Homeಮುಖಪುಟಈರುಳ್ಳಿ ಬೆಲೆ ನಿಯಂತ್ರಿಸಲು ಸರ್ಕಾರ ಮಾಡಬೇಕಾದುದೇನು? ಆದರೆ ಮಾಡುತ್ತಿರುವುದೇನು?

ಈರುಳ್ಳಿ ಬೆಲೆ ನಿಯಂತ್ರಿಸಲು ಸರ್ಕಾರ ಮಾಡಬೇಕಾದುದೇನು? ಆದರೆ ಮಾಡುತ್ತಿರುವುದೇನು?

- Advertisement -
- Advertisement -
  • ಅಶೋಕ್ ಗುಲಾತಿ, ಹರ್ಷವರ್ಧನ್
  • ಅನುವಾದ: ಟಿ.ಎಸ್‌ ವೇಣುಗೋಪಾಲ್‌

ಈರುಳ್ಳಿ ಬೆಲೆ ಏರುವುದನ್ನು ತಪ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದು ಒಂದು ದೊಡ್ಡ ದುಸ್ವಪ್ನವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಹಿಂದೆ ಯುಪಿಎ ಸರ್ಕಾರವನ್ನು ಇದೇ ಕಾರಣಕ್ಕಾಗಿ ಟೀಕಿಸಿದ್ದ ಒಂದು ವಿಡಿಯೋ ಇತ್ತೀಚೆಗೆ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಪ್ರಧಾನ ಮಂತ್ರಿಯವರು “ಈಗ ನಾವು ಈರುಳ್ಳಿಗಾಗಿಯೂ ಒಂದು ಲಾಕರ್ ತೆರೆಯಬೇಕು. ಅದರಲ್ಲಿ ಈರುಳ್ಳಿಯನ್ನು ಬೀಗ ಹಾಕಿ ಕಾಪಾಡಿಕೊಳ್ಳಬೇಕು . . . ಅತಿಥಿಗಳು ಬಂದಾಗ ಬರೀ ಅದರ ವಾಸನೆಯನ್ನು ಬಡಿಸಬೇಕು . .. ಈ ಯುಪಿಎ ಸರ್ಕಾರಕ್ಕೆ ಈರುಳ್ಳಿಯಿಲ್ಲದೆಯೇ ಕಣ್ಣೀರು ಬರಿಸುವ ಸಾಮರ್ಥ್ಯವಿದೆ. ಅವರು ಮಾಡಿರುವ ಪಾಪಗಳನ್ನು ನೋಡಿ. ಜೋಳ/ಗೋದಿ/ಬಾಜ್ರ ಇವುಗಳನ್ನು ಈರುಳ್ಳಿಯೊಂದಿಗೆ ತಿಂದು ಬದುಕುತ್ತಿದ್ದ ಭಾರತದ ಬಡವರಿಂದ ಈರುಳ್ಳಿಯನ್ನು ಕಸಿದುಕೊಂಡಿದೆ. ಅವರ ಅಧಿಕಾರವನ್ನು ಇಡೀ ಭಾರತದಿಂದ ನಿರ್ಮೂಲನ ಮಾಡಬೇಕಾಗಿದೆ.” ಈಗ ಅವರೇ ಅಧಿಕಾರದಲ್ಲಿದ್ದಾಗ ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಪ್ರಧಾನಿಯವರು ಮೌನವಾಗಿದ್ದಾರೆ.

ಇದರರ್ಥ ಇಷ್ಟೆ. ಬೇರೆಯವರನ್ನು ಟೀಕಿಸುವುದು ಸುಲಭ. ನೀತಿಗಳನ್ನು ರೂಪಿಸುವುದು ಕಷ್ಟದ ಕೆಲಸ. ಅದಕ್ಕೆ ವಿನಯ ಬೇಕು. ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬೇಕು. ಬೇಕಾದ ಸಂಪನ್ಮೂಲವನ್ನು ಕ್ರೋಡಿಕರಿಸಿಕೊಳ್ಳಬೇಕು. ಅನಂತರ ಅದಕ್ಕೆ ತಕ್ಕ ನೀತಿಯನ್ನು ಜಾರಿಗೊಳಿಸಬೇಕು. ಅದು ಬಾಳುವಂತಿರಬೇಕು.
ಅಂತಹ ನೀತಿ ರೂಪಿಸುವುದಕ್ಕೆ ಸಾಧ್ಯವಿದೆ. ಈರುಳ್ಳಿಗೆ ಸಂಬಂಧಿಸಿದ ಹಾಗೆ ಮತ್ತೆ ಇಂತಹ ಅನಾಹುತ ಆಗದ ಹಾಗೆ ಹೇಗೆ ನೋಡಿಕೊಳ್ಳಬಹುದು ಎಂಬುದನ್ನು ಚರ್ಚಿಸೋಣ.

