Homeಮುಖಪುಟಮತ್ತೊಬ್ಬರೊಂದಿಗೆ ಮಾತಾಡುವಾಗ ನಿಮ್ಮ 'ಬಾಡಿ ಲಾಂಗ್ವೇಜ್' ಹೇಗಿರಬೇಕು ಗೊತ್ತೆ?

ಮತ್ತೊಬ್ಬರೊಂದಿಗೆ ಮಾತಾಡುವಾಗ ನಿಮ್ಮ ‘ಬಾಡಿ ಲಾಂಗ್ವೇಜ್’ ಹೇಗಿರಬೇಕು ಗೊತ್ತೆ?

- Advertisement -
- Advertisement -

ಜೀವನ ಕಲೆಗಳು: ಅಂಕಣ -14

ಸಂವಹನ ಕಲೆ –2 ಶಬ್ದಾತೀತ ಭಾಷೆ (ಬಾಡಿ ಲಾಂಗ್ವೇಜ್ – ನಾನ್ ವರ್ಬಲ್ ಕಮ್ಯುನಿಕೇಷನ್)

ಸಂವಹನ ಕಲೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ಮಾಧ್ಯಮ ಶಬ್ದಾತೀತ ದೈಹಿಕ ಭಾಷೆ ಅಥವಾ ಬಾಡಿ ಲಾಂಗ್ವೇಜ್ (ನಾನ್-ವರ್ಬಲ್ ಕಮ್ಯುನಿಕೇಷನ್) ಎಂದು ಕರೆಯಲ್ಪಡುತ್ತದೆ. ಇದು ಶಬ್ದ ಅಥವಾ ಭಾಷೆಗಿಂತಲೂ ಹೆಚ್ಚು ಪ್ರಭಾವಶಾಲಿಯಾದ ಮಾಧ್ಯಮ. ಶಬ್ದ ಮತ್ತು ಭಾಷೆಯ ಜೊತೆ ಸೇರಿದಾಗ ಇದು ಸಂಪೂರ್ಣ ಶಕ್ತಿಶಾಲಿ ವಾಕ್-ದೃಶ್ಯ ಮಾಧ್ಯಮವಾಗುತ್ತದೆ. ನಮ್ಮ ದಿನನಿತ್ಯದ ಸಂವಹನದಲ್ಲಿ ಸುಮಾರು 60-70% ಸಮಯ ಬಳಕೆಯಾಗುವ ಮಾಧ್ಯಮ. ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್, ವಾಟ್ಸಾಪ್, ಟೆಲಿಗ್ರಾಮ್, ಇ-ಮೇಲ್ ಮುಂತಾದವುಗಳಲ್ಲಿ ಇದರ ಬಳಕೆ ದಿನದಿನಕ್ಕೆ ಹೆಚ್ಚಾಗುತ್ತಿದೆ. ಭಾವನೆಗಳನ್ನು ಸ್ಥಬ್ದ ಅಥವಾ ಚಲಿಸುವ ಚಿತ್ರಗಳ ಮೂಲಕ ಬಿಂಬಿಸುವ ಇವನ್ನು ಎಮೋಟಿಕಾನ್ ಅಥವಾ ಎಮೋಜಿ ಎನ್ನುತ್ತಾರೆ.

ದೈಹಿಕ ಭಾಷೆ ನಾವು ಆಡುವ ಭಾಷೆಗಿಂತ 10-15 ಪಟ್ಟು ಹೆಚ್ಚು ಬಲಶಾಲಿಯಾಗಿರುತ್ತದೆ. ಇದರ ಬಳಕೆಯಿಂದ ಸಂವಹನ ಸುಲಭವಾಗುತ್ತದೆ, ಆದರೆ ದೈಹಿಕ ಭಾಷೆ ಅಸಮರ್ಪಕವಾಗಿದ್ದಾಗ ಸಂದೇಶ ತನ್ನ ಅರ್ಥ ಕಳೆದುಕೊಳ್ಳುವುದಷ್ಟೇ ಅಲ್ಲ, ಅಪಾರ್ಥಕ್ಕೂ ಎಡೆ ಮಾಡಿಕೊಡುತ್ತದೆ. ಶಬ್ದಾತೀತ ದೈಹಿಕ ಭಾಷೆಯಲ್ಲಿ ಬಳಕೆಯಾಗುವ ಅಂಶಗಳು:

