Homeನೂರರ ನೋಟಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ... : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

ಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ… : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

- Advertisement -
- Advertisement -

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕೇಳಿದ ಅಡ್ವಾಣಿಯವರು, ನ್ಯಾಯಾಲಯ ತಮ್ಮ ತೀರ್ಮಾನವನ್ನು ಸಮರ್ಥಿಸಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಡ್ವಾಣಿಯವರ ಪ್ರಚೋದನೆಯ ಕೆಲಸವನ್ನು ಸಮರ್ಥಿಸಿಲ್ಲ. ಬಾಬ್ರಿ ಮಸೀದಿ ಒಡೆದದ್ದು ಅಪರಾಧ ಎಂದು ಸ್ಪಷ್ಟವಾಗಿ ಹೇಳಿದೆ; ಈ ಅಪರಾಧದ ಗಂಭೀರತೆಯನ್ನು ಯಾರೂ ಮರೆಯುವಂತಿಲ್ಲ.

ಭಾರತದಲ್ಲಿ ಎಲ್ಲವೂ ಜಾತಿ, ಧರ್ಮಗಳ ಮಯವಾಗಿದೆ. self-appointed ದೇಶಭಕ್ತರ ಹಾವಳಿ ಜಾಸ್ತಿಯಾಗಿದೆ. ಅವರ ಮನಸ್ಸೆಲ್ಲಾ ವಿಷಪೂರಿತವಾಗಿದೆ. ಇವರ ಅಭಿಪ್ರಾಯದಲ್ಲಿ ಭಾರತದಲ್ಲಿರುವ ಮುಸ್ಲಿಮರು ಕ್ರಿಶ್ಚಿಯನ್ನರು, ಪಾರ್ಸಿಗಳು, ನೀಗ್ರೋಗಳು ಎಲ್ಲರೂ ತಾವು ಹಿಂದುಗಳೆಂದು ಘೋಷಣೆ ಮಾಡಬೇಕು. ಈ ಸ್ವಯಂನೇಮಿತ ದೇಶಭಕ್ತರ ಹಿಂದುತ್ವವನ್ನು ಯಾವ ಕಾರಣಕ್ಕೂ ಪ್ರಶ್ನಿಸುವಂತಿಲ್ಲ. ಈ ಅಹಂಕಾರದಿಂದಲೇ ಅವರು ಬಾಬ್ರಿ ಮಸೀದಿ ಒಡೆದು ರಾಮಮಂದಿರವನ್ನು ನಿರ್ಮಿಸಲು ಹೊರಟಿದ್ದು.

ಮುಖ್ಯನ್ಯಾಯಾಧೀಶರಾದ ರಂಜನ್ ಗೊಗೊಯ್ ಅವರನ್ನು ಒಬ್ಬ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಪ್ರಶ್ನಿಸುತ್ತಾರೆ: ಬಾಬ್ರಿ ಮಸೀದಿ ಕಟ್ಟಡ ಇಂದಿಗೂ ಅಸ್ತಿತ್ವದಲ್ಲಿ ಇದ್ದಿದ್ದರೆ, ನೀವು ರಾಮಮಂದಿರವನ್ನು ಕಟ್ಟಲು ಅಲ್ಲಿ ಅವಕಾಶ ಕೊಡುವ ತೀರ್ಪನ್ನು ಕೊಡುತ್ತಿದ್ದಿರಾ? ಎಂದು. ಕಾನೂನು ವಿಚಾರಕ್ಕಿಂತ ಹೆಚ್ಚಿನ ಮಹತ್ವವನ್ನು ತೀರ್ಪಿನಲ್ಲಿ ಜನರ ನಂಬಿಕೆ ಭಕ್ತಿ ಶ್ರದ್ಧೆಗೆ ನೀಡಿ, ಹೆಚ್ಚಿನ ಮನ್ನಣೆ ನೀಡಲಾಗಿದೆ ಎಂದು ಅನೇಕರು ಹೇಳಿದ್ದಾರೆ.