ಈಗಿನ ಈರುಳ್ಳಿ ಬೆಲೆಯ ಏರಿಕೆಯನ್ನು ಊಹಿಸಬಹುದಿತ್ತು. ಕಳೆದ ಕೆಲವು ತಿಂಗಳುಗಳಲ್ಲಿ ಈರುಳ್ಳಿ ಬೆಲೆ ಹಿಡಿದ ದಾರಿಯನ್ನು ಗಮನಿಸೋಣ. ಸೆಪ್ಟೆಂಬರ್- ಅಕ್ಟೋಬರಿನಲ್ಲಿ ಈರುಳ್ಳಿ ಬೆಲೆ ಕೆಜಿಗೆ 50-60ರೂಪಾಯಿ ಆಯಿತು. ಸರ್ಕಾರ ಕನಿಷ್ಠ ರಫ್ತು ಬೆಲೆಯನ್ನು ವಿಧಿಸಿತು (ಎಂಇಪಿ), ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳ ಸಂಗ್ರಹದ ಮೇಲೆ ಮಿತಿಯನ್ನು ಹಾಕಿತು. ಅನಂತರ ಈರುಳ್ಳಿ ರಫ್ತನ್ನು ನಿಷೇದಿಸಿತು. ಆದರೆ ಈ ಕ್ರಮಗಳಿಂದ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಆಗ ವ್ಯಾಪಾರಿಗಳ ಮೇಲೆ ವರಮಾನ ತೆರಿಗೆ ದಾಳಿಯನ್ನು ಕೂಡ ನಡೆಸಲಾಯಿತು. ನೀತಿಯನ್ನು ರೂಪಿಸುವಲ್ಲಿನ ದಿವಾಳಿತನವನ್ನು ಇದು ತೋರಿಸುತ್ತದೆ.

