Homeಮುಖಪುಟಪ್ರಿ ಕೆಜಿ ಸ್ಕೂಲೆಂಬ ವ್ಯಾಪಾರವೂ... : ತಾಯಿಯೆಂಬ ಗುರುವೂ...

ಪ್ರಿ ಕೆಜಿ ಸ್ಕೂಲೆಂಬ ವ್ಯಾಪಾರವೂ… : ತಾಯಿಯೆಂಬ ಗುರುವೂ…

ಪ್ರಿ.ಕೆಜಿ ಸ್ಕೂಲ್‌ಗಳ ಉದ್ದೇಶ ತಮ್ಮ ಖಜಾನೆ ತುಂಬಿಸುವುದಷ್ಟೇ ಹೊರತು ನಮ್ಮ ಮಕ್ಕಳನ್ನು ಉದ್ಧಾರ ಮಾಡಲಂತೂ ಅಲ್ಲ.

- Advertisement -
- Advertisement -

ಎಪ್ರಿಲ್ ತಿಂಗಳು ಬಂತೆಂದರೆ ಸಾಕು, ಮಕ್ಕಳ ಶಾಲಾ ದಾಖಲಾತಿಯ ಗದ್ದಲ ಪ್ರಾರಂಭವಾಗುತ್ತದೆ. ಒಂದೆಡೆ ಹೆತ್ತವರಿಗೆ ಖುಷಿ, ಜೊತೆಗೆ ಯಾವ ಶಾಲೆಗೆ ಸೇರಿಸಬೇಕೆನ್ನುವ ಗೊಂದಲ. ಇನ್ನೊಂದೆಡೆ ಶಾಲಾ ಶುಲ್ಕದ ತಲೆಬಿಸಿ ಇವೆಲ್ಲವೂ ಇತ್ತೀಚೆಗೆ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಇದರಿಂದ ನಾನೂ ಕೂಡಾ ಹೊರತಾಗಿಲ್ಲ. ನನ್ನಮ್ಮನಿಗೆ ಇದರ ಚಿಂತೆಯಿರಲಿಲ್ಲ. ನನ್ನ ಪುಟ್ಟ ಹಳ್ಳಿಯಲ್ಲಿ ಸರಕಾರಿ ಶಾಲೆ ಬಿಟ್ಟರೆ ಬೇರೆ ಆಯ್ಕೆಯೇ ಇರಲಿಲ್ಲ. ಈಗ ಹಾಗಲ್ಲ, ಹೆಜ್ಜೆಗೊಂದರಂತೆ ಪ್ರಿ-ಕೆಜಿ ಶಾಲೆಗಳು ತಮ್ಮ ಬೇಟೆಗಾಗಿ ಹೊಂಚು ಹಾಕಿ ಕಾಯುತ್ತಿರುತ್ತವೆ. ಒಂದೆರಡು ಹಲ್ಲುಗಳು ಇಣುಕಿದರೆ ಸಾಕು, ಈ ಸ್ಕೂಲ್‌ಗಳು ಅಮ್ಮನ ಮಡಿಲಿನಿಂದ ಮಕ್ಕಳನ್ನು ತಮ್ಮ ತೆಕ್ಕೆಗೆ ಎಳೆದುಕೊಳ್ಳುತ್ತವೆ.