ಮಸೀದಿಯನ್ನು ಕಟ್ಟಿದ ದಿನದಿಂದ ಇಂದಿನವರೆಗೂ ಅದು ವಿವಾದಾಸ್ಪದ ವಿಚಾರವೇ ಆಗಿತ್ತು. ಈಗ ನ್ಯಾಯಾಲಯ ಒಂದು ತೀರ್ಪಿತ್ತು ವಿವಾದವನ್ನು ಇತ್ಯರ್ಥಗೊಳಿಸಿದೆ. ಈ ತೀರ್ಮಾನವನ್ನು ಹಿಂದುತ್ವಕ್ಕೆ ದೊರೆತ ಜಯ ಎಂದು ಭಾವಿಸಿ ಹಿಂದು ಮತಾಂಧರು ಒಂದು ಯುದ್ಧ ಗೆದ್ದವರಂತೆ ರಂಪ ಮಾಡಿಲ್ಲ. ಸುನ್ನಿ ವಕ್ಫ್ ಬೋರ್ಡಿನ ಸದಸ್ಯರು ನ್ಯಾಯಾಲಯದ ತೀರ್ಪು ಸಮಾಧಾನ ತಂದಿಲ್ಲವಾದರೂ, ವಿರೋಧಿಸುವುದಿಲ್ಲ ಎಂದರು. ಆನಂತರ ಸಭೆ ಸೇರಿ ನಮಗೆ ನಿಮ್ಮ ಐದು ಎಕರೆ ಜಮೀನು ಬೇಡ ಎಂದು ತೀರ್ಮಾನ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ಈ ಚಾರಿತ್ರಿಕ ತೀರ್ಪು ಸಮರ್ಪಕವಿಲ್ಲವೆಂದು ಹೇಳುವ ಜನ ಎರಡೂ ಕಡೆ ಇದ್ದಾರೆ. ಆದರೆ ಅವರು ಪ್ರತಿಭಟನೆ ಮಾಡುವ ಮಟ್ಟಕ್ಕೆ ಇಳಿದಿಲ್ಲ. ಇದು ಒಂದು ಸಂತಸದ ಸಂಗತಿ.

ಅಯೋಧ್ಯೆಯಲ್ಲಿ ರಾಮಮಂದಿರ ಇದ್ದ ವಿವಾದವನ್ನು ನ್ಯಾಯಾಲಯ ಒಪ್ಪಿಕೊಂಡಿಲ್ಲ. ಮಸೀದಿ ಕಟ್ಟುವುದಕ್ಕೆ ಮೊದಲು ಅದರ ಅಡಿಯಲ್ಲಿ ಒಂದು ಕಟ್ಟಡ ಇತ್ತು. ಆದರೆ ಅದು ರಾಮರ ದೇವಾಲಯ ಎನ್ನುವುದಕ್ಕೆ ಪುರಾವೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ತೀರ್ಪಿನಲ್ಲಿ ನ್ಯಾಯಾಲಯ ಬಾಬ್ರಿ ಮಸೀದಿ ಕೆಡವಿದ್ದು ತಪ್ಪು ಎಂದು ಹೇಳಿದೆ. ಕಾನೂನನ್ನು ಯಾರೇ ಆಗಲಿ ತಮ್ಮ ಕೈಗೆ ತೆಗೆದುಕೊಳ್ಳುವುದು ಅಪರಾಧ ಎಂಬುದನ್ನು ಸ್ಪಷ್ಟಪಡಿಸಿದೆ. ಈ ಅಪರಾಧ ಮಾಡಿದವರಲ್ಲಿ ಎಲ್.ಕೆ.ಅಡ್ವಾನಿಯವರು ಒಬ್ಬರು. ಅವರು ಕಾನೂನನ್ನು ಉದ್ದೇಶಪೂರ್ವಕವಾಗಿ ಗಾಳಿಗೆ ತೂರಿದ್ದಾರೆ. ಅಡ್ವಾನಿಯವರ ರಥಯಾತ್ರೆ ಕರಸೇವಕರಿಗೆ ಪ್ರೇರಕಶಕ್ತಿಯಾಗಿತ್ತು. ಆ ಯಾತ್ರೆಯ ಮೂಲಕ ಅವರು ಕೋಮು ಉನ್ಮಾದಕ್ಕೆ ನಾಂದಿ ಹಾಡಿದರು. ಲಿಬರ್ಹಾನ್ ಕಮಿಷನ್ ಕೂಡ ಅಡ್ವಾನಿಯವರು ಹಾಗೂ ಆಗಿನ ಉತ್ತರಪ್ರದೇಶದ ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ಮತ್ತು ಇತರರು ಕೋಮುದ್ವೇಷ ಬೆಳೆಸಲು ಪ್ರೇರಕರು ಎಂದು ತಮ್ಮ ವಿಚಾರಣಾ ವರದಿಯಲ್ಲಿ ನಮೂದಿಸಿದ್ದಾರೆ.

