Homeಮುಖಪುಟಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

ಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

- Advertisement -
- Advertisement -

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಸತ್ಯಜಿತ್‌ ಅವರು ಭಾನುವಾರ ಮುಂಜಾನೆ ನಿಧನರಾಗಿದ್ದು, ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡು ಡಿಸ್ಚಾರ್ಜ್‌ ಆಗಿದ್ದ ಅವರ ಆರೋಗ್ಯ ಏರುಪೇರಾಗಿದ್ದರಿಂದ ಮತ್ತೆ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿ ಕೊನೆಯುಸಿರೆಳೆದಿದ್ದಾರೆ.

2016ರಲ್ಲಿ ಗ್ಯಾಂಗ್ರೀನ್‌ಗೆ ತುತ್ತಾಗಿದ್ದ ಅವರು ಎಡಗಾಲನ್ನು ಕಳೆದುಕೊಂಡಿದ್ದರು. ಆನಂತರವೂ ನಟಿಸಿದ್ದ ಅವರು, ಈವರೆಗೆ ಸುಮಾರು 600 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಖಳನಾಯಕ ಪಾತ್ರಗಳ ಮೂಲಕ ಕನ್ನಡ ಸಿನಿ ರಸಿಕರ ಮನಸೂರೆಗೊಂಡಿದ್ದಾರೆ.

ಇದನ್ನೂ ಓದಿರಿ: ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಸತ್ಯಜಿತ್‌ ಇತ್ತೀಚಿನ ವರ್ಷಗಳಿಂದ ಅನಾರೋಗ್ಯದಿಂದ ತೀವ್ರ ಬಳಲಿದ್ದರು. ಅಲ್ಲದೇ ಇವರ ಪುತ್ರಿ, “ನಮ್ಮ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ” ಎಂದು ಪೊಲೀಸರಿಗೆ ದೂರು ನೀಡಿದ್ದರು. ನಂತರ ಸತ್ಯಜಿತ್‌ ಇದಕ್ಕೆ ಸ್ಪಷ್ಟನೆ ನೀಡಿದ್ದರು.

ಸತ್ಯಜೀತ್ ಅವರಿಗೆ ಕೆಲ ದಿನಗಳ ಹಿಂದೆ ಅವರಿಗೆ ಜಾಂಡೀಸ್ ಆಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಹೃದಯಾಘಾತವೂ ಆಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದ ಬಳಿಕ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟು, ಭಾನುವಾರ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರಿನ್ ಬಲಗಾಲಿಗೂ  ಹರಡಲಾರಂಭಿಸಿತ್ತು.

ವಿಶಿಷ್ಟ ಧ್ವನಿಯ ಮೂಲಕ ಗಮನ ಕನ್ನಡ ಚಿತ್ರಪ್ರೇಮಿಗಳ ಮನದಲ್ಲಿ ನೆಲಸಿರುವ ಸತ್ಯಜಿತ್‌, ಖಳನಾಯಕ ಹಾಗೂ ಪೋಷಕ ಪಾತ್ರಗಳಿಗೆ ಜೀವ ತುಂಬಿದವರು. ‘ಅಂಕುಶ್‌’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ​ಸತ್ಯಜಿತ್​ ಅವರು 1995ರಲ್ಲಿ ಪುಟ್ನಂಜ ಸಿನಿಮಾದಲ್ಲಿ, 1988ರಲ್ಲಿ ಶಿವ ಮೆಚ್ಚಿದ ಕಣ್ಣಪ್ಪ, 1992ರಲ್ಲಿ ಚೈತ್ರಾದ ಪ್ರೇಮಾಂಜಲಿ ಸಿನಿಮಾದಲ್ಲಿ ಅಭಿನಯಿಸಿ ನಟನೆಯಲ್ಲಿ ಗಮನ ಸೆಳೆದರು. 2004ರಲ್ಲಿ ತೆರೆಕಂಡ ‘ಆಪ್ತಮಿತ್ರ’ ಸಿನಿಮಾದಲ್ಲಿನ ಅವರ ಅಭಿನಯ ಅನನ್ಯವಾದದ್ದು.

