Homeಚಳವಳಿಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

- Advertisement -
- Advertisement -

| ಮಾರ್ಕಂಡೇಯ ಕಟ್ಜು |
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ
ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಅಯೋಧ್ಯೆಯ ಈ ತೀರ್ಪೂ ಸಹ 1975ರ ಎಡಿಎಮ್ ಜಬಲ್‍ಪುರ ವರ್ಸಸ್ ಶಿವಕಾಂತ ಶುಕ್ಲ ತೀರ್ಪಿನ ಗುಂಪಿಗೇ ಸೇರಿಕೊಳ್ಳುತ್ತೆ. ಆದರೆ ಅಲ್ಲಿ ಒಂದು ವ್ಯತ್ಯಾಸವಿತ್ತು- ಅಯೋಧ್ಯೆಯ ತೀರ್ಪಿನಂತೆ ಆ ತೀರ್ಪು ಅವಿರೋಧವಾದ, ಭಿನ್ನಮತವಿಲ್ಲದ ತೀರ್ಪಾಗಿರಲಿಲ್ಲ.

ನ್ಯಾಯಾಲಯವು ಹೇಳಿದ್ದು ಸರಿಯೇ ಇರಬಹುದು. ಆದರೆ ಈ ತೀರ್ಪು ಆಕ್ರಮಣಶೀಲತೆಯನ್ನು ಪೋಷಿಸುವ ಒಂದು ಆತಂಕಕಾರಿ ಬೆಳವಣಿಗೆಯನ್ನು ಹುಟ್ಟುಹಾಕಿದೆ.

ಬಾಬರಿ ಮಸೀದಿಯನ್ನು ಒಂದು ಹಿಂದೂ ದೇವಾಲಯದ ಮೇಲೆ ಅಥವಾ ಅದನ್ನು ನಾಶಗೊಳಿಸಿ ಅದರ ಮೇಲೆ ಕಟ್ಟಲಾಗಿರಬಹುದೇ ಎನ್ನುವುದರ ಪರಿಶೀಲನೆಯ ಅವಶ್ಯಕತೆ ಇಲ್ಲ. ಹಿಂದೂ ದೇವಾಲಯಗಳನ್ನು ಮುಸ್ಲಿಮ್ ದಾಳಿಕೋರರು ಧ್ವಂಸಗೊಳಿಸಿದ್ದು ಹಾಗೂ ಆ ಜಾಗೆಗಳಲ್ಲಿ ಮಸೀದಿಗಳನ್ನು ನಿರ್ಮಿಸಿದ್ದು ಸುಳ್ಳಲ್ಲ. ಉದಾಹರಣೆಗೆ, ದೆಹಲಿಯ ಕುತುಬ್ ಮಿನಾರ್‍ದ ಬಳಿ ಇರುವ ಕುವ್ವತ್-ಉಲ್-ಇಸ್ಲಾಮ್ ಮಸೀದಿಯಲ್ಲಿ ಇರುವ ಕಂಬಗಳ ಮೇಲೆ ಹಿಂದು ಕೆತ್ತನೆಗಳಿವೆ ಅಥವಾ ವಾರಣಾಸಿಯಲ್ಲಿಯ ಗ್ಯಾನ್‍ವ್ಯಾಪಿ ಮಸೀದಿಯಲ್ಲೂ ಹಿಂದೂ ಕೆತ್ತನೆಗಳನ್ನು ಕಾಣಬಹುದು ಅಥವಾ ಜೌವನಪುರದ ಅಟಲಾ ದೇವಿ ಮಸೀದಿಯನ್ನು ನೋಡಿ. ಆದರೆ ಭಾರತ ಮುಂದುವರೆಯಬೇಕೆ ಅಥವಾ ಹಿಂದಕ್ಕೆ ಕಾಲನ್ನು ಹಾಕಬೇಕೇ?

