Homeನೂರರ ನೋಟಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ... : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

ಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ… : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

- Advertisement -
- Advertisement -

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕೇಳಿದ ಅಡ್ವಾಣಿಯವರು, ನ್ಯಾಯಾಲಯ ತಮ್ಮ ತೀರ್ಮಾನವನ್ನು ಸಮರ್ಥಿಸಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಡ್ವಾಣಿಯವರ ಪ್ರಚೋದನೆಯ ಕೆಲಸವನ್ನು ಸಮರ್ಥಿಸಿಲ್ಲ. ಬಾಬ್ರಿ ಮಸೀದಿ ಒಡೆದದ್ದು ಅಪರಾಧ ಎಂದು ಸ್ಪಷ್ಟವಾಗಿ ಹೇಳಿದೆ; ಈ ಅಪರಾಧದ ಗಂಭೀರತೆಯನ್ನು ಯಾರೂ ಮರೆಯುವಂತಿಲ್ಲ.

ಭಾರತದಲ್ಲಿ ಎಲ್ಲವೂ ಜಾತಿ, ಧರ್ಮಗಳ ಮಯವಾಗಿದೆ. self-appointed ದೇಶಭಕ್ತರ ಹಾವಳಿ ಜಾಸ್ತಿಯಾಗಿದೆ. ಅವರ ಮನಸ್ಸೆಲ್ಲಾ ವಿಷಪೂರಿತವಾಗಿದೆ. ಇವರ ಅಭಿಪ್ರಾಯದಲ್ಲಿ ಭಾರತದಲ್ಲಿರುವ ಮುಸ್ಲಿಮರು ಕ್ರಿಶ್ಚಿಯನ್ನರು, ಪಾರ್ಸಿಗಳು, ನೀಗ್ರೋಗಳು ಎಲ್ಲರೂ ತಾವು ಹಿಂದುಗಳೆಂದು ಘೋಷಣೆ ಮಾಡಬೇಕು. ಈ ಸ್ವಯಂನೇಮಿತ ದೇಶಭಕ್ತರ ಹಿಂದುತ್ವವನ್ನು ಯಾವ ಕಾರಣಕ್ಕೂ ಪ್ರಶ್ನಿಸುವಂತಿಲ್ಲ. ಈ ಅಹಂಕಾರದಿಂದಲೇ ಅವರು ಬಾಬ್ರಿ ಮಸೀದಿ ಒಡೆದು ರಾಮಮಂದಿರವನ್ನು ನಿರ್ಮಿಸಲು ಹೊರಟಿದ್ದು.

ಮುಖ್ಯನ್ಯಾಯಾಧೀಶರಾದ ರಂಜನ್ ಗೊಗೊಯ್ ಅವರನ್ನು ಒಬ್ಬ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಪ್ರಶ್ನಿಸುತ್ತಾರೆ: ಬಾಬ್ರಿ ಮಸೀದಿ ಕಟ್ಟಡ ಇಂದಿಗೂ ಅಸ್ತಿತ್ವದಲ್ಲಿ ಇದ್ದಿದ್ದರೆ, ನೀವು ರಾಮಮಂದಿರವನ್ನು ಕಟ್ಟಲು ಅಲ್ಲಿ ಅವಕಾಶ ಕೊಡುವ ತೀರ್ಪನ್ನು ಕೊಡುತ್ತಿದ್ದಿರಾ? ಎಂದು. ಕಾನೂನು ವಿಚಾರಕ್ಕಿಂತ ಹೆಚ್ಚಿನ ಮಹತ್ವವನ್ನು ತೀರ್ಪಿನಲ್ಲಿ ಜನರ ನಂಬಿಕೆ ಭಕ್ತಿ ಶ್ರದ್ಧೆಗೆ ನೀಡಿ, ಹೆಚ್ಚಿನ ಮನ್ನಣೆ ನೀಡಲಾಗಿದೆ ಎಂದು ಅನೇಕರು ಹೇಳಿದ್ದಾರೆ.

