Homeಮುಖಪುಟನಕ್ಕು ನಗಿಸುವ ಕಲೆ ಬಗ್ಗೆ ನಿಮಗೆ ಗೊತ್ತಾ? ಇದರಿಂದಾಗುವ ಪ್ರಯೋಜನಗಳು ಬಹಳ

ನಕ್ಕು ನಗಿಸುವ ಕಲೆ ಬಗ್ಗೆ ನಿಮಗೆ ಗೊತ್ತಾ? ಇದರಿಂದಾಗುವ ಪ್ರಯೋಜನಗಳು ಬಹಳ

- Advertisement -
- Advertisement -

ಜೀವನ ಕಲೆಗಳು: ಅಂಕಣ -30

ನಕ್ಕು ನಗಿಸುವ ಕಲೆ

ಇದೂ ಕಲಿಯುವಂತಹ ಕಲೆಯೇ ಎಂದು ನೀವು ಆಶ್ಚರ್ಯದಿಂದ ಕೇಳಬಹುದು. ಹೌದು, ಇದೂ ಸಹ ಕಲಿಯಬಹುದಾದಂತಹ ಜೀವನಾವಶ್ಯಕ ಕಲೆ. ನಕ್ಕು ನಗಿಸುವ ಕಲೆ (ಸೆನ್ಸ್ ಆಫ್ ಹ್ಯೂಮರ್) ಇಲ್ಲದ ಮಾನವ ರಸ ಹಿಂಡಿದ ಕಬ್ಬಿನ ಜಲ್ಲೆಯಂತೆ, ಹೆಚ್ಚು ಪ್ರಯೋಜನವಿಲ್ಲ. ಆದರೆ ನಾವು ಹೇಗೆ, ಏಕೆ ನಗುತ್ತೇವೆ ಮತ್ತು ಇತರರನ್ನು ನಗಿಸುತ್ತೇವೆ ಅದರ ಮೇಲೆ ನಮ್ಮ ವ್ಯಕ್ತಿತ್ವದ ಪರೀಕ್ಷೆಯೂ ಆಗುತ್ತದೆ. ನಗುವುದರಿಂದ ಹಲವು ರೋಗಗಳೂ ಸಹ ತಾವಾಗಿಯೇ ಗುಣವಾಗುತ್ತವೆ ಎಂಬುದು ಹಲವರ ಅಭಿಪ್ರಾಯ.

ಇಂದಿನ ಜೀವನದಲ್ಲಿ ಹಾಸ್ಯರಸವನ್ನು ಆಸ್ವಾದಿಸುವ ಮುನ್ನ ನಿಮ್ಮ ಹಾಸ್ಯದಿಂದ ಅಥವಾ ಆಸ್ವಾದನೆಯಿಂದ ಇನ್ನೊಬ್ಬರಿಗೆ ಕಷ್ಟವಾಗುತ್ತಿದೆಯೇ ಇಲ್ಲವೇ ಎಂಬುದನ್ನು ಮೊದಲು ಅರಿಯಿರಿ.

·         ಮೊದಲು ನಿಮ್ಮ ಮುಖದಲ್ಲಿ ನಗುವಿರಲಿ, ಆದರೆ ನಿಮ್ಮ ಹಾಸ್ಯವನ್ನು ಹಂಚಿಕೊಳ್ಳುವಾಗ ಮಿಕ್ಕವರಿಗಿಂತ ನೀವೇ ಹೆಚ್ಚಾಗಿ/ಜೋರಾಗಿ ನಗಬೇಡಿ.

·         ಹಾಸ್ಯವನ್ನು ಹುಡುಕುವ ಪ್ರಯತ್ನ ಸತತವಾಗಿ ಮಾಡುತ್ತಿರಿ. ಹಾಸ್ಯ ಸಾಹಿತ್ಯ ಓದಿ, ಕಾಮೆಡಿ ಶೋ ನೋಡಿ.

