Homeಮುಖಪುಟಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

ಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

- Advertisement -
- Advertisement -

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಸತ್ಯಜಿತ್‌ ಅವರು ಭಾನುವಾರ ಮುಂಜಾನೆ ನಿಧನರಾಗಿದ್ದು, ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡು ಡಿಸ್ಚಾರ್ಜ್‌ ಆಗಿದ್ದ ಅವರ ಆರೋಗ್ಯ ಏರುಪೇರಾಗಿದ್ದರಿಂದ ಮತ್ತೆ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿ ಕೊನೆಯುಸಿರೆಳೆದಿದ್ದಾರೆ.

2016ರಲ್ಲಿ ಗ್ಯಾಂಗ್ರೀನ್‌ಗೆ ತುತ್ತಾಗಿದ್ದ ಅವರು ಎಡಗಾಲನ್ನು ಕಳೆದುಕೊಂಡಿದ್ದರು. ಆನಂತರವೂ ನಟಿಸಿದ್ದ ಅವರು, ಈವರೆಗೆ ಸುಮಾರು 600 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಖಳನಾಯಕ ಪಾತ್ರಗಳ ಮೂಲಕ ಕನ್ನಡ ಸಿನಿ ರಸಿಕರ ಮನಸೂರೆಗೊಂಡಿದ್ದಾರೆ.

ಇದನ್ನೂ ಓದಿರಿ: ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಸತ್ಯಜಿತ್‌ ಇತ್ತೀಚಿನ ವರ್ಷಗಳಿಂದ ಅನಾರೋಗ್ಯದಿಂದ ತೀವ್ರ ಬಳಲಿದ್ದರು. ಅಲ್ಲದೇ ಇವರ ಪುತ್ರಿ, “ನಮ್ಮ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ” ಎಂದು ಪೊಲೀಸರಿಗೆ ದೂರು ನೀಡಿದ್ದರು. ನಂತರ ಸತ್ಯಜಿತ್‌ ಇದಕ್ಕೆ ಸ್ಪಷ್ಟನೆ ನೀಡಿದ್ದರು.

ಸತ್ಯಜೀತ್ ಅವರಿಗೆ ಕೆಲ ದಿನಗಳ ಹಿಂದೆ ಅವರಿಗೆ ಜಾಂಡೀಸ್ ಆಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಹೃದಯಾಘಾತವೂ ಆಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದ ಬಳಿಕ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟು, ಭಾನುವಾರ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರಿನ್ ಬಲಗಾಲಿಗೂ  ಹರಡಲಾರಂಭಿಸಿತ್ತು.

ವಿಶಿಷ್ಟ ಧ್ವನಿಯ ಮೂಲಕ ಗಮನ ಕನ್ನಡ ಚಿತ್ರಪ್ರೇಮಿಗಳ ಮನದಲ್ಲಿ ನೆಲಸಿರುವ ಸತ್ಯಜಿತ್‌, ಖಳನಾಯಕ ಹಾಗೂ ಪೋಷಕ ಪಾತ್ರಗಳಿಗೆ ಜೀವ ತುಂಬಿದವರು. ‘ಅಂಕುಶ್‌’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ​ಸತ್ಯಜಿತ್​ ಅವರು 1995ರಲ್ಲಿ ಪುಟ್ನಂಜ ಸಿನಿಮಾದಲ್ಲಿ, 1988ರಲ್ಲಿ ಶಿವ ಮೆಚ್ಚಿದ ಕಣ್ಣಪ್ಪ, 1992ರಲ್ಲಿ ಚೈತ್ರಾದ ಪ್ರೇಮಾಂಜಲಿ ಸಿನಿಮಾದಲ್ಲಿ ಅಭಿನಯಿಸಿ ನಟನೆಯಲ್ಲಿ ಗಮನ ಸೆಳೆದರು. 2004ರಲ್ಲಿ ತೆರೆಕಂಡ ‘ಆಪ್ತಮಿತ್ರ’ ಸಿನಿಮಾದಲ್ಲಿನ ಅವರ ಅಭಿನಯ ಅನನ್ಯವಾದದ್ದು.

