Homeಮುಖಪುಟನಕ್ಕು ನಗಿಸುವ ಕಲೆ ಬಗ್ಗೆ ನಿಮಗೆ ಗೊತ್ತಾ? ಇದರಿಂದಾಗುವ ಪ್ರಯೋಜನಗಳು ಬಹಳ

ನಕ್ಕು ನಗಿಸುವ ಕಲೆ ಬಗ್ಗೆ ನಿಮಗೆ ಗೊತ್ತಾ? ಇದರಿಂದಾಗುವ ಪ್ರಯೋಜನಗಳು ಬಹಳ

- Advertisement -
- Advertisement -

ಜೀವನ ಕಲೆಗಳು: ಅಂಕಣ -30

ನಕ್ಕು ನಗಿಸುವ ಕಲೆ

ಇದೂ ಕಲಿಯುವಂತಹ ಕಲೆಯೇ ಎಂದು ನೀವು ಆಶ್ಚರ್ಯದಿಂದ ಕೇಳಬಹುದು. ಹೌದು, ಇದೂ ಸಹ ಕಲಿಯಬಹುದಾದಂತಹ ಜೀವನಾವಶ್ಯಕ ಕಲೆ. ನಕ್ಕು ನಗಿಸುವ ಕಲೆ (ಸೆನ್ಸ್ ಆಫ್ ಹ್ಯೂಮರ್) ಇಲ್ಲದ ಮಾನವ ರಸ ಹಿಂಡಿದ ಕಬ್ಬಿನ ಜಲ್ಲೆಯಂತೆ, ಹೆಚ್ಚು ಪ್ರಯೋಜನವಿಲ್ಲ. ಆದರೆ ನಾವು ಹೇಗೆ, ಏಕೆ ನಗುತ್ತೇವೆ ಮತ್ತು ಇತರರನ್ನು ನಗಿಸುತ್ತೇವೆ ಅದರ ಮೇಲೆ ನಮ್ಮ ವ್ಯಕ್ತಿತ್ವದ ಪರೀಕ್ಷೆಯೂ ಆಗುತ್ತದೆ. ನಗುವುದರಿಂದ ಹಲವು ರೋಗಗಳೂ ಸಹ ತಾವಾಗಿಯೇ ಗುಣವಾಗುತ್ತವೆ ಎಂಬುದು ಹಲವರ ಅಭಿಪ್ರಾಯ.

ಇಂದಿನ ಜೀವನದಲ್ಲಿ ಹಾಸ್ಯರಸವನ್ನು ಆಸ್ವಾದಿಸುವ ಮುನ್ನ ನಿಮ್ಮ ಹಾಸ್ಯದಿಂದ ಅಥವಾ ಆಸ್ವಾದನೆಯಿಂದ ಇನ್ನೊಬ್ಬರಿಗೆ ಕಷ್ಟವಾಗುತ್ತಿದೆಯೇ ಇಲ್ಲವೇ ಎಂಬುದನ್ನು ಮೊದಲು ಅರಿಯಿರಿ.

·         ಮೊದಲು ನಿಮ್ಮ ಮುಖದಲ್ಲಿ ನಗುವಿರಲಿ, ಆದರೆ ನಿಮ್ಮ ಹಾಸ್ಯವನ್ನು ಹಂಚಿಕೊಳ್ಳುವಾಗ ಮಿಕ್ಕವರಿಗಿಂತ ನೀವೇ ಹೆಚ್ಚಾಗಿ/ಜೋರಾಗಿ ನಗಬೇಡಿ.

·         ಹಾಸ್ಯವನ್ನು ಹುಡುಕುವ ಪ್ರಯತ್ನ ಸತತವಾಗಿ ಮಾಡುತ್ತಿರಿ. ಹಾಸ್ಯ ಸಾಹಿತ್ಯ ಓದಿ, ಕಾಮೆಡಿ ಶೋ ನೋಡಿ.

