Homeಮುಖಪುಟಮತ್ತೊಬ್ಬರೊಂದಿಗೆ ಮಾತಾಡುವಾಗ ನಿಮ್ಮ 'ಬಾಡಿ ಲಾಂಗ್ವೇಜ್' ಹೇಗಿರಬೇಕು ಗೊತ್ತೆ?

ಮತ್ತೊಬ್ಬರೊಂದಿಗೆ ಮಾತಾಡುವಾಗ ನಿಮ್ಮ ‘ಬಾಡಿ ಲಾಂಗ್ವೇಜ್’ ಹೇಗಿರಬೇಕು ಗೊತ್ತೆ?

- Advertisement -
- Advertisement -

ಜೀವನ ಕಲೆಗಳು: ಅಂಕಣ -14

ಸಂವಹನ ಕಲೆ –2 ಶಬ್ದಾತೀತ ಭಾಷೆ (ಬಾಡಿ ಲಾಂಗ್ವೇಜ್ – ನಾನ್ ವರ್ಬಲ್ ಕಮ್ಯುನಿಕೇಷನ್)

ಸಂವಹನ ಕಲೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ಮಾಧ್ಯಮ ಶಬ್ದಾತೀತ ದೈಹಿಕ ಭಾಷೆ ಅಥವಾ ಬಾಡಿ ಲಾಂಗ್ವೇಜ್ (ನಾನ್-ವರ್ಬಲ್ ಕಮ್ಯುನಿಕೇಷನ್) ಎಂದು ಕರೆಯಲ್ಪಡುತ್ತದೆ. ಇದು ಶಬ್ದ ಅಥವಾ ಭಾಷೆಗಿಂತಲೂ ಹೆಚ್ಚು ಪ್ರಭಾವಶಾಲಿಯಾದ ಮಾಧ್ಯಮ. ಶಬ್ದ ಮತ್ತು ಭಾಷೆಯ ಜೊತೆ ಸೇರಿದಾಗ ಇದು ಸಂಪೂರ್ಣ ಶಕ್ತಿಶಾಲಿ ವಾಕ್-ದೃಶ್ಯ ಮಾಧ್ಯಮವಾಗುತ್ತದೆ. ನಮ್ಮ ದಿನನಿತ್ಯದ ಸಂವಹನದಲ್ಲಿ ಸುಮಾರು 60-70% ಸಮಯ ಬಳಕೆಯಾಗುವ ಮಾಧ್ಯಮ. ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್, ವಾಟ್ಸಾಪ್, ಟೆಲಿಗ್ರಾಮ್, ಇ-ಮೇಲ್ ಮುಂತಾದವುಗಳಲ್ಲಿ ಇದರ ಬಳಕೆ ದಿನದಿನಕ್ಕೆ ಹೆಚ್ಚಾಗುತ್ತಿದೆ. ಭಾವನೆಗಳನ್ನು ಸ್ಥಬ್ದ ಅಥವಾ ಚಲಿಸುವ ಚಿತ್ರಗಳ ಮೂಲಕ ಬಿಂಬಿಸುವ ಇವನ್ನು ಎಮೋಟಿಕಾನ್ ಅಥವಾ ಎಮೋಜಿ ಎನ್ನುತ್ತಾರೆ.

ದೈಹಿಕ ಭಾಷೆ ನಾವು ಆಡುವ ಭಾಷೆಗಿಂತ 10-15 ಪಟ್ಟು ಹೆಚ್ಚು ಬಲಶಾಲಿಯಾಗಿರುತ್ತದೆ. ಇದರ ಬಳಕೆಯಿಂದ ಸಂವಹನ ಸುಲಭವಾಗುತ್ತದೆ, ಆದರೆ ದೈಹಿಕ ಭಾಷೆ ಅಸಮರ್ಪಕವಾಗಿದ್ದಾಗ ಸಂದೇಶ ತನ್ನ ಅರ್ಥ ಕಳೆದುಕೊಳ್ಳುವುದಷ್ಟೇ ಅಲ್ಲ, ಅಪಾರ್ಥಕ್ಕೂ ಎಡೆ ಮಾಡಿಕೊಡುತ್ತದೆ. ಶಬ್ದಾತೀತ ದೈಹಿಕ ಭಾಷೆಯಲ್ಲಿ ಬಳಕೆಯಾಗುವ ಅಂಶಗಳು:

·         ದೃಷ್ಟಿ ಸಂಪರ್ಕ (ಐ ಕಾಂಟ್ಯಾಕ್ಟ್)

·         ಮುಖ ತಿರುಚುವಿಕೆ

·         ಕಣ್ಣು ಮಿಟುಕಿಸುವುದು

·         ಮೈ-ಕೈ ಹಾವಭಾವ

·         ದೇಹದ ನಿಲುವು (ಪಾಷ್ಚರ್)

·         ಸಾಮೀಪ್ಯ (ಅಥವಾ ದೂರ)

·         ಸ್ಪರ್ಶ

·         ವಿನೋದ/ಅಣಕು

·         ಮೌನ

·         ಸಂಕೇತಗಳು

·         ಕಣ್ಣಿಗೆ ಕಾಣುವಂತಹ ಇತರ ಚಿನ್ಹೆಗಳು

ಇವೆಲ್ಲವನ್ನೂ ಸಮರ್ಪಕವಾಗಿ ಬಳಸಿದಲ್ಲಿ ಸಂವಹನ ಪ್ರಭಾವಶಾಲಿಯಾಗಿರುತ್ತದೆ. ದೈಹಿಕ ಸಂದೇಶಗಳು ಮಾತಿನ ಅರ್ಥಕ್ಕೆ ಪೂರಕವಾಗಿರಬೇಕು, ಅದರ ಮೌಲ್ಯವನ್ನು ವೃದ್ಧಿಸುವಂತಿರಬೇಕು, ಹಾಗಿಲ್ಲದಿದ್ದಾಗ  ಅನರ್ಥಕ್ಕೂ ಆಸ್ಪದವಿರುತ್ತದೆ. ಕೆಳಕಂಡ ಚಿತ್ರದಲ್ಲಿ ದೈಹಿಕ ಭಾಷೆಗೂ ಹೇಳಿರುವ ಮಾತಿಗೂ ತಾಳೆ ಇಲ್ಲದಿರುವುದನ್ನು ಕಾಣಬಹುದು.

ದೈಹಿಕ ಭಾಷೆಯನ್ನು ಬಳಸಿಕೊಳ್ಳುವುದು ಹೇಗೆ?

ದೃಷ್ಟಿ-ಸಂಪರ್ಕ: ನೀವು ಮಾತನಾಡುತ್ತಿರುವವರ ಜೊತೆ ದೃಷ್ಟಿ ಸಂಪರ್ಕದಿಂದಿರಿ. ಎಲ್ಲೋ ನೋಡಿಕೊಂಡು ಮಾತನಾಡಿದಲ್ಲಿ ನಿಮಗೆ ನಿಮ್ಮ ಮೇಲೆ ಅಥವಾ ಅವರ ಮೇಲೆ ನಂಬಿಕೆ/ಆಸಕ್ತಿ ಇಲ್ಲ ಎಂಬ ಸಂದೇಶ ಹೋಗುತ್ತದೆ. ಗುಂಪನ್ನು ಸಂಬೋಧಿಸಿ ಮಾತನಾಡುವಾಗ ಕೇವಲ ಓರ್ವ ವ್ಯಕ್ತಿಯನ್ನು ಮಾತ್ರ ದೃಷ್ಟಿಯಲ್ಲಿಟ್ಟುಕೊಂಡು ಮಾತನಾಡಬೇಡಿ, ಮಿಕ್ಕವರು ತಪ್ಪು ಕಲ್ಪನೆಗೆ ಒಳಗಾಗುತ್ತಾರೆ. ಯಾರು ಹೆಚ್ಚು ಆಸಕ್ತಿ (ಪ್ರತ್ಯಾದಾನ) ನೀಡುತ್ತಿದ್ದಾರೋ ಅವರನ್ನು ಹೆಚ್ಚು ಸಲ ಗಮನಿಸುವುದರಲ್ಲಿ ತಪ್ಪಿಲ್ಲ ಅಥವಾ ಯಾರು ಋಣಾತ್ಮಕ ಪ್ರತ್ಯಾದಾನ ನೀಡುತ್ತಿದ್ದಾರೋ ಅವರನ್ನು ನಿರ್ಲಕ್ಷಿಸುವುದರಲ್ಲಿ ಅಡ್ಡಿಯಿಲ್ಲ. ಹೀಗೆ ಮಾಡುವುದರಿಂದ ನಿಮ್ಮ ಆತ್ಮಸ್ಥೈರ್ಯವೂ ಹೆಚ್ಚುತ್ತದೆ.