ಇದನ್ನೂ ಓದಿರಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

‘ಅರುಣ ರಾಗ’, ‘ಅಂತಿಮ ತೀರ್ಪು’, ‘ರಣರಂಗ’, ‘ನಮ್ಮೂರ ರಾಜ’, ‘ನ್ಯಾಯಕ್ಕಾಗಿ ನಾನು’, ‘ಯುದ್ಧಕಾಂಡ’, ‘ಇಂದ್ರಜಿತ್’, ‘ನಮ್ಮೂರ ಹಮ್ಮೀರ’, ‘ಪೊಲೀಸ್ ಲಾಕಪ್’, ‘ಮನೆದೇವ್ರು’, ‘ಮಂಡ್ಯದ ಗಂಡು’, ‘ಪೊಲೀಸ್ ಸ್ಟೋರಿ’, ‘ಸರ್ಕಲ್ ಇನ್ಸ್‌ಪೆಕ್ಟರ್’, ‘ಪಟೇಲ’, ‘ದುರ್ಗದ ಹುಲಿ’, ‘ಅಪ್ಪು’, ‘ಧಮ್’, ‘ಅಭಿ’, ‘ಅರಸು’, ‘ಇಂದ್ರ’, ‘ಭಾಗ್ಯದ ಬಳೇಗಾರ’, ‘ಕಲ್ಪನಾ’, ‘ಗಾಡ್ ಫಾದರ್’, ‘ಲಕ್ಕಿ’, ‘ಉಪ್ಪಿ 2’, ‘ಮಾಣಿಕ್ಯ’, ‘ರನ್ನ’, ‘ರಣವಿಕ್ರಮ’, ‘ಮೈತ್ರಿ’ ಮೊದಲಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.

ಅಂದಹಾಗೆ ಸತ್ಯಜಿತ್‌ ಅವರ ನಿಜವಾದ ಹೆಸರು ನಿಜಾಮುದ್ದೀನ್‌ ಸೈಯದ್‌. ಒಬ್ಬ ಸಾಮಾನ್ಯ ವ್ಯಕ್ತಿ ‘ಸತ್ಯಜಿತ್‌’ ಆಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು ಗಮನಾರ್ಹ. ಹುಬ್ಬಳ್ಳಿಯಲ್ಲಿ ಕೆಎಸ್‌ಆರ್‌ಟಿಸಿಯಲ್ಲಿ ಬಸ್‌ ಡ್ರೈವರ್‌ ಆಗಿದ್ದ ಸೈಯದ್‌, ಇಲ್ಲಿನ ಹವ್ಯಾಸ ರಂಗತಂಡದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ನಾಟಕ ಪ್ರದರ್ಶನಕ್ಕಾಗಿ ಮುಂಬೈಗೆ ಹೋಗಿದ್ದಾಗ ತಂತ್ರಜ್ಞರು ಸೈಯದ್‌ರನ್ನು ಗುರುತಿಸಿ, ಚಿತ್ರರಂಗಕ್ಕೆ ಕರೆತಂದರು.

ಮೇರು ನಟ ನಾನಾ ಪಾಟೇಕರ್‌ ಅವರು ನಾಯಕನಟರಾಗಿ ಅಭಿನಯಿಸಿದ್ದ ‘ಅಂಕುಶ್‌’ ಹಿಂದಿ ಸಿನಿಮಾದಲ್ಲಿ ಸೈಯದ್ ಅಭಿನಯಿಸಿ ಚಿತ್ರಂಗಕ್ಕೆ ಕಾಲಿಟ್ಟರು. ಅಂಕುಶ್‌ ಸಿನಿಮಾದ ಟೈಟಲ್‌ ಕಾರ್ಡ್‌‌ನಲ್ಲೇ ‘ಸತ್ಯಜಿತ್‌’ ಎಂದು ಕರೆಯಲಾಯಿತು. ಮುಂದೆ ಸತ್ಯಜಿತ್‌ ಎಂದೇ ಗುರುತಿಸಿಕೊಂಡ ಸೈಯದ್ ಕನ್ನಡ ಚಿತ್ರರಂಗದಲ್ಲಿ ಮನೆಮಾತಾದರು. ಹಿರಿಯ ನಟ ಸತ್ಯಜಿತ್‌‌ ನಿಧನಕ್ಕೆ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಹಲವು ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...