·         ಯಾರಾದರೂ ನಿಮ್ಮನ್ನು ಕೋಪ ಬರುವಂತೆ ಮಾಡಿದಲ್ಲಿ, ಅವರಿಗೆ ನಿಮ್ಮ ಕೋಪದ ಶಕ್ತಿ ತೋರಿಸದೆ, ನಿಮ್ಮ ಹಾಸ್ಯದ ರುಚಿ ತೋರಿಸಿ.

·         ನಿಮ್ಮ ಜೀವನದ ಅತ್ಯಂತ ಹೀನಾಯಕರ (embarassing) ಕ್ಷಣದ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳಿ. ಇದರಿಂದ ನಿಮ್ಮ ಮೇಲೆ ನೀವೇ ನಗುವುದನ್ನು ಕಲಿಯಬಹುದು.

·         ಇತರರು ನಿಮಗೆ ಹಾಸ್ಯ ಪ್ರಸಂಗ ತಿಳಿಸಿದಾಗ ಸಕ್ರಿಯವಾಗಿ ಕೇಳಿಸಿಕೊಳ್ಳುವುದನ್ನು ಮತ್ತು ನಗುವುದನ್ನು ಕಲಿಯಿರಿ.

ಹಾಸ್ಯ ಒಂದು ರೀತಿಯ ಸಮಾನತೆ ತರುವ ವ್ಯವಸ್ಥೆ. ನಮ್ಮನ್ನು ನಗಿಸುತ್ತಿರುವ ವ್ಯಕ್ತಿಯ ಮೇಲೆ ನಾವು ಸಹಜವಾಗಿ ಕೋಪ ಮಾಡಿಕೊಳ್ಳುವುದು ಕಷ್ಟ, ತನ್ನ ಚೇಷ್ಟೆಯಿಂದ ಅವಾಂತರ ಮಾಡಿದ ಮಗು ನಿಮ್ಮದೇ ಆಗಿರಬಹುದು. ಒಮ್ಮೆ ಅದರ ಹಿಂದಿರುವ ಹಾಸ್ಯವನ್ನು ಅರ್ಥ ಮಾಡಿಕೊಂಡರೆ, ನಾವೂ ಅವರೊಂದಿಗೆ ನಗಲು ಪ್ರಾರಂಭಿಸಬಹುದು. ಹೀಗೆ ಹಾಸ್ಯವನ್ನು ಹಂಚಿಕೊಳ್ಳುವುದರಿಂದ ಸ್ನೇಹವೂ, ಸೌಹಾರ್ದವೂ ಬೆಳೆಯುತ್ತದೆ.

ಹಾಸ್ಯ ಯಾರಿಗೆ ತಾನೇ ಇಷ್ಟವಾಗುದಿಲ್ಲ, ಚಿಕ್ಕ ಮಕ್ಕಳು ಕಾರ್ಟೂನ್ ಟಿವಿ ಮುಂದೆ ಮೈಮರೆತು ನೋಡುತ್ತ ಕುಳಿತಿರುವುದನ್ನು, ಮತ್ತೆ ಅದೇ ಸಮಯದಲ್ಲಿ, ತಾಯಿ ಅವರಿಗೆ ತಿಳಿಯದಂತೆಯೇ ಅವರಿಗೆ ಇಷ್ಟವಾಗದ ತಿನಿಸುಗಳನ್ನು ತಿನ್ನಿಸಿದರೂ, ತಿನ್ನುವ ದೃಶ್ಯವನ್ನು ಬಹುತೇಕ ಮನೆಗಳಲ್ಲಿ ಕಂಡಿದ್ದೇವೆ. ಆಗ ಅವರಿಗೆ ಇಷ್ಟವಾಗುವುದು ದೈಹಿಕ ಹಾಸ್ಯ, ಅಂದರೆ ಯಾರೋ ಜಾರಿ ಬೀಳುವುದು, ಬೀಳಿಸುವುದು, ಸೊಟ್ಟ ಮೂತಿಗಳನ್ನು ಮಾಡುವುದು, ಬೇರೆಯವರನ್ನು ಅಣಕಿಸುವುದು ಇತ್ಯಾದಿ. ಶಾಲೆಯ ಮಕ್ಕಳೂ ಸಹ ಸ್ವಲ್ಪ ದೊಡ್ಡವರಾದ ಮೇಲೆ, ಭಾಷೆಯ ಅಂಗವಾಗಿ, ನಗೆಹನಿ ಮುಂತಾದುದನ್ನು ಸಂಗ್ರಹಿಸುವ ಮತ್ತು ಸ್ನೇಹಿತರ ಜೊತೆ ಅದನ್ನು ಹಂಚಿಕೊಳ್ಳುವ ಕೆಲಸ ಪ್ರಾರಂಭಿಸುತ್ತಾರೆ. ಆದರೆ ಯಾವುದು ಚಿಕ್ಕಂದಿನಲ್ಲಿ ಹಾಸ್ಯ ಎಂದು ಅನಿಸುತ್ತಿತ್ತೋ ಅದು ದೊಡ್ಡವರಾದಂತೆ ಹಾಸ್ಯ ಎಂದು ಅನಿಸುವುದಿಲ್ಲ. ಹಾಗಾಗಿ ಭಾಷೆಯಲ್ಲಿ, ಸಾಹಿತ್ಯದಲ್ಲಿ, ಸನ್ನಿವೇಶದಲ್ಲಿ, ಸಿನಿಮಾ, ನಾಟಕ, ಟಿವಿ ಸೀರಿಯಲ್ ಇವುಗಳಲ್ಲಿ ಹಾಸ್ಯ ಹುಡುಕುವ ಕೆಲಸ ಮುಂದುವರೆಯುತ್ತದೆ.

