Homeಚಳವಳಿಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

- Advertisement -
- Advertisement -

| ಮಾರ್ಕಂಡೇಯ ಕಟ್ಜು |
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ
ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಅಯೋಧ್ಯೆಯ ಈ ತೀರ್ಪೂ ಸಹ 1975ರ ಎಡಿಎಮ್ ಜಬಲ್‍ಪುರ ವರ್ಸಸ್ ಶಿವಕಾಂತ ಶುಕ್ಲ ತೀರ್ಪಿನ ಗುಂಪಿಗೇ ಸೇರಿಕೊಳ್ಳುತ್ತೆ. ಆದರೆ ಅಲ್ಲಿ ಒಂದು ವ್ಯತ್ಯಾಸವಿತ್ತು- ಅಯೋಧ್ಯೆಯ ತೀರ್ಪಿನಂತೆ ಆ ತೀರ್ಪು ಅವಿರೋಧವಾದ, ಭಿನ್ನಮತವಿಲ್ಲದ ತೀರ್ಪಾಗಿರಲಿಲ್ಲ.

ನ್ಯಾಯಾಲಯವು ಹೇಳಿದ್ದು ಸರಿಯೇ ಇರಬಹುದು. ಆದರೆ ಈ ತೀರ್ಪು ಆಕ್ರಮಣಶೀಲತೆಯನ್ನು ಪೋಷಿಸುವ ಒಂದು ಆತಂಕಕಾರಿ ಬೆಳವಣಿಗೆಯನ್ನು ಹುಟ್ಟುಹಾಕಿದೆ.

ಬಾಬರಿ ಮಸೀದಿಯನ್ನು ಒಂದು ಹಿಂದೂ ದೇವಾಲಯದ ಮೇಲೆ ಅಥವಾ ಅದನ್ನು ನಾಶಗೊಳಿಸಿ ಅದರ ಮೇಲೆ ಕಟ್ಟಲಾಗಿರಬಹುದೇ ಎನ್ನುವುದರ ಪರಿಶೀಲನೆಯ ಅವಶ್ಯಕತೆ ಇಲ್ಲ. ಹಿಂದೂ ದೇವಾಲಯಗಳನ್ನು ಮುಸ್ಲಿಮ್ ದಾಳಿಕೋರರು ಧ್ವಂಸಗೊಳಿಸಿದ್ದು ಹಾಗೂ ಆ ಜಾಗೆಗಳಲ್ಲಿ ಮಸೀದಿಗಳನ್ನು ನಿರ್ಮಿಸಿದ್ದು ಸುಳ್ಳಲ್ಲ. ಉದಾಹರಣೆಗೆ, ದೆಹಲಿಯ ಕುತುಬ್ ಮಿನಾರ್‍ದ ಬಳಿ ಇರುವ ಕುವ್ವತ್-ಉಲ್-ಇಸ್ಲಾಮ್ ಮಸೀದಿಯಲ್ಲಿ ಇರುವ ಕಂಬಗಳ ಮೇಲೆ ಹಿಂದು ಕೆತ್ತನೆಗಳಿವೆ ಅಥವಾ ವಾರಣಾಸಿಯಲ್ಲಿಯ ಗ್ಯಾನ್‍ವ್ಯಾಪಿ ಮಸೀದಿಯಲ್ಲೂ ಹಿಂದೂ ಕೆತ್ತನೆಗಳನ್ನು ಕಾಣಬಹುದು ಅಥವಾ ಜೌವನಪುರದ ಅಟಲಾ ದೇವಿ ಮಸೀದಿಯನ್ನು ನೋಡಿ. ಆದರೆ ಭಾರತ ಮುಂದುವರೆಯಬೇಕೆ ಅಥವಾ ಹಿಂದಕ್ಕೆ ಕಾಲನ್ನು ಹಾಕಬೇಕೇ?

