Homeಮುಖಪುಟಪ್ರಿ ಕೆಜಿ ಸ್ಕೂಲೆಂಬ ವ್ಯಾಪಾರವೂ... : ತಾಯಿಯೆಂಬ ಗುರುವೂ...

ಪ್ರಿ ಕೆಜಿ ಸ್ಕೂಲೆಂಬ ವ್ಯಾಪಾರವೂ… : ತಾಯಿಯೆಂಬ ಗುರುವೂ…

ಪ್ರಿ.ಕೆಜಿ ಸ್ಕೂಲ್‌ಗಳ ಉದ್ದೇಶ ತಮ್ಮ ಖಜಾನೆ ತುಂಬಿಸುವುದಷ್ಟೇ ಹೊರತು ನಮ್ಮ ಮಕ್ಕಳನ್ನು ಉದ್ಧಾರ ಮಾಡಲಂತೂ ಅಲ್ಲ.

- Advertisement -
- Advertisement -

ಎಪ್ರಿಲ್ ತಿಂಗಳು ಬಂತೆಂದರೆ ಸಾಕು, ಮಕ್ಕಳ ಶಾಲಾ ದಾಖಲಾತಿಯ ಗದ್ದಲ ಪ್ರಾರಂಭವಾಗುತ್ತದೆ. ಒಂದೆಡೆ ಹೆತ್ತವರಿಗೆ ಖುಷಿ, ಜೊತೆಗೆ ಯಾವ ಶಾಲೆಗೆ ಸೇರಿಸಬೇಕೆನ್ನುವ ಗೊಂದಲ. ಇನ್ನೊಂದೆಡೆ ಶಾಲಾ ಶುಲ್ಕದ ತಲೆಬಿಸಿ ಇವೆಲ್ಲವೂ ಇತ್ತೀಚೆಗೆ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಇದರಿಂದ ನಾನೂ ಕೂಡಾ ಹೊರತಾಗಿಲ್ಲ. ನನ್ನಮ್ಮನಿಗೆ ಇದರ ಚಿಂತೆಯಿರಲಿಲ್ಲ. ನನ್ನ ಪುಟ್ಟ ಹಳ್ಳಿಯಲ್ಲಿ ಸರಕಾರಿ ಶಾಲೆ ಬಿಟ್ಟರೆ ಬೇರೆ ಆಯ್ಕೆಯೇ ಇರಲಿಲ್ಲ. ಈಗ ಹಾಗಲ್ಲ, ಹೆಜ್ಜೆಗೊಂದರಂತೆ ಪ್ರಿ-ಕೆಜಿ ಶಾಲೆಗಳು ತಮ್ಮ ಬೇಟೆಗಾಗಿ ಹೊಂಚು ಹಾಕಿ ಕಾಯುತ್ತಿರುತ್ತವೆ. ಒಂದೆರಡು ಹಲ್ಲುಗಳು ಇಣುಕಿದರೆ ಸಾಕು, ಈ ಸ್ಕೂಲ್‌ಗಳು ಅಮ್ಮನ ಮಡಿಲಿನಿಂದ ಮಕ್ಕಳನ್ನು ತಮ್ಮ ತೆಕ್ಕೆಗೆ ಎಳೆದುಕೊಳ್ಳುತ್ತವೆ.

