Homeಡೇಟಾ ಖೋಲಿಪೀಕ ವಿಮೆ ದಂಧೀ ಒಳಗಾ ಲಾಭ ನಷ್ಟದ ಕತಿ : ಬೈ ಡೇಟಾಮ್ಯಾಟಿಕ್ಸ್

ಪೀಕ ವಿಮೆ ದಂಧೀ ಒಳಗಾ ಲಾಭ ನಷ್ಟದ ಕತಿ : ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ನಾವು ಕಷ್ಟಪಟ್ಟು ಬೆಳೆದ ಪೀಕ ‘ದೇವರ ಕೈ’ ಆಟದಿಂದ ಹಾಳಾಗಿ ಹೋದರ ಸರಕಾರನೋ, ಖಾಸಗಿ ಕಂಪನಿನೋ ನಮ್ಮ ನಷ್ಟ ಭರ್ತಿ ಮಾಡಿಕೊಡೋ ವ್ಯವಸ್ಥೆಗೆ ಬೆಳೆವಿಮೆ ಅಂತ ಹೆಸರು. (ಈ ‘ದೇವರ ಕೈ’ ಅನ್ನೋದು ರಾಷ್ಟ್ರೀಯ ಬೆಳೆವಿಮೆ ಯೋಜನೆಯ ತಾಕೀತುಗಳಲ್ಲಿ ಒಂದು.)

ಹಂಗಾರ ಇತರ ತಾಕೀತುಗಳೇನು? ಈ ಯೋಜನೆಯ ವಿವರಗಳು ಏನು?

ಮೊದಲಿಗೆ ಈ ಯೋಜನೆ ಬಂದಿದ್ದು ಇಂದಿರಾಗಾಂಧಿಯವರ ನಿಧನದ ನಂತರ ಬಂದ ಕಾಂಗ್ರೆಸ್ ಸರಕಾರದ ತಲಿಯೊಳಗ. 1985ರಾಗ ಈ ಯೋಜನೆ ತಂದಾಗ ಬರೇ 7 ಶೇಕಡಾ ರೈತರು ಇದರ ಉಪಯೋಗ ಪಡದರು. ನಂತರ 2000ದೊಳಗ 10 ಶೇಕಡಾ ಹಾಗೂ 2018ರೊಳಗ 26 ಶೇಕಡಾ ರೈತರು ಇದರೊಳಗ ಇದ್ದಾರ. 2016ಕ್ಕೆ ಹೋಲಿಸಿದರ ಶೇಕಡಾ 15 ರೈತರು ಈ ಯೋಜನೆಯಿಂದ ಹಿಂದ ಸರದಾರ. ಭಾರತದ ಶೇಕಡಾ 30ಕ್ಕೂ ಕಮ್ಮಿ ಕೃಷಿಭೂಮಿ ಇಂತಹ ಯೋಜನೆಗಳ ಕೆಳಗ ಅದ.

ನಮಗೆಲ್ಲಾರಿಗೂ ಗೊತ್ತಿರೋ ಎಲ್‍ಐಸಿ ಹಂಗನ, ಬೆಳೆ ವಿಮೆಗೆ ಏಐಸಿ (ಅಗ್ರಿಕಲ್ಚರ್ ಇನ್ಷುರನ್ಸ ಕಾರ್ಪೊರೇಷನ್ನು ‘ಕೃವಿನಿ’) ಅಂತ ಒಂದು ಅದ. ನರೇಂದ್ರ ಅವತಾರದ ಸರಕಾರ ಬರೋವರೆಗೂ ಇಡೀ ದೇಶದ ಕೃಷಿವಿಮೆ ಜವಾಬುದಾರಿ ಅದಕ್ಕ ಇತ್ತು. ಹಂಗ ಇರಬಾರದು ಖಾಸಗಿ ಕಂಪನಿಗಳಿಗೂ ಸೇವೆಯ ಅವಕಾಶ ಸಿಗಲಿ ಅಂತಹೇಳಿ ಅವರನ್ನು ಇದರೊಳಗ ಬರಮಾಡಲಾಯಿತು. ಸುಮಾರು ಹತ್ತು ಖಾಸಗಿ ಕಂಪನಿಗಳಿಗೆ ದೇಶವನ್ನು ಕೃಷಿ -ಹವಾಮಾನ ಘಟಕಗಳಾಗಿ ಹಂಚಿಕೊಡಲಾಯಿತು. ಅದರೊಳಗ ಐಸಿಐಸಿಐ, ಇಫ್ಕೋ ಟೋಕಿಯೋ, ಎಚ್‍ಡಿಎಫ್‍ಸಿ, ಚೋಲಮಂಡಲಂ, ಬಜಾಜು, ರಿಲೈಯನ್ಸ್, ಟಾಟಾ, ಎಸ್‍ಬಿಐ, ಫ್ಯೂಚರ್, ಯುನಿವರ್ಸಲ್ ಸೊಂಪೋ ಮುಂತಾದ ಸಂಪಾದ ಕಂಪನಿಗಳು ಇದ್ದವು.

