Homeಮುಖಪುಟಈರುಳ್ಳಿ ಬೆಲೆ ನಿಯಂತ್ರಿಸಲು ಸರ್ಕಾರ ಮಾಡಬೇಕಾದುದೇನು? ಆದರೆ ಮಾಡುತ್ತಿರುವುದೇನು?

ಈರುಳ್ಳಿ ಬೆಲೆ ನಿಯಂತ್ರಿಸಲು ಸರ್ಕಾರ ಮಾಡಬೇಕಾದುದೇನು? ಆದರೆ ಮಾಡುತ್ತಿರುವುದೇನು?

- Advertisement -
- Advertisement -
  • ಅಶೋಕ್ ಗುಲಾತಿ, ಹರ್ಷವರ್ಧನ್
  • ಅನುವಾದ: ಟಿ.ಎಸ್‌ ವೇಣುಗೋಪಾಲ್‌

ಈರುಳ್ಳಿ ಬೆಲೆ ಏರುವುದನ್ನು ತಪ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದು ಒಂದು ದೊಡ್ಡ ದುಸ್ವಪ್ನವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಹಿಂದೆ ಯುಪಿಎ ಸರ್ಕಾರವನ್ನು ಇದೇ ಕಾರಣಕ್ಕಾಗಿ ಟೀಕಿಸಿದ್ದ ಒಂದು ವಿಡಿಯೋ ಇತ್ತೀಚೆಗೆ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಪ್ರಧಾನ ಮಂತ್ರಿಯವರು “ಈಗ ನಾವು ಈರುಳ್ಳಿಗಾಗಿಯೂ ಒಂದು ಲಾಕರ್ ತೆರೆಯಬೇಕು. ಅದರಲ್ಲಿ ಈರುಳ್ಳಿಯನ್ನು ಬೀಗ ಹಾಕಿ ಕಾಪಾಡಿಕೊಳ್ಳಬೇಕು . . . ಅತಿಥಿಗಳು ಬಂದಾಗ ಬರೀ ಅದರ ವಾಸನೆಯನ್ನು ಬಡಿಸಬೇಕು . .. ಈ ಯುಪಿಎ ಸರ್ಕಾರಕ್ಕೆ ಈರುಳ್ಳಿಯಿಲ್ಲದೆಯೇ ಕಣ್ಣೀರು ಬರಿಸುವ ಸಾಮರ್ಥ್ಯವಿದೆ. ಅವರು ಮಾಡಿರುವ ಪಾಪಗಳನ್ನು ನೋಡಿ. ಜೋಳ/ಗೋದಿ/ಬಾಜ್ರ ಇವುಗಳನ್ನು ಈರುಳ್ಳಿಯೊಂದಿಗೆ ತಿಂದು ಬದುಕುತ್ತಿದ್ದ ಭಾರತದ ಬಡವರಿಂದ ಈರುಳ್ಳಿಯನ್ನು ಕಸಿದುಕೊಂಡಿದೆ. ಅವರ ಅಧಿಕಾರವನ್ನು ಇಡೀ ಭಾರತದಿಂದ ನಿರ್ಮೂಲನ ಮಾಡಬೇಕಾಗಿದೆ.” ಈಗ ಅವರೇ ಅಧಿಕಾರದಲ್ಲಿದ್ದಾಗ ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಪ್ರಧಾನಿಯವರು ಮೌನವಾಗಿದ್ದಾರೆ.

ಇದರರ್ಥ ಇಷ್ಟೆ. ಬೇರೆಯವರನ್ನು ಟೀಕಿಸುವುದು ಸುಲಭ. ನೀತಿಗಳನ್ನು ರೂಪಿಸುವುದು ಕಷ್ಟದ ಕೆಲಸ. ಅದಕ್ಕೆ ವಿನಯ ಬೇಕು. ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬೇಕು. ಬೇಕಾದ ಸಂಪನ್ಮೂಲವನ್ನು ಕ್ರೋಡಿಕರಿಸಿಕೊಳ್ಳಬೇಕು. ಅನಂತರ ಅದಕ್ಕೆ ತಕ್ಕ ನೀತಿಯನ್ನು ಜಾರಿಗೊಳಿಸಬೇಕು. ಅದು ಬಾಳುವಂತಿರಬೇಕು.
ಅಂತಹ ನೀತಿ ರೂಪಿಸುವುದಕ್ಕೆ ಸಾಧ್ಯವಿದೆ. ಈರುಳ್ಳಿಗೆ ಸಂಬಂಧಿಸಿದ ಹಾಗೆ ಮತ್ತೆ ಇಂತಹ ಅನಾಹುತ ಆಗದ ಹಾಗೆ ಹೇಗೆ ನೋಡಿಕೊಳ್ಳಬಹುದು ಎಂಬುದನ್ನು ಚರ್ಚಿಸೋಣ.