·         ದೃಷ್ಟಿ ಸಂಪರ್ಕ (ಐ ಕಾಂಟ್ಯಾಕ್ಟ್)

·         ಮುಖ ತಿರುಚುವಿಕೆ

·         ಕಣ್ಣು ಮಿಟುಕಿಸುವುದು

·         ಮೈ-ಕೈ ಹಾವಭಾವ

·         ದೇಹದ ನಿಲುವು (ಪಾಷ್ಚರ್)

·         ಸಾಮೀಪ್ಯ (ಅಥವಾ ದೂರ)

·         ಸ್ಪರ್ಶ

·         ವಿನೋದ/ಅಣಕು

·         ಮೌನ

·         ಸಂಕೇತಗಳು

·         ಕಣ್ಣಿಗೆ ಕಾಣುವಂತಹ ಇತರ ಚಿನ್ಹೆಗಳು

ಇವೆಲ್ಲವನ್ನೂ ಸಮರ್ಪಕವಾಗಿ ಬಳಸಿದಲ್ಲಿ ಸಂವಹನ ಪ್ರಭಾವಶಾಲಿಯಾಗಿರುತ್ತದೆ. ದೈಹಿಕ ಸಂದೇಶಗಳು ಮಾತಿನ ಅರ್ಥಕ್ಕೆ ಪೂರಕವಾಗಿರಬೇಕು, ಅದರ ಮೌಲ್ಯವನ್ನು ವೃದ್ಧಿಸುವಂತಿರಬೇಕು, ಹಾಗಿಲ್ಲದಿದ್ದಾಗ  ಅನರ್ಥಕ್ಕೂ ಆಸ್ಪದವಿರುತ್ತದೆ. ಕೆಳಕಂಡ ಚಿತ್ರದಲ್ಲಿ ದೈಹಿಕ ಭಾಷೆಗೂ ಹೇಳಿರುವ ಮಾತಿಗೂ ತಾಳೆ ಇಲ್ಲದಿರುವುದನ್ನು ಕಾಣಬಹುದು.

ದೈಹಿಕ ಭಾಷೆಯನ್ನು ಬಳಸಿಕೊಳ್ಳುವುದು ಹೇಗೆ?

ದೃಷ್ಟಿ-ಸಂಪರ್ಕ: ನೀವು ಮಾತನಾಡುತ್ತಿರುವವರ ಜೊತೆ ದೃಷ್ಟಿ ಸಂಪರ್ಕದಿಂದಿರಿ. ಎಲ್ಲೋ ನೋಡಿಕೊಂಡು ಮಾತನಾಡಿದಲ್ಲಿ ನಿಮಗೆ ನಿಮ್ಮ ಮೇಲೆ ಅಥವಾ ಅವರ ಮೇಲೆ ನಂಬಿಕೆ/ಆಸಕ್ತಿ ಇಲ್ಲ ಎಂಬ ಸಂದೇಶ ಹೋಗುತ್ತದೆ. ಗುಂಪನ್ನು ಸಂಬೋಧಿಸಿ ಮಾತನಾಡುವಾಗ ಕೇವಲ ಓರ್ವ ವ್ಯಕ್ತಿಯನ್ನು ಮಾತ್ರ ದೃಷ್ಟಿಯಲ್ಲಿಟ್ಟುಕೊಂಡು ಮಾತನಾಡಬೇಡಿ, ಮಿಕ್ಕವರು ತಪ್ಪು ಕಲ್ಪನೆಗೆ ಒಳಗಾಗುತ್ತಾರೆ. ಯಾರು ಹೆಚ್ಚು ಆಸಕ್ತಿ (ಪ್ರತ್ಯಾದಾನ) ನೀಡುತ್ತಿದ್ದಾರೋ ಅವರನ್ನು ಹೆಚ್ಚು ಸಲ ಗಮನಿಸುವುದರಲ್ಲಿ ತಪ್ಪಿಲ್ಲ ಅಥವಾ ಯಾರು ಋಣಾತ್ಮಕ ಪ್ರತ್ಯಾದಾನ ನೀಡುತ್ತಿದ್ದಾರೋ ಅವರನ್ನು ನಿರ್ಲಕ್ಷಿಸುವುದರಲ್ಲಿ ಅಡ್ಡಿಯಿಲ್ಲ. ಹೀಗೆ ಮಾಡುವುದರಿಂದ ನಿಮ್ಮ ಆತ್ಮಸ್ಥೈರ್ಯವೂ ಹೆಚ್ಚುತ್ತದೆ.