·         ಯಾರಾದರೂ ನಿಮ್ಮನ್ನು ಕೋಪ ಬರುವಂತೆ ಮಾಡಿದಲ್ಲಿ, ಅವರಿಗೆ ನಿಮ್ಮ ಕೋಪದ ಶಕ್ತಿ ತೋರಿಸದೆ, ನಿಮ್ಮ ಹಾಸ್ಯದ ರುಚಿ ತೋರಿಸಿ.

·         ನಿಮ್ಮ ಜೀವನದ ಅತ್ಯಂತ ಹೀನಾಯಕರ (embarassing) ಕ್ಷಣದ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳಿ. ಇದರಿಂದ ನಿಮ್ಮ ಮೇಲೆ ನೀವೇ ನಗುವುದನ್ನು ಕಲಿಯಬಹುದು.

·         ಇತರರು ನಿಮಗೆ ಹಾಸ್ಯ ಪ್ರಸಂಗ ತಿಳಿಸಿದಾಗ ಸಕ್ರಿಯವಾಗಿ ಕೇಳಿಸಿಕೊಳ್ಳುವುದನ್ನು ಮತ್ತು ನಗುವುದನ್ನು ಕಲಿಯಿರಿ.

ಹಾಸ್ಯ ಒಂದು ರೀತಿಯ ಸಮಾನತೆ ತರುವ ವ್ಯವಸ್ಥೆ. ನಮ್ಮನ್ನು ನಗಿಸುತ್ತಿರುವ ವ್ಯಕ್ತಿಯ ಮೇಲೆ ನಾವು ಸಹಜವಾಗಿ ಕೋಪ ಮಾಡಿಕೊಳ್ಳುವುದು ಕಷ್ಟ, ತನ್ನ ಚೇಷ್ಟೆಯಿಂದ ಅವಾಂತರ ಮಾಡಿದ ಮಗು ನಿಮ್ಮದೇ ಆಗಿರಬಹುದು. ಒಮ್ಮೆ ಅದರ ಹಿಂದಿರುವ ಹಾಸ್ಯವನ್ನು ಅರ್ಥ ಮಾಡಿಕೊಂಡರೆ, ನಾವೂ ಅವರೊಂದಿಗೆ ನಗಲು ಪ್ರಾರಂಭಿಸಬಹುದು. ಹೀಗೆ ಹಾಸ್ಯವನ್ನು ಹಂಚಿಕೊಳ್ಳುವುದರಿಂದ ಸ್ನೇಹವೂ, ಸೌಹಾರ್ದವೂ ಬೆಳೆಯುತ್ತದೆ.

ಹಾಸ್ಯ ಯಾರಿಗೆ ತಾನೇ ಇಷ್ಟವಾಗುದಿಲ್ಲ, ಚಿಕ್ಕ ಮಕ್ಕಳು ಕಾರ್ಟೂನ್ ಟಿವಿ ಮುಂದೆ ಮೈಮರೆತು ನೋಡುತ್ತ ಕುಳಿತಿರುವುದನ್ನು, ಮತ್ತೆ ಅದೇ ಸಮಯದಲ್ಲಿ, ತಾಯಿ ಅವರಿಗೆ ತಿಳಿಯದಂತೆಯೇ ಅವರಿಗೆ ಇಷ್ಟವಾಗದ ತಿನಿಸುಗಳನ್ನು ತಿನ್ನಿಸಿದರೂ, ತಿನ್ನುವ ದೃಶ್ಯವನ್ನು ಬಹುತೇಕ ಮನೆಗಳಲ್ಲಿ ಕಂಡಿದ್ದೇವೆ. ಆಗ ಅವರಿಗೆ ಇಷ್ಟವಾಗುವುದು ದೈಹಿಕ ಹಾಸ್ಯ, ಅಂದರೆ ಯಾರೋ ಜಾರಿ ಬೀಳುವುದು, ಬೀಳಿಸುವುದು, ಸೊಟ್ಟ ಮೂತಿಗಳನ್ನು ಮಾಡುವುದು, ಬೇರೆಯವರನ್ನು ಅಣಕಿಸುವುದು ಇತ್ಯಾದಿ. ಶಾಲೆಯ ಮಕ್ಕಳೂ ಸಹ ಸ್ವಲ್ಪ ದೊಡ್ಡವರಾದ ಮೇಲೆ, ಭಾಷೆಯ ಅಂಗವಾಗಿ, ನಗೆಹನಿ ಮುಂತಾದುದನ್ನು ಸಂಗ್ರಹಿಸುವ ಮತ್ತು ಸ್ನೇಹಿತರ ಜೊತೆ ಅದನ್ನು ಹಂಚಿಕೊಳ್ಳುವ ಕೆಲಸ ಪ್ರಾರಂಭಿಸುತ್ತಾರೆ. ಆದರೆ ಯಾವುದು ಚಿಕ್ಕಂದಿನಲ್ಲಿ ಹಾಸ್ಯ ಎಂದು ಅನಿಸುತ್ತಿತ್ತೋ ಅದು ದೊಡ್ಡವರಾದಂತೆ ಹಾಸ್ಯ ಎಂದು ಅನಿಸುವುದಿಲ್ಲ. ಹಾಗಾಗಿ ಭಾಷೆಯಲ್ಲಿ, ಸಾಹಿತ್ಯದಲ್ಲಿ, ಸನ್ನಿವೇಶದಲ್ಲಿ, ಸಿನಿಮಾ, ನಾಟಕ, ಟಿವಿ ಸೀರಿಯಲ್ ಇವುಗಳಲ್ಲಿ ಹಾಸ್ಯ ಹುಡುಕುವ ಕೆಲಸ ಮುಂದುವರೆಯುತ್ತದೆ.