ರೈತರು ಕೇವಲ ಶೇಕಡಾ ಎರಡು ವಿಮೆ ಕಂತು ತುಂಬಬೇಕು, ಕೇಂದ್ರ ಹಾಗೂ ರಾಜ್ಯ ತಲಾ ಶೇಕಡಾ 49 ತುಂಬಬೇಕು. ನಷ್ಟದ ಅಂದಾಜನ್ನು ರಾಜ್ಯ ಸರಕಾರ ಮಾಡಬೇಕು. ಪರಿಹಾರಧನವನ್ನು ರೈತರಿಗೆ ವಿಮಾ ಕಂಪನಿಗಳು ನೀಡಬೇಕು ಅಂತ ಯೋಜನೆ ತಯಾರಿಸಿ ಅದನ್ನು ಪ್ರಧಾನಮಂತ್ರಿಗಳ ಬ್ರ್ಯಾಂಡಿನ ಮ್ಯಾಲೆ ಹಾರಿ ಬಿಡಲಾಯಿತು. ರಾಮಾಯಣದಾಗ ಕಲ್ಲಿನ ಮ್ಯಾಲೆ ರಾಮ ಅಂತ ಬರದರ ಅವು ನೀರಾಗ ತೇಲತಿದ್ದವಂತ. ನಾಮ ಬಲ ಅಂದರ ಅಷ್ಟು ದೊಡ್ಡದು. ಹಿಂತಾ ಚಮತ್ಕಾರ ಈ ಕಲಿಯುಗದೊಳಗ ನಡೀಲೀ ಅಂತ ಅದರ ಹೆಸರು ಬದಲಾವಣೆ ಆತು. ಆ ಯೋಜನೆ ತೇಲಿತೋ ಮುಳುಗಿತೋ, ಪ್ರವಾಹದಾಗ ಬೆಳಿ ಕಳಕೊಂಡ ರೈತರ ಹೇಳಬೇಕು.

ಕಂತಿನ ಹಣ ಕೃಷಿ, ನೀರಾವರಿ ಹಾಗೂ ತೋಟಗಾರಿಕೆ ಭೂಮಿಯೊಳಗ ಪರಿಹಾರದ ಶೇಕಡಾ 1.5, 2 ಹಾಗೂ 5 ಅಂತ ನಿಗದಿ ಮಾಡಲಾಯಿತು. ಆದರ ಅದರಾಗ ಕೆಲವು ಸಮಸ್ಯಾ ಇದ್ದವು. ಉದಾಹರಣೆಗೆ ರೈತ ಹಾನಿಯಾದ 48 ಗಂಟೆಯೊಳಗ ವಿಮಾ ಕಂಪನಿಗೆ ಫೋನು ಮಾಡಿ ತಿಳಿಸಬೇಕು. ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಪ್ರವಾಹ ಬಂದಾಗ ರೈತರು 28 ಗಂಟೆ ಮಟಾ ಗಿಡದ ಕೊಂಬಿಗೆ ಜೋತಾಡುತ್ತಾ ಇದ್ದರು. ಅವರು ಹೆಂಗ ಫೋನು ಮಾಡ್ಯಾರು? ಆದರೂ ಈ ಮೂರು ವರ್ಷದೊಳಗ ಕಂಪನಿಗಳು ಬಂಗಾರದ ಅದಿರಿನ ಹಿಂದೆ ಬಿದ್ದ ದಾಹಿಗಳಂಗ ನಿರಾಸೆ ವ್ಯಕ್ತ ಪಡಿಸಿದರು.