ಈಗಿನ ಈರುಳ್ಳಿ ಬೆಲೆಯ ಏರಿಕೆಯನ್ನು ಊಹಿಸಬಹುದಿತ್ತು. ಕಳೆದ ಕೆಲವು ತಿಂಗಳುಗಳಲ್ಲಿ ಈರುಳ್ಳಿ ಬೆಲೆ ಹಿಡಿದ ದಾರಿಯನ್ನು ಗಮನಿಸೋಣ. ಸೆಪ್ಟೆಂಬರ್- ಅಕ್ಟೋಬರಿನಲ್ಲಿ ಈರುಳ್ಳಿ ಬೆಲೆ ಕೆಜಿಗೆ 50-60ರೂಪಾಯಿ ಆಯಿತು. ಸರ್ಕಾರ ಕನಿಷ್ಠ ರಫ್ತು ಬೆಲೆಯನ್ನು ವಿಧಿಸಿತು (ಎಂಇಪಿ), ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳ ಸಂಗ್ರಹದ ಮೇಲೆ ಮಿತಿಯನ್ನು ಹಾಕಿತು. ಅನಂತರ ಈರುಳ್ಳಿ ರಫ್ತನ್ನು ನಿಷೇದಿಸಿತು. ಆದರೆ ಈ ಕ್ರಮಗಳಿಂದ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಆಗ ವ್ಯಾಪಾರಿಗಳ ಮೇಲೆ ವರಮಾನ ತೆರಿಗೆ ದಾಳಿಯನ್ನು ಕೂಡ ನಡೆಸಲಾಯಿತು. ನೀತಿಯನ್ನು ರೂಪಿಸುವಲ್ಲಿನ ದಿವಾಳಿತನವನ್ನು ಇದು ತೋರಿಸುತ್ತದೆ.