ಒಂದು ಹಿಂದು ಮಂದಿರವನ್ನು ಇಂದು ಅಕ್ರಮವಾಗಿ ಧ್ವಂಸಗೊಳಿಸಿ ಅಲ್ಲಿ ಮಸೀದಿಯನ್ನು ಕಟ್ಟಲಾಗಿದ್ದರೆ ಅದು ಬೇರೆ ಮಾತು. ಆದರೆ ಈಗ ಹೇಳಲಾಗುವ ಅಯೋಧ್ಯೆಯ ಘಟನೆ ಆಗಿರುವುದು 500 ವರ್ಷಗಳ ಹಿಂದೆ, ಹಾಗಿರುವಾಗ ಅಂತಹ ಕಟ್ಟಡವನ್ನು ಮರಳಿ ಹಿಂದೂ ಮಂದಿರವಾಗಿ ಮರುನಿರ್ಮಾಣ ಮಾಡುವುದರಲ್ಲಿ ಎಷ್ಟು ಅರ್ಥವಿದೆ? ಈ ರೀತಿಯ ಸೇಡಿನ ಪ್ರವೃತ್ತಿ, ವಿಶ್ವ ಹಿಂದೂ ಪರಿಷತ್‍ನ ಈ ಪ್ರತಿಪಾದನೆ ನಮ್ಮ ಸಮಾಜವನ್ನು ಧ್ರುವೀಕರಿಸುವುದನ್ನು ಬಿಟ್ಟರೆ ಮತ್ತೇನೂ ಮಾಡುವುದಿಲ್ಲ; ಚುನಾವಣೆಯಲ್ಲಿ ಮತಗಳನ್ನು ಪಡೆಯಲೋಸುಗ ಕೋಮು ದಳ್ಳುರಿಯನ್ನು ಕಾಪಿಡಲು ಬಯಸುವ ಕೆಲವು ವ್ಯಕ್ತಿಗಳ ರಾಜಕೀಯ ಅಜೆಂಡಾಗೆ ಸಹಾಯವಾಗುವುದಷ್ಟೇ ಇದರಿಂದ ಆಗುತ್ತದೆ.

786 ಮತ್ತು 798 ಪ್ಯಾರಾಗಳಲ್ಲಿ ನ್ಯಾಯಾಲಯ ಹೇಳಿರುವುದು; 1528ರಲ್ಲಿ ನಿರ್ಮಾಣವಾದಾಗಿನಿಂದ 1857ರ ತನಕ ನಮಾಜ್ ಮಾಡುವವರ ಒಡೆತನದಲ್ಲಿ ಈ ಮಸೀದಿ ಇತ್ತು ಎಂದು ಹೇಳಲು ಸಾಕ್ಷಾಧಾರಗಳನ್ನು ಒದಗಿಸಿಲ್ಲ. ಆದರೆ ಇದನ್ನು ಸಾಧಿಸುವುದಾದರೂ ಹೇಗೆ? ಆ ಕಾಲದ ಪ್ರತ್ಯಕ್ಷ ಸಾಕ್ಷಿಗಳನ್ನಂತೂ ಇಂದು ತರಲು ಸಾಧ್ಯವಿಲ್ಲ ಹಾಗೂ 1857ರ ಪ್ರಥಮ ಸ್ವಾತಂತ್ರ ಸಮರದಲ್ಲಿ ಅವಧ್‍ನ ಎಲ್ಲಾ ದಾಖಲೆಗಳು ಧ್ವಂಸಗೊಳಿಸಲಾಗಿತ್ತು. ಇರಲಿ, ಆರಾಧನೆಗಾಗಿ ಒಂದು ಮನೆಯನ್ನು ಕಟ್ಟಲಾಗಿದೆ ಎಂದರೆ, ಅದು ಮಂದಿರವೇ ಇರಲಿ ಅಥವಾ ಮಸೀದಿ ಅಥವಾ ಚರ್ಚು ಅಥವಾ ಗುರುದ್ವಾರವೇ ಆಗಿರಲಿ, ಅಲ್ಲಿ ಆರಾಧನೆ ಮಾಡುವ ಸಲುವಾಗಿಯೇ ಕಟ್ಟುತ್ತಾರೆಯೇ ಹೊರತು ಅಲಂಕಾರಕ್ಕಾಗಿ ಅಲ್ಲ ಎನ್ನುವುದು ಸಾಮಾನ್ಯ ಜ್ಞಾನ.