ಮುಖ ತಿರುಚುವಿಕೆ: ನಾವು ಮಾತನಾಡುತ್ತಿರುವ ವಿಷಯಕ್ಕೆ ತಕ್ಕ ಮುಖಚರ್ಯೆ ಇರಬೇಕು ಆದರೆ ಮುಖದಲ್ಲಿ ಮಂದಹಾಸ ಎಲ್ಲರಿಗೂ ಇಷ್ಟವಾಗುತ್ತದೆ. ನಮ್ಮ ಮುಖಚರ್ಯೆಯಲ್ಲಿ ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭಯಾನಕ, ಭೀಭತ್ಸ, ಅದ್ಭುತ ಮತ್ತು ಶಾಂತ, ಎಂಬ (ಒಂಬತ್ತು) ನವರಸಗಳನ್ನು ಸಮರ್ಪಕವಾಗಿ ಬಿಂಬಿಸಬಹುದು. ಅದಕ್ಕೆ ನೀವು ಭರತನಾಟ್ಯ ಅಥವಾ ಮಿಕ್ಕ ಪ್ರದರ್ಶನ ಕಲೆಯ ತಜ್ಞರಾಗಿರಲೇಬೇಕೆಂದಿಲ್ಲ.

ನಿಮ್ಮ ಮಾತಿನ ಸಂದರ್ಭಕ್ಕೆ ತಕ್ಕಂತೆ ಮುಖಚರ್ಯೆ ಹೊಂದಿಸಿಕೊಳ್ಳಿ ಆದರೆ ಮಿಕ್ಕವರ ಬಗ್ಗೆ ಸೊಟ್ಟಮೂತಿ ಮಾಡುವುದನ್ನು ತಪ್ಪಿಸಿ.

ದೇಹದ ನಿಲುವು (ಪಾಷ್ಚರ್): ಇತರರೊಂದಿಗೆ ಮಾತನಾಡುವಾಗ ನೀವು ಸ್ವಲ್ಪ ಅವರ ಮುಂದಕ್ಕೆ ಬಗ್ಗಿದ್ದರೆ ಅವರ ಬಗ್ಗೆ ವಿನಯ/ಆಸಕ್ತಿ ತೋರಿಸುತ್ತದೆ, ತೀರಾ ಮುಂದಕ್ಕೆ ಬಗ್ಗಿದ್ದರೆ ಅದು ಅತಿ ವಿನಯ ಸೂಚಿಸುತ್ತದೆ ಅಥವಾ ಮುಗ್ಗರಿಸಿ ಮುಂದಕ್ಕೆ ಬೀಳುವ ಸಾಧ್ಯತೆ ಇರುತ್ತದೆ.

ಕಣ್ಣು ಮಿಟುಕಿಸುವುದು: ದೃಷ್ಟಿ-ಸಂಪರ್ಕ ಮತ್ತು ನವರಸಕ್ಕೆ ಅನುಗುಣವಾಗಿಲ್ಲವಾದಾಗ ವೃಥಾ ಕಣ್ಣು ಮಿಟುಕಿಸುವುದು ಅಥವಾ ರೆಪ್ಪೆ ಬಡಿಯುವುದನ್ನು ಬಿಡಿ. ಇದೂ ಸಹ ತಪ್ಪು ಸಂದೇಶ ರವಾನಿಸುತ್ತದೆ.