‘ಇದು ನಮಗ ಲಾಭದಾಯಕ ಅಲ್ಲ, ನಮ್ಮ ಮರು ವಿಮೆ ಹಾಗೂ ಆಡಳಿತ ವೆಚ್ಚಗಳು ಭಾಳ ಆಗತಾವ. ಲಾಭಾಂಶ ಕಮ್ಮಿ. ಇದು ನಮಗ ಬ್ಯಾಡ ಅಂತ ಹೇಳಿದರು. ಸರಕಾರಿ ಸಂಸ್ಥೆಗಳಿಗೆನ ಇದರ ನೊಗ ಹೊರಸರಿ ನಾವು ಒಲ್ಲಿವಿ, ಅಂತ ಆಟ ಗೂಟ ಜೈ’ ಅಂದರು.

ಹಿಂಗಾರ ಅವರಿಗೆ ಆದ ನಷ್ಟ ಏನು ನೋಡುಣು ಬನ್ರಿಪಾ.

ಪ್ರಧಾನ ಮಂತ್ರಿ ಫಸಲು ಬೀಮಾ ಯೋಜನೆ ಆರಂಭವಾದ ಮೂರು ವರ್ಷದಾಗ (ನಂತರದ ವರ್ಷಗಳ ಡೇಟಾ ಸರಕಾರದಿಂದ ಇನ್ನೂ ಲಭ್ಯ ಆಗಿಲ್ಲ)- ಈ ಕಂಪನಿಗಳು ಸುಮಾರು 76 ಸಾವಿರ ಕೋಟಿ ಕಂತು ವಸೂಲು ಮಾಡ್ಯಾವು. ಇದರೊಳಗ ಸುಮಾರು 75 ಸಾವಿರ ಕೋಟಿ ತೆರಿಗೆದಾರರ ದುಡ್ಡು. ಬೆಳೆ ನಾಶ, ಬರ, ಪ್ರವಾಹ ಮುಂತಾದ ವೈಪರೀತ್ಯಗಳಾಗಿದ್ದಕ್ಕ ರೈತರಿಗೆ ಸಿಕ್ಕ ಪರಿಹಾರ ಸುಮಾರು 56 ಸಾವಿರ ಕೋಟಿ. ಅಂದರ ಈ ಕಂಪನಿಗಳು ನಿವ್ವಳ 27 ಶೇಕಡಾ ಲಾಭದಾಗ ಇದ್ದಾವು. ಅವು ಮರು ವಿಮೆ ಮೊತ್ತ ಶೇಕಡಾ 10 ಹಾಗೂ ಆಡಳಿತ ವೆಚ್ಚ ಶೇಕಡಾ 5 ಇದ್ದದ್ದರಿಂದ ಶೇಕಡಾ 12 ಲಾಭ ಗಳಿಸಿದಂಗ. ಆದರ ಇದು ಅವುಗಳ ಶೇರುದಾರರಿಗೆ ಕಮ್ಮಿ ಅನ್ನಿಸಿದ್ದಕ್ಕ ಆ ಮೊದಲಿನ ಹತ್ತು ಕಂಪನಿಗಳಲ್ಲಿ ಕೆಲವು ಈ ಯೋಜನೆಯಿಂದ ಹಿಂದ ಸರದಾವ. ಇನ್ನೂ ಸುಮಾರು ನಾಕು ಸಾವಿರ ಕೋಟಿ ಪರಿಹಾರ ಧನ ಕೊಡೋ ಬಾಕಿ ಉಳದೈತಿ.