ಇಂತಹ ಪರಿಸ್ಥಿತಿ ವರ್ಷ ಬಿಟ್ಟು ವರ್ಷ ನಡೆಯುತ್ತಲೇ ಇದೆ. ಆದರೆ ನಾವು ಇದರಿಂದ ಕಲಿಯಲು ತಯಾರಿಲ್ಲ. ದಿವಂಗತ ಅರುಣ್ ಜೇಟ್ಲಿ “ಆಪರೇಷನ್ ಗ್ರೀನ್”ಗಾಗಿ 500 ಕೋಟಿ ರೂಪಾಯಿಗಳನ್ನು 2018ರ ಬಜೆಟ್ಟಿನಲ್ಲಿ ಘೋಷಿಸಿದರು. ಟೊಮೆಟೊ, ಈರುಳ್ಳಿ ಹಾಗೂ ಆಲೂಗೆಡ್ಡೆಯ ಬೆಲೆಗಳನ್ನು ಸ್ಥಿರಗೊಳಿಸುವ ಉದ್ದೇಶಕ್ಕಾಗಿ ಇದನ್ನು ಮಾಡಲಾಗಿತ್ತು. ಆಹಾರ ಸಂಸ್ಕರಣಾ ಮಂತ್ರಾಲಯ ಇದನ್ನು ಜಾರಿಗೊಳಿಸಬೇಕಾಗಿತ್ತು. ಆದರೆ ಈ ಹಣ ಇಲ್ಲಿಯವರಗೆ ಬಿಡುಗಡೆಯಾಗಿಲ್ಲ. ಮಂತ್ರಾಲಯದ ವೆಬ್ ಸೈಟ್ ನೋಡಿದರೆ ಇದು ಸ್ಪಷ್ಟವಾಗುತ್ತದೆ.
ಈಗಿನ ಈರುಳ್ಳಿ ಬೆಲೆ ಏರಿಕೆಯನ್ನು ಊಹಿಸಬಹುದಿತ್ತು. ತೋಟಗಾರಿಕಾ ಇಲಾಖೆಯು ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಈರುಳ್ಳಿಯನ್ನು ಪ್ರಧಾನವಾಗಿ ಬೆಳೆಯುವ ರಾಜ್ಯಗಳಲ್ಲಿ (ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಆಂಧ್ರಪ್ರದೇಶ, ಗುಜರಾತ್ ಮತ್ತು ರಾಜಾಸ್ಥಾನ) ಈ ವರ್ಷ ಖಾರೀಫ್ ಇಳುವರಿ ಶೇಕಡ 7ರಷ್ಟು ಕಡಿಮೆಯಾಗುತ್ತದೆ ಎಂದು ಅಂದಾಜು ಮಾಡಿತ್ತು. ಸೆಪ್ಟೆಂಬರ್/ಅಕ್ಟೋಬರಿನಲ್ಲಿ ಬಂದ ತೀವ್ರ ಮಳೆಯಿಂದಾಗಿ ಮಧ್ಯಪ್ರದೇಶದಲ್ಲಿ ಶೇಕಡ 58ರಷ್ಟು, ಕರ್ನಾಟಕದಲ್ಲಿ ಶೇಕಡ 18ರಷ್ಟು, ಆಂಧ್ರದಲ್ಲಿ ಶೇಕಡ 2ರಷ್ಟು ಬೆಳೆಗಳು ನಾಶವಾದವು. ನಿರಂತರ ಮಳೆಯಿಂದಾಗಿ ಮಹಾರಾಷ್ಟ್ರದಲ್ಲಿ ಈರುಳ್ಳಿ ಕುಯಿಲು ನಿಧಾನವಾಯಿತು. ಸರ್ಕಾರ ನಿಧಾನವಾಗಿ ಎಚ್ಚರಗೊಂಡಿತು. ಎಂಎಂಟಿಸಿಗೆ ಒಂದು ಲಕ್ಷ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ನಿರ್ದೇಶಿಸಿತು. ಆಫ್ಗಾನಿಸ್ತಾನ, ಟರ್ಕಿ, ಮತ್ತು ಈಜಿಪ್ಟಿನಿಂದ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲಾಯಿತು. ಈರುಳ್ಳಿಯನ್ನು ಯಾವ ಬೆಲೆಯಲ್ಲಿ ಆಮದು ಮಾಡಿಕೊಂಡು ಭಾರತದ ಮಾರುಕಟ್ಟೆಯಲ್ಲಿ ಸುರಿಯಲಾಯಿತು ಎಂಬ ಪ್ರಶ್ನೆ ಹಾಗೆ ಉಳಿಯುತ್ತದೆ.

ಇಂಡಿಯಾ ಜಗತ್ತಿನಲ್ಲೇ ಈರುಳ್ಳಿ ರಫ್ತು ಮಾಡುವ ದೊಡ್ಡ ದೇಶ. ಭಾರತ ಪ್ರತಿವರ್ಷ ಎರಡು ಮಿಲಿಯನ್ ಮೆಟ್ರಿಕ್ ಟನ್ ರಫ್ತು ಮಾಡುತ್ತದೆ (ಚಿತ್ರ 2). ರಫ್ತನ್ನು ನಿಷೇಧಿಸುವ ಬದಲು ಆಮದಿಗೆ ಅವಕಾಶವನ್ನು ಮುಕ್ತವಾಗಿ ಇಟ್ಟುಕೊಂಡರೆ, ದೇಶದಲ್ಲಿ ಈರುಳ್ಳೆ ಬೆಲೆ ಸಿಕ್ಕಾಪಟ್ಟೆ ಏರಿದ ಸಂದರ್ಭದಲ್ಲಿ, ಖಾಸಗಿ ವ್ಯಾಪಾರಿಗಳು ಬೇಕಾದಾಗ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ಪ್ರಾರಂಭಿಸಬಹುದು. ಸರ್ಕಾರದ ನಿಧಾನದ ತೀರ್ಮಾನಕ್ಕೆ ಕಾಯಬೇಕಾಗಿಲ್ಲ. ಹೀಗೆ ಮಾಡುವುದರಿಂದ ಭಾರತ ರಫ್ತುದಾರನಾಗಿ ನಂಬಿಕೆ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಅದರಿಂದ ರೈತರಿಗೆ ನಿರಂತರವಾಗಿ ಒಳ್ಳೆಯ ಬೆಲೆ ಸಿಗುತ್ತದೆ. ದಿಢೀರನೆ ರಫ್ತನ್ನು ನಿಷೇದಿಸುವುದು ರೈತ ವಿರೋಧಿ ಮಾತ್ರವಲ್ಲ ಅದು ನಿಜವಾಗಿ ಸರ್ಕಾರದ ನೀತಿಯ ವೈಫಲ್ಯವನ್ನು ತೋರಿಸುತ್ತದೆ. ಗ್ರಾಹಕರ ಆಸಕ್ತಿಯನ್ನು ಈಡೇರಿಸುವ ದೃಷ್ಟಿಯಿಂದ ಭಾರತ “ಆಪರೇಷನ್ ಗ್ರೀನ್” ಯೋಜನೆಗೆ ಸಂಬಂಧಿಸಿದಂತೆ ಸೂಕ್ತ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕು.