ಒಂದು ಹಿಂದು ಮಂದಿರವನ್ನು ಇಂದು ಅಕ್ರಮವಾಗಿ ಧ್ವಂಸಗೊಳಿಸಿ ಅಲ್ಲಿ ಮಸೀದಿಯನ್ನು ಕಟ್ಟಲಾಗಿದ್ದರೆ ಅದು ಬೇರೆ ಮಾತು. ಆದರೆ ಈಗ ಹೇಳಲಾಗುವ ಅಯೋಧ್ಯೆಯ ಘಟನೆ ಆಗಿರುವುದು 500 ವರ್ಷಗಳ ಹಿಂದೆ, ಹಾಗಿರುವಾಗ ಅಂತಹ ಕಟ್ಟಡವನ್ನು ಮರಳಿ ಹಿಂದೂ ಮಂದಿರವಾಗಿ ಮರುನಿರ್ಮಾಣ ಮಾಡುವುದರಲ್ಲಿ ಎಷ್ಟು ಅರ್ಥವಿದೆ? ಈ ರೀತಿಯ ಸೇಡಿನ ಪ್ರವೃತ್ತಿ, ವಿಶ್ವ ಹಿಂದೂ ಪರಿಷತ್‍ನ ಈ ಪ್ರತಿಪಾದನೆ ನಮ್ಮ ಸಮಾಜವನ್ನು ಧ್ರುವೀಕರಿಸುವುದನ್ನು ಬಿಟ್ಟರೆ ಮತ್ತೇನೂ ಮಾಡುವುದಿಲ್ಲ; ಚುನಾವಣೆಯಲ್ಲಿ ಮತಗಳನ್ನು ಪಡೆಯಲೋಸುಗ ಕೋಮು ದಳ್ಳುರಿಯನ್ನು ಕಾಪಿಡಲು ಬಯಸುವ ಕೆಲವು ವ್ಯಕ್ತಿಗಳ ರಾಜಕೀಯ ಅಜೆಂಡಾಗೆ ಸಹಾಯವಾಗುವುದಷ್ಟೇ ಇದರಿಂದ ಆಗುತ್ತದೆ.

786 ಮತ್ತು 798 ಪ್ಯಾರಾಗಳಲ್ಲಿ ನ್ಯಾಯಾಲಯ ಹೇಳಿರುವುದು; 1528ರಲ್ಲಿ ನಿರ್ಮಾಣವಾದಾಗಿನಿಂದ 1857ರ ತನಕ ನಮಾಜ್ ಮಾಡುವವರ ಒಡೆತನದಲ್ಲಿ ಈ ಮಸೀದಿ ಇತ್ತು ಎಂದು ಹೇಳಲು ಸಾಕ್ಷಾಧಾರಗಳನ್ನು ಒದಗಿಸಿಲ್ಲ. ಆದರೆ ಇದನ್ನು ಸಾಧಿಸುವುದಾದರೂ ಹೇಗೆ? ಆ ಕಾಲದ ಪ್ರತ್ಯಕ್ಷ ಸಾಕ್ಷಿಗಳನ್ನಂತೂ ಇಂದು ತರಲು ಸಾಧ್ಯವಿಲ್ಲ ಹಾಗೂ 1857ರ ಪ್ರಥಮ ಸ್ವಾತಂತ್ರ ಸಮರದಲ್ಲಿ ಅವಧ್‍ನ ಎಲ್ಲಾ ದಾಖಲೆಗಳು ಧ್ವಂಸಗೊಳಿಸಲಾಗಿತ್ತು. ಇರಲಿ, ಆರಾಧನೆಗಾಗಿ ಒಂದು ಮನೆಯನ್ನು ಕಟ್ಟಲಾಗಿದೆ ಎಂದರೆ, ಅದು ಮಂದಿರವೇ ಇರಲಿ ಅಥವಾ ಮಸೀದಿ ಅಥವಾ ಚರ್ಚು ಅಥವಾ ಗುರುದ್ವಾರವೇ ಆಗಿರಲಿ, ಅಲ್ಲಿ ಆರಾಧನೆ ಮಾಡುವ ಸಲುವಾಗಿಯೇ ಕಟ್ಟುತ್ತಾರೆಯೇ ಹೊರತು ಅಲಂಕಾರಕ್ಕಾಗಿ ಅಲ್ಲ ಎನ್ನುವುದು ಸಾಮಾನ್ಯ ಜ್ಞಾನ.

