Homeಮುಖಪುಟಈರುಳ್ಳಿ ಬೆಲೆ ನಿಯಂತ್ರಿಸಲು ಸರ್ಕಾರ ಮಾಡಬೇಕಾದುದೇನು? ಆದರೆ ಮಾಡುತ್ತಿರುವುದೇನು?

ಈರುಳ್ಳಿ ಬೆಲೆ ನಿಯಂತ್ರಿಸಲು ಸರ್ಕಾರ ಮಾಡಬೇಕಾದುದೇನು? ಆದರೆ ಮಾಡುತ್ತಿರುವುದೇನು?

- Advertisement -
- Advertisement -
  • ಅಶೋಕ್ ಗುಲಾತಿ, ಹರ್ಷವರ್ಧನ್
  • ಅನುವಾದ: ಟಿ.ಎಸ್‌ ವೇಣುಗೋಪಾಲ್‌

ಈರುಳ್ಳಿ ಬೆಲೆ ಏರುವುದನ್ನು ತಪ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದು ಒಂದು ದೊಡ್ಡ ದುಸ್ವಪ್ನವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಹಿಂದೆ ಯುಪಿಎ ಸರ್ಕಾರವನ್ನು ಇದೇ ಕಾರಣಕ್ಕಾಗಿ ಟೀಕಿಸಿದ್ದ ಒಂದು ವಿಡಿಯೋ ಇತ್ತೀಚೆಗೆ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಪ್ರಧಾನ ಮಂತ್ರಿಯವರು “ಈಗ ನಾವು ಈರುಳ್ಳಿಗಾಗಿಯೂ ಒಂದು ಲಾಕರ್ ತೆರೆಯಬೇಕು. ಅದರಲ್ಲಿ ಈರುಳ್ಳಿಯನ್ನು ಬೀಗ ಹಾಕಿ ಕಾಪಾಡಿಕೊಳ್ಳಬೇಕು . . . ಅತಿಥಿಗಳು ಬಂದಾಗ ಬರೀ ಅದರ ವಾಸನೆಯನ್ನು ಬಡಿಸಬೇಕು . .. ಈ ಯುಪಿಎ ಸರ್ಕಾರಕ್ಕೆ ಈರುಳ್ಳಿಯಿಲ್ಲದೆಯೇ ಕಣ್ಣೀರು ಬರಿಸುವ ಸಾಮರ್ಥ್ಯವಿದೆ. ಅವರು ಮಾಡಿರುವ ಪಾಪಗಳನ್ನು ನೋಡಿ. ಜೋಳ/ಗೋದಿ/ಬಾಜ್ರ ಇವುಗಳನ್ನು ಈರುಳ್ಳಿಯೊಂದಿಗೆ ತಿಂದು ಬದುಕುತ್ತಿದ್ದ ಭಾರತದ ಬಡವರಿಂದ ಈರುಳ್ಳಿಯನ್ನು ಕಸಿದುಕೊಂಡಿದೆ. ಅವರ ಅಧಿಕಾರವನ್ನು ಇಡೀ ಭಾರತದಿಂದ ನಿರ್ಮೂಲನ ಮಾಡಬೇಕಾಗಿದೆ.” ಈಗ ಅವರೇ ಅಧಿಕಾರದಲ್ಲಿದ್ದಾಗ ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಪ್ರಧಾನಿಯವರು ಮೌನವಾಗಿದ್ದಾರೆ.

ಇದರರ್ಥ ಇಷ್ಟೆ. ಬೇರೆಯವರನ್ನು ಟೀಕಿಸುವುದು ಸುಲಭ. ನೀತಿಗಳನ್ನು ರೂಪಿಸುವುದು ಕಷ್ಟದ ಕೆಲಸ. ಅದಕ್ಕೆ ವಿನಯ ಬೇಕು. ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬೇಕು. ಬೇಕಾದ ಸಂಪನ್ಮೂಲವನ್ನು ಕ್ರೋಡಿಕರಿಸಿಕೊಳ್ಳಬೇಕು. ಅನಂತರ ಅದಕ್ಕೆ ತಕ್ಕ ನೀತಿಯನ್ನು ಜಾರಿಗೊಳಿಸಬೇಕು. ಅದು ಬಾಳುವಂತಿರಬೇಕು.
ಅಂತಹ ನೀತಿ ರೂಪಿಸುವುದಕ್ಕೆ ಸಾಧ್ಯವಿದೆ. ಈರುಳ್ಳಿಗೆ ಸಂಬಂಧಿಸಿದ ಹಾಗೆ ಮತ್ತೆ ಇಂತಹ ಅನಾಹುತ ಆಗದ ಹಾಗೆ ಹೇಗೆ ನೋಡಿಕೊಳ್ಳಬಹುದು ಎಂಬುದನ್ನು ಚರ್ಚಿಸೋಣ.