ಹಾಗಾದರೆ ರೈತರ ಹಾಗೂ ಗ್ರಾಹಕರ ಆಸಕ್ತಿಯನ್ನು ಕಾಪಾಡುವುದಕ್ಕೆ ಏನು ಮಾಡಬೇಕು?
ಮೊದಲಿಗೆ ರಾಬಿ ಈರುಳ್ಳಿಯನ್ನು ಸಂಗ್ರಹಿಸಿಡುವುದಕ್ಕೆ ಬೃಹತ್ ಪ್ರಮಾಣದಲ್ಲಿ ಸೌಲಭ್ಯ ಕಲ್ಪಿಸಬೇಕು. ರೈತರು ಮತ್ತು ವ್ಯಾಪಾರಿಗಳ ಮಟ್ಟದಲ್ಲಿ ಇದು ನಡೆಯಬೇಕು. ಏಪ್ರಿಲ್ -ಮೇ ತಿಂಗಳಿನಲ್ಲಿ ಈರುಳ್ಳಿ ಬೆಲೆ ಕೆಜಿಗೆ 4-5 ರೂಪಾಯಿ ಇದ್ದಾಗ ಈರುಳ್ಳಿಯನ್ನು ಉದಾಹರಣೆಗೆ ಕೆಜಿಗೆ 10ರೂಪಾಯಿನಂತೆ ಕೊಂಡುಕೊಳ್ಳಬೇಕು. ಆಧುನಿಕ ಖಾಸಗೀ ಕ್ಷೇತ್ರದ ಗೋದಾಮುಗಳಲ್ಲಿ ಶೇಖರಿಸಿಡಬೇಕು. ಪದೇ ಪದೇ ಸಂಗ್ರಹಣೆಯ ಮಿತಿಯನ್ನು ಹೇರುವುದು ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸುವುದು ಇವೆಲ್ಲಾ ಆಧುನಿಕ ಶೀತಸಂಗ್ರಹದಲ್ಲಿ ಖಾಸಗಿಯವರಿಗೆ ಹಣ ಹೂಡುವ ಉತ್ಸಾಹವನ್ನು ಕುಂದಿಸುತ್ತದೆ. ಖಾಸಗಿ ಸಂಗ್ರಹವನ್ನು ಉತ್ತೇಜಿಸಬೇಕು. ಅದಕ್ಕಾಗಿ ಅವಶ್ಯಕ ಸರಕು ಕಾಯ್ದೆ ಹೋಗಬೇಕು. ವ್ಯಾಪಾರಿಗಳು ಒಂದಾಗಿ ಬೆಲೆನಿಯಂತ್ರಿಸುವುದನ್ನು ತಪ್ಪಿಸುವುದಕ್ಕೆ ಭಾರತೀಯ ಸ್ಪರ್ಧಾ ಸಮಿತಿ (ಕಾಂಪಿಟೇಷನ್ ಕಮೀಷನ್ ಆಪ್ ಇಂಡಿಯಾ) ಕಾರ್ಯೋನ್ಮುಖವಾಗಬೇಕು. ಆದಾಯ ತೆರಿಗೆ ಸಿಬ್ಬಂದಿಗಳು ಇದರಲ್ಲಿ ಕೈಹಾಕಬಾರದು.