ಹಿಂದೆಲ್ಲಾ ಮಕ್ಕಳಿಗೆ ಐದು ವರ್ಷವಾಗುತ್ತಲೇ ಅಂಗನವಾಡಿಗೆ ಸೇರಿಸಿ, ಆರು ವರ್ಷ ತುಂಬಿದಾಗ ಶಾಲೆಗೆ ದಾಖಲಿಸುವ ಪರಿಪಾಠವಿತ್ತು. ಅಲ್ಲಿಯವರೆಗೆ ಅಮ್ಮನ ಸೆರಗು ಹಿಡಿದು ನೇತಾಡುತ್ತಲೇ ಕಾಲಕಳೆಯುತ್ತಿದ್ದರು. ಅಂಗನವಾಡಿಗೂ ಹೋಗುತ್ತಿದ್ದುದು ಆಗೊಮ್ಮೆ ಈಗೊಮ್ಮೆ. ಮನೆಗೆಲಸಕ್ಕಾಗಿ ಯಂತ್ರಗಳಿಲ್ಲದ ಕಾಲದಲ್ಲಿ ಅಮ್ಮಂದಿರು ಸ್ವಯಂ ಯಂತ್ರಗಳಾಗಿ ದುಡಿಯುತ್ತಿದ್ದರು. ಬಿಡುವಿಲ್ಲದ ದಿನಚರಿಯ ನಡುವೆಯೂ, ವಯಸ್ಸಿಗೆ ಒಂದು ವರ್ಷದ ಅಂತರವಿರುತ್ತಿದ್ದ ಐದಾರು ಮಕ್ಕಳಿಗೂ ತಮ್ಮ ಸಮಯವನ್ನು ಮೀಸಲಾಗಿಡುತ್ತಿದ್ದರು. ಮಕ್ಕಳ ಜೊತೆ ಮುಕ್ತವಾಗಿ ಮಾತನಾಡುತ್ತಾ, ಕಥೆ ಹೇಳುತ್ತಾ, ಜೊತೆ ಸೇರಿ ಆಟವಾಡುತ್ತಾ ಮುಗ್ಧ ಮನಸ್ಸುಗಳ ನಡುವಿನ ಕೊಂಡಿಯನ್ನು ಭದ್ರಗೊಳಿಸುತ್ತಿದ್ದರು. ಎಷ್ಟು ಕಿರಿಕಿರಿಯುಂಟಾದರೂ ಒಂದು ಹಂತದವರೆಗೆ ಅವರನ್ನು ದೂರವಿರಿಸುವ ಪ್ರಯತ್ನ ಮಾಡುತ್ತಿರಲಿಲ್ಲ.

ಮಕ್ಕಳಿಗೆ ನೀಡಬೇಕಾದ ಸಮಯವು ಅವರ ಹಕ್ಕಾಗಿರುತ್ತದೆ. ಈಗ ನಮ್ಮಲ್ಲಿ ಧಾರಾಳ ಸಮಯವಿದೆ. ಆದರೆ ಒಂದಿಷ್ಟು ಹೊತ್ತು ಮಕ್ಕಳ ಜೊತೆ ಕಳೆಯಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ. ಒಂದಿಬ್ಬರು ಮಕ್ಕಳು ಇರುವುದಾದರೂ ಸಂಭಾಳಿಸುವುದು ಬಹಳ ಕಷ್ಟ ಎನ್ನುವುದು ಬಹುತೇಕ ತಾಯಂದಿರು ಆಗಾಗ ಹೇಳುತ್ತಿರುವ ಮಾತು. ಇದಕ್ಕೆ ಪರಿಹಾರವನ್ನು ಪ್ರಿ-ಕೆಜಿ ಸ್ಕೂಲ್‌ಗಳು ನೀಡಿವೆ. ಅದರಂತೆ ತಮ್ಮ ಪುಟಾಣಿ ಮಕ್ಕಳನ್ನು ಪ್ರಿ-ಕೆಜಿ ಸ್ಕೂಲ್‌ಗಳ ಬಾಗಿಲಿಗೆ ನೂಕಿ ಬಿಡುತ್ತಾರೆ. ಒಂದಿಷ್ಟು ಹೊತ್ತು ಮಕ್ಕಳೊಡನೆ ಬೆರೆತು ನೋಡಿ, ಅವರ ಸೃಜನಶೀಲ ಮನಸ್ಸು ನಮ್ಮಲ್ಲಿ ಅಚ್ಚರಿಯುಂಟುಮಾಡುತ್ತದೆ. ತುಂಟಾಟಗಳು ದಿನದ ಜಂಜಾಟಗಳಿಗೆ ನಿರಾಳತೆಯನ್ನು ಒದಗಿಸುತ್ತದೆ. ಹಠ, ಕೀಟಲೆ, ಚೇಷ್ಟೆ ಇವೆಲ್ಲಾ ಮಕ್ಕಳಲ್ಲಿರುವ ಸಹಜ ಗುಣಗಳು. ಅವುಗಳ ಅಭಿವ್ಯಕ್ತಿ ಕೂಡಾ ಅವರ ಹಕ್ಕಾಗಿರುತ್ತದೆ. ಅದಕ್ಕಾಗಿ ಪುಟ್ಟ ಮಕ್ಕಳನ್ನು ಅಮ್ಮನ ಮಡಿಲಿಂದ ದೂರವಿಡುವುದು ಎಷ್ಟು ಸರಿ?