ಇಂತಹ ಪರಿಸ್ಥಿತಿ ವರ್ಷ ಬಿಟ್ಟು ವರ್ಷ ನಡೆಯುತ್ತಲೇ ಇದೆ. ಆದರೆ ನಾವು ಇದರಿಂದ ಕಲಿಯಲು ತಯಾರಿಲ್ಲ. ದಿವಂಗತ ಅರುಣ್ ಜೇಟ್ಲಿ “ಆಪರೇಷನ್ ಗ್ರೀನ್”ಗಾಗಿ 500 ಕೋಟಿ ರೂಪಾಯಿಗಳನ್ನು 2018ರ ಬಜೆಟ್ಟಿನಲ್ಲಿ ಘೋಷಿಸಿದರು. ಟೊಮೆಟೊ, ಈರುಳ್ಳಿ ಹಾಗೂ ಆಲೂಗೆಡ್ಡೆಯ ಬೆಲೆಗಳನ್ನು ಸ್ಥಿರಗೊಳಿಸುವ ಉದ್ದೇಶಕ್ಕಾಗಿ ಇದನ್ನು ಮಾಡಲಾಗಿತ್ತು. ಆಹಾರ ಸಂಸ್ಕರಣಾ ಮಂತ್ರಾಲಯ ಇದನ್ನು ಜಾರಿಗೊಳಿಸಬೇಕಾಗಿತ್ತು. ಆದರೆ ಈ ಹಣ ಇಲ್ಲಿಯವರಗೆ ಬಿಡುಗಡೆಯಾಗಿಲ್ಲ. ಮಂತ್ರಾಲಯದ ವೆಬ್ ಸೈಟ್ ನೋಡಿದರೆ ಇದು ಸ್ಪಷ್ಟವಾಗುತ್ತದೆ.
ಈಗಿನ ಈರುಳ್ಳಿ ಬೆಲೆ ಏರಿಕೆಯನ್ನು ಊಹಿಸಬಹುದಿತ್ತು. ತೋಟಗಾರಿಕಾ ಇಲಾಖೆಯು ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಈರುಳ್ಳಿಯನ್ನು ಪ್ರಧಾನವಾಗಿ ಬೆಳೆಯುವ ರಾಜ್ಯಗಳಲ್ಲಿ (ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಆಂಧ್ರಪ್ರದೇಶ, ಗುಜರಾತ್ ಮತ್ತು ರಾಜಾಸ್ಥಾನ) ಈ ವರ್ಷ ಖಾರೀಫ್ ಇಳುವರಿ ಶೇಕಡ 7ರಷ್ಟು ಕಡಿಮೆಯಾಗುತ್ತದೆ ಎಂದು ಅಂದಾಜು ಮಾಡಿತ್ತು. ಸೆಪ್ಟೆಂಬರ್/ಅಕ್ಟೋಬರಿನಲ್ಲಿ ಬಂದ ತೀವ್ರ ಮಳೆಯಿಂದಾಗಿ ಮಧ್ಯಪ್ರದೇಶದಲ್ಲಿ ಶೇಕಡ 58ರಷ್ಟು, ಕರ್ನಾಟಕದಲ್ಲಿ ಶೇಕಡ 18ರಷ್ಟು, ಆಂಧ್ರದಲ್ಲಿ ಶೇಕಡ 2ರಷ್ಟು ಬೆಳೆಗಳು ನಾಶವಾದವು. ನಿರಂತರ ಮಳೆಯಿಂದಾಗಿ ಮಹಾರಾಷ್ಟ್ರದಲ್ಲಿ ಈರುಳ್ಳಿ ಕುಯಿಲು ನಿಧಾನವಾಯಿತು. ಸರ್ಕಾರ ನಿಧಾನವಾಗಿ ಎಚ್ಚರಗೊಂಡಿತು. ಎಂಎಂಟಿಸಿಗೆ ಒಂದು ಲಕ್ಷ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ನಿರ್ದೇಶಿಸಿತು. ಆಫ್ಗಾನಿಸ್ತಾನ, ಟರ್ಕಿ, ಮತ್ತು ಈಜಿಪ್ಟಿನಿಂದ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲಾಯಿತು. ಈರುಳ್ಳಿಯನ್ನು ಯಾವ ಬೆಲೆಯಲ್ಲಿ ಆಮದು ಮಾಡಿಕೊಂಡು ಭಾರತದ ಮಾರುಕಟ್ಟೆಯಲ್ಲಿ ಸುರಿಯಲಾಯಿತು ಎಂಬ ಪ್ರಶ್ನೆ ಹಾಗೆ ಉಳಿಯುತ್ತದೆ.

ಇಂಡಿಯಾ ಜಗತ್ತಿನಲ್ಲೇ ಈರುಳ್ಳಿ ರಫ್ತು ಮಾಡುವ ದೊಡ್ಡ ದೇಶ. ಭಾರತ ಪ್ರತಿವರ್ಷ ಎರಡು ಮಿಲಿಯನ್ ಮೆಟ್ರಿಕ್ ಟನ್ ರಫ್ತು ಮಾಡುತ್ತದೆ (ಚಿತ್ರ 2). ರಫ್ತನ್ನು ನಿಷೇಧಿಸುವ ಬದಲು ಆಮದಿಗೆ ಅವಕಾಶವನ್ನು ಮುಕ್ತವಾಗಿ ಇಟ್ಟುಕೊಂಡರೆ, ದೇಶದಲ್ಲಿ ಈರುಳ್ಳೆ ಬೆಲೆ ಸಿಕ್ಕಾಪಟ್ಟೆ ಏರಿದ ಸಂದರ್ಭದಲ್ಲಿ, ಖಾಸಗಿ ವ್ಯಾಪಾರಿಗಳು ಬೇಕಾದಾಗ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ಪ್ರಾರಂಭಿಸಬಹುದು. ಸರ್ಕಾರದ ನಿಧಾನದ ತೀರ್ಮಾನಕ್ಕೆ ಕಾಯಬೇಕಾಗಿಲ್ಲ. ಹೀಗೆ ಮಾಡುವುದರಿಂದ ಭಾರತ ರಫ್ತುದಾರನಾಗಿ ನಂಬಿಕೆ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಅದರಿಂದ ರೈತರಿಗೆ ನಿರಂತರವಾಗಿ ಒಳ್ಳೆಯ ಬೆಲೆ ಸಿಗುತ್ತದೆ. ದಿಢೀರನೆ ರಫ್ತನ್ನು ನಿಷೇದಿಸುವುದು ರೈತ ವಿರೋಧಿ ಮಾತ್ರವಲ್ಲ ಅದು ನಿಜವಾಗಿ ಸರ್ಕಾರದ ನೀತಿಯ ವೈಫಲ್ಯವನ್ನು ತೋರಿಸುತ್ತದೆ. ಗ್ರಾಹಕರ ಆಸಕ್ತಿಯನ್ನು ಈಡೇರಿಸುವ ದೃಷ್ಟಿಯಿಂದ ಭಾರತ “ಆಪರೇಷನ್ ಗ್ರೀನ್” ಯೋಜನೆಗೆ ಸಂಬಂಧಿಸಿದಂತೆ ಸೂಕ್ತ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕು.