ಮೈ-ಕೈ ಹಾವಭಾವ: ನಿಮ್ಮ ಭಾವನೆಗನುಗುಣವಾಗಿ ಕೈಗಳನ್ನು ಬಳಸಿ, ಅವನ್ನು ಕೋಟ್-ಪ್ಯಾಂಟ್ ಜೇಬಿನಲ್ಲಿ ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿರಬೇಡಿ. ಅಂಗೈಗಳನ್ನು ಮೇಲಕ್ಕೆ ಮಾಡಿದ್ದಾಗ ಅದು ನಿಮ್ಮ ಮುಕ್ತ ವ್ಯಕ್ತಿತ್ವ ಸೂಚಿಸುತ್ತದೆ. ಕೈಗಳು ನಿಮ್ಮ ಕಡೆಗೇ ತೋರಿಸುತ್ತಿದ್ದಲ್ಲಿ ಇತರರಿಂದ ನಿಮ್ಮನ್ನು ನೀವೇ ದೂರ ಇರಿಸುತ್ತಿದ್ದೀರೆಂಬುದನ್ನು ತೋರಿಸುತ್ತದೆ.

ಸಾಮೀಪ್ಯ (ಅಥವಾ ದೂರ): ಇದು ನಿಮ್ಮ ನಡುವಣ ಬಾಂಧವ್ಯ ತೋರಿಸುತ್ತದೆ ಆದ್ದರಿಂದ ವ್ಯಕ್ತಿ, ಸಮಯ, ಪರಿಸ್ಥಿತಿಗೆ ತಕ್ಕಂತೆ ಸಾಮೀಪ್ಯ ಅಥವಾ ದೂರ ಇರುವಂತೆ ನೋಡಿಕೊಳ್ಳಿ. ಯಾವುದೇ ಕಾರಣಕ್ಕೂ ನಿಮ್ಮ ಎಲ್ಲೆ ಮೀರಬೇಡಿ. ಅದರಲ್ಲೂ ಲಿಂಗಬೇಧ ಗಮನದಲ್ಲಿಟ್ಟುಕೊಂಡು, ನಿಮ್ಮ ಲಕ್ಷ್ಮಣ ರೇಖೆ ನೀವೇ ಎಳೆದುಕೊಂಡು, ಅದನ್ನು ದಾಟದಂತೆ ಎಚ್ಚರಿಕೆ ವಹಿಸಿ.

ಸ್ಪರ್ಶ:ಇದು ಸಹ ನಿಮ್ಮ ನಡುವಣ ಬಾಂಧವ್ಯ ತೋರಿಸುತ್ತದೆ ಆದ್ದರಿಂದ ವ್ಯಕ್ತಿ, ಸಮಯ, ಪರಿಸ್ಥಿತಿಗೆ ತಕ್ಕಂತೆ ಸ್ಪರ್ಷದ ಬಳಕೆ ಇರುವಂತೆ ನೋಡಿಕೊಳ್ಳಿ.

ವಿನೋದ/ಅಣಕು: ವಿನೋದ/ಹಾಸ್ಯ ಎಲ್ಲರಿಗೂ ಇಷ್ಟವಾಗುತ್ತದೆ ಆದರೆ ನೀವೂ ಸಹ ಹಾಸ್ಯ ಕಲಾವಿದರಾಗಿಲ್ಲದಿದ್ದರೆ, ಇತರರನ್ನು ಅಣಕಿಸಿ ಹಾಸ್ಯದ ಉತ್ಪನ್ನಕ್ಕೆ ಪ್ರಯತ್ನಿಸಬೇಡಿ. ಇದು ತೊಂದರೆಗೆ ಕಾರಣವಾಗುತ್ತದೆ.

ಮೌನ: ಮಾತು ಮುತ್ತಾದರೆ ಮೌನ ಚಿನ್ನ ಎನ್ನುತ್ತಾರೆ. ಸಮರ್ಪಕವಾಗಿ ಬಳಸಿಕೊಳ್ಳಿ. ಇನ್ನೊಬ್ಬರು ಪ್ರತಿಕ್ರಯಿಸುತ್ತಿರುವಾಗ ನೀವು ಮೌನವಾಗಿರಿ. ಮಧ್ಯೆ ಬಾಯಿ ಹಾಕಬೇಡಿ. ನಿಮ್ಮ ಮೌನವೇ ಉತ್ತರವಾದಲ್ಲಿ ಅದನ್ನು ಮಿಕ್ಕವರು ತಪ್ಪಾಗಿ ಗ್ರಹಿಸಬಹುದು.