ಎರಡನೆಯದಾಗಿ ಸರ್ಕಾರ ಒಣಗಿಸಿದ ಈರುಳ್ಳಿ (ಪುಡಿ, ಚೂರು ಇತ್ಯಾದಿ ರೂಪದಲ್ಲಿ) ಬಳಸುವುದಕ್ಕೆ ನಗರಗಳಲ್ಲಿ ಹಾಗೂ ದೊಡ್ಡ ಪ್ರಮಾಣದ ಬಳಕೆದಾರರನ್ನು (ಮಿಲಿಟರಿ, ಆಸ್ಪತ್ರೆ, ಹೋಟಿಲ್ ಇತ್ಯಾದಿಗಳಲ್ಲಿ) ಉತ್ತೇಜಿಸಬೇಕು. ಈರುಳ್ಳಿ ಸೂಕ್ಷ್ಮ ಸರಕಾದ್ದರಿಂದ ಸರ್ಕರ ಕೂಡ ಒಣಗಿದ ಈರುಳ್ಳಿಯನ್ನು ಬೃಹತ್ ಪ್ರಮಾಣದಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕು. ಅದನ್ನು ಹೆಚ್ಚು ಕಾಲ ಇಟ್ಟುಕೊಳ್ಳಬಹುದು. ಗುಜರಾತಿನ ಮಹುವಾ ಈಗಾಗಲೇ ಒಣಗಿಸಿದ ಈರುಳ್ಳಿಯ ದೊಡ್ಡ ಕೇಂದ್ರವಾಗಿದೆ. ನೂರಕ್ಕಿಂತ ಹೆಚ್ಚು ಘಟಕಗಳು ಅಲ್ಲಿ ಕೆಲಸಮಾಡುತ್ತಿವೆ. ಆದರೆ ಅದಕ್ಕೆ ಆಂತರರಾಷ್ಟ್ರೀಯ ಮಾರುಕಟ್ಟೆಯ ಕೊರತೆಯಿದೆ. ಸ್ಥಳೀಯವಾಗಿಯೂ ಬೇಡಿಕೆ ಇಲ್ಲ. ಹಾಗಾಗಿ ಕಳೆದ ವರ್ಷದ ಸಂಗ್ರಹವೇ ಇನ್ನೂ ಮಾರಾಟವಾಗದೇ ಹಾಗೇ ಉಳಿದಿದೆ. ಇದಕ್ಕೆ ವ್ಯತಿರಿಕ್ತವಾಗಿ ಜೈನ್ ಇರಿಗೇಷನ್ ಇಂದು ಭಾರತದಲ್ಲಿ ಅತಿದೊಡ್ಡ ಈರುಳ್ಳಿ ಒಣಗಿಸುವ ಕಂಪೆನಿಯಾಗಿದೆ. ರೈತರಿಗೆ ಕೊಡುವ ಬೆಲೆ ಬೀಜ ಹಾಕುವುದಕ್ಕಿಂತ ಮೊದಲೇ ನಿರ್ಧರಿತವಾಗಿರುತ್ತದೆ. ನಿರ್ಧಾರಿತ ಬೆಲೆಗಿಂತ ಮಾರುಕಟ್ಟೆಯ ಬೆಲೆ ಜಾಸ್ತಿಯಾದರೆ ರೈತರಿಗೆ ಮಾರುಕಟ್ಟೆ ಬೆಲೆಗಿಂತ 60 ಪೈಸೆ ಕಡಿಮೆಮಾಡಿಕೊಂಡು ಹಣ ಕೊಡಲಾಗುತ್ತದೆ. ಅಂತಹ ಒಪ್ಪಂದದ ಕೃಷಿ ಮಾದರಿ ಮಾರುಕಟ್ಟೆಯ ರಿಸ್ಕನ್ನು ಕಮ್ಮಿ ಮಾಡುತ್ತದೆ. ಇದನ್ನು ಹೆಚ್ಚು ವಿಸ್ತರಿಸಬೇಕಾದ ಅವಶ್ಯಕತೆಯಿದೆ.

