Homeಚಳವಳಿಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

- Advertisement -
- Advertisement -

| ಮಾರ್ಕಂಡೇಯ ಕಟ್ಜು |
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ
ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಅಯೋಧ್ಯೆಯ ಈ ತೀರ್ಪೂ ಸಹ 1975ರ ಎಡಿಎಮ್ ಜಬಲ್‍ಪುರ ವರ್ಸಸ್ ಶಿವಕಾಂತ ಶುಕ್ಲ ತೀರ್ಪಿನ ಗುಂಪಿಗೇ ಸೇರಿಕೊಳ್ಳುತ್ತೆ. ಆದರೆ ಅಲ್ಲಿ ಒಂದು ವ್ಯತ್ಯಾಸವಿತ್ತು- ಅಯೋಧ್ಯೆಯ ತೀರ್ಪಿನಂತೆ ಆ ತೀರ್ಪು ಅವಿರೋಧವಾದ, ಭಿನ್ನಮತವಿಲ್ಲದ ತೀರ್ಪಾಗಿರಲಿಲ್ಲ.

ನ್ಯಾಯಾಲಯವು ಹೇಳಿದ್ದು ಸರಿಯೇ ಇರಬಹುದು. ಆದರೆ ಈ ತೀರ್ಪು ಆಕ್ರಮಣಶೀಲತೆಯನ್ನು ಪೋಷಿಸುವ ಒಂದು ಆತಂಕಕಾರಿ ಬೆಳವಣಿಗೆಯನ್ನು ಹುಟ್ಟುಹಾಕಿದೆ.

ಬಾಬರಿ ಮಸೀದಿಯನ್ನು ಒಂದು ಹಿಂದೂ ದೇವಾಲಯದ ಮೇಲೆ ಅಥವಾ ಅದನ್ನು ನಾಶಗೊಳಿಸಿ ಅದರ ಮೇಲೆ ಕಟ್ಟಲಾಗಿರಬಹುದೇ ಎನ್ನುವುದರ ಪರಿಶೀಲನೆಯ ಅವಶ್ಯಕತೆ ಇಲ್ಲ. ಹಿಂದೂ ದೇವಾಲಯಗಳನ್ನು ಮುಸ್ಲಿಮ್ ದಾಳಿಕೋರರು ಧ್ವಂಸಗೊಳಿಸಿದ್ದು ಹಾಗೂ ಆ ಜಾಗೆಗಳಲ್ಲಿ ಮಸೀದಿಗಳನ್ನು ನಿರ್ಮಿಸಿದ್ದು ಸುಳ್ಳಲ್ಲ. ಉದಾಹರಣೆಗೆ, ದೆಹಲಿಯ ಕುತುಬ್ ಮಿನಾರ್‍ದ ಬಳಿ ಇರುವ ಕುವ್ವತ್-ಉಲ್-ಇಸ್ಲಾಮ್ ಮಸೀದಿಯಲ್ಲಿ ಇರುವ ಕಂಬಗಳ ಮೇಲೆ ಹಿಂದು ಕೆತ್ತನೆಗಳಿವೆ ಅಥವಾ ವಾರಣಾಸಿಯಲ್ಲಿಯ ಗ್ಯಾನ್‍ವ್ಯಾಪಿ ಮಸೀದಿಯಲ್ಲೂ ಹಿಂದೂ ಕೆತ್ತನೆಗಳನ್ನು ಕಾಣಬಹುದು ಅಥವಾ ಜೌವನಪುರದ ಅಟಲಾ ದೇವಿ ಮಸೀದಿಯನ್ನು ನೋಡಿ. ಆದರೆ ಭಾರತ ಮುಂದುವರೆಯಬೇಕೆ ಅಥವಾ ಹಿಂದಕ್ಕೆ ಕಾಲನ್ನು ಹಾಕಬೇಕೇ?