ಮುಖ ತಿರುಚುವಿಕೆ: ನಾವು ಮಾತನಾಡುತ್ತಿರುವ ವಿಷಯಕ್ಕೆ ತಕ್ಕ ಮುಖಚರ್ಯೆ ಇರಬೇಕು ಆದರೆ ಮುಖದಲ್ಲಿ ಮಂದಹಾಸ ಎಲ್ಲರಿಗೂ ಇಷ್ಟವಾಗುತ್ತದೆ. ನಮ್ಮ ಮುಖಚರ್ಯೆಯಲ್ಲಿ ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭಯಾನಕ, ಭೀಭತ್ಸ, ಅದ್ಭುತ ಮತ್ತು ಶಾಂತ, ಎಂಬ (ಒಂಬತ್ತು) ನವರಸಗಳನ್ನು ಸಮರ್ಪಕವಾಗಿ ಬಿಂಬಿಸಬಹುದು. ಅದಕ್ಕೆ ನೀವು ಭರತನಾಟ್ಯ ಅಥವಾ ಮಿಕ್ಕ ಪ್ರದರ್ಶನ ಕಲೆಯ ತಜ್ಞರಾಗಿರಲೇಬೇಕೆಂದಿಲ್ಲ.

ನಿಮ್ಮ ಮಾತಿನ ಸಂದರ್ಭಕ್ಕೆ ತಕ್ಕಂತೆ ಮುಖಚರ್ಯೆ ಹೊಂದಿಸಿಕೊಳ್ಳಿ ಆದರೆ ಮಿಕ್ಕವರ ಬಗ್ಗೆ ಸೊಟ್ಟಮೂತಿ ಮಾಡುವುದನ್ನು ತಪ್ಪಿಸಿ.

ದೇಹದ ನಿಲುವು (ಪಾಷ್ಚರ್): ಇತರರೊಂದಿಗೆ ಮಾತನಾಡುವಾಗ ನೀವು ಸ್ವಲ್ಪ ಅವರ ಮುಂದಕ್ಕೆ ಬಗ್ಗಿದ್ದರೆ ಅವರ ಬಗ್ಗೆ ವಿನಯ/ಆಸಕ್ತಿ ತೋರಿಸುತ್ತದೆ, ತೀರಾ ಮುಂದಕ್ಕೆ ಬಗ್ಗಿದ್ದರೆ ಅದು ಅತಿ ವಿನಯ ಸೂಚಿಸುತ್ತದೆ ಅಥವಾ ಮುಗ್ಗರಿಸಿ ಮುಂದಕ್ಕೆ ಬೀಳುವ ಸಾಧ್ಯತೆ ಇರುತ್ತದೆ.

ಕಣ್ಣು ಮಿಟುಕಿಸುವುದು: ದೃಷ್ಟಿ-ಸಂಪರ್ಕ ಮತ್ತು ನವರಸಕ್ಕೆ ಅನುಗುಣವಾಗಿಲ್ಲವಾದಾಗ ವೃಥಾ ಕಣ್ಣು ಮಿಟುಕಿಸುವುದು ಅಥವಾ ರೆಪ್ಪೆ ಬಡಿಯುವುದನ್ನು ಬಿಡಿ. ಇದೂ ಸಹ ತಪ್ಪು ಸಂದೇಶ ರವಾನಿಸುತ್ತದೆ.