ತೀರ್ಪಿನ 798 ಪ್ಯಾರಾ ಹೀಗಿದೆ: ಮುಸ್ಲಿಮರನ್ನು ಆರಾಧನೆಯಿಂದ ಮತ್ತು ಒಡೆತನದಿಂದ ಹೊರಗಿಡುವುದು ನಡೆದದ್ದು 1949ರ ಡಿಸೆಂಬರ್ 22/23 ಮಧ್ಯದ ರಾತ್ರಿಯಲ್ಲಿ. ಆಗ ಮಸೀದಿಯನ್ನು ಅಪವಿತ್ರಗೊಳಿಸಿ ಹಿಂದೂ ವಿಗ್ರಹಗಳನ್ನು ಸ್ಥಾಪಿಸುವುದರ ಮೂಲಕ ಇದನ್ನು ಮಾಡಲಾಯಿತು. ಆ ಸಂದರ್ಭದಲ್ಲಿ ಮುಸ್ಲಿಮ್‍ರನ್ನು ಹೊರಗಿಡುವ ಈ ಕ್ರಿಯೆಯನ್ನು ಯಾವುದೇ ಕಾನೂನಾತ್ಮಕ ಕ್ರಮದಿಂದ ಮಾಡಲಿಲ್ಲ. ಅದನ್ನು ಅವರ ಆರಾಧನೆಯ ಜಾಗೆಯಿಂದ ವಂಚಿತಗೊಳಿಸುವ ಲೆಕ್ಕಾಚಾರದ ಕ್ರಮದಿಂದ ಮಾಡಲಾಗಿತ್ತು.

ಇಂತಹ ಸ್ಪಷ್ಟವಾದ ತೀರ್ಮಾನದ ಹೊರತಾಗಿಯೂ, ನ್ಯಾಯಾಲಯವು ಒಂದು ಯಾವುದೋ ವಿಚಿತ್ರ ತರ್ಕದ ಆಧಾರದ ಮೇಲೆ ವಿವಾದಿತ ಜಾಗೆಯನ್ನು ಹಿಂದುಗಳಿಗೆ ಒಪ್ಪಿಸಿದೆ.

ಹಾಗಾಗಿ, ಅಯೋಧ್ಯೆಯ ತೀರ್ಪು ಕೋಮು ಸಾಮರಸ್ಯಕ್ಕೆ ಕಾರಣವಾಗಬಹುದು ಎನ್ನುವುದು ಮೂರ್ಖತನವಾದೀತು. ಯಾವುದೇ ತುಷ್ಟೀಕರಣವು, 1938ರ ಮೂನಿಕ್ ಒಪ್ಪಂದದಲ್ಲಿ ಆದಂತೆ, ಆಕ್ರಮಣಕಾರಿಯ ಹಸಿವನ್ನು ಹೆಚ್ಚಿಸುತ್ತದೆಯೇ ಹೊರತು, ತಣಿಸುವುದಿಲ್ಲ. “ಅಭಿ ತೋ ಯೆ ಝಾಂಕಿ ಹೈ, ಕಾಶಿ ಮಥುರಾ ಬಾಕಿ ಹೈ”. ಎನ್ನುವ ಘೋಷಣೆಗಳು 1992 ಡಿಸೆಂಬರ್ 6ರ ನಂತರ ಕೇಳಿಬಂದವು ಹಾಗೂ ಮತ್ತೆ ಕೇಳಿಬರಲು ಪ್ರಾರಂಭಿಸಿದರೆ ಆಶ್ಷರ್ಯವಿಲ್ಲ. ದೆಹಲಿಯ ಜಾಮಾ ಮಸ್ಜಿದ್ ಕಟ್ಟಿರುವುದು ಒಂದು ಹಿಂದೂ ಮಂದಿರದ ಮೇಲೆ ಹಾಗೂ ಅದನ್ನು ಮರುಪಡೆಯಬೇಕು ಎಂದು ಬಿಜೆಪಿಯ ಸಾಕ್ಷಿ ಮಹಾರಾಜ್ ಹೇಳಿದ್ದಾರೆ. ತಾಜ್‍ಮಹಲ್ ಬಗ್ಗೆಯೂ ಬಿಜೆಪಿಯ ಕೆಲವು ಇದೇ ರೀತಿ ಹೇಳಿದ್ದಾರೆ. ಇದು ಕೊನೆಗೊಳ್ಳುವುದು ಯಾವಾಗ?