ಒಂದು ಹಿಂದು ಮಂದಿರವನ್ನು ಇಂದು ಅಕ್ರಮವಾಗಿ ಧ್ವಂಸಗೊಳಿಸಿ ಅಲ್ಲಿ ಮಸೀದಿಯನ್ನು ಕಟ್ಟಲಾಗಿದ್ದರೆ ಅದು ಬೇರೆ ಮಾತು. ಆದರೆ ಈಗ ಹೇಳಲಾಗುವ ಅಯೋಧ್ಯೆಯ ಘಟನೆ ಆಗಿರುವುದು 500 ವರ್ಷಗಳ ಹಿಂದೆ, ಹಾಗಿರುವಾಗ ಅಂತಹ ಕಟ್ಟಡವನ್ನು ಮರಳಿ ಹಿಂದೂ ಮಂದಿರವಾಗಿ ಮರುನಿರ್ಮಾಣ ಮಾಡುವುದರಲ್ಲಿ ಎಷ್ಟು ಅರ್ಥವಿದೆ? ಈ ರೀತಿಯ ಸೇಡಿನ ಪ್ರವೃತ್ತಿ, ವಿಶ್ವ ಹಿಂದೂ ಪರಿಷತ್‍ನ ಈ ಪ್ರತಿಪಾದನೆ ನಮ್ಮ ಸಮಾಜವನ್ನು ಧ್ರುವೀಕರಿಸುವುದನ್ನು ಬಿಟ್ಟರೆ ಮತ್ತೇನೂ ಮಾಡುವುದಿಲ್ಲ; ಚುನಾವಣೆಯಲ್ಲಿ ಮತಗಳನ್ನು ಪಡೆಯಲೋಸುಗ ಕೋಮು ದಳ್ಳುರಿಯನ್ನು ಕಾಪಿಡಲು ಬಯಸುವ ಕೆಲವು ವ್ಯಕ್ತಿಗಳ ರಾಜಕೀಯ ಅಜೆಂಡಾಗೆ ಸಹಾಯವಾಗುವುದಷ್ಟೇ ಇದರಿಂದ ಆಗುತ್ತದೆ.

786 ಮತ್ತು 798 ಪ್ಯಾರಾಗಳಲ್ಲಿ ನ್ಯಾಯಾಲಯ ಹೇಳಿರುವುದು; 1528ರಲ್ಲಿ ನಿರ್ಮಾಣವಾದಾಗಿನಿಂದ 1857ರ ತನಕ ನಮಾಜ್ ಮಾಡುವವರ ಒಡೆತನದಲ್ಲಿ ಈ ಮಸೀದಿ ಇತ್ತು ಎಂದು ಹೇಳಲು ಸಾಕ್ಷಾಧಾರಗಳನ್ನು ಒದಗಿಸಿಲ್ಲ. ಆದರೆ ಇದನ್ನು ಸಾಧಿಸುವುದಾದರೂ ಹೇಗೆ? ಆ ಕಾಲದ ಪ್ರತ್ಯಕ್ಷ ಸಾಕ್ಷಿಗಳನ್ನಂತೂ ಇಂದು ತರಲು ಸಾಧ್ಯವಿಲ್ಲ ಹಾಗೂ 1857ರ ಪ್ರಥಮ ಸ್ವಾತಂತ್ರ ಸಮರದಲ್ಲಿ ಅವಧ್‍ನ ಎಲ್ಲಾ ದಾಖಲೆಗಳು ಧ್ವಂಸಗೊಳಿಸಲಾಗಿತ್ತು. ಇರಲಿ, ಆರಾಧನೆಗಾಗಿ ಒಂದು ಮನೆಯನ್ನು ಕಟ್ಟಲಾಗಿದೆ ಎಂದರೆ, ಅದು ಮಂದಿರವೇ ಇರಲಿ ಅಥವಾ ಮಸೀದಿ ಅಥವಾ ಚರ್ಚು ಅಥವಾ ಗುರುದ್ವಾರವೇ ಆಗಿರಲಿ, ಅಲ್ಲಿ ಆರಾಧನೆ ಮಾಡುವ ಸಲುವಾಗಿಯೇ ಕಟ್ಟುತ್ತಾರೆಯೇ ಹೊರತು ಅಲಂಕಾರಕ್ಕಾಗಿ ಅಲ್ಲ ಎನ್ನುವುದು ಸಾಮಾನ್ಯ ಜ್ಞಾನ.