ಈಗಿನ ಈರುಳ್ಳಿ ಬೆಲೆಯ ಏರಿಕೆಯನ್ನು ಊಹಿಸಬಹುದಿತ್ತು. ಕಳೆದ ಕೆಲವು ತಿಂಗಳುಗಳಲ್ಲಿ ಈರುಳ್ಳಿ ಬೆಲೆ ಹಿಡಿದ ದಾರಿಯನ್ನು ಗಮನಿಸೋಣ. ಸೆಪ್ಟೆಂಬರ್- ಅಕ್ಟೋಬರಿನಲ್ಲಿ ಈರುಳ್ಳಿ ಬೆಲೆ ಕೆಜಿಗೆ 50-60ರೂಪಾಯಿ ಆಯಿತು. ಸರ್ಕಾರ ಕನಿಷ್ಠ ರಫ್ತು ಬೆಲೆಯನ್ನು ವಿಧಿಸಿತು (ಎಂಇಪಿ), ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳ ಸಂಗ್ರಹದ ಮೇಲೆ ಮಿತಿಯನ್ನು ಹಾಕಿತು. ಅನಂತರ ಈರುಳ್ಳಿ ರಫ್ತನ್ನು ನಿಷೇದಿಸಿತು. ಆದರೆ ಈ ಕ್ರಮಗಳಿಂದ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಆಗ ವ್ಯಾಪಾರಿಗಳ ಮೇಲೆ ವರಮಾನ ತೆರಿಗೆ ದಾಳಿಯನ್ನು ಕೂಡ ನಡೆಸಲಾಯಿತು. ನೀತಿಯನ್ನು ರೂಪಿಸುವಲ್ಲಿನ ದಿವಾಳಿತನವನ್ನು ಇದು ತೋರಿಸುತ್ತದೆ.