ಹಿಂದೆಲ್ಲಾ ಮಕ್ಕಳಿಗೆ ಐದು ವರ್ಷವಾಗುತ್ತಲೇ ಅಂಗನವಾಡಿಗೆ ಸೇರಿಸಿ, ಆರು ವರ್ಷ ತುಂಬಿದಾಗ ಶಾಲೆಗೆ ದಾಖಲಿಸುವ ಪರಿಪಾಠವಿತ್ತು. ಅಲ್ಲಿಯವರೆಗೆ ಅಮ್ಮನ ಸೆರಗು ಹಿಡಿದು ನೇತಾಡುತ್ತಲೇ ಕಾಲಕಳೆಯುತ್ತಿದ್ದರು. ಅಂಗನವಾಡಿಗೂ ಹೋಗುತ್ತಿದ್ದುದು ಆಗೊಮ್ಮೆ ಈಗೊಮ್ಮೆ. ಮನೆಗೆಲಸಕ್ಕಾಗಿ ಯಂತ್ರಗಳಿಲ್ಲದ ಕಾಲದಲ್ಲಿ ಅಮ್ಮಂದಿರು ಸ್ವಯಂ ಯಂತ್ರಗಳಾಗಿ ದುಡಿಯುತ್ತಿದ್ದರು. ಬಿಡುವಿಲ್ಲದ ದಿನಚರಿಯ ನಡುವೆಯೂ, ವಯಸ್ಸಿಗೆ ಒಂದು ವರ್ಷದ ಅಂತರವಿರುತ್ತಿದ್ದ ಐದಾರು ಮಕ್ಕಳಿಗೂ ತಮ್ಮ ಸಮಯವನ್ನು ಮೀಸಲಾಗಿಡುತ್ತಿದ್ದರು. ಮಕ್ಕಳ ಜೊತೆ ಮುಕ್ತವಾಗಿ ಮಾತನಾಡುತ್ತಾ, ಕಥೆ ಹೇಳುತ್ತಾ, ಜೊತೆ ಸೇರಿ ಆಟವಾಡುತ್ತಾ ಮುಗ್ಧ ಮನಸ್ಸುಗಳ ನಡುವಿನ ಕೊಂಡಿಯನ್ನು ಭದ್ರಗೊಳಿಸುತ್ತಿದ್ದರು. ಎಷ್ಟು ಕಿರಿಕಿರಿಯುಂಟಾದರೂ ಒಂದು ಹಂತದವರೆಗೆ ಅವರನ್ನು ದೂರವಿರಿಸುವ ಪ್ರಯತ್ನ ಮಾಡುತ್ತಿರಲಿಲ್ಲ.

ಮಕ್ಕಳಿಗೆ ನೀಡಬೇಕಾದ ಸಮಯವು ಅವರ ಹಕ್ಕಾಗಿರುತ್ತದೆ. ಈಗ ನಮ್ಮಲ್ಲಿ ಧಾರಾಳ ಸಮಯವಿದೆ. ಆದರೆ ಒಂದಿಷ್ಟು ಹೊತ್ತು ಮಕ್ಕಳ ಜೊತೆ ಕಳೆಯಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ. ಒಂದಿಬ್ಬರು ಮಕ್ಕಳು ಇರುವುದಾದರೂ ಸಂಭಾಳಿಸುವುದು ಬಹಳ ಕಷ್ಟ ಎನ್ನುವುದು ಬಹುತೇಕ ತಾಯಂದಿರು ಆಗಾಗ ಹೇಳುತ್ತಿರುವ ಮಾತು. ಇದಕ್ಕೆ ಪರಿಹಾರವನ್ನು ಪ್ರಿ-ಕೆಜಿ ಸ್ಕೂಲ್‌ಗಳು ನೀಡಿವೆ. ಅದರಂತೆ ತಮ್ಮ ಪುಟಾಣಿ ಮಕ್ಕಳನ್ನು ಪ್ರಿ-ಕೆಜಿ ಸ್ಕೂಲ್‌ಗಳ ಬಾಗಿಲಿಗೆ ನೂಕಿ ಬಿಡುತ್ತಾರೆ. ಒಂದಿಷ್ಟು ಹೊತ್ತು ಮಕ್ಕಳೊಡನೆ ಬೆರೆತು ನೋಡಿ, ಅವರ ಸೃಜನಶೀಲ ಮನಸ್ಸು ನಮ್ಮಲ್ಲಿ ಅಚ್ಚರಿಯುಂಟುಮಾಡುತ್ತದೆ. ತುಂಟಾಟಗಳು ದಿನದ ಜಂಜಾಟಗಳಿಗೆ ನಿರಾಳತೆಯನ್ನು ಒದಗಿಸುತ್ತದೆ. ಹಠ, ಕೀಟಲೆ, ಚೇಷ್ಟೆ ಇವೆಲ್ಲಾ ಮಕ್ಕಳಲ್ಲಿರುವ ಸಹಜ ಗುಣಗಳು. ಅವುಗಳ ಅಭಿವ್ಯಕ್ತಿ ಕೂಡಾ ಅವರ ಹಕ್ಕಾಗಿರುತ್ತದೆ. ಅದಕ್ಕಾಗಿ ಪುಟ್ಟ ಮಕ್ಕಳನ್ನು ಅಮ್ಮನ ಮಡಿಲಿಂದ ದೂರವಿಡುವುದು ಎಷ್ಟು ಸರಿ?