ಮೈ-ಕೈ ಹಾವಭಾವ: ನಿಮ್ಮ ಭಾವನೆಗನುಗುಣವಾಗಿ ಕೈಗಳನ್ನು ಬಳಸಿ, ಅವನ್ನು ಕೋಟ್-ಪ್ಯಾಂಟ್ ಜೇಬಿನಲ್ಲಿ ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿರಬೇಡಿ. ಅಂಗೈಗಳನ್ನು ಮೇಲಕ್ಕೆ ಮಾಡಿದ್ದಾಗ ಅದು ನಿಮ್ಮ ಮುಕ್ತ ವ್ಯಕ್ತಿತ್ವ ಸೂಚಿಸುತ್ತದೆ. ಕೈಗಳು ನಿಮ್ಮ ಕಡೆಗೇ ತೋರಿಸುತ್ತಿದ್ದಲ್ಲಿ ಇತರರಿಂದ ನಿಮ್ಮನ್ನು ನೀವೇ ದೂರ ಇರಿಸುತ್ತಿದ್ದೀರೆಂಬುದನ್ನು ತೋರಿಸುತ್ತದೆ.

ಸಾಮೀಪ್ಯ (ಅಥವಾ ದೂರ): ಇದು ನಿಮ್ಮ ನಡುವಣ ಬಾಂಧವ್ಯ ತೋರಿಸುತ್ತದೆ ಆದ್ದರಿಂದ ವ್ಯಕ್ತಿ, ಸಮಯ, ಪರಿಸ್ಥಿತಿಗೆ ತಕ್ಕಂತೆ ಸಾಮೀಪ್ಯ ಅಥವಾ ದೂರ ಇರುವಂತೆ ನೋಡಿಕೊಳ್ಳಿ. ಯಾವುದೇ ಕಾರಣಕ್ಕೂ ನಿಮ್ಮ ಎಲ್ಲೆ ಮೀರಬೇಡಿ. ಅದರಲ್ಲೂ ಲಿಂಗಬೇಧ ಗಮನದಲ್ಲಿಟ್ಟುಕೊಂಡು, ನಿಮ್ಮ ಲಕ್ಷ್ಮಣ ರೇಖೆ ನೀವೇ ಎಳೆದುಕೊಂಡು, ಅದನ್ನು ದಾಟದಂತೆ ಎಚ್ಚರಿಕೆ ವಹಿಸಿ.

ಸ್ಪರ್ಶ:ಇದು ಸಹ ನಿಮ್ಮ ನಡುವಣ ಬಾಂಧವ್ಯ ತೋರಿಸುತ್ತದೆ ಆದ್ದರಿಂದ ವ್ಯಕ್ತಿ, ಸಮಯ, ಪರಿಸ್ಥಿತಿಗೆ ತಕ್ಕಂತೆ ಸ್ಪರ್ಷದ ಬಳಕೆ ಇರುವಂತೆ ನೋಡಿಕೊಳ್ಳಿ.

ವಿನೋದ/ಅಣಕು: ವಿನೋದ/ಹಾಸ್ಯ ಎಲ್ಲರಿಗೂ ಇಷ್ಟವಾಗುತ್ತದೆ ಆದರೆ ನೀವೂ ಸಹ ಹಾಸ್ಯ ಕಲಾವಿದರಾಗಿಲ್ಲದಿದ್ದರೆ, ಇತರರನ್ನು ಅಣಕಿಸಿ ಹಾಸ್ಯದ ಉತ್ಪನ್ನಕ್ಕೆ ಪ್ರಯತ್ನಿಸಬೇಡಿ. ಇದು ತೊಂದರೆಗೆ ಕಾರಣವಾಗುತ್ತದೆ.

ಮೌನ: ಮಾತು ಮುತ್ತಾದರೆ ಮೌನ ಚಿನ್ನ ಎನ್ನುತ್ತಾರೆ. ಸಮರ್ಪಕವಾಗಿ ಬಳಸಿಕೊಳ್ಳಿ. ಇನ್ನೊಬ್ಬರು ಪ್ರತಿಕ್ರಯಿಸುತ್ತಿರುವಾಗ ನೀವು ಮೌನವಾಗಿರಿ. ಮಧ್ಯೆ ಬಾಯಿ ಹಾಕಬೇಡಿ. ನಿಮ್ಮ ಮೌನವೇ ಉತ್ತರವಾದಲ್ಲಿ ಅದನ್ನು ಮಿಕ್ಕವರು ತಪ್ಪಾಗಿ ಗ್ರಹಿಸಬಹುದು.