ಬಾಲ್ಯವೆಂಬುದು ಮಕ್ಕಳ ಹಕ್ಕು. ಅದನ್ನವರು ಸಹಜವಾಗಿಯೇ ಆಸ್ವಾಧಿಸಬೇಕು. ಅದನ್ನು ಕಸಿಯುವ ಹಕ್ಕು ಹೆತ್ತವರಿಗೂ ಇಲ್ಲ. ಒಂದು ವರ್ಷ ಬಳಪ ಬಳಸದೆ ಆಡುತ್ತಾ, ನಲಿಯುತ್ತಾ ಕಲಿಯುವುದು, ಪರ್ಯಾವರಣ ನಡಿಗೆ (ನೇಚರ್ ವಾಕ್), ಇಂಗ್ಲಿಷ್ ಕಲಿಕೆ ಇತ್ಯಾದಿ ಬಣ್ಣ ಬಣ್ಣಗಳ ಆಮಿಷಗಳ ಮೂಲಕ ಮೂವತ್ತು ಸಾವಿರದಿಂದ ಎಪ್ಪತ್ತು ಸಾವಿರದವರೆಗೂ ಈ ಪ್ರಿ ಕೆ.ಜಿ.ಸ್ಕೂಲ್‌ಗಳು ಶುಲ್ಕ ಪೀಕಿಸುತ್ತವೆ. ಶ್ರೀಮಂತರಷ್ಟೇ ಅಲ್ಲ, ಮಧ್ಯಮ ವರ್ಗದ ಹೆತ್ತವರೂ ಅವರ ಆಮಿಷಕ್ಕೆ ಬಲಿ ಬೀಳುತ್ತಾರೆ. ಹೇಗಾದರೂ ಸಾಲ, ಸೋಲ ಮಾಡಿ ಹಣ ಹೊಂದಿಸಿ ಅಲ್ಲಿಗೆ ದಾಖಲಿಸುತ್ತಾರೆ. ಉಳ್ಳವರಿಗೆ ಇದು ಪ್ರತಿಷ್ಟೆಯಾದರೆ ಮಧ್ಯಮ ವರ್ಗದವರಿಗೆ ಪ್ರಿ ಕೆ.ಜಿ.ಸ್ಕೂಲ್‌ಗಳಿಗೆ ಕಳಿಸದಿದ್ದರೆ ಎಲ್ಲಿ ತಮ್ಮ ಮಕ್ಕಳು ಹಿಂದುಳಿದು ಬಿಡುತ್ತಾರೋ ಎಂಬ ಆತಂಕ. ಒಂದರ್ಥದಲ್ಲಿ ಇವೆಲ್ಲವೂ ಎದೆಹಾಲಿಗೆ ಇಂಗ್ಲಿಷ್ ಬೆರೆಸುವ ವ್ಯಾಮೋಹ. ಇಂಗ್ಲಿಷ್ ಕಲಿಯುವುದು ತಪ್ಪಲ್ಲ. ಆದರೆ ಅತಿಯಾದ ಇಂಗ್ಲಿಷಿನ ವ್ಯಾಮೋಹದಿಂದಾಗಿ ಮಾತೃಭಾಷೆಯೇ ಸರಿಯಾಗಿ ಮಾತನಾಡಲು ಬಾರದ ಎಷ್ಟೋ ಮಕ್ಕಳಿದ್ದಾರೆ. ಸಂವಹನದ ತೊಡಕಿನಿಂದಾಗಿ ಮನೆಯಲ್ಲಿ ಹಿರಿಯರೊಂದಿಗೆ ವ್ಯವಹರಿಸಲು ಬಾರದೇ ಸಂಬಂಧಗಳು ಶಿಥಿಲಗೊಳ್ಳುತ್ತವೆ.

ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂಬ ಮಾತಿನಂತೆ ಲಕ್ಷ ಸುರಿದರೂ ತಾಯಿಗಿಂತ ಮಿಗಿಲಾದ ಗುರುವನ್ನು ಈ ಪ್ರಿ ಕೆ.ಜಿ. ಶಾಲೆಗಳು ಒದಗಿಸಲು ಸಾಧ್ಯವೇ..? ಮನೆಯ ಹೊರಗಡೆ ಆಡಲು ಬಿಟ್ಟಾಗ ಬೀಳುತ್ತಾ, ಏಳುತ್ತಾ ಆಡುವಾಗ ಕಣ್ಣಿಗೆ ಕಾಣಿಸುವ ಆಕಾಶ, ಪ್ರಾಣಿ ಪಕ್ಷಿಗಳು, ಬಣ್ಣ ಬಣ್ಣದ ಚಿಟ್ಟೆಗಳು, ಮರಗಿಡಗಳು, ಗಾಳಿ – ಬೆಳಕು, ಮೋಡ ಇವುಗಳಿಗೆಲ್ಲಾ ನೇಚರ್ ವಾಕ್ ಎಂಬ ಹೆಸರನ್ನಿಟ್ಟು ಮಾಡುವ ವ್ಯಾಪಾರಕ್ಕೆ ದುಡ್ಡು ಸುರಿಯಬೇಕೇ..? ಪ್ರಕೃತಿಯ ಬಗ್ಗೆ ಮಕ್ಕಳಿಗೆ ವಿಶೇಷ ಕುತೂಹಲವಿರುತ್ತದೆ. ಅವರದೇ ಆದ ಆಲೋಚನೆಗಳು, ಕಲ್ಪನೆಗಳು ಇರುತ್ತವೆ. ಇದನ್ನು ಪ್ರಿ.ಕೆ.ಜಿ.ಸ್ಕೂಲ್‌ಗಳು ಇಲ್ಲವಾಗಿಸುತ್ತವೆ. ತಾಯಿಯ ಸೆರಗು ಹಿಡಿದು ಬಾಲದಂತೆ ಹಿಂಬಾಲಿಸುವಾಗ ಕಲಿಯುವ ವಸ್ತುಗಳ ಹೆಸರು, ಹಣ್ಣು-ತರಕಾರಿಗಳ ಹೆಸರು, ಬಣ್ಣಗಳು ಇತ್ಯಾದಿಗಳನ್ನೆಲ್ಲಾ ಅರಿತುಕೊಳ್ಳಲು ಪ್ರಿ ಕೆ.ಜಿ.ಸ್ಕೂಲ್‌ಗಳು ಬೇಕೇ..?

ಮಕ್ಕಳ ಮನಸ್ಸೆಂಬುದು ಬಹಳ ಸೂಕ್ಷ್ಮ. ಈ ವಿಚಾರವನ್ನು ಅಮ್ಮಂದಿರು ನೆನಪಿಟ್ಟುಕೊಳ್ಳಲೇಬೇಕು. ನಾವು ಹೇಳಿದಂತೆಲ್ಲಾ ಅವರು ಕೇಳದಿರಬಹುದು. ಆದರೆ ನಮ್ಮ ಪ್ರತಿಯೊಂದು ಹೆಜ್ಜೆಯನ್ನೂ ನಮಗರಿವಿಲ್ಲದೇ ಅನುಸರಿಸುತ್ತಾರೆ. ಅವರ ಕಲಿಕೆ ಪ್ರಾರಂಭವಾಗುವುದೇ ಇಲ್ಲಿಂದ. ಇದು ಅವರ ಸರ್ವತೋಮುಖ ಬೆಳವಣಿಗೆಗೆ ಗಟ್ಟಿ ಅಡಿಪಾಯ ಹಾಕುತ್ತದೆ. ಹಾಗಿರುವಾಗ ನಾವಿಡುವ ಪ್ರತೀ ಹೆಜ್ಜೆಯೂ ಜಾಗರೂಕತೆಯಿಂದ ಕೂಡಿರಬೇಕು. ಇಂತಹ ಸಂದರ್ಭದಲ್ಲಿ ಮಕ್ಕಳನ್ನು ದೂರ ಮಾಡಿದರೆ ಅವರು ಇದೆಲ್ಲದರಿಂದಲೂ ವಂಚಿತರಾಗುತ್ತಾರೆ. ಮಕ್ಕಳ ಸ್ವಭಾವವೇ ಹಾಗೆ. ಪ್ರತಿಯೊಂದನ್ನು ತಾಯಿಯಲ್ಲಿ ಪ್ರಶ್ನಿಸುತ್ತಲೇ ಇರುತ್ತಾರೆ. ಒಂದಕ್ಕೆ ಉತ್ತರಿಸಿದರೆ ಇನ್ನೊಂದು, ಅದಕ್ಕೆ ಉತ್ತರಿಸಿದರೆ ಮತ್ತೊಂದು, ಮಗದೊಂದು ಪ್ರಶ್ನೆಗಳು. ಉತ್ತರಿಸಿ ಸಾಕು ಸಾಕಾಗುವಷ್ಟು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸುತ್ತಿರುತ್ತಾರೆ. ಒಂದು ವೇಳೆ ಅತೀ ಚಿಕ್ಕ ವಯಸ್ಸಿನಲ್ಲಿ ಇಂತಹ ಪ್ರಿ ಕೆ.ಜಿ.ಸ್ಕೂಲ್‌ಗಳಿಗೆ ಕಳಿಸಿದರೆ ಅವರ ಆ ಪ್ರಶ್ನಿಸುವ ಸ್ವಭಾವವೇ ಕುಂಠಿತಗೊಂಡು ಕ್ರಮೇಣ ನಿಂತು ಹೋಗುತ್ತದೆ, ಶಿಸ್ತಿನ ಹೆಸರಲ್ಲಿ ಮಾಯವಾಗುತ್ತದೆ. ಅಲ್ಲಿರುವ ಅಷ್ಟೂ ಮಕ್ಕಳು ಪ್ರಶ್ನೆಗಳನ್ನು ಕೇಳುತ್ತಾ, ಮಾತನಾಡುತ್ತಾ ಇದ್ದರೆ ಶಿಕ್ಷಕಿಯಾದರೂ ಏನು ಮಾಡಲಾದೀತು..?

