Homeಮುಖಪುಟಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

ಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

- Advertisement -
- Advertisement -

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಸತ್ಯಜಿತ್‌ ಅವರು ಭಾನುವಾರ ಮುಂಜಾನೆ ನಿಧನರಾಗಿದ್ದು, ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡು ಡಿಸ್ಚಾರ್ಜ್‌ ಆಗಿದ್ದ ಅವರ ಆರೋಗ್ಯ ಏರುಪೇರಾಗಿದ್ದರಿಂದ ಮತ್ತೆ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿ ಕೊನೆಯುಸಿರೆಳೆದಿದ್ದಾರೆ.

2016ರಲ್ಲಿ ಗ್ಯಾಂಗ್ರೀನ್‌ಗೆ ತುತ್ತಾಗಿದ್ದ ಅವರು ಎಡಗಾಲನ್ನು ಕಳೆದುಕೊಂಡಿದ್ದರು. ಆನಂತರವೂ ನಟಿಸಿದ್ದ ಅವರು, ಈವರೆಗೆ ಸುಮಾರು 600 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಖಳನಾಯಕ ಪಾತ್ರಗಳ ಮೂಲಕ ಕನ್ನಡ ಸಿನಿ ರಸಿಕರ ಮನಸೂರೆಗೊಂಡಿದ್ದಾರೆ.

ಇದನ್ನೂ ಓದಿರಿ: ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಸತ್ಯಜಿತ್‌ ಇತ್ತೀಚಿನ ವರ್ಷಗಳಿಂದ ಅನಾರೋಗ್ಯದಿಂದ ತೀವ್ರ ಬಳಲಿದ್ದರು. ಅಲ್ಲದೇ ಇವರ ಪುತ್ರಿ, “ನಮ್ಮ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ” ಎಂದು ಪೊಲೀಸರಿಗೆ ದೂರು ನೀಡಿದ್ದರು. ನಂತರ ಸತ್ಯಜಿತ್‌ ಇದಕ್ಕೆ ಸ್ಪಷ್ಟನೆ ನೀಡಿದ್ದರು.

ಸತ್ಯಜೀತ್ ಅವರಿಗೆ ಕೆಲ ದಿನಗಳ ಹಿಂದೆ ಅವರಿಗೆ ಜಾಂಡೀಸ್ ಆಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಹೃದಯಾಘಾತವೂ ಆಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದ ಬಳಿಕ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟು, ಭಾನುವಾರ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರಿನ್ ಬಲಗಾಲಿಗೂ  ಹರಡಲಾರಂಭಿಸಿತ್ತು.

ವಿಶಿಷ್ಟ ಧ್ವನಿಯ ಮೂಲಕ ಗಮನ ಕನ್ನಡ ಚಿತ್ರಪ್ರೇಮಿಗಳ ಮನದಲ್ಲಿ ನೆಲಸಿರುವ ಸತ್ಯಜಿತ್‌, ಖಳನಾಯಕ ಹಾಗೂ ಪೋಷಕ ಪಾತ್ರಗಳಿಗೆ ಜೀವ ತುಂಬಿದವರು. ‘ಅಂಕುಶ್‌’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ​ಸತ್ಯಜಿತ್​ ಅವರು 1995ರಲ್ಲಿ ಪುಟ್ನಂಜ ಸಿನಿಮಾದಲ್ಲಿ, 1988ರಲ್ಲಿ ಶಿವ ಮೆಚ್ಚಿದ ಕಣ್ಣಪ್ಪ, 1992ರಲ್ಲಿ ಚೈತ್ರಾದ ಪ್ರೇಮಾಂಜಲಿ ಸಿನಿಮಾದಲ್ಲಿ ಅಭಿನಯಿಸಿ ನಟನೆಯಲ್ಲಿ ಗಮನ ಸೆಳೆದರು. 2004ರಲ್ಲಿ ತೆರೆಕಂಡ ‘ಆಪ್ತಮಿತ್ರ’ ಸಿನಿಮಾದಲ್ಲಿನ ಅವರ ಅಭಿನಯ ಅನನ್ಯವಾದದ್ದು.