ಇಂತಹ ಪರಿಸ್ಥಿತಿ ವರ್ಷ ಬಿಟ್ಟು ವರ್ಷ ನಡೆಯುತ್ತಲೇ ಇದೆ. ಆದರೆ ನಾವು ಇದರಿಂದ ಕಲಿಯಲು ತಯಾರಿಲ್ಲ. ದಿವಂಗತ ಅರುಣ್ ಜೇಟ್ಲಿ “ಆಪರೇಷನ್ ಗ್ರೀನ್”ಗಾಗಿ 500 ಕೋಟಿ ರೂಪಾಯಿಗಳನ್ನು 2018ರ ಬಜೆಟ್ಟಿನಲ್ಲಿ ಘೋಷಿಸಿದರು. ಟೊಮೆಟೊ, ಈರುಳ್ಳಿ ಹಾಗೂ ಆಲೂಗೆಡ್ಡೆಯ ಬೆಲೆಗಳನ್ನು ಸ್ಥಿರಗೊಳಿಸುವ ಉದ್ದೇಶಕ್ಕಾಗಿ ಇದನ್ನು ಮಾಡಲಾಗಿತ್ತು. ಆಹಾರ ಸಂಸ್ಕರಣಾ ಮಂತ್ರಾಲಯ ಇದನ್ನು ಜಾರಿಗೊಳಿಸಬೇಕಾಗಿತ್ತು. ಆದರೆ ಈ ಹಣ ಇಲ್ಲಿಯವರಗೆ ಬಿಡುಗಡೆಯಾಗಿಲ್ಲ. ಮಂತ್ರಾಲಯದ ವೆಬ್ ಸೈಟ್ ನೋಡಿದರೆ ಇದು ಸ್ಪಷ್ಟವಾಗುತ್ತದೆ.
ಈಗಿನ ಈರುಳ್ಳಿ ಬೆಲೆ ಏರಿಕೆಯನ್ನು ಊಹಿಸಬಹುದಿತ್ತು. ತೋಟಗಾರಿಕಾ ಇಲಾಖೆಯು ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಈರುಳ್ಳಿಯನ್ನು ಪ್ರಧಾನವಾಗಿ ಬೆಳೆಯುವ ರಾಜ್ಯಗಳಲ್ಲಿ (ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಆಂಧ್ರಪ್ರದೇಶ, ಗುಜರಾತ್ ಮತ್ತು ರಾಜಾಸ್ಥಾನ) ಈ ವರ್ಷ ಖಾರೀಫ್ ಇಳುವರಿ ಶೇಕಡ 7ರಷ್ಟು ಕಡಿಮೆಯಾಗುತ್ತದೆ ಎಂದು ಅಂದಾಜು ಮಾಡಿತ್ತು. ಸೆಪ್ಟೆಂಬರ್/ಅಕ್ಟೋಬರಿನಲ್ಲಿ ಬಂದ ತೀವ್ರ ಮಳೆಯಿಂದಾಗಿ ಮಧ್ಯಪ್ರದೇಶದಲ್ಲಿ ಶೇಕಡ 58ರಷ್ಟು, ಕರ್ನಾಟಕದಲ್ಲಿ ಶೇಕಡ 18ರಷ್ಟು, ಆಂಧ್ರದಲ್ಲಿ ಶೇಕಡ 2ರಷ್ಟು ಬೆಳೆಗಳು ನಾಶವಾದವು. ನಿರಂತರ ಮಳೆಯಿಂದಾಗಿ ಮಹಾರಾಷ್ಟ್ರದಲ್ಲಿ ಈರುಳ್ಳಿ ಕುಯಿಲು ನಿಧಾನವಾಯಿತು. ಸರ್ಕಾರ ನಿಧಾನವಾಗಿ ಎಚ್ಚರಗೊಂಡಿತು. ಎಂಎಂಟಿಸಿಗೆ ಒಂದು ಲಕ್ಷ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ನಿರ್ದೇಶಿಸಿತು. ಆಫ್ಗಾನಿಸ್ತಾನ, ಟರ್ಕಿ, ಮತ್ತು ಈಜಿಪ್ಟಿನಿಂದ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲಾಯಿತು. ಈರುಳ್ಳಿಯನ್ನು ಯಾವ ಬೆಲೆಯಲ್ಲಿ ಆಮದು ಮಾಡಿಕೊಂಡು ಭಾರತದ ಮಾರುಕಟ್ಟೆಯಲ್ಲಿ ಸುರಿಯಲಾಯಿತು ಎಂಬ ಪ್ರಶ್ನೆ ಹಾಗೆ ಉಳಿಯುತ್ತದೆ.

ಇಂಡಿಯಾ ಜಗತ್ತಿನಲ್ಲೇ ಈರುಳ್ಳಿ ರಫ್ತು ಮಾಡುವ ದೊಡ್ಡ ದೇಶ. ಭಾರತ ಪ್ರತಿವರ್ಷ ಎರಡು ಮಿಲಿಯನ್ ಮೆಟ್ರಿಕ್ ಟನ್ ರಫ್ತು ಮಾಡುತ್ತದೆ (ಚಿತ್ರ 2). ರಫ್ತನ್ನು ನಿಷೇಧಿಸುವ ಬದಲು ಆಮದಿಗೆ ಅವಕಾಶವನ್ನು ಮುಕ್ತವಾಗಿ ಇಟ್ಟುಕೊಂಡರೆ, ದೇಶದಲ್ಲಿ ಈರುಳ್ಳೆ ಬೆಲೆ ಸಿಕ್ಕಾಪಟ್ಟೆ ಏರಿದ ಸಂದರ್ಭದಲ್ಲಿ, ಖಾಸಗಿ ವ್ಯಾಪಾರಿಗಳು ಬೇಕಾದಾಗ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ಪ್ರಾರಂಭಿಸಬಹುದು. ಸರ್ಕಾರದ ನಿಧಾನದ ತೀರ್ಮಾನಕ್ಕೆ ಕಾಯಬೇಕಾಗಿಲ್ಲ. ಹೀಗೆ ಮಾಡುವುದರಿಂದ ಭಾರತ ರಫ್ತುದಾರನಾಗಿ ನಂಬಿಕೆ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಅದರಿಂದ ರೈತರಿಗೆ ನಿರಂತರವಾಗಿ ಒಳ್ಳೆಯ ಬೆಲೆ ಸಿಗುತ್ತದೆ. ದಿಢೀರನೆ ರಫ್ತನ್ನು ನಿಷೇದಿಸುವುದು ರೈತ ವಿರೋಧಿ ಮಾತ್ರವಲ್ಲ ಅದು ನಿಜವಾಗಿ ಸರ್ಕಾರದ ನೀತಿಯ ವೈಫಲ್ಯವನ್ನು ತೋರಿಸುತ್ತದೆ. ಗ್ರಾಹಕರ ಆಸಕ್ತಿಯನ್ನು ಈಡೇರಿಸುವ ದೃಷ್ಟಿಯಿಂದ ಭಾರತ “ಆಪರೇಷನ್ ಗ್ರೀನ್” ಯೋಜನೆಗೆ ಸಂಬಂಧಿಸಿದಂತೆ ಸೂಕ್ತ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕು.