ತಾಯಿಯೊಬ್ಬಳು ತನ್ನ ಮಗುವಿನ ಮನಸ್ಸನ್ನು ಅರ್ಥೈಸಿದಂತೆ ಬೇರೆ ಯಾರೇ ಆದರೂ ಅರ್ಥೈಸಲು ಸಾಧ್ಯವೇ..? ಎಳವೆಯಲ್ಲಿ ಕಲಿತದ್ದು ಬಂಡೆಯ ಮೇಲೆ ಕೆತ್ತಿದಂತೆ. ದೊಡ್ಡವರಾದ ಮೇಲೆ ಕಲಿತದ್ದು ನೀರಿನ ಮೇಲೆ ಬರೆದಂತೆ. ಹಾಗೆಂದು ಮಕ್ಕಳ ಇತಿಮಿತಿಗಳನ್ನು ಕಡೆಗಣಿಸಿ ಪುಟ್ಟ ಮೆದುಳಿಗೆ ಸಿಕ್ಕಿದ್ದೆಲ್ಲವನ್ನೂ ತುಂಬಲು ಹೋದರೆ ಅದು ಅವರ ಮನಸ್ಸಿನ ಬೆಳವಣಿಗೆಯ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ ಎಂಬುವುದನ್ನು ಮರೆಯಬಾರದು.

ಹಿಂದೊಮ್ಮೆ ನನ್ನ ಮಾತೃಭಾಷೆ ಬ್ಯಾರಿಯಲ್ಲಿ ಪ್ರಿ ಕೆಜಿ ಸ್ಕೂಲ್‌ಗಳ ಬಗ್ಗೆ ಲೇಖನ ಬರೆದಾಗ ಹಲವು ಅಮ್ಮಂದಿರು ನನ್ನ ಮೇಲೆ ಕಿಡಿಕಾರಿದರು ಹಾಗೂ ಪ್ರಿ ಕೆಜಿ ಸ್ಕೂಲ್ ಪದ್ಧತಿಯನ್ನು ಸಮರ್ಥಿಸಿಕೊಂಡಿದ್ದರು. ಹಲವು ಪ್ರಿ.ಕೆ.ಜಿ.ಸ್ಕೂಲ್‌ಗಳ ಆಡಳಿತ ಮಂಡಳಿಗೂ ತಲುಪಿಸಿದ್ದರು. ನಾನು ಈಗಲೂ ನನ್ನ ಅದೇ ಪ್ರತಿಪಾದನೆಗೆ ಬದ್ಧಳಾಗಿದ್ದೇನೆ. ಪ್ರಿ.ಕೆಜಿ ಸ್ಕೂಲ್‌ಗಳ ಉದ್ದೇಶ ತಮ್ಮ ಖಜಾನೆ ತುಂಬಿಸುವುದಷ್ಟೇ ಹೊರತು ನಮ್ಮ ಮಕ್ಕಳನ್ನು ಉದ್ಧಾರ ಮಾಡಲಂತೂ ಅಲ್ಲ.


ಇದನ್ನೂ ಓದಿ: ಈ ಹೊತ್ತಿನಲ್ಲಿ ʼಹಳ್ಳಿ ಮಕ್ಕಳʼ ಕುರಿತು: ಒಂದು ರಚನಾತ್ಮಕ ಆಲೋಚನೆ – ಕೆ.ಪಿ.ಸುರೇಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...