ಹಾಸ್ಯ ಹೇಗಿರಬೇಕು? ಎಲ್ಲರೂ ಒಟ್ಟಾಗಿ ಕೂತು ಅದನ್ನು ಆಸ್ವಾದಿಸುವಂತಿರಬೇಕು. ಒಬ್ಬರಿಗೆ ಅಥವಾ ಕೆಲವರಿಗೆ ಹಿಂಸೆ ಕೊಡುವಂತಹ ಪ್ರಯತ್ನ ಹಾಸ್ಯವಲ್ಲ. ಒಬ್ಬರನ್ನು ಅಥವಾ ಒಂದು ಗುಂಪು/ಸಮುದಾಯವನ್ನು ಹೀಯಾಳಿಸುವುದು ಹಾಸ್ಯವಲ್ಲ. ಇನ್ನೊಬ್ಬರ ದೈಹಿಕ ನ್ಯೂನತೆಯನ್ನು ಅಣಕಿಸುವುದು, ಅದರ ಮೇಲೆ ಟೀಕೆ ಟಿಪ್ಪಣಿ ಮಾಡುವುದು ಹಾಸ್ಯವಲ್ಲ.ಅದರ ಸೃಷ್ಟಿ ಹೇಗೆ ಮತ್ತು ಏಕೆ ಆಗಿದೆ ಎಂಬುದರ ಮೇಲೆಯೂ ಹಾಸ್ಯದ ಗುಣಮಟ್ಟ ನಿರ್ಧಾರವಾಗುತ್ತದೆ. ಎಲ್ಲಾ ಹಾಸ್ಯವೂ ಜನರು ಗಹಗಹಿಸಿ ನಗುವಂತಹ ರೀತಿಯದ್ದಾಗಿರಬೇಕಿಲ್ಲ. ಬಿಗುಪಿನ ವಾತಾವರಣವನ್ನು ತಿಳಿಗೊಳಿಸುವ ಮಂದಹಾಸ್ಯವೂ ಪ್ರಯೋಜನಕಾರಿ. ಒಬ್ಬರ ಅಥವಾ ಒಂದು ವ್ಯವಸ್ಥೆಯ ದೌರ್ಬಲ್ಯವನ್ನು ಹಾಸ್ಯದ ಮೂಲಕ ತೋರಿಸಿ, ಅದನ್ನು ಸರಿಪಡಿಸುವ ಅಥವಾ ಇತರರಿಗೆ ತಿಳಿಸುವ ಪ್ರಯತ್ನದಲ್ಲಿ ಹಾಸ್ಯ ಮಾಧ್ಯಮವಾದಲ್ಲಿ ಅದಕ್ಕೆ ಬೆಲೆ ಇರುತ್ತದೆ.