ಮಸೀದಿಯನ್ನು ಕಟ್ಟಿದ ದಿನದಿಂದ ಇಂದಿನವರೆಗೂ ಅದು ವಿವಾದಾಸ್ಪದ ವಿಚಾರವೇ ಆಗಿತ್ತು. ಈಗ ನ್ಯಾಯಾಲಯ ಒಂದು ತೀರ್ಪಿತ್ತು ವಿವಾದವನ್ನು ಇತ್ಯರ್ಥಗೊಳಿಸಿದೆ. ಈ ತೀರ್ಮಾನವನ್ನು ಹಿಂದುತ್ವಕ್ಕೆ ದೊರೆತ ಜಯ ಎಂದು ಭಾವಿಸಿ ಹಿಂದು ಮತಾಂಧರು ಒಂದು ಯುದ್ಧ ಗೆದ್ದವರಂತೆ ರಂಪ ಮಾಡಿಲ್ಲ. ಸುನ್ನಿ ವಕ್ಫ್ ಬೋರ್ಡಿನ ಸದಸ್ಯರು ನ್ಯಾಯಾಲಯದ ತೀರ್ಪು ಸಮಾಧಾನ ತಂದಿಲ್ಲವಾದರೂ, ವಿರೋಧಿಸುವುದಿಲ್ಲ ಎಂದರು. ಆನಂತರ ಸಭೆ ಸೇರಿ ನಮಗೆ ನಿಮ್ಮ ಐದು ಎಕರೆ ಜಮೀನು ಬೇಡ ಎಂದು ತೀರ್ಮಾನ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ಈ ಚಾರಿತ್ರಿಕ ತೀರ್ಪು ಸಮರ್ಪಕವಿಲ್ಲವೆಂದು ಹೇಳುವ ಜನ ಎರಡೂ ಕಡೆ ಇದ್ದಾರೆ. ಆದರೆ ಅವರು ಪ್ರತಿಭಟನೆ ಮಾಡುವ ಮಟ್ಟಕ್ಕೆ ಇಳಿದಿಲ್ಲ. ಇದು ಒಂದು ಸಂತಸದ ಸಂಗತಿ.

ಅಯೋಧ್ಯೆಯಲ್ಲಿ ರಾಮಮಂದಿರ ಇದ್ದ ವಿವಾದವನ್ನು ನ್ಯಾಯಾಲಯ ಒಪ್ಪಿಕೊಂಡಿಲ್ಲ. ಮಸೀದಿ ಕಟ್ಟುವುದಕ್ಕೆ ಮೊದಲು ಅದರ ಅಡಿಯಲ್ಲಿ ಒಂದು ಕಟ್ಟಡ ಇತ್ತು. ಆದರೆ ಅದು ರಾಮರ ದೇವಾಲಯ ಎನ್ನುವುದಕ್ಕೆ ಪುರಾವೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ತೀರ್ಪಿನಲ್ಲಿ ನ್ಯಾಯಾಲಯ ಬಾಬ್ರಿ ಮಸೀದಿ ಕೆಡವಿದ್ದು ತಪ್ಪು ಎಂದು ಹೇಳಿದೆ. ಕಾನೂನನ್ನು ಯಾರೇ ಆಗಲಿ ತಮ್ಮ ಕೈಗೆ ತೆಗೆದುಕೊಳ್ಳುವುದು ಅಪರಾಧ ಎಂಬುದನ್ನು ಸ್ಪಷ್ಟಪಡಿಸಿದೆ. ಈ ಅಪರಾಧ ಮಾಡಿದವರಲ್ಲಿ ಎಲ್.ಕೆ.ಅಡ್ವಾನಿಯವರು ಒಬ್ಬರು. ಅವರು ಕಾನೂನನ್ನು ಉದ್ದೇಶಪೂರ್ವಕವಾಗಿ ಗಾಳಿಗೆ ತೂರಿದ್ದಾರೆ. ಅಡ್ವಾನಿಯವರ ರಥಯಾತ್ರೆ ಕರಸೇವಕರಿಗೆ ಪ್ರೇರಕಶಕ್ತಿಯಾಗಿತ್ತು. ಆ ಯಾತ್ರೆಯ ಮೂಲಕ ಅವರು ಕೋಮು ಉನ್ಮಾದಕ್ಕೆ ನಾಂದಿ ಹಾಡಿದರು. ಲಿಬರ್ಹಾನ್ ಕಮಿಷನ್ ಕೂಡ ಅಡ್ವಾನಿಯವರು ಹಾಗೂ ಆಗಿನ ಉತ್ತರಪ್ರದೇಶದ ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ಮತ್ತು ಇತರರು ಕೋಮುದ್ವೇಷ ಬೆಳೆಸಲು ಪ್ರೇರಕರು ಎಂದು ತಮ್ಮ ವಿಚಾರಣಾ ವರದಿಯಲ್ಲಿ ನಮೂದಿಸಿದ್ದಾರೆ.