ಇದನ್ನೂ ಓದಿರಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

‘ಅರುಣ ರಾಗ’, ‘ಅಂತಿಮ ತೀರ್ಪು’, ‘ರಣರಂಗ’, ‘ನಮ್ಮೂರ ರಾಜ’, ‘ನ್ಯಾಯಕ್ಕಾಗಿ ನಾನು’, ‘ಯುದ್ಧಕಾಂಡ’, ‘ಇಂದ್ರಜಿತ್’, ‘ನಮ್ಮೂರ ಹಮ್ಮೀರ’, ‘ಪೊಲೀಸ್ ಲಾಕಪ್’, ‘ಮನೆದೇವ್ರು’, ‘ಮಂಡ್ಯದ ಗಂಡು’, ‘ಪೊಲೀಸ್ ಸ್ಟೋರಿ’, ‘ಸರ್ಕಲ್ ಇನ್ಸ್‌ಪೆಕ್ಟರ್’, ‘ಪಟೇಲ’, ‘ದುರ್ಗದ ಹುಲಿ’, ‘ಅಪ್ಪು’, ‘ಧಮ್’, ‘ಅಭಿ’, ‘ಅರಸು’, ‘ಇಂದ್ರ’, ‘ಭಾಗ್ಯದ ಬಳೇಗಾರ’, ‘ಕಲ್ಪನಾ’, ‘ಗಾಡ್ ಫಾದರ್’, ‘ಲಕ್ಕಿ’, ‘ಉಪ್ಪಿ 2’, ‘ಮಾಣಿಕ್ಯ’, ‘ರನ್ನ’, ‘ರಣವಿಕ್ರಮ’, ‘ಮೈತ್ರಿ’ ಮೊದಲಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.

ಅಂದಹಾಗೆ ಸತ್ಯಜಿತ್‌ ಅವರ ನಿಜವಾದ ಹೆಸರು ನಿಜಾಮುದ್ದೀನ್‌ ಸೈಯದ್‌. ಒಬ್ಬ ಸಾಮಾನ್ಯ ವ್ಯಕ್ತಿ ‘ಸತ್ಯಜಿತ್‌’ ಆಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು ಗಮನಾರ್ಹ. ಹುಬ್ಬಳ್ಳಿಯಲ್ಲಿ ಕೆಎಸ್‌ಆರ್‌ಟಿಸಿಯಲ್ಲಿ ಬಸ್‌ ಡ್ರೈವರ್‌ ಆಗಿದ್ದ ಸೈಯದ್‌, ಇಲ್ಲಿನ ಹವ್ಯಾಸ ರಂಗತಂಡದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ನಾಟಕ ಪ್ರದರ್ಶನಕ್ಕಾಗಿ ಮುಂಬೈಗೆ ಹೋಗಿದ್ದಾಗ ತಂತ್ರಜ್ಞರು ಸೈಯದ್‌ರನ್ನು ಗುರುತಿಸಿ, ಚಿತ್ರರಂಗಕ್ಕೆ ಕರೆತಂದರು.

ಮೇರು ನಟ ನಾನಾ ಪಾಟೇಕರ್‌ ಅವರು ನಾಯಕನಟರಾಗಿ ಅಭಿನಯಿಸಿದ್ದ ‘ಅಂಕುಶ್‌’ ಹಿಂದಿ ಸಿನಿಮಾದಲ್ಲಿ ಸೈಯದ್ ಅಭಿನಯಿಸಿ ಚಿತ್ರಂಗಕ್ಕೆ ಕಾಲಿಟ್ಟರು. ಅಂಕುಶ್‌ ಸಿನಿಮಾದ ಟೈಟಲ್‌ ಕಾರ್ಡ್‌‌ನಲ್ಲೇ ‘ಸತ್ಯಜಿತ್‌’ ಎಂದು ಕರೆಯಲಾಯಿತು. ಮುಂದೆ ಸತ್ಯಜಿತ್‌ ಎಂದೇ ಗುರುತಿಸಿಕೊಂಡ ಸೈಯದ್ ಕನ್ನಡ ಚಿತ್ರರಂಗದಲ್ಲಿ ಮನೆಮಾತಾದರು. ಹಿರಿಯ ನಟ ಸತ್ಯಜಿತ್‌‌ ನಿಧನಕ್ಕೆ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಹಲವು ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...