Homeನೂರರ ನೋಟಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ... : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

ಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ… : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

- Advertisement -
- Advertisement -

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕೇಳಿದ ಅಡ್ವಾಣಿಯವರು, ನ್ಯಾಯಾಲಯ ತಮ್ಮ ತೀರ್ಮಾನವನ್ನು ಸಮರ್ಥಿಸಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಡ್ವಾಣಿಯವರ ಪ್ರಚೋದನೆಯ ಕೆಲಸವನ್ನು ಸಮರ್ಥಿಸಿಲ್ಲ. ಬಾಬ್ರಿ ಮಸೀದಿ ಒಡೆದದ್ದು ಅಪರಾಧ ಎಂದು ಸ್ಪಷ್ಟವಾಗಿ ಹೇಳಿದೆ; ಈ ಅಪರಾಧದ ಗಂಭೀರತೆಯನ್ನು ಯಾರೂ ಮರೆಯುವಂತಿಲ್ಲ.

ಭಾರತದಲ್ಲಿ ಎಲ್ಲವೂ ಜಾತಿ, ಧರ್ಮಗಳ ಮಯವಾಗಿದೆ. self-appointed ದೇಶಭಕ್ತರ ಹಾವಳಿ ಜಾಸ್ತಿಯಾಗಿದೆ. ಅವರ ಮನಸ್ಸೆಲ್ಲಾ ವಿಷಪೂರಿತವಾಗಿದೆ. ಇವರ ಅಭಿಪ್ರಾಯದಲ್ಲಿ ಭಾರತದಲ್ಲಿರುವ ಮುಸ್ಲಿಮರು ಕ್ರಿಶ್ಚಿಯನ್ನರು, ಪಾರ್ಸಿಗಳು, ನೀಗ್ರೋಗಳು ಎಲ್ಲರೂ ತಾವು ಹಿಂದುಗಳೆಂದು ಘೋಷಣೆ ಮಾಡಬೇಕು. ಈ ಸ್ವಯಂನೇಮಿತ ದೇಶಭಕ್ತರ ಹಿಂದುತ್ವವನ್ನು ಯಾವ ಕಾರಣಕ್ಕೂ ಪ್ರಶ್ನಿಸುವಂತಿಲ್ಲ. ಈ ಅಹಂಕಾರದಿಂದಲೇ ಅವರು ಬಾಬ್ರಿ ಮಸೀದಿ ಒಡೆದು ರಾಮಮಂದಿರವನ್ನು ನಿರ್ಮಿಸಲು ಹೊರಟಿದ್ದು.

ಮುಖ್ಯನ್ಯಾಯಾಧೀಶರಾದ ರಂಜನ್ ಗೊಗೊಯ್ ಅವರನ್ನು ಒಬ್ಬ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಪ್ರಶ್ನಿಸುತ್ತಾರೆ: ಬಾಬ್ರಿ ಮಸೀದಿ ಕಟ್ಟಡ ಇಂದಿಗೂ ಅಸ್ತಿತ್ವದಲ್ಲಿ ಇದ್ದಿದ್ದರೆ, ನೀವು ರಾಮಮಂದಿರವನ್ನು ಕಟ್ಟಲು ಅಲ್ಲಿ ಅವಕಾಶ ಕೊಡುವ ತೀರ್ಪನ್ನು ಕೊಡುತ್ತಿದ್ದಿರಾ? ಎಂದು. ಕಾನೂನು ವಿಚಾರಕ್ಕಿಂತ ಹೆಚ್ಚಿನ ಮಹತ್ವವನ್ನು ತೀರ್ಪಿನಲ್ಲಿ ಜನರ ನಂಬಿಕೆ ಭಕ್ತಿ ಶ್ರದ್ಧೆಗೆ ನೀಡಿ, ಹೆಚ್ಚಿನ ಮನ್ನಣೆ ನೀಡಲಾಗಿದೆ ಎಂದು ಅನೇಕರು ಹೇಳಿದ್ದಾರೆ.