ಎಲ್.ಕೆ.ಅಡ್ವಾಣಿ ಮುಂತಾದ ಬಿಜೆಪಿ ಮತ್ತು ಆರ್‍ಎಸ್‍ಎಸ್ ಮುಖಂಡರು, ಬಾಬ್ರಿ ಮಸೀದಿ ಆವರಣದಲ್ಲಿದ್ದುಕೊಂಡು ಕರಸೇವಕರನ್ನು ಮಸೀದಿ ಒಡೆಯುವ ಸಂದರ್ಭದಲ್ಲಿ ಹುರಿದುಂಬಿಸಿದ್ದಾರೆ. ಆಗಿನ ಪ್ರಧಾನಿಯಾಗಿದ್ದ ಪಿ.ವಿ ನರಸಿಂಹರಾಯರು ಅಯೋಧೈಗೆ ಸೈನಿಕರನ್ನು ಕಳಿಸಿ ತಾವೇ ನಿಂತು ಬಾಬ್ರಿ ಮಸೀದಿಯನ್ನು ಧ್ವಂಸಮಾಡುವುದನ್ನು ತಡೆಗಟ್ಟಬೇಕಾಗಿತ್ತು. ಅವರು ಆ ಕೆಲಸವನ್ನು ಮಾಡದೆ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್‍ಸಿಂಗ್‍ಗೆ ಈ ಜವಾಬ್ದಾರಿಯನ್ನು ವಹಿಸಿ ಸೈನ್ಯವನ್ನು ಅವರ ವಶಕ್ಕೆ ವಹಿಸಿದರು. ಇದು ಪ್ರಧಾನಿಯ ಕರ್ತವ್ಯಲೋಪದ ಪರಮಾವಧಿ. ಬಿಜೆಪಿಯ ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ಸೈನ್ಯವನ್ನು ಬಳಸಿಕೊಂಡು ಮಸೀದಿ ಒಡೆಯುವನೇ ಎಂದು ಪಿ.ವಿ ನರಸಿಂಹರಾಯರು ಯೋಜಿಸದೆ ಇರಲಿಲ್ಲ. ಈ ಬಿಕ್ಕಟ್ಟಿನ ಸಮಸ್ಯೆಯಿಂದ ತಪ್ಪಿಸಿಕೊಳ್ಳುವ ದುರುದ್ದೇಶದಿಂದ ಅವರು ಈ ತಂತ್ರ ಮಾಡಿದರು. ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ತಟಸ್ಥರಾಗಿದ್ದುಕೊಂಡು ಕರಸೇವಕರಿಗೆ ಕುಮ್ಮಕ್ಕು ಕೊಟ್ಟರು. ತಮ್ಮ ಸಾಂವಿಧಾನಿಕ ಜವಾಬ್ದಾರಿಯ ಕೆಲಸ ಮಾಡುವವರಲ್ಲ ಎಂದು ತಿಳಿಸಿದ್ದರೂ ಪಿ.ವಿ.ನರಸಿಂಹರಾಯರು ಆ ಕೆಲಸವನ್ನು ಕಲ್ಯಾಣ್‍ಸಿಂಗ್‍ಗೆ ವಹಿಸಿದ್ದು ಅಕ್ಷಮ್ಯ ಅಪರಾಧ.

