Homeಮುಖಪುಟಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

ಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

- Advertisement -
- Advertisement -

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಸತ್ಯಜಿತ್‌ ಅವರು ಭಾನುವಾರ ಮುಂಜಾನೆ ನಿಧನರಾಗಿದ್ದು, ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡು ಡಿಸ್ಚಾರ್ಜ್‌ ಆಗಿದ್ದ ಅವರ ಆರೋಗ್ಯ ಏರುಪೇರಾಗಿದ್ದರಿಂದ ಮತ್ತೆ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿ ಕೊನೆಯುಸಿರೆಳೆದಿದ್ದಾರೆ.

2016ರಲ್ಲಿ ಗ್ಯಾಂಗ್ರೀನ್‌ಗೆ ತುತ್ತಾಗಿದ್ದ ಅವರು ಎಡಗಾಲನ್ನು ಕಳೆದುಕೊಂಡಿದ್ದರು. ಆನಂತರವೂ ನಟಿಸಿದ್ದ ಅವರು, ಈವರೆಗೆ ಸುಮಾರು 600 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಖಳನಾಯಕ ಪಾತ್ರಗಳ ಮೂಲಕ ಕನ್ನಡ ಸಿನಿ ರಸಿಕರ ಮನಸೂರೆಗೊಂಡಿದ್ದಾರೆ.

ಇದನ್ನೂ ಓದಿರಿ: ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಸತ್ಯಜಿತ್‌ ಇತ್ತೀಚಿನ ವರ್ಷಗಳಿಂದ ಅನಾರೋಗ್ಯದಿಂದ ತೀವ್ರ ಬಳಲಿದ್ದರು. ಅಲ್ಲದೇ ಇವರ ಪುತ್ರಿ, “ನಮ್ಮ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ” ಎಂದು ಪೊಲೀಸರಿಗೆ ದೂರು ನೀಡಿದ್ದರು. ನಂತರ ಸತ್ಯಜಿತ್‌ ಇದಕ್ಕೆ ಸ್ಪಷ್ಟನೆ ನೀಡಿದ್ದರು.

ಸತ್ಯಜೀತ್ ಅವರಿಗೆ ಕೆಲ ದಿನಗಳ ಹಿಂದೆ ಅವರಿಗೆ ಜಾಂಡೀಸ್ ಆಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಹೃದಯಾಘಾತವೂ ಆಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದ ಬಳಿಕ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟು, ಭಾನುವಾರ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರಿನ್ ಬಲಗಾಲಿಗೂ  ಹರಡಲಾರಂಭಿಸಿತ್ತು.

ವಿಶಿಷ್ಟ ಧ್ವನಿಯ ಮೂಲಕ ಗಮನ ಕನ್ನಡ ಚಿತ್ರಪ್ರೇಮಿಗಳ ಮನದಲ್ಲಿ ನೆಲಸಿರುವ ಸತ್ಯಜಿತ್‌, ಖಳನಾಯಕ ಹಾಗೂ ಪೋಷಕ ಪಾತ್ರಗಳಿಗೆ ಜೀವ ತುಂಬಿದವರು. ‘ಅಂಕುಶ್‌’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ​ಸತ್ಯಜಿತ್​ ಅವರು 1995ರಲ್ಲಿ ಪುಟ್ನಂಜ ಸಿನಿಮಾದಲ್ಲಿ, 1988ರಲ್ಲಿ ಶಿವ ಮೆಚ್ಚಿದ ಕಣ್ಣಪ್ಪ, 1992ರಲ್ಲಿ ಚೈತ್ರಾದ ಪ್ರೇಮಾಂಜಲಿ ಸಿನಿಮಾದಲ್ಲಿ ಅಭಿನಯಿಸಿ ನಟನೆಯಲ್ಲಿ ಗಮನ ಸೆಳೆದರು. 2004ರಲ್ಲಿ ತೆರೆಕಂಡ ‘ಆಪ್ತಮಿತ್ರ’ ಸಿನಿಮಾದಲ್ಲಿನ ಅವರ ಅಭಿನಯ ಅನನ್ಯವಾದದ್ದು.