ತೀರ್ಪಿನ 798 ಪ್ಯಾರಾ ಹೀಗಿದೆ: ಮುಸ್ಲಿಮರನ್ನು ಆರಾಧನೆಯಿಂದ ಮತ್ತು ಒಡೆತನದಿಂದ ಹೊರಗಿಡುವುದು ನಡೆದದ್ದು 1949ರ ಡಿಸೆಂಬರ್ 22/23 ಮಧ್ಯದ ರಾತ್ರಿಯಲ್ಲಿ. ಆಗ ಮಸೀದಿಯನ್ನು ಅಪವಿತ್ರಗೊಳಿಸಿ ಹಿಂದೂ ವಿಗ್ರಹಗಳನ್ನು ಸ್ಥಾಪಿಸುವುದರ ಮೂಲಕ ಇದನ್ನು ಮಾಡಲಾಯಿತು. ಆ ಸಂದರ್ಭದಲ್ಲಿ ಮುಸ್ಲಿಮ್‍ರನ್ನು ಹೊರಗಿಡುವ ಈ ಕ್ರಿಯೆಯನ್ನು ಯಾವುದೇ ಕಾನೂನಾತ್ಮಕ ಕ್ರಮದಿಂದ ಮಾಡಲಿಲ್ಲ. ಅದನ್ನು ಅವರ ಆರಾಧನೆಯ ಜಾಗೆಯಿಂದ ವಂಚಿತಗೊಳಿಸುವ ಲೆಕ್ಕಾಚಾರದ ಕ್ರಮದಿಂದ ಮಾಡಲಾಗಿತ್ತು.

ಇಂತಹ ಸ್ಪಷ್ಟವಾದ ತೀರ್ಮಾನದ ಹೊರತಾಗಿಯೂ, ನ್ಯಾಯಾಲಯವು ಒಂದು ಯಾವುದೋ ವಿಚಿತ್ರ ತರ್ಕದ ಆಧಾರದ ಮೇಲೆ ವಿವಾದಿತ ಜಾಗೆಯನ್ನು ಹಿಂದುಗಳಿಗೆ ಒಪ್ಪಿಸಿದೆ.

ಹಾಗಾಗಿ, ಅಯೋಧ್ಯೆಯ ತೀರ್ಪು ಕೋಮು ಸಾಮರಸ್ಯಕ್ಕೆ ಕಾರಣವಾಗಬಹುದು ಎನ್ನುವುದು ಮೂರ್ಖತನವಾದೀತು. ಯಾವುದೇ ತುಷ್ಟೀಕರಣವು, 1938ರ ಮೂನಿಕ್ ಒಪ್ಪಂದದಲ್ಲಿ ಆದಂತೆ, ಆಕ್ರಮಣಕಾರಿಯ ಹಸಿವನ್ನು ಹೆಚ್ಚಿಸುತ್ತದೆಯೇ ಹೊರತು, ತಣಿಸುವುದಿಲ್ಲ. “ಅಭಿ ತೋ ಯೆ ಝಾಂಕಿ ಹೈ, ಕಾಶಿ ಮಥುರಾ ಬಾಕಿ ಹೈ”. ಎನ್ನುವ ಘೋಷಣೆಗಳು 1992 ಡಿಸೆಂಬರ್ 6ರ ನಂತರ ಕೇಳಿಬಂದವು ಹಾಗೂ ಮತ್ತೆ ಕೇಳಿಬರಲು ಪ್ರಾರಂಭಿಸಿದರೆ ಆಶ್ಷರ್ಯವಿಲ್ಲ. ದೆಹಲಿಯ ಜಾಮಾ ಮಸ್ಜಿದ್ ಕಟ್ಟಿರುವುದು ಒಂದು ಹಿಂದೂ ಮಂದಿರದ ಮೇಲೆ ಹಾಗೂ ಅದನ್ನು ಮರುಪಡೆಯಬೇಕು ಎಂದು ಬಿಜೆಪಿಯ ಸಾಕ್ಷಿ ಮಹಾರಾಜ್ ಹೇಳಿದ್ದಾರೆ. ತಾಜ್‍ಮಹಲ್ ಬಗ್ಗೆಯೂ ಬಿಜೆಪಿಯ ಕೆಲವು ಇದೇ ರೀತಿ ಹೇಳಿದ್ದಾರೆ. ಇದು ಕೊನೆಗೊಳ್ಳುವುದು ಯಾವಾಗ?

