Homeನೂರರ ನೋಟಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ... : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

ಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ… : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

- Advertisement -
- Advertisement -

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕೇಳಿದ ಅಡ್ವಾಣಿಯವರು, ನ್ಯಾಯಾಲಯ ತಮ್ಮ ತೀರ್ಮಾನವನ್ನು ಸಮರ್ಥಿಸಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಡ್ವಾಣಿಯವರ ಪ್ರಚೋದನೆಯ ಕೆಲಸವನ್ನು ಸಮರ್ಥಿಸಿಲ್ಲ. ಬಾಬ್ರಿ ಮಸೀದಿ ಒಡೆದದ್ದು ಅಪರಾಧ ಎಂದು ಸ್ಪಷ್ಟವಾಗಿ ಹೇಳಿದೆ; ಈ ಅಪರಾಧದ ಗಂಭೀರತೆಯನ್ನು ಯಾರೂ ಮರೆಯುವಂತಿಲ್ಲ.

ಭಾರತದಲ್ಲಿ ಎಲ್ಲವೂ ಜಾತಿ, ಧರ್ಮಗಳ ಮಯವಾಗಿದೆ. self-appointed ದೇಶಭಕ್ತರ ಹಾವಳಿ ಜಾಸ್ತಿಯಾಗಿದೆ. ಅವರ ಮನಸ್ಸೆಲ್ಲಾ ವಿಷಪೂರಿತವಾಗಿದೆ. ಇವರ ಅಭಿಪ್ರಾಯದಲ್ಲಿ ಭಾರತದಲ್ಲಿರುವ ಮುಸ್ಲಿಮರು ಕ್ರಿಶ್ಚಿಯನ್ನರು, ಪಾರ್ಸಿಗಳು, ನೀಗ್ರೋಗಳು ಎಲ್ಲರೂ ತಾವು ಹಿಂದುಗಳೆಂದು ಘೋಷಣೆ ಮಾಡಬೇಕು. ಈ ಸ್ವಯಂನೇಮಿತ ದೇಶಭಕ್ತರ ಹಿಂದುತ್ವವನ್ನು ಯಾವ ಕಾರಣಕ್ಕೂ ಪ್ರಶ್ನಿಸುವಂತಿಲ್ಲ. ಈ ಅಹಂಕಾರದಿಂದಲೇ ಅವರು ಬಾಬ್ರಿ ಮಸೀದಿ ಒಡೆದು ರಾಮಮಂದಿರವನ್ನು ನಿರ್ಮಿಸಲು ಹೊರಟಿದ್ದು.

ಮುಖ್ಯನ್ಯಾಯಾಧೀಶರಾದ ರಂಜನ್ ಗೊಗೊಯ್ ಅವರನ್ನು ಒಬ್ಬ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಪ್ರಶ್ನಿಸುತ್ತಾರೆ: ಬಾಬ್ರಿ ಮಸೀದಿ ಕಟ್ಟಡ ಇಂದಿಗೂ ಅಸ್ತಿತ್ವದಲ್ಲಿ ಇದ್ದಿದ್ದರೆ, ನೀವು ರಾಮಮಂದಿರವನ್ನು ಕಟ್ಟಲು ಅಲ್ಲಿ ಅವಕಾಶ ಕೊಡುವ ತೀರ್ಪನ್ನು ಕೊಡುತ್ತಿದ್ದಿರಾ? ಎಂದು. ಕಾನೂನು ವಿಚಾರಕ್ಕಿಂತ ಹೆಚ್ಚಿನ ಮಹತ್ವವನ್ನು ತೀರ್ಪಿನಲ್ಲಿ ಜನರ ನಂಬಿಕೆ ಭಕ್ತಿ ಶ್ರದ್ಧೆಗೆ ನೀಡಿ, ಹೆಚ್ಚಿನ ಮನ್ನಣೆ ನೀಡಲಾಗಿದೆ ಎಂದು ಅನೇಕರು ಹೇಳಿದ್ದಾರೆ.