ಮೂರನೆಯದಾಗಿ, ರೈತ-ಉತ್ಪಾದಕರ ಸಂಘಟನೆಯಲ್ಲಿ ಸಣ್ಣ ರೈತರನ್ನು ಸಂಘಟಿಸಬೇಕು ಮತ್ತು ಸಂಘಟಿತ ಚಿಲ್ಲರೆ ವ್ಯಾಪಾರಿಗಳು ಒಪ್ಪಂದದ ಬೇಸಾಯದ ಮೂಲಕ ನೇರವಾಗಿ ಕೊಳ್ಳಲು ಪ್ರೋತ್ಸಾಹಿಸಬೇಕು. ಮಂಡಿ ವ್ಯವಸ್ಥೆಯನ್ನು ಮೀರಿಕೊಳ್ಳುವುದಕ್ಕೆ ಸಾಧ್ಯವಾಗಬೇಕು. ಜೊತೆಗೆ ಈಗಿರುವ ಎಪಿಎಂಸಿ ಮಂಡಿಗಳ ಮೂಲಸೌಕರ್ಯವನ್ನು ಸಂಪೂರ್ಣ ಸುಧಾರಿಸಬೇಕು. ಇದರೊಂದಿಗೆ ಮಾರುಕಟ್ಟೆ ಸುಧಾರಣೆಯನ್ನು ತರಬೇಕು. ಮೋದಿ ಸರ್ಕಾರ ತನ್ನ ಆಳ್ವಿಕೆಯಲ್ಲಿರುವ ಹಲವಾರು ರಾಜ್ಯಗಳಲ್ಲಿ ಎಪಿಎಂಸಿ ಸುಧಾರಣೆಯನ್ನು ಮಾಡುವುದಕ್ಕೆ ಇದ್ದ ಸೊಗಸಾದ ಅವಕಾಶವನ್ನು ಕಳೆದುಕೊಂಡಿದೆ. ಅಷ್ಟೇ ಅಲ್ಲ ಅಂತಹ ಅವಕಾಶಗಳು ದಿನದಿಂದ ದಿನಕ್ಕೆ ಕೈತಪ್ಪಿಹೋಗುತ್ತಿದೆ. ಅದು ಸಾಧ್ಯವಾಗದೆ ಎಲ್ಲವನ್ನೂ ಸೇರಿಸಿಕೊಂಡು ರಾಷ್ಟ್ರೀಯ ಮಾರುಕಟ್ಟೆಗಳನ್ನು ಸ್ಥಾಪಿಸುವ, ಬೆಲೆಗಳನ್ನು ಸ್ಥಿರಗೊಳಿಸುವುದಾಗಲಿ ಅಥವಾ ರೈತರಿಗೆ ಮತ್ತು ಗ್ರಾಹಕರಿಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡುವ ಸಾಧ್ಯತೆ ಕಡಿಮೆ. ಇನ್ನಾದರೂ ಈರುಳ್ಳಿ ದುಸ್ವಪ್ನದಿಂದ ಎಚ್ಚರಗೊಂಡು ಬಾಳಿಕೆಯ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವುದು ಒಳ್ಳೆಯದು. ಯೋಚನೆ ಮಾಡದೆ ತಕ್ಷಣಕ್ಕೆ ತೆಗೆದುಕೊಳ್ಳುವ ಕ್ರಮಗಳಿಂದ ಏನೂ ಸಾಧಿಸುವುದಕ್ಕೆ ಸಾಧ್ಯವಿಲ್ಲ.

(ಈ ಲೇಖನವು ಮೊದಲ ಬಾರಿಗೆ ಡಿಸೆಂಬರ್ 23, 2019 ರಂದು “ಕೆಲವು ಈರುಳ್ಳಿ ಪಾಠಗಳು” ಎಂಬ ಶೀರ್ಷಿಕೆಯಡಿಯಲ್ಲಿ ಮುದ್ರಣ ಆವೃತ್ತಿಯಲ್ಲಿ ಪ್ರಕಟವಾಯಿತು. ಗುಲಾತಿ ಇನ್ಫೋಸಿಸ್ ಚೇರ್ ಪ್ರೊಫೆಸರ್ ಫಾರ್ ಅಗ್ರಿಕಲ್ಚರ್ ಮತ್ತು ಹರ್ಷವರ್ಧನ್ ಐಸಿಆರ್‌ಐಇಆರ್ ನಲ್ಲಿ ಸಲಹೆಗಾರರಾಗಿದ್ದಾರೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....