ಹಾಗಾದರೆ ರೈತರ ಹಾಗೂ ಗ್ರಾಹಕರ ಆಸಕ್ತಿಯನ್ನು ಕಾಪಾಡುವುದಕ್ಕೆ ಏನು ಮಾಡಬೇಕು?
ಮೊದಲಿಗೆ ರಾಬಿ ಈರುಳ್ಳಿಯನ್ನು ಸಂಗ್ರಹಿಸಿಡುವುದಕ್ಕೆ ಬೃಹತ್ ಪ್ರಮಾಣದಲ್ಲಿ ಸೌಲಭ್ಯ ಕಲ್ಪಿಸಬೇಕು. ರೈತರು ಮತ್ತು ವ್ಯಾಪಾರಿಗಳ ಮಟ್ಟದಲ್ಲಿ ಇದು ನಡೆಯಬೇಕು. ಏಪ್ರಿಲ್ -ಮೇ ತಿಂಗಳಿನಲ್ಲಿ ಈರುಳ್ಳಿ ಬೆಲೆ ಕೆಜಿಗೆ 4-5 ರೂಪಾಯಿ ಇದ್ದಾಗ ಈರುಳ್ಳಿಯನ್ನು ಉದಾಹರಣೆಗೆ ಕೆಜಿಗೆ 10ರೂಪಾಯಿನಂತೆ ಕೊಂಡುಕೊಳ್ಳಬೇಕು. ಆಧುನಿಕ ಖಾಸಗೀ ಕ್ಷೇತ್ರದ ಗೋದಾಮುಗಳಲ್ಲಿ ಶೇಖರಿಸಿಡಬೇಕು. ಪದೇ ಪದೇ ಸಂಗ್ರಹಣೆಯ ಮಿತಿಯನ್ನು ಹೇರುವುದು ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸುವುದು ಇವೆಲ್ಲಾ ಆಧುನಿಕ ಶೀತಸಂಗ್ರಹದಲ್ಲಿ ಖಾಸಗಿಯವರಿಗೆ ಹಣ ಹೂಡುವ ಉತ್ಸಾಹವನ್ನು ಕುಂದಿಸುತ್ತದೆ. ಖಾಸಗಿ ಸಂಗ್ರಹವನ್ನು ಉತ್ತೇಜಿಸಬೇಕು. ಅದಕ್ಕಾಗಿ ಅವಶ್ಯಕ ಸರಕು ಕಾಯ್ದೆ ಹೋಗಬೇಕು. ವ್ಯಾಪಾರಿಗಳು ಒಂದಾಗಿ ಬೆಲೆನಿಯಂತ್ರಿಸುವುದನ್ನು ತಪ್ಪಿಸುವುದಕ್ಕೆ ಭಾರತೀಯ ಸ್ಪರ್ಧಾ ಸಮಿತಿ (ಕಾಂಪಿಟೇಷನ್ ಕಮೀಷನ್ ಆಪ್ ಇಂಡಿಯಾ) ಕಾರ್ಯೋನ್ಮುಖವಾಗಬೇಕು. ಆದಾಯ ತೆರಿಗೆ ಸಿಬ್ಬಂದಿಗಳು ಇದರಲ್ಲಿ ಕೈಹಾಕಬಾರದು.