ಮಸೀದಿಯನ್ನು ಕಟ್ಟಿದ ದಿನದಿಂದ ಇಂದಿನವರೆಗೂ ಅದು ವಿವಾದಾಸ್ಪದ ವಿಚಾರವೇ ಆಗಿತ್ತು. ಈಗ ನ್ಯಾಯಾಲಯ ಒಂದು ತೀರ್ಪಿತ್ತು ವಿವಾದವನ್ನು ಇತ್ಯರ್ಥಗೊಳಿಸಿದೆ. ಈ ತೀರ್ಮಾನವನ್ನು ಹಿಂದುತ್ವಕ್ಕೆ ದೊರೆತ ಜಯ ಎಂದು ಭಾವಿಸಿ ಹಿಂದು ಮತಾಂಧರು ಒಂದು ಯುದ್ಧ ಗೆದ್ದವರಂತೆ ರಂಪ ಮಾಡಿಲ್ಲ. ಸುನ್ನಿ ವಕ್ಫ್ ಬೋರ್ಡಿನ ಸದಸ್ಯರು ನ್ಯಾಯಾಲಯದ ತೀರ್ಪು ಸಮಾಧಾನ ತಂದಿಲ್ಲವಾದರೂ, ವಿರೋಧಿಸುವುದಿಲ್ಲ ಎಂದರು. ಆನಂತರ ಸಭೆ ಸೇರಿ ನಮಗೆ ನಿಮ್ಮ ಐದು ಎಕರೆ ಜಮೀನು ಬೇಡ ಎಂದು ತೀರ್ಮಾನ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ಈ ಚಾರಿತ್ರಿಕ ತೀರ್ಪು ಸಮರ್ಪಕವಿಲ್ಲವೆಂದು ಹೇಳುವ ಜನ ಎರಡೂ ಕಡೆ ಇದ್ದಾರೆ. ಆದರೆ ಅವರು ಪ್ರತಿಭಟನೆ ಮಾಡುವ ಮಟ್ಟಕ್ಕೆ ಇಳಿದಿಲ್ಲ. ಇದು ಒಂದು ಸಂತಸದ ಸಂಗತಿ.

ಅಯೋಧ್ಯೆಯಲ್ಲಿ ರಾಮಮಂದಿರ ಇದ್ದ ವಿವಾದವನ್ನು ನ್ಯಾಯಾಲಯ ಒಪ್ಪಿಕೊಂಡಿಲ್ಲ. ಮಸೀದಿ ಕಟ್ಟುವುದಕ್ಕೆ ಮೊದಲು ಅದರ ಅಡಿಯಲ್ಲಿ ಒಂದು ಕಟ್ಟಡ ಇತ್ತು. ಆದರೆ ಅದು ರಾಮರ ದೇವಾಲಯ ಎನ್ನುವುದಕ್ಕೆ ಪುರಾವೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ತೀರ್ಪಿನಲ್ಲಿ ನ್ಯಾಯಾಲಯ ಬಾಬ್ರಿ ಮಸೀದಿ ಕೆಡವಿದ್ದು ತಪ್ಪು ಎಂದು ಹೇಳಿದೆ. ಕಾನೂನನ್ನು ಯಾರೇ ಆಗಲಿ ತಮ್ಮ ಕೈಗೆ ತೆಗೆದುಕೊಳ್ಳುವುದು ಅಪರಾಧ ಎಂಬುದನ್ನು ಸ್ಪಷ್ಟಪಡಿಸಿದೆ. ಈ ಅಪರಾಧ ಮಾಡಿದವರಲ್ಲಿ ಎಲ್.ಕೆ.ಅಡ್ವಾನಿಯವರು ಒಬ್ಬರು. ಅವರು ಕಾನೂನನ್ನು ಉದ್ದೇಶಪೂರ್ವಕವಾಗಿ ಗಾಳಿಗೆ ತೂರಿದ್ದಾರೆ. ಅಡ್ವಾನಿಯವರ ರಥಯಾತ್ರೆ ಕರಸೇವಕರಿಗೆ ಪ್ರೇರಕಶಕ್ತಿಯಾಗಿತ್ತು. ಆ ಯಾತ್ರೆಯ ಮೂಲಕ ಅವರು ಕೋಮು ಉನ್ಮಾದಕ್ಕೆ ನಾಂದಿ ಹಾಡಿದರು. ಲಿಬರ್ಹಾನ್ ಕಮಿಷನ್ ಕೂಡ ಅಡ್ವಾನಿಯವರು ಹಾಗೂ ಆಗಿನ ಉತ್ತರಪ್ರದೇಶದ ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ಮತ್ತು ಇತರರು ಕೋಮುದ್ವೇಷ ಬೆಳೆಸಲು ಪ್ರೇರಕರು ಎಂದು ತಮ್ಮ ವಿಚಾರಣಾ ವರದಿಯಲ್ಲಿ ನಮೂದಿಸಿದ್ದಾರೆ.