ಹಾಸ್ಯ ಹೇಗಿರಬೇಕು? ಎಲ್ಲರೂ ಒಟ್ಟಾಗಿ ಕೂತು ಅದನ್ನು ಆಸ್ವಾದಿಸುವಂತಿರಬೇಕು. ಒಬ್ಬರಿಗೆ ಅಥವಾ ಕೆಲವರಿಗೆ ಹಿಂಸೆ ಕೊಡುವಂತಹ ಪ್ರಯತ್ನ ಹಾಸ್ಯವಲ್ಲ. ಒಬ್ಬರನ್ನು ಅಥವಾ ಒಂದು ಗುಂಪು/ಸಮುದಾಯವನ್ನು ಹೀಯಾಳಿಸುವುದು ಹಾಸ್ಯವಲ್ಲ. ಇನ್ನೊಬ್ಬರ ದೈಹಿಕ ನ್ಯೂನತೆಯನ್ನು ಅಣಕಿಸುವುದು, ಅದರ ಮೇಲೆ ಟೀಕೆ ಟಿಪ್ಪಣಿ ಮಾಡುವುದು ಹಾಸ್ಯವಲ್ಲ.ಅದರ ಸೃಷ್ಟಿ ಹೇಗೆ ಮತ್ತು ಏಕೆ ಆಗಿದೆ ಎಂಬುದರ ಮೇಲೆಯೂ ಹಾಸ್ಯದ ಗುಣಮಟ್ಟ ನಿರ್ಧಾರವಾಗುತ್ತದೆ. ಎಲ್ಲಾ ಹಾಸ್ಯವೂ ಜನರು ಗಹಗಹಿಸಿ ನಗುವಂತಹ ರೀತಿಯದ್ದಾಗಿರಬೇಕಿಲ್ಲ. ಬಿಗುಪಿನ ವಾತಾವರಣವನ್ನು ತಿಳಿಗೊಳಿಸುವ ಮಂದಹಾಸ್ಯವೂ ಪ್ರಯೋಜನಕಾರಿ. ಒಬ್ಬರ ಅಥವಾ ಒಂದು ವ್ಯವಸ್ಥೆಯ ದೌರ್ಬಲ್ಯವನ್ನು ಹಾಸ್ಯದ ಮೂಲಕ ತೋರಿಸಿ, ಅದನ್ನು ಸರಿಪಡಿಸುವ ಅಥವಾ ಇತರರಿಗೆ ತಿಳಿಸುವ ಪ್ರಯತ್ನದಲ್ಲಿ ಹಾಸ್ಯ ಮಾಧ್ಯಮವಾದಲ್ಲಿ ಅದಕ್ಕೆ ಬೆಲೆ ಇರುತ್ತದೆ.