ರಾಮ ಒಂದು ನಿರ್ದಿಷ್ಟ ಸ್ಥಳದಲ್ಲಿ ಹುಟ್ಟಿದ್ದು ಎಂದು ಹೇಳುವುದು ಹಾಸ್ಯಾಸ್ಪದವಾಗಿದೆ. ಒಂದು ವೇಳೆ ರಾಮನನ್ನು ಪೌರಾಣಿಕ ವ್ಯಕ್ತಿ ಅಲ್ಲ, ಅವನೊಬ್ಬ ಐತಿಹಾಸಿಕ ವ್ಯಕ್ತಿ ಎಂದು ಪರಿಗಣಿಸಿದರೂ ಸಾವಿರಾರು ವರ್ಷಗಳ ಮುಂಚೆ ಎಲ್ಲಿ ಹುಟ್ಟಿದ್ದು ಎಂದು ಹೇಗೆ ಹೇಳಬಲ್ಲರು?

ಭಾರತವು ಒಂದು ಭಯಾನಕ ಆರ್ಥಿಕ ಸಂಕಷ್ಟದಿಂದ ನಲುಗುತ್ತಿದೆ. ಜಿಡಿಪಿ ಬೆಳವಣಿಗೆ ಕುಸಿದಿದೆ, ಉತ್ಪಾದನಾ ಕ್ಷೇತ್ರ ಕುಸಿದಿದೆ, ವ್ಯಾಪಾರ ಇಳಿಮುಖದಲ್ಲಿದೆ, ನಿರುದ್ಯೋಗದ ದರ ದಾಖಲೆ ಸೃಷ್ಟಿಸುತ್ತಿದೆ, (ಸರಕಾರಿ ದಾಖಲೆಗಳೇ ಇದನ್ನು ಹೇಳುತ್ತಿವೆ). ಮಕ್ಕಳ ಅಪೌಷ್ಟಿಕತೆಯ ಮಟ್ಟ ಭೀಕರವಾಗಿದೆ (ಜಾಗತಿಕ ಹಸಿವು ಸೂಚ್ಯಾಂಕದ ಅನುಗುಣವಾಗಿ, ಪ್ರತಿ ಎರಡನೇ ಮಗು ಅಪೌಷ್ಟಿಕತೆಯಿಂದ ಬಳಲುತ್ತಿದೆ.), 50% ಭಾರತೀಯ ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ, ರೈತರ ಆತ್ಮಹತ್ಯೆಗಳು ಅವ್ಯಾಹತವಾಗಿ ನಡೆಯುತ್ತಲೇ ಇವೆ, ಆರೋಗ್ಯ ಸೇವೆ ಮತ್ತು ಉತ್ತಮ ಶಿಕ್ಷಣ ಚಿಂತಾಜನಕ ಸ್ಥಿತಿಯಲ್ಲಿವೆ, ಹೀಗೆ ಪಟ್ಟಿ ಬೆಳೆಯುತ್ತ ಹೋಗುತ್ತದೆ.

ನಮ್ಮ ನಾಯಕರಿಗೆ ಈ ಸಮಸ್ಯೆಗಳನ್ನು ಹೇಗೆ ಬಗೆಹರಿಸಬೇಕು ಎನ್ನುವುದರ ಬಗ್ಗೆ ಯಾವುದೇ ಕಲ್ಪನೆ ಇಲ್ಲದಿರುವುದು ಸ್ಪಷ್ಟ. ಹಾಗಾಗಿ, ಇವುಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ಹಲವು ಗಿಮಿಕ್ ಮಾಡಲಾಗುತ್ತಿದೆ.

ವಿಧ್ವಂಸಕ ರಾಜಕೀಯ ಶಕ್ತಿಗಳಿಂದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ್ದು 1947ರ ವಿಭಜನೆಯ ನಂತರದ ಅತ್ಯಂತ ದೊಡ್ಡ ದುರಂತ. ಅಯೋಧ್ಯೆಯ ತೀರ್ಪು ಸಹಾ ಮಸೀದಿಯನ್ನು ಧ್ವಂಸಗೊಳಿದ್ದು ಕಾನೂನುಬಾಹಿರ ಎಂದು ಹೇಳುತ್ತದೆ. ಆದರೆ ಅದೇ ಉಸಿರಿನಲ್ಲಿ ಆ ಘಟನೆಯನ್ನು ಪವಿತ್ರಗೊಳಿಸುವ ಕೆಲಸವನ್ನೂ ಮಾಡುತ್ತದೆ.

ಭಾಳ ಒಳ್ಳೆಯ ಕೆಲಸ ಮಾಡಿದ್ರಿ, ಮೈ ಲಾಡ್ರ್ಸ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...