ಇದನ್ನೂ ಓದಿರಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

‘ಅರುಣ ರಾಗ’, ‘ಅಂತಿಮ ತೀರ್ಪು’, ‘ರಣರಂಗ’, ‘ನಮ್ಮೂರ ರಾಜ’, ‘ನ್ಯಾಯಕ್ಕಾಗಿ ನಾನು’, ‘ಯುದ್ಧಕಾಂಡ’, ‘ಇಂದ್ರಜಿತ್’, ‘ನಮ್ಮೂರ ಹಮ್ಮೀರ’, ‘ಪೊಲೀಸ್ ಲಾಕಪ್’, ‘ಮನೆದೇವ್ರು’, ‘ಮಂಡ್ಯದ ಗಂಡು’, ‘ಪೊಲೀಸ್ ಸ್ಟೋರಿ’, ‘ಸರ್ಕಲ್ ಇನ್ಸ್‌ಪೆಕ್ಟರ್’, ‘ಪಟೇಲ’, ‘ದುರ್ಗದ ಹುಲಿ’, ‘ಅಪ್ಪು’, ‘ಧಮ್’, ‘ಅಭಿ’, ‘ಅರಸು’, ‘ಇಂದ್ರ’, ‘ಭಾಗ್ಯದ ಬಳೇಗಾರ’, ‘ಕಲ್ಪನಾ’, ‘ಗಾಡ್ ಫಾದರ್’, ‘ಲಕ್ಕಿ’, ‘ಉಪ್ಪಿ 2’, ‘ಮಾಣಿಕ್ಯ’, ‘ರನ್ನ’, ‘ರಣವಿಕ್ರಮ’, ‘ಮೈತ್ರಿ’ ಮೊದಲಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.

ಅಂದಹಾಗೆ ಸತ್ಯಜಿತ್‌ ಅವರ ನಿಜವಾದ ಹೆಸರು ನಿಜಾಮುದ್ದೀನ್‌ ಸೈಯದ್‌. ಒಬ್ಬ ಸಾಮಾನ್ಯ ವ್ಯಕ್ತಿ ‘ಸತ್ಯಜಿತ್‌’ ಆಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು ಗಮನಾರ್ಹ. ಹುಬ್ಬಳ್ಳಿಯಲ್ಲಿ ಕೆಎಸ್‌ಆರ್‌ಟಿಸಿಯಲ್ಲಿ ಬಸ್‌ ಡ್ರೈವರ್‌ ಆಗಿದ್ದ ಸೈಯದ್‌, ಇಲ್ಲಿನ ಹವ್ಯಾಸ ರಂಗತಂಡದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ನಾಟಕ ಪ್ರದರ್ಶನಕ್ಕಾಗಿ ಮುಂಬೈಗೆ ಹೋಗಿದ್ದಾಗ ತಂತ್ರಜ್ಞರು ಸೈಯದ್‌ರನ್ನು ಗುರುತಿಸಿ, ಚಿತ್ರರಂಗಕ್ಕೆ ಕರೆತಂದರು.

ಮೇರು ನಟ ನಾನಾ ಪಾಟೇಕರ್‌ ಅವರು ನಾಯಕನಟರಾಗಿ ಅಭಿನಯಿಸಿದ್ದ ‘ಅಂಕುಶ್‌’ ಹಿಂದಿ ಸಿನಿಮಾದಲ್ಲಿ ಸೈಯದ್ ಅಭಿನಯಿಸಿ ಚಿತ್ರಂಗಕ್ಕೆ ಕಾಲಿಟ್ಟರು. ಅಂಕುಶ್‌ ಸಿನಿಮಾದ ಟೈಟಲ್‌ ಕಾರ್ಡ್‌‌ನಲ್ಲೇ ‘ಸತ್ಯಜಿತ್‌’ ಎಂದು ಕರೆಯಲಾಯಿತು. ಮುಂದೆ ಸತ್ಯಜಿತ್‌ ಎಂದೇ ಗುರುತಿಸಿಕೊಂಡ ಸೈಯದ್ ಕನ್ನಡ ಚಿತ್ರರಂಗದಲ್ಲಿ ಮನೆಮಾತಾದರು. ಹಿರಿಯ ನಟ ಸತ್ಯಜಿತ್‌‌ ನಿಧನಕ್ಕೆ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಹಲವು ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...