ಎರಡನೆಯದಾಗಿ ಸರ್ಕಾರ ಒಣಗಿಸಿದ ಈರುಳ್ಳಿ (ಪುಡಿ, ಚೂರು ಇತ್ಯಾದಿ ರೂಪದಲ್ಲಿ) ಬಳಸುವುದಕ್ಕೆ ನಗರಗಳಲ್ಲಿ ಹಾಗೂ ದೊಡ್ಡ ಪ್ರಮಾಣದ ಬಳಕೆದಾರರನ್ನು (ಮಿಲಿಟರಿ, ಆಸ್ಪತ್ರೆ, ಹೋಟಿಲ್ ಇತ್ಯಾದಿಗಳಲ್ಲಿ) ಉತ್ತೇಜಿಸಬೇಕು. ಈರುಳ್ಳಿ ಸೂಕ್ಷ್ಮ ಸರಕಾದ್ದರಿಂದ ಸರ್ಕರ ಕೂಡ ಒಣಗಿದ ಈರುಳ್ಳಿಯನ್ನು ಬೃಹತ್ ಪ್ರಮಾಣದಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕು. ಅದನ್ನು ಹೆಚ್ಚು ಕಾಲ ಇಟ್ಟುಕೊಳ್ಳಬಹುದು. ಗುಜರಾತಿನ ಮಹುವಾ ಈಗಾಗಲೇ ಒಣಗಿಸಿದ ಈರುಳ್ಳಿಯ ದೊಡ್ಡ ಕೇಂದ್ರವಾಗಿದೆ. ನೂರಕ್ಕಿಂತ ಹೆಚ್ಚು ಘಟಕಗಳು ಅಲ್ಲಿ ಕೆಲಸಮಾಡುತ್ತಿವೆ. ಆದರೆ ಅದಕ್ಕೆ ಆಂತರರಾಷ್ಟ್ರೀಯ ಮಾರುಕಟ್ಟೆಯ ಕೊರತೆಯಿದೆ. ಸ್ಥಳೀಯವಾಗಿಯೂ ಬೇಡಿಕೆ ಇಲ್ಲ. ಹಾಗಾಗಿ ಕಳೆದ ವರ್ಷದ ಸಂಗ್ರಹವೇ ಇನ್ನೂ ಮಾರಾಟವಾಗದೇ ಹಾಗೇ ಉಳಿದಿದೆ. ಇದಕ್ಕೆ ವ್ಯತಿರಿಕ್ತವಾಗಿ ಜೈನ್ ಇರಿಗೇಷನ್ ಇಂದು ಭಾರತದಲ್ಲಿ ಅತಿದೊಡ್ಡ ಈರುಳ್ಳಿ ಒಣಗಿಸುವ ಕಂಪೆನಿಯಾಗಿದೆ. ರೈತರಿಗೆ ಕೊಡುವ ಬೆಲೆ ಬೀಜ ಹಾಕುವುದಕ್ಕಿಂತ ಮೊದಲೇ ನಿರ್ಧರಿತವಾಗಿರುತ್ತದೆ. ನಿರ್ಧಾರಿತ ಬೆಲೆಗಿಂತ ಮಾರುಕಟ್ಟೆಯ ಬೆಲೆ ಜಾಸ್ತಿಯಾದರೆ ರೈತರಿಗೆ ಮಾರುಕಟ್ಟೆ ಬೆಲೆಗಿಂತ 60 ಪೈಸೆ ಕಡಿಮೆಮಾಡಿಕೊಂಡು ಹಣ ಕೊಡಲಾಗುತ್ತದೆ. ಅಂತಹ ಒಪ್ಪಂದದ ಕೃಷಿ ಮಾದರಿ ಮಾರುಕಟ್ಟೆಯ ರಿಸ್ಕನ್ನು ಕಮ್ಮಿ ಮಾಡುತ್ತದೆ. ಇದನ್ನು ಹೆಚ್ಚು ವಿಸ್ತರಿಸಬೇಕಾದ ಅವಶ್ಯಕತೆಯಿದೆ.