ಎಲ್.ಕೆ.ಅಡ್ವಾಣಿ ಮುಂತಾದ ಬಿಜೆಪಿ ಮತ್ತು ಆರ್‍ಎಸ್‍ಎಸ್ ಮುಖಂಡರು, ಬಾಬ್ರಿ ಮಸೀದಿ ಆವರಣದಲ್ಲಿದ್ದುಕೊಂಡು ಕರಸೇವಕರನ್ನು ಮಸೀದಿ ಒಡೆಯುವ ಸಂದರ್ಭದಲ್ಲಿ ಹುರಿದುಂಬಿಸಿದ್ದಾರೆ. ಆಗಿನ ಪ್ರಧಾನಿಯಾಗಿದ್ದ ಪಿ.ವಿ ನರಸಿಂಹರಾಯರು ಅಯೋಧೈಗೆ ಸೈನಿಕರನ್ನು ಕಳಿಸಿ ತಾವೇ ನಿಂತು ಬಾಬ್ರಿ ಮಸೀದಿಯನ್ನು ಧ್ವಂಸಮಾಡುವುದನ್ನು ತಡೆಗಟ್ಟಬೇಕಾಗಿತ್ತು. ಅವರು ಆ ಕೆಲಸವನ್ನು ಮಾಡದೆ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್‍ಸಿಂಗ್‍ಗೆ ಈ ಜವಾಬ್ದಾರಿಯನ್ನು ವಹಿಸಿ ಸೈನ್ಯವನ್ನು ಅವರ ವಶಕ್ಕೆ ವಹಿಸಿದರು. ಇದು ಪ್ರಧಾನಿಯ ಕರ್ತವ್ಯಲೋಪದ ಪರಮಾವಧಿ. ಬಿಜೆಪಿಯ ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ಸೈನ್ಯವನ್ನು ಬಳಸಿಕೊಂಡು ಮಸೀದಿ ಒಡೆಯುವನೇ ಎಂದು ಪಿ.ವಿ ನರಸಿಂಹರಾಯರು ಯೋಜಿಸದೆ ಇರಲಿಲ್ಲ. ಈ ಬಿಕ್ಕಟ್ಟಿನ ಸಮಸ್ಯೆಯಿಂದ ತಪ್ಪಿಸಿಕೊಳ್ಳುವ ದುರುದ್ದೇಶದಿಂದ ಅವರು ಈ ತಂತ್ರ ಮಾಡಿದರು. ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ತಟಸ್ಥರಾಗಿದ್ದುಕೊಂಡು ಕರಸೇವಕರಿಗೆ ಕುಮ್ಮಕ್ಕು ಕೊಟ್ಟರು. ತಮ್ಮ ಸಾಂವಿಧಾನಿಕ ಜವಾಬ್ದಾರಿಯ ಕೆಲಸ ಮಾಡುವವರಲ್ಲ ಎಂದು ತಿಳಿಸಿದ್ದರೂ ಪಿ.ವಿ.ನರಸಿಂಹರಾಯರು ಆ ಕೆಲಸವನ್ನು ಕಲ್ಯಾಣ್‍ಸಿಂಗ್‍ಗೆ ವಹಿಸಿದ್ದು ಅಕ್ಷಮ್ಯ ಅಪರಾಧ.