ಹಂಗಾರ ಈ ಧಂದೇನ ಹಿಂಗೇನು ಮತ್ತ? ಹಂಗೇನಿಲ್ಲ. ಸರಕಾರಿ ವಿಮಾ ಕಂಪನಿಯ ಲೆಕ್ಕ ಪಟ್ಟಿ ನೋಡಿದರ ಇದು ಗೊತ್ತಾಗತದ. ಏಐಸಿ ಅಥವಾ ‘ಕೃವಿನಿ’ ಕಳೆದ ವರ್ಷ ಸುಮಾರು 7893 ಕೋಟಿ ರೂಪಾಯಿ ಕಂತು ಪಡೆದು 7040 ಕೋಟಿ ರೂಪಾಯಿ ಪರಿಹಾರ ಕೊಟ್ಟದ. ಇದು ಸುಮಾರು ಶೇಕಡಾ 90ರಷ್ಟು. ಇವರಿಗೂ ಮರುವಿಮೆ ಹಾಗೂ ಆಡಳಿತ ವೆಚ್ಚ ಅಂತ ಅದಾವು. ಸರಕಾರಿ ಸಂಸ್ಥೆ ಆದ್ದರಿಂದ ಸಿಬ್ಬಂದಿ ವೆಚ್ಚನೂ ಅದಾನಿ- ಅಂಬಾನಿಗಿಂತ ಹೆಚ್ಚು. ಆದರೂ ಇವರು ಯಾಕ ಹೆಚ್ಚು ಕೊಡಲಿಕ್ಕೆ ಆಯಿತು. ಅವರು ಇಷ್ಟೇ ಮೊತ್ತದ ಪರಿಹಾರ ಕೊಡತಿದ್ದರು ಅಂದರ ಇವರನ್ನ ತಗದು ಖಾಸಗಿ ಕಂಪನಿಗಳನ್ನು ಕರದು ಕರದು ಕೊಟ್ಟಿದ್ದು ಯಾಕೆ? ಮೊದಲ ಮೂರು ವರ್ಷ 76 ಸಾವಿರ ಕೋಟಿ ಹಣ ಹೊಡದುಕೊಂಡು ಆಮ್ಯಾಲೆ ನಾವಲ್ಲ ಅಂದರಲ್ಲಾ, ಅದನ್ನು ಮೊದಲೇ ಯಾಕೆ ಊಹಿಸಲಿಲ್ಲ? ಐದು ವರ್ಷ- ಹತ್ತು ವರ್ಷದ ದೀರ್ಘಕಾಲೀನ ಕರಾರಿನ ಕಂಟ್ರಾಕ್ಟಗಳನ್ನ ಯಾಕೆ ಕರೀಲಿಲ್ಲ? ಸರಕಾರಿ ಸಂಸ್ಥೆಗೆ ಕೇವಲ ಶೇಕಡಾ 10 ರಷ್ಟು ಕೃಷಿಭೂಮಿಯನ್ನ ಮಾತ್ರ ಬಿಟ್ಟು ಕೊಟ್ಟರು?

ಇಲಿಗಳ ರಾಜ್ಯದಲ್ಲಿ ಬೆಕ್ಕಿಗೆ ಗಂಟೀ ಕಟ್ಟೂದಲ್ಲಾ, ಅದಕ್ಕ ಸವಾಲು ಕೇಳೋದೂ ಸಹಿತ ಸಾಧ್ಯವಿಲ್ಲ.

ವಿವರಗಳಿಗೆ:mhttps://pmfby.gov.inwww.aicofindia.com

ಪೀಕ (ಹೆಚ್ಚು ಕಡಿಮೆ ಪೀಕ್ ಎಂದು ಉಚ್ಚರಿಸುವ ಪೀಕ ಅಂದ್ರ ಬೆಳಿ – ಬೆಳೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...