ಹಾಗಾದರೆ ರೈತರ ಹಾಗೂ ಗ್ರಾಹಕರ ಆಸಕ್ತಿಯನ್ನು ಕಾಪಾಡುವುದಕ್ಕೆ ಏನು ಮಾಡಬೇಕು?
ಮೊದಲಿಗೆ ರಾಬಿ ಈರುಳ್ಳಿಯನ್ನು ಸಂಗ್ರಹಿಸಿಡುವುದಕ್ಕೆ ಬೃಹತ್ ಪ್ರಮಾಣದಲ್ಲಿ ಸೌಲಭ್ಯ ಕಲ್ಪಿಸಬೇಕು. ರೈತರು ಮತ್ತು ವ್ಯಾಪಾರಿಗಳ ಮಟ್ಟದಲ್ಲಿ ಇದು ನಡೆಯಬೇಕು. ಏಪ್ರಿಲ್ -ಮೇ ತಿಂಗಳಿನಲ್ಲಿ ಈರುಳ್ಳಿ ಬೆಲೆ ಕೆಜಿಗೆ 4-5 ರೂಪಾಯಿ ಇದ್ದಾಗ ಈರುಳ್ಳಿಯನ್ನು ಉದಾಹರಣೆಗೆ ಕೆಜಿಗೆ 10ರೂಪಾಯಿನಂತೆ ಕೊಂಡುಕೊಳ್ಳಬೇಕು. ಆಧುನಿಕ ಖಾಸಗೀ ಕ್ಷೇತ್ರದ ಗೋದಾಮುಗಳಲ್ಲಿ ಶೇಖರಿಸಿಡಬೇಕು. ಪದೇ ಪದೇ ಸಂಗ್ರಹಣೆಯ ಮಿತಿಯನ್ನು ಹೇರುವುದು ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸುವುದು ಇವೆಲ್ಲಾ ಆಧುನಿಕ ಶೀತಸಂಗ್ರಹದಲ್ಲಿ ಖಾಸಗಿಯವರಿಗೆ ಹಣ ಹೂಡುವ ಉತ್ಸಾಹವನ್ನು ಕುಂದಿಸುತ್ತದೆ. ಖಾಸಗಿ ಸಂಗ್ರಹವನ್ನು ಉತ್ತೇಜಿಸಬೇಕು. ಅದಕ್ಕಾಗಿ ಅವಶ್ಯಕ ಸರಕು ಕಾಯ್ದೆ ಹೋಗಬೇಕು. ವ್ಯಾಪಾರಿಗಳು ಒಂದಾಗಿ ಬೆಲೆನಿಯಂತ್ರಿಸುವುದನ್ನು ತಪ್ಪಿಸುವುದಕ್ಕೆ ಭಾರತೀಯ ಸ್ಪರ್ಧಾ ಸಮಿತಿ (ಕಾಂಪಿಟೇಷನ್ ಕಮೀಷನ್ ಆಪ್ ಇಂಡಿಯಾ) ಕಾರ್ಯೋನ್ಮುಖವಾಗಬೇಕು. ಆದಾಯ ತೆರಿಗೆ ಸಿಬ್ಬಂದಿಗಳು ಇದರಲ್ಲಿ ಕೈಹಾಕಬಾರದು.