ಸಿಟ್ಟಿನಿಂದ ಅಥವಾ ಗಂಭೀರವಾಗಿ ಮಾಡಿದ ವಿಮರ್ಶಾತ್ಮಕ ಟೀಕೆಗಿಂತಲೂ ಹಾಸ್ಯದಿಂದ ಮಾಡಿದ ಟೀಕೆ ಎದುರಾಳಿಯ ಗಂಟಲಿಗೆ ಸಿಕ್ಕಿಕೊಳ್ಳದೆ ಸಲೀಸಾಗಿ ಮನಸ್ಸಿಗೆ ಇಳಿಯುತ್ತದೆ. ಸಂವಹನದಲ್ಲಿ ಕಷ್ಟಕರ ಸಂದೇಶವನ್ನು ಸಮರ್ಪಕವಾಗಿ  ತಲುಪಿಸಲು ಹಾಸ್ಯ ಸಹಕಾರಿಯಾಗುತ್ತದೆ. ಹಾಸ್ಯ ಅವಮಾನ ಅಥವಾ ಅವಹೇಳನಕಾರಿಯಾಗಿರಬಾರದು.

ಹಾಸ್ಯದಲ್ಲಿ ಸನ್ನಿವೇಶ ಮುಖ್ಯ ಪಾತ್ರ ವಹಿಸುತ್ತದೆ. ಒಂದೇ ತರಹದ ಹಾಸ್ಯ ಎಲ್ಲಾ ಸನ್ನಿವೇಶದಲ್ಲೂ ಸರಿಹೊಂದುವುದಿಲ್ಲ. ನಿಮ್ಮ ಹಾಸ್ಯದ ಗುರಿ ಯಾರು? ಇದರಿಂದ ಕೇಳುವವರಲ್ಲಿ ಯಾವ ಭಾವನೆ ಜಾಗೃತವಾಗುತ್ತದೆ ಮತ್ತು ಅದು ಇಲ್ಲಿ ಕೇಳಿಸಿಕೊಳ್ಳುತ್ತಿರುವ ಗುಂಪಿಗೆ ಸೂಕ್ತವೇ? ಇದೇ ಹಾಸ್ಯ ಮುಂದೆ ಬೇರೆಯವರಿಗೆ ತಲುಪಿದರೆ ಅದರ ಪರಿಣಾಮ ಏನು? ಹಾಸ್ಯಕ್ಕೆ ಇದು ಸರಿಯಾದ ಸಮಯವೇ? ಇವುಗಳನ್ನು ಪರಿಗಣಿಸಿನಿಮ್ಮ ಹಾಸ್ಯದ ಬತ್ತಳಿಕೆಯನ್ನು ಬಿಚ್ಚಿ. ಅಕಸ್ಮಾತ್ ನಿಮ್ಮ ಹಾಸ್ಯದ ಪ್ರಯತ್ನ ಸರಿಹೋಗಲಿಲ್ಲವೆಂದರೆ ಕೂಡಲೇ ಪರಿಸ್ಥಿತಿಯನ್ನು ನಿಯಂತ್ರಿಸಿ. ಯಾರಿಗೆ ಅದರಿಂದ ನೋವಾಗಿದೆಯೋ ಅವರ ಕ್ಷಮೆ ಕೋರಿ.