ಮಸೀದಿಯನ್ನು ಕಟ್ಟಿದ ದಿನದಿಂದ ಇಂದಿನವರೆಗೂ ಅದು ವಿವಾದಾಸ್ಪದ ವಿಚಾರವೇ ಆಗಿತ್ತು. ಈಗ ನ್ಯಾಯಾಲಯ ಒಂದು ತೀರ್ಪಿತ್ತು ವಿವಾದವನ್ನು ಇತ್ಯರ್ಥಗೊಳಿಸಿದೆ. ಈ ತೀರ್ಮಾನವನ್ನು ಹಿಂದುತ್ವಕ್ಕೆ ದೊರೆತ ಜಯ ಎಂದು ಭಾವಿಸಿ ಹಿಂದು ಮತಾಂಧರು ಒಂದು ಯುದ್ಧ ಗೆದ್ದವರಂತೆ ರಂಪ ಮಾಡಿಲ್ಲ. ಸುನ್ನಿ ವಕ್ಫ್ ಬೋರ್ಡಿನ ಸದಸ್ಯರು ನ್ಯಾಯಾಲಯದ ತೀರ್ಪು ಸಮಾಧಾನ ತಂದಿಲ್ಲವಾದರೂ, ವಿರೋಧಿಸುವುದಿಲ್ಲ ಎಂದರು. ಆನಂತರ ಸಭೆ ಸೇರಿ ನಮಗೆ ನಿಮ್ಮ ಐದು ಎಕರೆ ಜಮೀನು ಬೇಡ ಎಂದು ತೀರ್ಮಾನ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ಈ ಚಾರಿತ್ರಿಕ ತೀರ್ಪು ಸಮರ್ಪಕವಿಲ್ಲವೆಂದು ಹೇಳುವ ಜನ ಎರಡೂ ಕಡೆ ಇದ್ದಾರೆ. ಆದರೆ ಅವರು ಪ್ರತಿಭಟನೆ ಮಾಡುವ ಮಟ್ಟಕ್ಕೆ ಇಳಿದಿಲ್ಲ. ಇದು ಒಂದು ಸಂತಸದ ಸಂಗತಿ.

ಅಯೋಧ್ಯೆಯಲ್ಲಿ ರಾಮಮಂದಿರ ಇದ್ದ ವಿವಾದವನ್ನು ನ್ಯಾಯಾಲಯ ಒಪ್ಪಿಕೊಂಡಿಲ್ಲ. ಮಸೀದಿ ಕಟ್ಟುವುದಕ್ಕೆ ಮೊದಲು ಅದರ ಅಡಿಯಲ್ಲಿ ಒಂದು ಕಟ್ಟಡ ಇತ್ತು. ಆದರೆ ಅದು ರಾಮರ ದೇವಾಲಯ ಎನ್ನುವುದಕ್ಕೆ ಪುರಾವೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ತೀರ್ಪಿನಲ್ಲಿ ನ್ಯಾಯಾಲಯ ಬಾಬ್ರಿ ಮಸೀದಿ ಕೆಡವಿದ್ದು ತಪ್ಪು ಎಂದು ಹೇಳಿದೆ. ಕಾನೂನನ್ನು ಯಾರೇ ಆಗಲಿ ತಮ್ಮ ಕೈಗೆ ತೆಗೆದುಕೊಳ್ಳುವುದು ಅಪರಾಧ ಎಂಬುದನ್ನು ಸ್ಪಷ್ಟಪಡಿಸಿದೆ. ಈ ಅಪರಾಧ ಮಾಡಿದವರಲ್ಲಿ ಎಲ್.ಕೆ.ಅಡ್ವಾನಿಯವರು ಒಬ್ಬರು. ಅವರು ಕಾನೂನನ್ನು ಉದ್ದೇಶಪೂರ್ವಕವಾಗಿ ಗಾಳಿಗೆ ತೂರಿದ್ದಾರೆ. ಅಡ್ವಾನಿಯವರ ರಥಯಾತ್ರೆ ಕರಸೇವಕರಿಗೆ ಪ್ರೇರಕಶಕ್ತಿಯಾಗಿತ್ತು. ಆ ಯಾತ್ರೆಯ ಮೂಲಕ ಅವರು ಕೋಮು ಉನ್ಮಾದಕ್ಕೆ ನಾಂದಿ ಹಾಡಿದರು. ಲಿಬರ್ಹಾನ್ ಕಮಿಷನ್ ಕೂಡ ಅಡ್ವಾನಿಯವರು ಹಾಗೂ ಆಗಿನ ಉತ್ತರಪ್ರದೇಶದ ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ಮತ್ತು ಇತರರು ಕೋಮುದ್ವೇಷ ಬೆಳೆಸಲು ಪ್ರೇರಕರು ಎಂದು ತಮ್ಮ ವಿಚಾರಣಾ ವರದಿಯಲ್ಲಿ ನಮೂದಿಸಿದ್ದಾರೆ.