ಮೂರನೆಯದಾಗಿ, ರೈತ-ಉತ್ಪಾದಕರ ಸಂಘಟನೆಯಲ್ಲಿ ಸಣ್ಣ ರೈತರನ್ನು ಸಂಘಟಿಸಬೇಕು ಮತ್ತು ಸಂಘಟಿತ ಚಿಲ್ಲರೆ ವ್ಯಾಪಾರಿಗಳು ಒಪ್ಪಂದದ ಬೇಸಾಯದ ಮೂಲಕ ನೇರವಾಗಿ ಕೊಳ್ಳಲು ಪ್ರೋತ್ಸಾಹಿಸಬೇಕು. ಮಂಡಿ ವ್ಯವಸ್ಥೆಯನ್ನು ಮೀರಿಕೊಳ್ಳುವುದಕ್ಕೆ ಸಾಧ್ಯವಾಗಬೇಕು. ಜೊತೆಗೆ ಈಗಿರುವ ಎಪಿಎಂಸಿ ಮಂಡಿಗಳ ಮೂಲಸೌಕರ್ಯವನ್ನು ಸಂಪೂರ್ಣ ಸುಧಾರಿಸಬೇಕು. ಇದರೊಂದಿಗೆ ಮಾರುಕಟ್ಟೆ ಸುಧಾರಣೆಯನ್ನು ತರಬೇಕು. ಮೋದಿ ಸರ್ಕಾರ ತನ್ನ ಆಳ್ವಿಕೆಯಲ್ಲಿರುವ ಹಲವಾರು ರಾಜ್ಯಗಳಲ್ಲಿ ಎಪಿಎಂಸಿ ಸುಧಾರಣೆಯನ್ನು ಮಾಡುವುದಕ್ಕೆ ಇದ್ದ ಸೊಗಸಾದ ಅವಕಾಶವನ್ನು ಕಳೆದುಕೊಂಡಿದೆ. ಅಷ್ಟೇ ಅಲ್ಲ ಅಂತಹ ಅವಕಾಶಗಳು ದಿನದಿಂದ ದಿನಕ್ಕೆ ಕೈತಪ್ಪಿಹೋಗುತ್ತಿದೆ. ಅದು ಸಾಧ್ಯವಾಗದೆ ಎಲ್ಲವನ್ನೂ ಸೇರಿಸಿಕೊಂಡು ರಾಷ್ಟ್ರೀಯ ಮಾರುಕಟ್ಟೆಗಳನ್ನು ಸ್ಥಾಪಿಸುವ, ಬೆಲೆಗಳನ್ನು ಸ್ಥಿರಗೊಳಿಸುವುದಾಗಲಿ ಅಥವಾ ರೈತರಿಗೆ ಮತ್ತು ಗ್ರಾಹಕರಿಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡುವ ಸಾಧ್ಯತೆ ಕಡಿಮೆ. ಇನ್ನಾದರೂ ಈರುಳ್ಳಿ ದುಸ್ವಪ್ನದಿಂದ ಎಚ್ಚರಗೊಂಡು ಬಾಳಿಕೆಯ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವುದು ಒಳ್ಳೆಯದು. ಯೋಚನೆ ಮಾಡದೆ ತಕ್ಷಣಕ್ಕೆ ತೆಗೆದುಕೊಳ್ಳುವ ಕ್ರಮಗಳಿಂದ ಏನೂ ಸಾಧಿಸುವುದಕ್ಕೆ ಸಾಧ್ಯವಿಲ್ಲ.

(ಈ ಲೇಖನವು ಮೊದಲ ಬಾರಿಗೆ ಡಿಸೆಂಬರ್ 23, 2019 ರಂದು “ಕೆಲವು ಈರುಳ್ಳಿ ಪಾಠಗಳು” ಎಂಬ ಶೀರ್ಷಿಕೆಯಡಿಯಲ್ಲಿ ಮುದ್ರಣ ಆವೃತ್ತಿಯಲ್ಲಿ ಪ್ರಕಟವಾಯಿತು. ಗುಲಾತಿ ಇನ್ಫೋಸಿಸ್ ಚೇರ್ ಪ್ರೊಫೆಸರ್ ಫಾರ್ ಅಗ್ರಿಕಲ್ಚರ್ ಮತ್ತು ಹರ್ಷವರ್ಧನ್ ಐಸಿಆರ್‌ಐಇಆರ್ ನಲ್ಲಿ ಸಲಹೆಗಾರರಾಗಿದ್ದಾರೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...