ಎಲ್.ಕೆ.ಅಡ್ವಾಣಿ ಮುಂತಾದ ಬಿಜೆಪಿ ಮತ್ತು ಆರ್‍ಎಸ್‍ಎಸ್ ಮುಖಂಡರು, ಬಾಬ್ರಿ ಮಸೀದಿ ಆವರಣದಲ್ಲಿದ್ದುಕೊಂಡು ಕರಸೇವಕರನ್ನು ಮಸೀದಿ ಒಡೆಯುವ ಸಂದರ್ಭದಲ್ಲಿ ಹುರಿದುಂಬಿಸಿದ್ದಾರೆ. ಆಗಿನ ಪ್ರಧಾನಿಯಾಗಿದ್ದ ಪಿ.ವಿ ನರಸಿಂಹರಾಯರು ಅಯೋಧೈಗೆ ಸೈನಿಕರನ್ನು ಕಳಿಸಿ ತಾವೇ ನಿಂತು ಬಾಬ್ರಿ ಮಸೀದಿಯನ್ನು ಧ್ವಂಸಮಾಡುವುದನ್ನು ತಡೆಗಟ್ಟಬೇಕಾಗಿತ್ತು. ಅವರು ಆ ಕೆಲಸವನ್ನು ಮಾಡದೆ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್‍ಸಿಂಗ್‍ಗೆ ಈ ಜವಾಬ್ದಾರಿಯನ್ನು ವಹಿಸಿ ಸೈನ್ಯವನ್ನು ಅವರ ವಶಕ್ಕೆ ವಹಿಸಿದರು. ಇದು ಪ್ರಧಾನಿಯ ಕರ್ತವ್ಯಲೋಪದ ಪರಮಾವಧಿ. ಬಿಜೆಪಿಯ ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ಸೈನ್ಯವನ್ನು ಬಳಸಿಕೊಂಡು ಮಸೀದಿ ಒಡೆಯುವನೇ ಎಂದು ಪಿ.ವಿ ನರಸಿಂಹರಾಯರು ಯೋಜಿಸದೆ ಇರಲಿಲ್ಲ. ಈ ಬಿಕ್ಕಟ್ಟಿನ ಸಮಸ್ಯೆಯಿಂದ ತಪ್ಪಿಸಿಕೊಳ್ಳುವ ದುರುದ್ದೇಶದಿಂದ ಅವರು ಈ ತಂತ್ರ ಮಾಡಿದರು. ಮುಖ್ಯಮಂತ್ರಿ ಕಲ್ಯಾಣ್‍ಸಿಂಗ್ ತಟಸ್ಥರಾಗಿದ್ದುಕೊಂಡು ಕರಸೇವಕರಿಗೆ ಕುಮ್ಮಕ್ಕು ಕೊಟ್ಟರು. ತಮ್ಮ ಸಾಂವಿಧಾನಿಕ ಜವಾಬ್ದಾರಿಯ ಕೆಲಸ ಮಾಡುವವರಲ್ಲ ಎಂದು ತಿಳಿಸಿದ್ದರೂ ಪಿ.ವಿ.ನರಸಿಂಹರಾಯರು ಆ ಕೆಲಸವನ್ನು ಕಲ್ಯಾಣ್‍ಸಿಂಗ್‍ಗೆ ವಹಿಸಿದ್ದು ಅಕ್ಷಮ್ಯ ಅಪರಾಧ.