ಎಲ್.ಕೆ.ಅಡ್ವಾಣಿ ಮುಂತಾದ ಬಿಜೆಪಿ ಮತ್ತು ಆರ್‍ಎಸ್‍ಎಸ್ ಮುಖಂಡರು, ಬಾಬ್ರಿ ಮಸೀದಿ ಆವರಣದಲ್ಲಿದ್ದುಕೊಂಡು ಕರಸೇವಕರನ್ನು ಮಸೀದಿ ಒಡೆಯುವ ಸಂದರ್ಭದಲ್ಲಿ ಹುರಿದುಂಬಿಸಿದ್ದಾರೆ. ಆಗಿನ ಪ್ರಧಾನಿಯಾಗಿದ್ದ ಪಿ.ವಿ ನರಸಿಂಹರಾಯರು ಅಯೋಧೈಗೆ ಸೈನಿಕರನ್ನು ಕಳಿಸಿ ತಾವೇ ನಿಂತು ಬಾಬ್ರಿ ಮಸೀದಿಯನ್ನು ಧ್ವಂಸಮಾಡುವುದನ್ನು ತಡೆಗಟ್ಟಬೇಕಾಗಿತ್ತು. ಅವರು ಆ ಕೆಲಸವನ್ನು ಮಾಡದೆ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್‍ಸಿಂಗ್‍ಗೆ ಈ ಜವಾಬ್ದಾರಿಯನ್ನು ವಹಿಸಿ ಸೈನ್ಯವನ್ನು ಅವರ ವಶಕ್ಕೆ ವಹಿಸಿದರು. ಇದು ಪ್ರಧಾನಿಯ ಕರ್ತವ್ಯಲೋಪದ ಪರಮಾವಧಿ. ಬಿಜೆಪಿಯ ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ಸೈನ್ಯವನ್ನು ಬಳಸಿಕೊಂಡು ಮಸೀದಿ ಒಡೆಯುವನೇ ಎಂದು ಪಿ.ವಿ ನರಸಿಂಹರಾಯರು ಯೋಜಿಸದೆ ಇರಲಿಲ್ಲ. ಈ ಬಿಕ್ಕಟ್ಟಿನ ಸಮಸ್ಯೆಯಿಂದ ತಪ್ಪಿಸಿಕೊಳ್ಳುವ ದುರುದ್ದೇಶದಿಂದ ಅವರು ಈ ತಂತ್ರ ಮಾಡಿದರು. ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ತಟಸ್ಥರಾಗಿದ್ದುಕೊಂಡು ಕರಸೇವಕರಿಗೆ ಕುಮ್ಮಕ್ಕು ಕೊಟ್ಟರು. ತಮ್ಮ ಸಾಂವಿಧಾನಿಕ ಜವಾಬ್ದಾರಿಯ ಕೆಲಸ ಮಾಡುವವರಲ್ಲ ಎಂದು ತಿಳಿಸಿದ್ದರೂ ಪಿ.ವಿ.ನರಸಿಂಹರಾಯರು ಆ ಕೆಲಸವನ್ನು ಕಲ್ಯಾಣ್‍ಸಿಂಗ್‍ಗೆ ವಹಿಸಿದ್ದು ಅಕ್ಷಮ್ಯ ಅಪರಾಧ.