ಇದನ್ನೂ ಓದಿರಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

‘ಅರುಣ ರಾಗ’, ‘ಅಂತಿಮ ತೀರ್ಪು’, ‘ರಣರಂಗ’, ‘ನಮ್ಮೂರ ರಾಜ’, ‘ನ್ಯಾಯಕ್ಕಾಗಿ ನಾನು’, ‘ಯುದ್ಧಕಾಂಡ’, ‘ಇಂದ್ರಜಿತ್’, ‘ನಮ್ಮೂರ ಹಮ್ಮೀರ’, ‘ಪೊಲೀಸ್ ಲಾಕಪ್’, ‘ಮನೆದೇವ್ರು’, ‘ಮಂಡ್ಯದ ಗಂಡು’, ‘ಪೊಲೀಸ್ ಸ್ಟೋರಿ’, ‘ಸರ್ಕಲ್ ಇನ್ಸ್‌ಪೆಕ್ಟರ್’, ‘ಪಟೇಲ’, ‘ದುರ್ಗದ ಹುಲಿ’, ‘ಅಪ್ಪು’, ‘ಧಮ್’, ‘ಅಭಿ’, ‘ಅರಸು’, ‘ಇಂದ್ರ’, ‘ಭಾಗ್ಯದ ಬಳೇಗಾರ’, ‘ಕಲ್ಪನಾ’, ‘ಗಾಡ್ ಫಾದರ್’, ‘ಲಕ್ಕಿ’, ‘ಉಪ್ಪಿ 2’, ‘ಮಾಣಿಕ್ಯ’, ‘ರನ್ನ’, ‘ರಣವಿಕ್ರಮ’, ‘ಮೈತ್ರಿ’ ಮೊದಲಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.

ಅಂದಹಾಗೆ ಸತ್ಯಜಿತ್‌ ಅವರ ನಿಜವಾದ ಹೆಸರು ನಿಜಾಮುದ್ದೀನ್‌ ಸೈಯದ್‌. ಒಬ್ಬ ಸಾಮಾನ್ಯ ವ್ಯಕ್ತಿ ‘ಸತ್ಯಜಿತ್‌’ ಆಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು ಗಮನಾರ್ಹ. ಹುಬ್ಬಳ್ಳಿಯಲ್ಲಿ ಕೆಎಸ್‌ಆರ್‌ಟಿಸಿಯಲ್ಲಿ ಬಸ್‌ ಡ್ರೈವರ್‌ ಆಗಿದ್ದ ಸೈಯದ್‌, ಇಲ್ಲಿನ ಹವ್ಯಾಸ ರಂಗತಂಡದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ನಾಟಕ ಪ್ರದರ್ಶನಕ್ಕಾಗಿ ಮುಂಬೈಗೆ ಹೋಗಿದ್ದಾಗ ತಂತ್ರಜ್ಞರು ಸೈಯದ್‌ರನ್ನು ಗುರುತಿಸಿ, ಚಿತ್ರರಂಗಕ್ಕೆ ಕರೆತಂದರು.

ಮೇರು ನಟ ನಾನಾ ಪಾಟೇಕರ್‌ ಅವರು ನಾಯಕನಟರಾಗಿ ಅಭಿನಯಿಸಿದ್ದ ‘ಅಂಕುಶ್‌’ ಹಿಂದಿ ಸಿನಿಮಾದಲ್ಲಿ ಸೈಯದ್ ಅಭಿನಯಿಸಿ ಚಿತ್ರಂಗಕ್ಕೆ ಕಾಲಿಟ್ಟರು. ಅಂಕುಶ್‌ ಸಿನಿಮಾದ ಟೈಟಲ್‌ ಕಾರ್ಡ್‌‌ನಲ್ಲೇ ‘ಸತ್ಯಜಿತ್‌’ ಎಂದು ಕರೆಯಲಾಯಿತು. ಮುಂದೆ ಸತ್ಯಜಿತ್‌ ಎಂದೇ ಗುರುತಿಸಿಕೊಂಡ ಸೈಯದ್ ಕನ್ನಡ ಚಿತ್ರರಂಗದಲ್ಲಿ ಮನೆಮಾತಾದರು. ಹಿರಿಯ ನಟ ಸತ್ಯಜಿತ್‌‌ ನಿಧನಕ್ಕೆ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಹಲವು ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...