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕೇಳಿದ ಅಡ್ವಾಣಿಯವರು, ನ್ಯಾಯಾಲಯ ತಮ್ಮ ತೀರ್ಮಾನವನ್ನು ಸಮರ್ಥಿಸಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಡ್ವಾಣಿಯವರ ಪ್ರಚೋದನೆಯ ಕೆಲಸವನ್ನು ಸಮರ್ಥಿಸಿಲ್ಲ. ಬಾಬ್ರಿ ಮಸೀದಿ ಒಡೆದದ್ದು ಅಪರಾಧ ಎಂದು ಸ್ಪಷ್ಟವಾಗಿ ಹೇಳಿದೆ; ಈ ಅಪರಾಧದ ಗಂಭೀರತೆಯನ್ನು ಯಾರೂ ಮರೆಯುವಂತಿಲ್ಲ. ಬಾಬ್ರಿ ಮಸೀದಿಯನ್ನು ಅಕ್ರಮವಾಗಿ ಒಡೆದ ಕಾರಣದಿಂದ ಭಾರತದ ಅನೇಕ ಕಡೆ ದಾಂಧಲೆಗಳಾದವು. ಅದರ ಪ್ರತಿಧ್ವನಿಯಾಗಿ ನೂರಾರು ಮಂದಿ ಕೊಲ್ಲಲ್ಪಟ್ಟರು.

ಈ ಎಲ್ಲ ಪ್ರಸಂಗಗಳೂ ಭಾರತದ ಜಾತ್ಯತೀತ ನಿಲುವಿಗೆ ಭಾರೀ ಪೆಟ್ಟು ಕೊಟ್ಟವು, ಅಡ್ವಾನಿಯವರ ಜೊತೆಗೆ ರಥಯಾತ್ರೆಯಲ್ಲಿ ಸಾಥ್ ಕೊಟ್ಟವರು ಇಂದಿನ ಪ್ರಧಾನಿಯಾಗಿರುವ ಮೋದಿಯವರು ಎಂಬುದನ್ನು ಮರೆಯದಿರೋಣ. ಅಡ್ವಾಣಿ ರಥಯಾತ್ರೆ ಮಾಡಿ ಕೋಮುಭಾವನೆ ಬೆಳೆಸಿದ್ದು ತಪ್ಪಾದರೆ ಅವರಿಗೆ ಸಾಥ್ ಕೊಟ್ಟವರೂ ತಪ್ಪಿತಸ್ಥರೇ!

ಹಿಂದೂ ರಾಷ್ಟ್ರದ ಕನಸು ಕಾಣುವ ಈ ರಾಜಕೀಯ ಹಿತಾಸಕ್ತಿಗಳಿಗೆ ಧರ್ಮ ಒಂದು ರಾಜಕೀಯ ಅಸ್ತ್ರ. ರಾಮನನ್ನು ಇವರು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳುತ್ತಾರೆ. ಅಸಹಿಷ್ಣುತೆ ಮತ್ತು ಹಿಂಸೆಯನ್ನು ರಾಮನ ಹೆಸರಿನಲ್ಲಿ ಬಿತ್ತುವ ಈ ಧೂರ್ತರು ಹಿಂದುತ್ವದ ಮಾರಾಟಗಾರರು. ರಾಮನ ಹೆಸರಿನಲ್ಲಿ ಮತ ಕೇಳುವುದು ರಾಮನಿಗೆ ಕಳಂಕ ತರುವ ಗೆಯ್ಮೆ. ಆದರೆ ಅವರಿಗೆ ಹಾಗೆನಿಸುವುದಿಲ್ಲ. ಏಕೆಂದರೆ ಅವರಿಗೆ ರಾಮನ ಹೆಸರು ಬಳಸಿಕೊಂಡು ಮತ ಗಳಿಸುವುದೇ ಮುಖ್ಯ.

ಭಾರತ ಈಗ ಒಂದು ಮತೀಯ ರಾಷ್ಟ್ರವಾಗಿ ಪರಿವರ್ತನೆಗೊಳ್ಳುತ್ತಿದೆ. ಹಿಂದುತ್ವ ಪ್ರತಿಪಾದನೆಯ ಸನ್ನಿ ಹಿಡಿದವರಿಗೆ ಇದು ಒಂದು retrograde step ಎಂದು ಅನಿಸುತ್ತಿಲ್ಲದಿರುವುದು ಒಂದು ದುರ್ದೈವದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...