ಬಾಲ್ಯವೆಂಬುದು ಮಕ್ಕಳ ಹಕ್ಕು. ಅದನ್ನವರು ಸಹಜವಾಗಿಯೇ ಆಸ್ವಾಧಿಸಬೇಕು. ಅದನ್ನು ಕಸಿಯುವ ಹಕ್ಕು ಹೆತ್ತವರಿಗೂ ಇಲ್ಲ. ಒಂದು ವರ್ಷ ಬಳಪ ಬಳಸದೆ ಆಡುತ್ತಾ, ನಲಿಯುತ್ತಾ ಕಲಿಯುವುದು, ಪರ್ಯಾವರಣ ನಡಿಗೆ (ನೇಚರ್ ವಾಕ್), ಇಂಗ್ಲಿಷ್ ಕಲಿಕೆ ಇತ್ಯಾದಿ ಬಣ್ಣ ಬಣ್ಣಗಳ ಆಮಿಷಗಳ ಮೂಲಕ ಮೂವತ್ತು ಸಾವಿರದಿಂದ ಎಪ್ಪತ್ತು ಸಾವಿರದವರೆಗೂ ಈ ಪ್ರಿ ಕೆ.ಜಿ.ಸ್ಕೂಲ್‌ಗಳು ಶುಲ್ಕ ಪೀಕಿಸುತ್ತವೆ. ಶ್ರೀಮಂತರಷ್ಟೇ ಅಲ್ಲ, ಮಧ್ಯಮ ವರ್ಗದ ಹೆತ್ತವರೂ ಅವರ ಆಮಿಷಕ್ಕೆ ಬಲಿ ಬೀಳುತ್ತಾರೆ. ಹೇಗಾದರೂ ಸಾಲ, ಸೋಲ ಮಾಡಿ ಹಣ ಹೊಂದಿಸಿ ಅಲ್ಲಿಗೆ ದಾಖಲಿಸುತ್ತಾರೆ. ಉಳ್ಳವರಿಗೆ ಇದು ಪ್ರತಿಷ್ಟೆಯಾದರೆ ಮಧ್ಯಮ ವರ್ಗದವರಿಗೆ ಪ್ರಿ ಕೆ.ಜಿ.ಸ್ಕೂಲ್‌ಗಳಿಗೆ ಕಳಿಸದಿದ್ದರೆ ಎಲ್ಲಿ ತಮ್ಮ ಮಕ್ಕಳು ಹಿಂದುಳಿದು ಬಿಡುತ್ತಾರೋ ಎಂಬ ಆತಂಕ. ಒಂದರ್ಥದಲ್ಲಿ ಇವೆಲ್ಲವೂ ಎದೆಹಾಲಿಗೆ ಇಂಗ್ಲಿಷ್ ಬೆರೆಸುವ ವ್ಯಾಮೋಹ. ಇಂಗ್ಲಿಷ್ ಕಲಿಯುವುದು ತಪ್ಪಲ್ಲ. ಆದರೆ ಅತಿಯಾದ ಇಂಗ್ಲಿಷಿನ ವ್ಯಾಮೋಹದಿಂದಾಗಿ ಮಾತೃಭಾಷೆಯೇ ಸರಿಯಾಗಿ ಮಾತನಾಡಲು ಬಾರದ ಎಷ್ಟೋ ಮಕ್ಕಳಿದ್ದಾರೆ. ಸಂವಹನದ ತೊಡಕಿನಿಂದಾಗಿ ಮನೆಯಲ್ಲಿ ಹಿರಿಯರೊಂದಿಗೆ ವ್ಯವಹರಿಸಲು ಬಾರದೇ ಸಂಬಂಧಗಳು ಶಿಥಿಲಗೊಳ್ಳುತ್ತವೆ.

ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂಬ ಮಾತಿನಂತೆ ಲಕ್ಷ ಸುರಿದರೂ ತಾಯಿಗಿಂತ ಮಿಗಿಲಾದ ಗುರುವನ್ನು ಈ ಪ್ರಿ ಕೆ.ಜಿ. ಶಾಲೆಗಳು ಒದಗಿಸಲು ಸಾಧ್ಯವೇ..? ಮನೆಯ ಹೊರಗಡೆ ಆಡಲು ಬಿಟ್ಟಾಗ ಬೀಳುತ್ತಾ, ಏಳುತ್ತಾ ಆಡುವಾಗ ಕಣ್ಣಿಗೆ ಕಾಣಿಸುವ ಆಕಾಶ, ಪ್ರಾಣಿ ಪಕ್ಷಿಗಳು, ಬಣ್ಣ ಬಣ್ಣದ ಚಿಟ್ಟೆಗಳು, ಮರಗಿಡಗಳು, ಗಾಳಿ – ಬೆಳಕು, ಮೋಡ ಇವುಗಳಿಗೆಲ್ಲಾ ನೇಚರ್ ವಾಕ್ ಎಂಬ ಹೆಸರನ್ನಿಟ್ಟು ಮಾಡುವ ವ್ಯಾಪಾರಕ್ಕೆ ದುಡ್ಡು ಸುರಿಯಬೇಕೇ..? ಪ್ರಕೃತಿಯ ಬಗ್ಗೆ ಮಕ್ಕಳಿಗೆ ವಿಶೇಷ ಕುತೂಹಲವಿರುತ್ತದೆ. ಅವರದೇ ಆದ ಆಲೋಚನೆಗಳು, ಕಲ್ಪನೆಗಳು ಇರುತ್ತವೆ. ಇದನ್ನು ಪ್ರಿ.ಕೆ.ಜಿ.ಸ್ಕೂಲ್‌ಗಳು ಇಲ್ಲವಾಗಿಸುತ್ತವೆ. ತಾಯಿಯ ಸೆರಗು ಹಿಡಿದು ಬಾಲದಂತೆ ಹಿಂಬಾಲಿಸುವಾಗ ಕಲಿಯುವ ವಸ್ತುಗಳ ಹೆಸರು, ಹಣ್ಣು-ತರಕಾರಿಗಳ ಹೆಸರು, ಬಣ್ಣಗಳು ಇತ್ಯಾದಿಗಳನ್ನೆಲ್ಲಾ ಅರಿತುಕೊಳ್ಳಲು ಪ್ರಿ ಕೆ.ಜಿ.ಸ್ಕೂಲ್‌ಗಳು ಬೇಕೇ..?

ಮಕ್ಕಳ ಮನಸ್ಸೆಂಬುದು ಬಹಳ ಸೂಕ್ಷ್ಮ. ಈ ವಿಚಾರವನ್ನು ಅಮ್ಮಂದಿರು ನೆನಪಿಟ್ಟುಕೊಳ್ಳಲೇಬೇಕು. ನಾವು ಹೇಳಿದಂತೆಲ್ಲಾ ಅವರು ಕೇಳದಿರಬಹುದು. ಆದರೆ ನಮ್ಮ ಪ್ರತಿಯೊಂದು ಹೆಜ್ಜೆಯನ್ನೂ ನಮಗರಿವಿಲ್ಲದೇ ಅನುಸರಿಸುತ್ತಾರೆ. ಅವರ ಕಲಿಕೆ ಪ್ರಾರಂಭವಾಗುವುದೇ ಇಲ್ಲಿಂದ. ಇದು ಅವರ ಸರ್ವತೋಮುಖ ಬೆಳವಣಿಗೆಗೆ ಗಟ್ಟಿ ಅಡಿಪಾಯ ಹಾಕುತ್ತದೆ. ಹಾಗಿರುವಾಗ ನಾವಿಡುವ ಪ್ರತೀ ಹೆಜ್ಜೆಯೂ ಜಾಗರೂಕತೆಯಿಂದ ಕೂಡಿರಬೇಕು. ಇಂತಹ ಸಂದರ್ಭದಲ್ಲಿ ಮಕ್ಕಳನ್ನು ದೂರ ಮಾಡಿದರೆ ಅವರು ಇದೆಲ್ಲದರಿಂದಲೂ ವಂಚಿತರಾಗುತ್ತಾರೆ. ಮಕ್ಕಳ ಸ್ವಭಾವವೇ ಹಾಗೆ. ಪ್ರತಿಯೊಂದನ್ನು ತಾಯಿಯಲ್ಲಿ ಪ್ರಶ್ನಿಸುತ್ತಲೇ ಇರುತ್ತಾರೆ. ಒಂದಕ್ಕೆ ಉತ್ತರಿಸಿದರೆ ಇನ್ನೊಂದು, ಅದಕ್ಕೆ ಉತ್ತರಿಸಿದರೆ ಮತ್ತೊಂದು, ಮಗದೊಂದು ಪ್ರಶ್ನೆಗಳು. ಉತ್ತರಿಸಿ ಸಾಕು ಸಾಕಾಗುವಷ್ಟು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸುತ್ತಿರುತ್ತಾರೆ. ಒಂದು ವೇಳೆ ಅತೀ ಚಿಕ್ಕ ವಯಸ್ಸಿನಲ್ಲಿ ಇಂತಹ ಪ್ರಿ ಕೆ.ಜಿ.ಸ್ಕೂಲ್‌ಗಳಿಗೆ ಕಳಿಸಿದರೆ ಅವರ ಆ ಪ್ರಶ್ನಿಸುವ ಸ್ವಭಾವವೇ ಕುಂಠಿತಗೊಂಡು ಕ್ರಮೇಣ ನಿಂತು ಹೋಗುತ್ತದೆ, ಶಿಸ್ತಿನ ಹೆಸರಲ್ಲಿ ಮಾಯವಾಗುತ್ತದೆ. ಅಲ್ಲಿರುವ ಅಷ್ಟೂ ಮಕ್ಕಳು ಪ್ರಶ್ನೆಗಳನ್ನು ಕೇಳುತ್ತಾ, ಮಾತನಾಡುತ್ತಾ ಇದ್ದರೆ ಶಿಕ್ಷಕಿಯಾದರೂ ಏನು ಮಾಡಲಾದೀತು..?