ಎರಡನೆಯದಾಗಿ ಸರ್ಕಾರ ಒಣಗಿಸಿದ ಈರುಳ್ಳಿ (ಪುಡಿ, ಚೂರು ಇತ್ಯಾದಿ ರೂಪದಲ್ಲಿ) ಬಳಸುವುದಕ್ಕೆ ನಗರಗಳಲ್ಲಿ ಹಾಗೂ ದೊಡ್ಡ ಪ್ರಮಾಣದ ಬಳಕೆದಾರರನ್ನು (ಮಿಲಿಟರಿ, ಆಸ್ಪತ್ರೆ, ಹೋಟಿಲ್ ಇತ್ಯಾದಿಗಳಲ್ಲಿ) ಉತ್ತೇಜಿಸಬೇಕು. ಈರುಳ್ಳಿ ಸೂಕ್ಷ್ಮ ಸರಕಾದ್ದರಿಂದ ಸರ್ಕರ ಕೂಡ ಒಣಗಿದ ಈರುಳ್ಳಿಯನ್ನು ಬೃಹತ್ ಪ್ರಮಾಣದಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕು. ಅದನ್ನು ಹೆಚ್ಚು ಕಾಲ ಇಟ್ಟುಕೊಳ್ಳಬಹುದು. ಗುಜರಾತಿನ ಮಹುವಾ ಈಗಾಗಲೇ ಒಣಗಿಸಿದ ಈರುಳ್ಳಿಯ ದೊಡ್ಡ ಕೇಂದ್ರವಾಗಿದೆ. ನೂರಕ್ಕಿಂತ ಹೆಚ್ಚು ಘಟಕಗಳು ಅಲ್ಲಿ ಕೆಲಸಮಾಡುತ್ತಿವೆ. ಆದರೆ ಅದಕ್ಕೆ ಆಂತರರಾಷ್ಟ್ರೀಯ ಮಾರುಕಟ್ಟೆಯ ಕೊರತೆಯಿದೆ. ಸ್ಥಳೀಯವಾಗಿಯೂ ಬೇಡಿಕೆ ಇಲ್ಲ. ಹಾಗಾಗಿ ಕಳೆದ ವರ್ಷದ ಸಂಗ್ರಹವೇ ಇನ್ನೂ ಮಾರಾಟವಾಗದೇ ಹಾಗೇ ಉಳಿದಿದೆ. ಇದಕ್ಕೆ ವ್ಯತಿರಿಕ್ತವಾಗಿ ಜೈನ್ ಇರಿಗೇಷನ್ ಇಂದು ಭಾರತದಲ್ಲಿ ಅತಿದೊಡ್ಡ ಈರುಳ್ಳಿ ಒಣಗಿಸುವ ಕಂಪೆನಿಯಾಗಿದೆ. ರೈತರಿಗೆ ಕೊಡುವ ಬೆಲೆ ಬೀಜ ಹಾಕುವುದಕ್ಕಿಂತ ಮೊದಲೇ ನಿರ್ಧರಿತವಾಗಿರುತ್ತದೆ. ನಿರ್ಧಾರಿತ ಬೆಲೆಗಿಂತ ಮಾರುಕಟ್ಟೆಯ ಬೆಲೆ ಜಾಸ್ತಿಯಾದರೆ ರೈತರಿಗೆ ಮಾರುಕಟ್ಟೆ ಬೆಲೆಗಿಂತ 60 ಪೈಸೆ ಕಡಿಮೆಮಾಡಿಕೊಂಡು ಹಣ ಕೊಡಲಾಗುತ್ತದೆ. ಅಂತಹ ಒಪ್ಪಂದದ ಕೃಷಿ ಮಾದರಿ ಮಾರುಕಟ್ಟೆಯ ರಿಸ್ಕನ್ನು ಕಮ್ಮಿ ಮಾಡುತ್ತದೆ. ಇದನ್ನು ಹೆಚ್ಚು ವಿಸ್ತರಿಸಬೇಕಾದ ಅವಶ್ಯಕತೆಯಿದೆ.