ಸಿಟ್ಟಿನಿಂದ ಅಥವಾ ಗಂಭೀರವಾಗಿ ಮಾಡಿದ ವಿಮರ್ಶಾತ್ಮಕ ಟೀಕೆಗಿಂತಲೂ ಹಾಸ್ಯದಿಂದ ಮಾಡಿದ ಟೀಕೆ ಎದುರಾಳಿಯ ಗಂಟಲಿಗೆ ಸಿಕ್ಕಿಕೊಳ್ಳದೆ ಸಲೀಸಾಗಿ ಮನಸ್ಸಿಗೆ ಇಳಿಯುತ್ತದೆ. ಸಂವಹನದಲ್ಲಿ ಕಷ್ಟಕರ ಸಂದೇಶವನ್ನು ಸಮರ್ಪಕವಾಗಿ  ತಲುಪಿಸಲು ಹಾಸ್ಯ ಸಹಕಾರಿಯಾಗುತ್ತದೆ. ಹಾಸ್ಯ ಅವಮಾನ ಅಥವಾ ಅವಹೇಳನಕಾರಿಯಾಗಿರಬಾರದು.

ಹಾಸ್ಯದಲ್ಲಿ ಸನ್ನಿವೇಶ ಮುಖ್ಯ ಪಾತ್ರ ವಹಿಸುತ್ತದೆ. ಒಂದೇ ತರಹದ ಹಾಸ್ಯ ಎಲ್ಲಾ ಸನ್ನಿವೇಶದಲ್ಲೂ ಸರಿಹೊಂದುವುದಿಲ್ಲ. ನಿಮ್ಮ ಹಾಸ್ಯದ ಗುರಿ ಯಾರು? ಇದರಿಂದ ಕೇಳುವವರಲ್ಲಿ ಯಾವ ಭಾವನೆ ಜಾಗೃತವಾಗುತ್ತದೆ ಮತ್ತು ಅದು ಇಲ್ಲಿ ಕೇಳಿಸಿಕೊಳ್ಳುತ್ತಿರುವ ಗುಂಪಿಗೆ ಸೂಕ್ತವೇ? ಇದೇ ಹಾಸ್ಯ ಮುಂದೆ ಬೇರೆಯವರಿಗೆ ತಲುಪಿದರೆ ಅದರ ಪರಿಣಾಮ ಏನು? ಹಾಸ್ಯಕ್ಕೆ ಇದು ಸರಿಯಾದ ಸಮಯವೇ? ಇವುಗಳನ್ನು ಪರಿಗಣಿಸಿನಿಮ್ಮ ಹಾಸ್ಯದ ಬತ್ತಳಿಕೆಯನ್ನು ಬಿಚ್ಚಿ. ಅಕಸ್ಮಾತ್ ನಿಮ್ಮ ಹಾಸ್ಯದ ಪ್ರಯತ್ನ ಸರಿಹೋಗಲಿಲ್ಲವೆಂದರೆ ಕೂಡಲೇ ಪರಿಸ್ಥಿತಿಯನ್ನು ನಿಯಂತ್ರಿಸಿ. ಯಾರಿಗೆ ಅದರಿಂದ ನೋವಾಗಿದೆಯೋ ಅವರ ಕ್ಷಮೆ ಕೋರಿ.