ತಾಯಿಯೊಬ್ಬಳು ತನ್ನ ಮಗುವಿನ ಮನಸ್ಸನ್ನು ಅರ್ಥೈಸಿದಂತೆ ಬೇರೆ ಯಾರೇ ಆದರೂ ಅರ್ಥೈಸಲು ಸಾಧ್ಯವೇ..? ಎಳವೆಯಲ್ಲಿ ಕಲಿತದ್ದು ಬಂಡೆಯ ಮೇಲೆ ಕೆತ್ತಿದಂತೆ. ದೊಡ್ಡವರಾದ ಮೇಲೆ ಕಲಿತದ್ದು ನೀರಿನ ಮೇಲೆ ಬರೆದಂತೆ. ಹಾಗೆಂದು ಮಕ್ಕಳ ಇತಿಮಿತಿಗಳನ್ನು ಕಡೆಗಣಿಸಿ ಪುಟ್ಟ ಮೆದುಳಿಗೆ ಸಿಕ್ಕಿದ್ದೆಲ್ಲವನ್ನೂ ತುಂಬಲು ಹೋದರೆ ಅದು ಅವರ ಮನಸ್ಸಿನ ಬೆಳವಣಿಗೆಯ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ ಎಂಬುವುದನ್ನು ಮರೆಯಬಾರದು.

ಹಿಂದೊಮ್ಮೆ ನನ್ನ ಮಾತೃಭಾಷೆ ಬ್ಯಾರಿಯಲ್ಲಿ ಪ್ರಿ ಕೆಜಿ ಸ್ಕೂಲ್‌ಗಳ ಬಗ್ಗೆ ಲೇಖನ ಬರೆದಾಗ ಹಲವು ಅಮ್ಮಂದಿರು ನನ್ನ ಮೇಲೆ ಕಿಡಿಕಾರಿದರು ಹಾಗೂ ಪ್ರಿ ಕೆಜಿ ಸ್ಕೂಲ್ ಪದ್ಧತಿಯನ್ನು ಸಮರ್ಥಿಸಿಕೊಂಡಿದ್ದರು. ಹಲವು ಪ್ರಿ.ಕೆ.ಜಿ.ಸ್ಕೂಲ್‌ಗಳ ಆಡಳಿತ ಮಂಡಳಿಗೂ ತಲುಪಿಸಿದ್ದರು. ನಾನು ಈಗಲೂ ನನ್ನ ಅದೇ ಪ್ರತಿಪಾದನೆಗೆ ಬದ್ಧಳಾಗಿದ್ದೇನೆ. ಪ್ರಿ.ಕೆಜಿ ಸ್ಕೂಲ್‌ಗಳ ಉದ್ದೇಶ ತಮ್ಮ ಖಜಾನೆ ತುಂಬಿಸುವುದಷ್ಟೇ ಹೊರತು ನಮ್ಮ ಮಕ್ಕಳನ್ನು ಉದ್ಧಾರ ಮಾಡಲಂತೂ ಅಲ್ಲ.


ಇದನ್ನೂ ಓದಿ: ಈ ಹೊತ್ತಿನಲ್ಲಿ ʼಹಳ್ಳಿ ಮಕ್ಕಳʼ ಕುರಿತು: ಒಂದು ರಚನಾತ್ಮಕ ಆಲೋಚನೆ – ಕೆ.ಪಿ.ಸುರೇಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...