ರಾಮ ಒಂದು ನಿರ್ದಿಷ್ಟ ಸ್ಥಳದಲ್ಲಿ ಹುಟ್ಟಿದ್ದು ಎಂದು ಹೇಳುವುದು ಹಾಸ್ಯಾಸ್ಪದವಾಗಿದೆ. ಒಂದು ವೇಳೆ ರಾಮನನ್ನು ಪೌರಾಣಿಕ ವ್ಯಕ್ತಿ ಅಲ್ಲ, ಅವನೊಬ್ಬ ಐತಿಹಾಸಿಕ ವ್ಯಕ್ತಿ ಎಂದು ಪರಿಗಣಿಸಿದರೂ ಸಾವಿರಾರು ವರ್ಷಗಳ ಮುಂಚೆ ಎಲ್ಲಿ ಹುಟ್ಟಿದ್ದು ಎಂದು ಹೇಗೆ ಹೇಳಬಲ್ಲರು?

ಭಾರತವು ಒಂದು ಭಯಾನಕ ಆರ್ಥಿಕ ಸಂಕಷ್ಟದಿಂದ ನಲುಗುತ್ತಿದೆ. ಜಿಡಿಪಿ ಬೆಳವಣಿಗೆ ಕುಸಿದಿದೆ, ಉತ್ಪಾದನಾ ಕ್ಷೇತ್ರ ಕುಸಿದಿದೆ, ವ್ಯಾಪಾರ ಇಳಿಮುಖದಲ್ಲಿದೆ, ನಿರುದ್ಯೋಗದ ದರ ದಾಖಲೆ ಸೃಷ್ಟಿಸುತ್ತಿದೆ, (ಸರಕಾರಿ ದಾಖಲೆಗಳೇ ಇದನ್ನು ಹೇಳುತ್ತಿವೆ). ಮಕ್ಕಳ ಅಪೌಷ್ಟಿಕತೆಯ ಮಟ್ಟ ಭೀಕರವಾಗಿದೆ (ಜಾಗತಿಕ ಹಸಿವು ಸೂಚ್ಯಾಂಕದ ಅನುಗುಣವಾಗಿ, ಪ್ರತಿ ಎರಡನೇ ಮಗು ಅಪೌಷ್ಟಿಕತೆಯಿಂದ ಬಳಲುತ್ತಿದೆ.), 50% ಭಾರತೀಯ ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ, ರೈತರ ಆತ್ಮಹತ್ಯೆಗಳು ಅವ್ಯಾಹತವಾಗಿ ನಡೆಯುತ್ತಲೇ ಇವೆ, ಆರೋಗ್ಯ ಸೇವೆ ಮತ್ತು ಉತ್ತಮ ಶಿಕ್ಷಣ ಚಿಂತಾಜನಕ ಸ್ಥಿತಿಯಲ್ಲಿವೆ, ಹೀಗೆ ಪಟ್ಟಿ ಬೆಳೆಯುತ್ತ ಹೋಗುತ್ತದೆ.

ನಮ್ಮ ನಾಯಕರಿಗೆ ಈ ಸಮಸ್ಯೆಗಳನ್ನು ಹೇಗೆ ಬಗೆಹರಿಸಬೇಕು ಎನ್ನುವುದರ ಬಗ್ಗೆ ಯಾವುದೇ ಕಲ್ಪನೆ ಇಲ್ಲದಿರುವುದು ಸ್ಪಷ್ಟ. ಹಾಗಾಗಿ, ಇವುಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ಹಲವು ಗಿಮಿಕ್ ಮಾಡಲಾಗುತ್ತಿದೆ.

ವಿಧ್ವಂಸಕ ರಾಜಕೀಯ ಶಕ್ತಿಗಳಿಂದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ್ದು 1947ರ ವಿಭಜನೆಯ ನಂತರದ ಅತ್ಯಂತ ದೊಡ್ಡ ದುರಂತ. ಅಯೋಧ್ಯೆಯ ತೀರ್ಪು ಸಹಾ ಮಸೀದಿಯನ್ನು ಧ್ವಂಸಗೊಳಿದ್ದು ಕಾನೂನುಬಾಹಿರ ಎಂದು ಹೇಳುತ್ತದೆ. ಆದರೆ ಅದೇ ಉಸಿರಿನಲ್ಲಿ ಆ ಘಟನೆಯನ್ನು ಪವಿತ್ರಗೊಳಿಸುವ ಕೆಲಸವನ್ನೂ ಮಾಡುತ್ತದೆ.

ಭಾಳ ಒಳ್ಳೆಯ ಕೆಲಸ ಮಾಡಿದ್ರಿ, ಮೈ ಲಾಡ್ರ್ಸ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...