ತೀರ್ಪಿನ 798 ಪ್ಯಾರಾ ಹೀಗಿದೆ: ಮುಸ್ಲಿಮರನ್ನು ಆರಾಧನೆಯಿಂದ ಮತ್ತು ಒಡೆತನದಿಂದ ಹೊರಗಿಡುವುದು ನಡೆದದ್ದು 1949ರ ಡಿಸೆಂಬರ್ 22/23 ಮಧ್ಯದ ರಾತ್ರಿಯಲ್ಲಿ. ಆಗ ಮಸೀದಿಯನ್ನು ಅಪವಿತ್ರಗೊಳಿಸಿ ಹಿಂದೂ ವಿಗ್ರಹಗಳನ್ನು ಸ್ಥಾಪಿಸುವುದರ ಮೂಲಕ ಇದನ್ನು ಮಾಡಲಾಯಿತು. ಆ ಸಂದರ್ಭದಲ್ಲಿ ಮುಸ್ಲಿಮ್‍ರನ್ನು ಹೊರಗಿಡುವ ಈ ಕ್ರಿಯೆಯನ್ನು ಯಾವುದೇ ಕಾನೂನಾತ್ಮಕ ಕ್ರಮದಿಂದ ಮಾಡಲಿಲ್ಲ. ಅದನ್ನು ಅವರ ಆರಾಧನೆಯ ಜಾಗೆಯಿಂದ ವಂಚಿತಗೊಳಿಸುವ ಲೆಕ್ಕಾಚಾರದ ಕ್ರಮದಿಂದ ಮಾಡಲಾಗಿತ್ತು.

ಇಂತಹ ಸ್ಪಷ್ಟವಾದ ತೀರ್ಮಾನದ ಹೊರತಾಗಿಯೂ, ನ್ಯಾಯಾಲಯವು ಒಂದು ಯಾವುದೋ ವಿಚಿತ್ರ ತರ್ಕದ ಆಧಾರದ ಮೇಲೆ ವಿವಾದಿತ ಜಾಗೆಯನ್ನು ಹಿಂದುಗಳಿಗೆ ಒಪ್ಪಿಸಿದೆ.

ಹಾಗಾಗಿ, ಅಯೋಧ್ಯೆಯ ತೀರ್ಪು ಕೋಮು ಸಾಮರಸ್ಯಕ್ಕೆ ಕಾರಣವಾಗಬಹುದು ಎನ್ನುವುದು ಮೂರ್ಖತನವಾದೀತು. ಯಾವುದೇ ತುಷ್ಟೀಕರಣವು, 1938ರ ಮೂನಿಕ್ ಒಪ್ಪಂದದಲ್ಲಿ ಆದಂತೆ, ಆಕ್ರಮಣಕಾರಿಯ ಹಸಿವನ್ನು ಹೆಚ್ಚಿಸುತ್ತದೆಯೇ ಹೊರತು, ತಣಿಸುವುದಿಲ್ಲ. “ಅಭಿ ತೋ ಯೆ ಝಾಂಕಿ ಹೈ, ಕಾಶಿ ಮಥುರಾ ಬಾಕಿ ಹೈ”. ಎನ್ನುವ ಘೋಷಣೆಗಳು 1992 ಡಿಸೆಂಬರ್ 6ರ ನಂತರ ಕೇಳಿಬಂದವು ಹಾಗೂ ಮತ್ತೆ ಕೇಳಿಬರಲು ಪ್ರಾರಂಭಿಸಿದರೆ ಆಶ್ಷರ್ಯವಿಲ್ಲ. ದೆಹಲಿಯ ಜಾಮಾ ಮಸ್ಜಿದ್ ಕಟ್ಟಿರುವುದು ಒಂದು ಹಿಂದೂ ಮಂದಿರದ ಮೇಲೆ ಹಾಗೂ ಅದನ್ನು ಮರುಪಡೆಯಬೇಕು ಎಂದು ಬಿಜೆಪಿಯ ಸಾಕ್ಷಿ ಮಹಾರಾಜ್ ಹೇಳಿದ್ದಾರೆ. ತಾಜ್‍ಮಹಲ್ ಬಗ್ಗೆಯೂ ಬಿಜೆಪಿಯ ಕೆಲವು ಇದೇ ರೀತಿ ಹೇಳಿದ್ದಾರೆ. ಇದು ಕೊನೆಗೊಳ್ಳುವುದು ಯಾವಾಗ?