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕೇಳಿದ ಅಡ್ವಾಣಿಯವರು, ನ್ಯಾಯಾಲಯ ತಮ್ಮ ತೀರ್ಮಾನವನ್ನು ಸಮರ್ಥಿಸಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಡ್ವಾಣಿಯವರ ಪ್ರಚೋದನೆಯ ಕೆಲಸವನ್ನು ಸಮರ್ಥಿಸಿಲ್ಲ. ಬಾಬ್ರಿ ಮಸೀದಿ ಒಡೆದದ್ದು ಅಪರಾಧ ಎಂದು ಸ್ಪಷ್ಟವಾಗಿ ಹೇಳಿದೆ; ಈ ಅಪರಾಧದ ಗಂಭೀರತೆಯನ್ನು ಯಾರೂ ಮರೆಯುವಂತಿಲ್ಲ. ಬಾಬ್ರಿ ಮಸೀದಿಯನ್ನು ಅಕ್ರಮವಾಗಿ ಒಡೆದ ಕಾರಣದಿಂದ ಭಾರತದ ಅನೇಕ ಕಡೆ ದಾಂಧಲೆಗಳಾದವು. ಅದರ ಪ್ರತಿಧ್ವನಿಯಾಗಿ ನೂರಾರು ಮಂದಿ ಕೊಲ್ಲಲ್ಪಟ್ಟರು.

ಈ ಎಲ್ಲ ಪ್ರಸಂಗಗಳೂ ಭಾರತದ ಜಾತ್ಯತೀತ ನಿಲುವಿಗೆ ಭಾರೀ ಪೆಟ್ಟು ಕೊಟ್ಟವು, ಅಡ್ವಾನಿಯವರ ಜೊತೆಗೆ ರಥಯಾತ್ರೆಯಲ್ಲಿ ಸಾಥ್ ಕೊಟ್ಟವರು ಇಂದಿನ ಪ್ರಧಾನಿಯಾಗಿರುವ ಮೋದಿಯವರು ಎಂಬುದನ್ನು ಮರೆಯದಿರೋಣ. ಅಡ್ವಾಣಿ ರಥಯಾತ್ರೆ ಮಾಡಿ ಕೋಮುಭಾವನೆ ಬೆಳೆಸಿದ್ದು ತಪ್ಪಾದರೆ ಅವರಿಗೆ ಸಾಥ್ ಕೊಟ್ಟವರೂ ತಪ್ಪಿತಸ್ಥರೇ!

ಹಿಂದೂ ರಾಷ್ಟ್ರದ ಕನಸು ಕಾಣುವ ಈ ರಾಜಕೀಯ ಹಿತಾಸಕ್ತಿಗಳಿಗೆ ಧರ್ಮ ಒಂದು ರಾಜಕೀಯ ಅಸ್ತ್ರ. ರಾಮನನ್ನು ಇವರು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳುತ್ತಾರೆ. ಅಸಹಿಷ್ಣುತೆ ಮತ್ತು ಹಿಂಸೆಯನ್ನು ರಾಮನ ಹೆಸರಿನಲ್ಲಿ ಬಿತ್ತುವ ಈ ಧೂರ್ತರು ಹಿಂದುತ್ವದ ಮಾರಾಟಗಾರರು. ರಾಮನ ಹೆಸರಿನಲ್ಲಿ ಮತ ಕೇಳುವುದು ರಾಮನಿಗೆ ಕಳಂಕ ತರುವ ಗೆಯ್ಮೆ. ಆದರೆ ಅವರಿಗೆ ಹಾಗೆನಿಸುವುದಿಲ್ಲ. ಏಕೆಂದರೆ ಅವರಿಗೆ ರಾಮನ ಹೆಸರು ಬಳಸಿಕೊಂಡು ಮತ ಗಳಿಸುವುದೇ ಮುಖ್ಯ.

ಭಾರತ ಈಗ ಒಂದು ಮತೀಯ ರಾಷ್ಟ್ರವಾಗಿ ಪರಿವರ್ತನೆಗೊಳ್ಳುತ್ತಿದೆ. ಹಿಂದುತ್ವ ಪ್ರತಿಪಾದನೆಯ ಸನ್ನಿ ಹಿಡಿದವರಿಗೆ ಇದು ಒಂದು retrograde step ಎಂದು ಅನಿಸುತ್ತಿಲ್ಲದಿರುವುದು ಒಂದು ದುರ್ದೈವದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...