ಸಂಕೇತಗಳು: ಯಾವುದೇ ರೀತಿಯದ್ದಾಗಿರಬಹುದು. ಕೈ ಸಂಜ್ಞೆ ಅಥವಾ ಬೆರಳಸಂಜ್ಞೆ ಉಪಯೋಗಿಸುವಾಗ ಬಹಳ ಎಚ್ಚರಿಕೆಯಿಂದಿರಿ. ಕೆಲವು ಬೆರಳು ಅಷ್ಟು ಗೌರಪೂರ್ವಕವಲ್ಲ. ಇನ್ನೊಬ್ಬರ ಕಡೆ ಒಂದು ಬೆರಳು ತೋರಿಸುವಾಗ ಮೂರು ಬೆರಳು ನಮ್ಮ ಕಡೆಗೆ ಇರುತ್ತವೆ ಎಂಬುದನ್ನು ಮರೆಯಬೇಡಿ.

ಕಣ್ಣಿಗೆ ಕಾಣುವಂತಹ ಇತರ ಚಿನ್ಹೆಗಳು:  ಇವು ನಿಮ್ಮ ಪೋಷಾಕು, ಅದರ ಬಣ್ಣ ಅಥವಾ ಅದರೊಂದಿಗೆ ಧರಿಸಿರುವ ಇತರ ಸಾಧನ ಸಾಮಗ್ರಿಗಳಾಗಿರಬಹುದು. ಯೋಚಿಸಿ ಧರಿಸಿ. ಅಪಾರ್ಥಕ್ಕೆ ಎಡೆಯಾಗದಂತೆ ನೋಡಿಕೊಳ್ಳಿ. ಚಿತ್ರದ ಎಡಬದಿಯಲ್ಲಿರುವ ಟಿ-ಶರ್ಟ್ ಬದಲಿಗೆ ಬಲಬದಿಯಲ್ಲಿರುವ ಟಿ-ಶರ್ಟ್ ಧರಿಸಿ, ಜನರ ಪ್ರತಿಕ್ರಿಯೆ ಗಮನಿಸಿ.

ನೀವು ಇನ್ನೊಬ್ಬರಿಗೆ ಹೇಳಿಕೊಳ್ಳಬೇಕೆಂದಿರುವುದನ್ನು ಇತರರು ತಾವೇ ನಿಮಗೆ ಓದಿ ಹೇಳುತ್ತಾರೆ.

ನಿಮ್ಮ ಬಾಡಿ ಲಾಂಗ್ವೇಜ್ ಸುಧಾರಿಸಿಕೊಳ್ಳಲು ನಿಮ್ಮನ್ನು ನೀವು ಕನ್ನಡಿಯಲ್ಲಿ ನೋಡಿಕೊಳ್ಳಿ, ಅಥವಾ ಯಾವುದಾದರೂ ಸಂದರ್ಭದಲ್ಲಿ ವೀಡಿಯೋ ತೆಗೆದಿದ್ದಲ್ಲಿ ಅದನ್ನು ಸೂಕ್ಷ್ಮವಾಗಿ ಗಮನಿಸಿ, ನಿಮ್ಮ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಿ. ನಿಮ್ಮ ಸ್ನೇಹಿತರನ್ನು ಕೇಳಿ ಫೀಡ್-ಬ್ಯಾಕ್ ಪಡೆಯಿರಿ. ನಿಮ್ಮ ದೈಹಿಕ ಭಾಷೆ ಉತ್ತಮಗೊಂಡಷ್ಟೂ ನಿಮ್ಮ ಸಂವಹನ ಕಲೆಯೂ ಉತ್ತಮಗೊಳ್ಳುತ್ತದೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...