ಸಂಕೇತಗಳು: ಯಾವುದೇ ರೀತಿಯದ್ದಾಗಿರಬಹುದು. ಕೈ ಸಂಜ್ಞೆ ಅಥವಾ ಬೆರಳಸಂಜ್ಞೆ ಉಪಯೋಗಿಸುವಾಗ ಬಹಳ ಎಚ್ಚರಿಕೆಯಿಂದಿರಿ. ಕೆಲವು ಬೆರಳು ಅಷ್ಟು ಗೌರಪೂರ್ವಕವಲ್ಲ. ಇನ್ನೊಬ್ಬರ ಕಡೆ ಒಂದು ಬೆರಳು ತೋರಿಸುವಾಗ ಮೂರು ಬೆರಳು ನಮ್ಮ ಕಡೆಗೆ ಇರುತ್ತವೆ ಎಂಬುದನ್ನು ಮರೆಯಬೇಡಿ.

ಕಣ್ಣಿಗೆ ಕಾಣುವಂತಹ ಇತರ ಚಿನ್ಹೆಗಳು:  ಇವು ನಿಮ್ಮ ಪೋಷಾಕು, ಅದರ ಬಣ್ಣ ಅಥವಾ ಅದರೊಂದಿಗೆ ಧರಿಸಿರುವ ಇತರ ಸಾಧನ ಸಾಮಗ್ರಿಗಳಾಗಿರಬಹುದು. ಯೋಚಿಸಿ ಧರಿಸಿ. ಅಪಾರ್ಥಕ್ಕೆ ಎಡೆಯಾಗದಂತೆ ನೋಡಿಕೊಳ್ಳಿ. ಚಿತ್ರದ ಎಡಬದಿಯಲ್ಲಿರುವ ಟಿ-ಶರ್ಟ್ ಬದಲಿಗೆ ಬಲಬದಿಯಲ್ಲಿರುವ ಟಿ-ಶರ್ಟ್ ಧರಿಸಿ, ಜನರ ಪ್ರತಿಕ್ರಿಯೆ ಗಮನಿಸಿ.

ನೀವು ಇನ್ನೊಬ್ಬರಿಗೆ ಹೇಳಿಕೊಳ್ಳಬೇಕೆಂದಿರುವುದನ್ನು ಇತರರು ತಾವೇ ನಿಮಗೆ ಓದಿ ಹೇಳುತ್ತಾರೆ.

ನಿಮ್ಮ ಬಾಡಿ ಲಾಂಗ್ವೇಜ್ ಸುಧಾರಿಸಿಕೊಳ್ಳಲು ನಿಮ್ಮನ್ನು ನೀವು ಕನ್ನಡಿಯಲ್ಲಿ ನೋಡಿಕೊಳ್ಳಿ, ಅಥವಾ ಯಾವುದಾದರೂ ಸಂದರ್ಭದಲ್ಲಿ ವೀಡಿಯೋ ತೆಗೆದಿದ್ದಲ್ಲಿ ಅದನ್ನು ಸೂಕ್ಷ್ಮವಾಗಿ ಗಮನಿಸಿ, ನಿಮ್ಮ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಿ. ನಿಮ್ಮ ಸ್ನೇಹಿತರನ್ನು ಕೇಳಿ ಫೀಡ್-ಬ್ಯಾಕ್ ಪಡೆಯಿರಿ. ನಿಮ್ಮ ದೈಹಿಕ ಭಾಷೆ ಉತ್ತಮಗೊಂಡಷ್ಟೂ ನಿಮ್ಮ ಸಂವಹನ ಕಲೆಯೂ ಉತ್ತಮಗೊಳ್ಳುತ್ತದೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...