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕೇಳಿದ ಅಡ್ವಾಣಿಯವರು, ನ್ಯಾಯಾಲಯ ತಮ್ಮ ತೀರ್ಮಾನವನ್ನು ಸಮರ್ಥಿಸಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಡ್ವಾಣಿಯವರ ಪ್ರಚೋದನೆಯ ಕೆಲಸವನ್ನು ಸಮರ್ಥಿಸಿಲ್ಲ. ಬಾಬ್ರಿ ಮಸೀದಿ ಒಡೆದದ್ದು ಅಪರಾಧ ಎಂದು ಸ್ಪಷ್ಟವಾಗಿ ಹೇಳಿದೆ; ಈ ಅಪರಾಧದ ಗಂಭೀರತೆಯನ್ನು ಯಾರೂ ಮರೆಯುವಂತಿಲ್ಲ. ಬಾಬ್ರಿ ಮಸೀದಿಯನ್ನು ಅಕ್ರಮವಾಗಿ ಒಡೆದ ಕಾರಣದಿಂದ ಭಾರತದ ಅನೇಕ ಕಡೆ ದಾಂಧಲೆಗಳಾದವು. ಅದರ ಪ್ರತಿಧ್ವನಿಯಾಗಿ ನೂರಾರು ಮಂದಿ ಕೊಲ್ಲಲ್ಪಟ್ಟರು.

ಈ ಎಲ್ಲ ಪ್ರಸಂಗಗಳೂ ಭಾರತದ ಜಾತ್ಯತೀತ ನಿಲುವಿಗೆ ಭಾರೀ ಪೆಟ್ಟು ಕೊಟ್ಟವು, ಅಡ್ವಾನಿಯವರ ಜೊತೆಗೆ ರಥಯಾತ್ರೆಯಲ್ಲಿ ಸಾಥ್ ಕೊಟ್ಟವರು ಇಂದಿನ ಪ್ರಧಾನಿಯಾಗಿರುವ ಮೋದಿಯವರು ಎಂಬುದನ್ನು ಮರೆಯದಿರೋಣ. ಅಡ್ವಾಣಿ ರಥಯಾತ್ರೆ ಮಾಡಿ ಕೋಮುಭಾವನೆ ಬೆಳೆಸಿದ್ದು ತಪ್ಪಾದರೆ ಅವರಿಗೆ ಸಾಥ್ ಕೊಟ್ಟವರೂ ತಪ್ಪಿತಸ್ಥರೇ!

ಹಿಂದೂ ರಾಷ್ಟ್ರದ ಕನಸು ಕಾಣುವ ಈ ರಾಜಕೀಯ ಹಿತಾಸಕ್ತಿಗಳಿಗೆ ಧರ್ಮ ಒಂದು ರಾಜಕೀಯ ಅಸ್ತ್ರ. ರಾಮನನ್ನು ಇವರು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳುತ್ತಾರೆ. ಅಸಹಿಷ್ಣುತೆ ಮತ್ತು ಹಿಂಸೆಯನ್ನು ರಾಮನ ಹೆಸರಿನಲ್ಲಿ ಬಿತ್ತುವ ಈ ಧೂರ್ತರು ಹಿಂದುತ್ವದ ಮಾರಾಟಗಾರರು. ರಾಮನ ಹೆಸರಿನಲ್ಲಿ ಮತ ಕೇಳುವುದು ರಾಮನಿಗೆ ಕಳಂಕ ತರುವ ಗೆಯ್ಮೆ. ಆದರೆ ಅವರಿಗೆ ಹಾಗೆನಿಸುವುದಿಲ್ಲ. ಏಕೆಂದರೆ ಅವರಿಗೆ ರಾಮನ ಹೆಸರು ಬಳಸಿಕೊಂಡು ಮತ ಗಳಿಸುವುದೇ ಮುಖ್ಯ.

ಭಾರತ ಈಗ ಒಂದು ಮತೀಯ ರಾಷ್ಟ್ರವಾಗಿ ಪರಿವರ್ತನೆಗೊಳ್ಳುತ್ತಿದೆ. ಹಿಂದುತ್ವ ಪ್ರತಿಪಾದನೆಯ ಸನ್ನಿ ಹಿಡಿದವರಿಗೆ ಇದು ಒಂದು retrograde step ಎಂದು ಅನಿಸುತ್ತಿಲ್ಲದಿರುವುದು ಒಂದು ದುರ್ದೈವದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...