ, ಅಂತ ಆಟ ಗೂಟ ಜೈ’ ಅಂದರು.

ಹಿಂಗಾರ ಅವರಿಗೆ ಆದ ನಷ್ಟ ಏನು ನೋಡುಣು ಬನ್ರಿಪಾ.

ಪ್ರಧಾನ ಮಂತ್ರಿ ಫಸಲು ಬೀಮಾ ಯೋಜನೆ ಆರಂಭವಾದ ಮೂರು ವರ್ಷದಾಗ (ನಂತರದ ವರ್ಷಗಳ ಡೇಟಾ ಸರಕಾರದಿಂದ ಇನ್ನೂ ಲಭ್ಯ ಆಗಿಲ್ಲ)- ಈ ಕಂಪನಿಗಳು ಸುಮಾರು 76 ಸಾವಿರ ಕೋಟಿ ಕಂತು ವಸೂಲು ಮಾಡ್ಯಾವು. ಇದರೊಳಗ ಸುಮಾರು 75 ಸಾವಿರ ಕೋಟಿ ತೆರಿಗೆದಾರರ ದುಡ್ಡು. ಬೆಳೆ ನಾಶ, ಬರ, ಪ್ರವಾಹ ಮುಂತಾದ ವೈಪರೀತ್ಯಗಳಾಗಿದ್ದಕ್ಕ ರೈತರಿಗೆ ಸಿಕ್ಕ ಪರಿಹಾರ ಸುಮಾರು 56 ಸಾವಿರ ಕೋಟಿ. ಅಂದರ ಈ ಕಂಪನಿಗಳು ನಿವ್ವಳ 27 ಶೇಕಡಾ ಲಾಭದಾಗ ಇದ್ದಾವು. ಅವು ಮರು ವಿಮೆ ಮೊತ್ತ ಶೇಕಡಾ 10 ಹಾಗೂ ಆಡಳಿತ ವೆಚ್ಚ ಶೇಕಡಾ 5 ಇದ್ದದ್ದರಿಂದ ಶೇಕಡಾ 12 ಲಾಭ ಗಳಿಸಿದಂಗ. ಆದರ ಇದು ಅವುಗಳ ಶೇರುದಾರರಿಗೆ ಕಮ್ಮಿ ಅನ್ನಿಸಿದ್ದಕ್ಕ ಆ ಮೊದಲಿನ ಹತ್ತು ಕಂಪನಿಗಳಲ್ಲಿ ಕೆಲವು ಈ ಯೋಜನೆಯಿಂದ ಹಿಂದ ಸರದಾವ. ಇನ್ನೂ ಸುಮಾರು ನಾಕು ಸಾವಿರ ಕೋಟಿ ಪರಿಹಾರ ಧನ ಕೊಡೋ ಬಾಕಿ ಉಳದೈತಿ.

ಹಂಗಾರ ಈ ಧಂದೇನ ಹಿಂಗೇನು ಮತ್ತ? ಹಂಗೇನಿಲ್ಲ. ಸರಕಾರಿ ವಿಮಾ ಕಂಪನಿಯ ಲೆಕ್ಕ ಪಟ್ಟಿ ನೋಡಿದರ ಇದು ಗೊತ್ತಾಗತದ. ಏಐಸಿ ಅಥವಾ ‘ಕೃವಿನಿ’ ಕಳೆದ ವರ್ಷ ಸುಮಾರು 7893 ಕೋಟಿ ರೂಪಾಯಿ ಕಂತು ಪಡೆದು 7040 ಕೋಟಿ ರೂಪಾಯಿ ಪರಿಹಾರ ಕೊಟ್ಟದ. ಇದು ಸುಮಾರು ಶೇಕಡಾ 90ರಷ್ಟು. ಇವರಿಗೂ ಮರುವಿಮೆ ಹಾಗೂ ಆಡಳಿತ ವೆಚ್ಚ ಅಂತ ಅದಾವು. ಸರಕಾರಿ ಸಂಸ್ಥೆ ಆದ್ದರಿಂದ ಸಿಬ್ಬಂದಿ ವೆಚ್ಚನೂ ಅದಾನಿ- ಅಂಬಾನಿಗಿಂತ ಹೆಚ್ಚು. ಆದರೂ ಇವರು ಯಾಕ ಹೆಚ್ಚು ಕೊಡಲಿಕ್ಕೆ ಆಯಿತು. ಅವರು ಇಷ್ಟೇ ಮೊತ್ತದ ಪರಿಹಾರ ಕೊಡತಿದ್ದರು ಅಂದರ ಇವರನ್ನ ತಗದು ಖಾಸಗಿ ಕಂಪನಿಗಳನ್ನು ಕರದು ಕರದು ಕೊಟ್ಟಿದ್ದು ಯಾಕೆ? ಮೊದಲ ಮೂರು ವರ್ಷ 76 ಸಾವಿರ ಕೋಟಿ ಹಣ ಹೊಡದುಕೊಂಡು ಆಮ್ಯಾಲೆ ನಾವಲ್ಲ ಅಂದರಲ್ಲಾ, ಅದನ್ನು ಮೊದಲೇ ಯಾಕೆ ಊಹಿಸಲಿಲ್ಲ? ಐದು ವರ್ಷ- ಹತ್ತು ವರ್ಷದ ದೀರ್ಘಕಾಲೀನ ಕರಾರಿನ ಕಂಟ್ರಾಕ್ಟಗಳನ್ನ ಯಾಕೆ ಕರೀಲಿಲ್ಲ? ಸರಕಾರಿ ಸಂಸ್ಥೆಗೆ ಕೇವಲ ಶೇಕಡಾ 10 ರಷ್ಟು ಕೃಷಿಭೂಮಿಯನ್ನ ಮಾತ್ರ ಬಿಟ್ಟು ಕೊಟ್ಟರು?

ಇಲಿಗಳ ರಾಜ್ಯದಲ್ಲಿ ಬೆಕ್ಕಿಗೆ ಗಂಟೀ ಕಟ್ಟೂದಲ್ಲಾ, ಅದಕ್ಕ ಸವಾಲು ಕೇಳೋದೂ ಸಹಿತ ಸಾಧ್ಯವಿಲ್ಲ.

ವಿವರಗಳಿಗೆ:mhttps://pmfby.gov.inwww.aicofindia.com

ಪೀಕ (ಹೆಚ್ಚು ಕಡಿಮೆ ಪೀಕ್ ಎಂದು ಉಚ್ಚರಿಸುವ ಪೀಕ ಅಂದ್ರ ಬೆಳಿ – ಬೆಳೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...