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕೇಳಿದ ಅಡ್ವಾಣಿಯವರು, ನ್ಯಾಯಾಲಯ ತಮ್ಮ ತೀರ್ಮಾನವನ್ನು ಸಮರ್ಥಿಸಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಡ್ವಾಣಿಯವರ ಪ್ರಚೋದನೆಯ ಕೆಲಸವನ್ನು ಸಮರ್ಥಿಸಿಲ್ಲ. ಬಾಬ್ರಿ ಮಸೀದಿ ಒಡೆದದ್ದು ಅಪರಾಧ ಎಂದು ಸ್ಪಷ್ಟವಾಗಿ ಹೇಳಿದೆ; ಈ ಅಪರಾಧದ ಗಂಭೀರತೆಯನ್ನು ಯಾರೂ ಮರೆಯುವಂತಿಲ್ಲ. ಬಾಬ್ರಿ ಮಸೀದಿಯನ್ನು ಅಕ್ರಮವಾಗಿ ಒಡೆದ ಕಾರಣದಿಂದ ಭಾರತದ ಅನೇಕ ಕಡೆ ದಾಂಧಲೆಗಳಾದವು. ಅದರ ಪ್ರತಿಧ್ವನಿಯಾಗಿ ನೂರಾರು ಮಂದಿ ಕೊಲ್ಲಲ್ಪಟ್ಟರು.

ಈ ಎಲ್ಲ ಪ್ರಸಂಗಗಳೂ ಭಾರತದ ಜಾತ್ಯತೀತ ನಿಲುವಿಗೆ ಭಾರೀ ಪೆಟ್ಟು ಕೊಟ್ಟವು, ಅಡ್ವಾನಿಯವರ ಜೊತೆಗೆ ರಥಯಾತ್ರೆಯಲ್ಲಿ ಸಾಥ್ ಕೊಟ್ಟವರು ಇಂದಿನ ಪ್ರಧಾನಿಯಾಗಿರುವ ಮೋದಿಯವರು ಎಂಬುದನ್ನು ಮರೆಯದಿರೋಣ. ಅಡ್ವಾಣಿ ರಥಯಾತ್ರೆ ಮಾಡಿ ಕೋಮುಭಾವನೆ ಬೆಳೆಸಿದ್ದು ತಪ್ಪಾದರೆ ಅವರಿಗೆ ಸಾಥ್ ಕೊಟ್ಟವರೂ ತಪ್ಪಿತಸ್ಥರೇ!

ಹಿಂದೂ ರಾಷ್ಟ್ರದ ಕನಸು ಕಾಣುವ ಈ ರಾಜಕೀಯ ಹಿತಾಸಕ್ತಿಗಳಿಗೆ ಧರ್ಮ ಒಂದು ರಾಜಕೀಯ ಅಸ್ತ್ರ. ರಾಮನನ್ನು ಇವರು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳುತ್ತಾರೆ. ಅಸಹಿಷ್ಣುತೆ ಮತ್ತು ಹಿಂಸೆಯನ್ನು ರಾಮನ ಹೆಸರಿನಲ್ಲಿ ಬಿತ್ತುವ ಈ ಧೂರ್ತರು ಹಿಂದುತ್ವದ ಮಾರಾಟಗಾರರು. ರಾಮನ ಹೆಸರಿನಲ್ಲಿ ಮತ ಕೇಳುವುದು ರಾಮನಿಗೆ ಕಳಂಕ ತರುವ ಗೆಯ್ಮೆ. ಆದರೆ ಅವರಿಗೆ ಹಾಗೆನಿಸುವುದಿಲ್ಲ. ಏಕೆಂದರೆ ಅವರಿಗೆ ರಾಮನ ಹೆಸರು ಬಳಸಿಕೊಂಡು ಮತ ಗಳಿಸುವುದೇ ಮುಖ್ಯ.

ಭಾರತ ಈಗ ಒಂದು ಮತೀಯ ರಾಷ್ಟ್ರವಾಗಿ ಪರಿವರ್ತನೆಗೊಳ್ಳುತ್ತಿದೆ. ಹಿಂದುತ್ವ ಪ್ರತಿಪಾದನೆಯ ಸನ್ನಿ ಹಿಡಿದವರಿಗೆ ಇದು ಒಂದು retrograde step ಎಂದು ಅನಿಸುತ್ತಿಲ್ಲದಿರುವುದು ಒಂದು ದುರ್ದೈವದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...