ನಮ್ಮ ಸೋದರಮಾವ ಅರವತ್ತರ ದಶಕದಲ್ಲಿ ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದರು. ಭಾರತ-ಚೀನ ಯುದ್ಧದ ನಂತರದ ರೇಷನ್ ಕಾಲ. ಇನ್ನೂ ಮದುವೆಯಾಗದ ಮಾವನ ರೇಷನ್ ಕಾರ್ಡಿನಲ್ಲಿದ್ದುದು ಒಂದೇ ಹೆಸರು. ಕಾಫಿ ಮಾತ್ರ ಮನೆಯಲ್ಲಿ ಮಾಡಿಕೊಂಡು ಊಟಕ್ಕೆ ಖಾನಾವಳಿ ಆಶ್ರಯಿಸಿದ್ದರು. ಸಕ್ಕರೆ ಹೊರಗೆ ಮಾರುಕಟ್ಟೆಯಲ್ಲಿ ಸಿಗುವ ವಸ್ತುವಾಗಿರಲಿಲ್ಲ. ಒಬ್ಬರಿಗೆ ಒಂದು ತಿಂಗಳಿಗೆ ಕೇವಲ ಒಂದು ಪೌಂಡ್ (454 ಗ್ರಾಂ) ಸಕ್ಕರೆ ಸಿಗುತ್ತಿತ್ತು. ಅದನ್ನು ಪ್ರತಿ ವಾರ ಪಡಿತರ ಅಂಗಡಿಯ ಸರದಿಯಲ್ಲಿ ನಿಂತು, ಕಾಯ್ದು ತರಬೇಕಿತ್ತು. ಇವರ ಸರದಿ ಬಂದಾಗ ಕೇವಲ ಸಕ್ಕರೆ ಎಂದಿದ್ದು ನೋಡಿ, ಅಂಗಡಿಯವನು ಲೆಕ್ಕ ಹಾಕಿ ಇವರ ಪಾಲಿನ ಸಕ್ಕರೆಯನ್ನು ಕಾಗದದ ಪೊಟ್ಟಣದಲ್ಲಿ ಕಟ್ಟುವ ಮುನ್ನ ಕೇಳಿದ “ಇದನ್ನು ಇಲ್ಲೇ ತಿನ್ನುತ್ತೀರೋ ಅಥವಾ ಮನೆಗೆ ಒಯ್ಯುತ್ತೀರೋ” ಎಂದು ಕೇಳಿದನಂತೆ. ಏಕೆಂದರೆ ಅವರಿಗೆ ಸಿಗುತ್ತಿದ್ದದ್ದು ಕೇವಲ 113 ಗ್ರಾಂ ಸಕ್ಕರೆ. ಅದನ್ನು ಮಾವ ಒಂದು ವಾರಕ್ಕೆ ಸಾಕಾಗುವಂತೆ ನಿರ್ವಹಣೆ ಮಾಡಿಕೊಳ್ಳಬೇಕಾಗಿತ್ತು. ಇದರಲ್ಲಿ ಹಾಸ್ಯ ಎಲ್ಲಿದೆ ಎಂದು ಕೆಲವರಿಗೆ ಅನಿಸಬಹುದು.

ಹಾಸ್ಯ ಎಲ್ಲೆಡೆ ಹರಡಿರುತ್ತದೆ. ಅದನ್ನು ಸರಿಯಾಗಿ ಹೆಕ್ಕಿ, ತೊಳೆದು, ಸರಿಯಾದ ಸ್ಥಳದಲ್ಲಿ ಮಿಂಚುವಂತೆ ಪ್ರದರ್ಶಿಸಿದರೆ ಅದು ನಗೆ ಹನಿಯಾಗುತ್ತದೆ. ಹೆಚ್ಚಿನ ಅಳತೆಯಲ್ಲಿದ್ದರೆ ನಗೆಯ ಹೊಳೆಯಾಗುತ್ತದೆ. ನಮ್ಮ ದಿನನಿತ್ಯದ ಜೀವನದಲ್ಲಿ ಅನೇಕ ಸ್ವಾರಸ್ಯಕರ ಘಟನೆಗಳು ನಡೆಯುತ್ತಲೇ ಇರುತ್ತವೆ. ಅವನ್ನು ಅಷ್ಟೇ ರೋಚಕವಾಗಿ ಇನ್ನೊಬ್ಬರಿಗೆ ಬಣ್ಣಿಸುವುದೇ ಓರ್ವ ಹಾಸ್ಯ ಕಲಾವಿದನ ಸಾಮರ್ಥ್ಯ. ಎಲ್ಲರೂ ಹಾಸ್ಯ ಕಲಾವಿದರಾಗಬೇಕಿಲ್ಲ, ಹಾಸ್ಯವನ್ನು ಗುರುತಿಸಿ, ಸವಿದು ಇತರರೊಂದಿಗೆ ಹಂಚಿಕೊಂಡರೆ ಸಾಕು.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...