ನಮ್ಮ ಸೋದರಮಾವ ಅರವತ್ತರ ದಶಕದಲ್ಲಿ ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದರು. ಭಾರತ-ಚೀನ ಯುದ್ಧದ ನಂತರದ ರೇಷನ್ ಕಾಲ. ಇನ್ನೂ ಮದುವೆಯಾಗದ ಮಾವನ ರೇಷನ್ ಕಾರ್ಡಿನಲ್ಲಿದ್ದುದು ಒಂದೇ ಹೆಸರು. ಕಾಫಿ ಮಾತ್ರ ಮನೆಯಲ್ಲಿ ಮಾಡಿಕೊಂಡು ಊಟಕ್ಕೆ ಖಾನಾವಳಿ ಆಶ್ರಯಿಸಿದ್ದರು. ಸಕ್ಕರೆ ಹೊರಗೆ ಮಾರುಕಟ್ಟೆಯಲ್ಲಿ ಸಿಗುವ ವಸ್ತುವಾಗಿರಲಿಲ್ಲ. ಒಬ್ಬರಿಗೆ ಒಂದು ತಿಂಗಳಿಗೆ ಕೇವಲ ಒಂದು ಪೌಂಡ್ (454 ಗ್ರಾಂ) ಸಕ್ಕರೆ ಸಿಗುತ್ತಿತ್ತು. ಅದನ್ನು ಪ್ರತಿ ವಾರ ಪಡಿತರ ಅಂಗಡಿಯ ಸರದಿಯಲ್ಲಿ ನಿಂತು, ಕಾಯ್ದು ತರಬೇಕಿತ್ತು. ಇವರ ಸರದಿ ಬಂದಾಗ ಕೇವಲ ಸಕ್ಕರೆ ಎಂದಿದ್ದು ನೋಡಿ, ಅಂಗಡಿಯವನು ಲೆಕ್ಕ ಹಾಕಿ ಇವರ ಪಾಲಿನ ಸಕ್ಕರೆಯನ್ನು ಕಾಗದದ ಪೊಟ್ಟಣದಲ್ಲಿ ಕಟ್ಟುವ ಮುನ್ನ ಕೇಳಿದ “ಇದನ್ನು ಇಲ್ಲೇ ತಿನ್ನುತ್ತೀರೋ ಅಥವಾ ಮನೆಗೆ ಒಯ್ಯುತ್ತೀರೋ” ಎಂದು ಕೇಳಿದನಂತೆ. ಏಕೆಂದರೆ ಅವರಿಗೆ ಸಿಗುತ್ತಿದ್ದದ್ದು ಕೇವಲ 113 ಗ್ರಾಂ ಸಕ್ಕರೆ. ಅದನ್ನು ಮಾವ ಒಂದು ವಾರಕ್ಕೆ ಸಾಕಾಗುವಂತೆ ನಿರ್ವಹಣೆ ಮಾಡಿಕೊಳ್ಳಬೇಕಾಗಿತ್ತು. ಇದರಲ್ಲಿ ಹಾಸ್ಯ ಎಲ್ಲಿದೆ ಎಂದು ಕೆಲವರಿಗೆ ಅನಿಸಬಹುದು.

ಹಾಸ್ಯ ಎಲ್ಲೆಡೆ ಹರಡಿರುತ್ತದೆ. ಅದನ್ನು ಸರಿಯಾಗಿ ಹೆಕ್ಕಿ, ತೊಳೆದು, ಸರಿಯಾದ ಸ್ಥಳದಲ್ಲಿ ಮಿಂಚುವಂತೆ ಪ್ರದರ್ಶಿಸಿದರೆ ಅದು ನಗೆ ಹನಿಯಾಗುತ್ತದೆ. ಹೆಚ್ಚಿನ ಅಳತೆಯಲ್ಲಿದ್ದರೆ ನಗೆಯ ಹೊಳೆಯಾಗುತ್ತದೆ. ನಮ್ಮ ದಿನನಿತ್ಯದ ಜೀವನದಲ್ಲಿ ಅನೇಕ ಸ್ವಾರಸ್ಯಕರ ಘಟನೆಗಳು ನಡೆಯುತ್ತಲೇ ಇರುತ್ತವೆ. ಅವನ್ನು ಅಷ್ಟೇ ರೋಚಕವಾಗಿ ಇನ್ನೊಬ್ಬರಿಗೆ ಬಣ್ಣಿಸುವುದೇ ಓರ್ವ ಹಾಸ್ಯ ಕಲಾವಿದನ ಸಾಮರ್ಥ್ಯ. ಎಲ್ಲರೂ ಹಾಸ್ಯ ಕಲಾವಿದರಾಗಬೇಕಿಲ್ಲ, ಹಾಸ್ಯವನ್ನು ಗುರುತಿಸಿ, ಸವಿದು ಇತರರೊಂದಿಗೆ ಹಂಚಿಕೊಂಡರೆ ಸಾಕು.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...