ರಾಮ ಒಂದು ನಿರ್ದಿಷ್ಟ ಸ್ಥಳದಲ್ಲಿ ಹುಟ್ಟಿದ್ದು ಎಂದು ಹೇಳುವುದು ಹಾಸ್ಯಾಸ್ಪದವಾಗಿದೆ. ಒಂದು ವೇಳೆ ರಾಮನನ್ನು ಪೌರಾಣಿಕ ವ್ಯಕ್ತಿ ಅಲ್ಲ, ಅವನೊಬ್ಬ ಐತಿಹಾಸಿಕ ವ್ಯಕ್ತಿ ಎಂದು ಪರಿಗಣಿಸಿದರೂ ಸಾವಿರಾರು ವರ್ಷಗಳ ಮುಂಚೆ ಎಲ್ಲಿ ಹುಟ್ಟಿದ್ದು ಎಂದು ಹೇಗೆ ಹೇಳಬಲ್ಲರು?

ಭಾರತವು ಒಂದು ಭಯಾನಕ ಆರ್ಥಿಕ ಸಂಕಷ್ಟದಿಂದ ನಲುಗುತ್ತಿದೆ. ಜಿಡಿಪಿ ಬೆಳವಣಿಗೆ ಕುಸಿದಿದೆ, ಉತ್ಪಾದನಾ ಕ್ಷೇತ್ರ ಕುಸಿದಿದೆ, ವ್ಯಾಪಾರ ಇಳಿಮುಖದಲ್ಲಿದೆ, ನಿರುದ್ಯೋಗದ ದರ ದಾಖಲೆ ಸೃಷ್ಟಿಸುತ್ತಿದೆ, (ಸರಕಾರಿ ದಾಖಲೆಗಳೇ ಇದನ್ನು ಹೇಳುತ್ತಿವೆ). ಮಕ್ಕಳ ಅಪೌಷ್ಟಿಕತೆಯ ಮಟ್ಟ ಭೀಕರವಾಗಿದೆ (ಜಾಗತಿಕ ಹಸಿವು ಸೂಚ್ಯಾಂಕದ ಅನುಗುಣವಾಗಿ, ಪ್ರತಿ ಎರಡನೇ ಮಗು ಅಪೌಷ್ಟಿಕತೆಯಿಂದ ಬಳಲುತ್ತಿದೆ.), 50% ಭಾರತೀಯ ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ, ರೈತರ ಆತ್ಮಹತ್ಯೆಗಳು ಅವ್ಯಾಹತವಾಗಿ ನಡೆಯುತ್ತಲೇ ಇವೆ, ಆರೋಗ್ಯ ಸೇವೆ ಮತ್ತು ಉತ್ತಮ ಶಿಕ್ಷಣ ಚಿಂತಾಜನಕ ಸ್ಥಿತಿಯಲ್ಲಿವೆ, ಹೀಗೆ ಪಟ್ಟಿ ಬೆಳೆಯುತ್ತ ಹೋಗುತ್ತದೆ.

ನಮ್ಮ ನಾಯಕರಿಗೆ ಈ ಸಮಸ್ಯೆಗಳನ್ನು ಹೇಗೆ ಬಗೆಹರಿಸಬೇಕು ಎನ್ನುವುದರ ಬಗ್ಗೆ ಯಾವುದೇ ಕಲ್ಪನೆ ಇಲ್ಲದಿರುವುದು ಸ್ಪಷ್ಟ. ಹಾಗಾಗಿ, ಇವುಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ಹಲವು ಗಿಮಿಕ್ ಮಾಡಲಾಗುತ್ತಿದೆ.

ವಿಧ್ವಂಸಕ ರಾಜಕೀಯ ಶಕ್ತಿಗಳಿಂದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ್ದು 1947ರ ವಿಭಜನೆಯ ನಂತರದ ಅತ್ಯಂತ ದೊಡ್ಡ ದುರಂತ. ಅಯೋಧ್ಯೆಯ ತೀರ್ಪು ಸಹಾ ಮಸೀದಿಯನ್ನು ಧ್ವಂಸಗೊಳಿದ್ದು ಕಾನೂನುಬಾಹಿರ ಎಂದು ಹೇಳುತ್ತದೆ. ಆದರೆ ಅದೇ ಉಸಿರಿನಲ್ಲಿ ಆ ಘಟನೆಯನ್ನು ಪವಿತ್ರಗೊಳಿಸುವ ಕೆಲಸವನ್ನೂ ಮಾಡುತ್ತದೆ.

ಭಾಳ ಒಳ್ಳೆಯ ಕೆಲಸ ಮಾಡಿದ್ರಿ, ಮೈ ಲಾಡ್ರ್ಸ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...