ಮೂರನೆಯದಾಗಿ, ರೈತ-ಉತ್ಪಾದಕರ ಸಂಘಟನೆಯಲ್ಲಿ ಸಣ್ಣ ರೈತರನ್ನು ಸಂಘಟಿಸಬೇಕು ಮತ್ತು ಸಂಘಟಿತ ಚಿಲ್ಲರೆ ವ್ಯಾಪಾರಿಗಳು ಒಪ್ಪಂದದ ಬೇಸಾಯದ ಮೂಲಕ ನೇರವಾಗಿ ಕೊಳ್ಳಲು ಪ್ರೋತ್ಸಾಹಿಸಬೇಕು. ಮಂಡಿ ವ್ಯವಸ್ಥೆಯನ್ನು ಮೀರಿಕೊಳ್ಳುವುದಕ್ಕೆ ಸಾಧ್ಯವಾಗಬೇಕು. ಜೊತೆಗೆ ಈಗಿರುವ ಎಪಿಎಂಸಿ ಮಂಡಿಗಳ ಮೂಲಸೌಕರ್ಯವನ್ನು ಸಂಪೂರ್ಣ ಸುಧಾರಿಸಬೇಕು. ಇದರೊಂದಿಗೆ ಮಾರುಕಟ್ಟೆ ಸುಧಾರಣೆಯನ್ನು ತರಬೇಕು. ಮೋದಿ ಸರ್ಕಾರ ತನ್ನ ಆಳ್ವಿಕೆಯಲ್ಲಿರುವ ಹಲವಾರು ರಾಜ್ಯಗಳಲ್ಲಿ ಎಪಿಎಂಸಿ ಸುಧಾರಣೆಯನ್ನು ಮಾಡುವುದಕ್ಕೆ ಇದ್ದ ಸೊಗಸಾದ ಅವಕಾಶವನ್ನು ಕಳೆದುಕೊಂಡಿದೆ. ಅಷ್ಟೇ ಅಲ್ಲ ಅಂತಹ ಅವಕಾಶಗಳು ದಿನದಿಂದ ದಿನಕ್ಕೆ ಕೈತಪ್ಪಿಹೋಗುತ್ತಿದೆ. ಅದು ಸಾಧ್ಯವಾಗದೆ ಎಲ್ಲವನ್ನೂ ಸೇರಿಸಿಕೊಂಡು ರಾಷ್ಟ್ರೀಯ ಮಾರುಕಟ್ಟೆಗಳನ್ನು ಸ್ಥಾಪಿಸುವ, ಬೆಲೆಗಳನ್ನು ಸ್ಥಿರಗೊಳಿಸುವುದಾಗಲಿ ಅಥವಾ ರೈತರಿಗೆ ಮತ್ತು ಗ್ರಾಹಕರಿಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡುವ ಸಾಧ್ಯತೆ ಕಡಿಮೆ. ಇನ್ನಾದರೂ ಈರುಳ್ಳಿ ದುಸ್ವಪ್ನದಿಂದ ಎಚ್ಚರಗೊಂಡು ಬಾಳಿಕೆಯ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವುದು ಒಳ್ಳೆಯದು. ಯೋಚನೆ ಮಾಡದೆ ತಕ್ಷಣಕ್ಕೆ ತೆಗೆದುಕೊಳ್ಳುವ ಕ್ರಮಗಳಿಂದ ಏನೂ ಸಾಧಿಸುವುದಕ್ಕೆ ಸಾಧ್ಯವಿಲ್ಲ.

(ಈ ಲೇಖನವು ಮೊದಲ ಬಾರಿಗೆ ಡಿಸೆಂಬರ್ 23, 2019 ರಂದು “ಕೆಲವು ಈರುಳ್ಳಿ ಪಾಠಗಳು” ಎಂಬ ಶೀರ್ಷಿಕೆಯಡಿಯಲ್ಲಿ ಮುದ್ರಣ ಆವೃತ್ತಿಯಲ್ಲಿ ಪ್ರಕಟವಾಯಿತು. ಗುಲಾತಿ ಇನ್ಫೋಸಿಸ್ ಚೇರ್ ಪ್ರೊಫೆಸರ್ ಫಾರ್ ಅಗ್ರಿಕಲ್ಚರ್ ಮತ್ತು ಹರ್ಷವರ್ಧನ್ ಐಸಿಆರ್‌ಐಇಆರ್ ನಲ್ಲಿ ಸಲಹೆಗಾರರಾಗಿದ್ದಾರೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...