Homeಮುಖಪುಟಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

ಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

- Advertisement -
- Advertisement -

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಸತ್ಯಜಿತ್‌ ಅವರು ಭಾನುವಾರ ಮುಂಜಾನೆ ನಿಧನರಾಗಿದ್ದು, ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡು ಡಿಸ್ಚಾರ್ಜ್‌ ಆಗಿದ್ದ ಅವರ ಆರೋಗ್ಯ ಏರುಪೇರಾಗಿದ್ದರಿಂದ ಮತ್ತೆ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿ ಕೊನೆಯುಸಿರೆಳೆದಿದ್ದಾರೆ.

2016ರಲ್ಲಿ ಗ್ಯಾಂಗ್ರೀನ್‌ಗೆ ತುತ್ತಾಗಿದ್ದ ಅವರು ಎಡಗಾಲನ್ನು ಕಳೆದುಕೊಂಡಿದ್ದರು. ಆನಂತರವೂ ನಟಿಸಿದ್ದ ಅವರು, ಈವರೆಗೆ ಸುಮಾರು 600 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಖಳನಾಯಕ ಪಾತ್ರಗಳ ಮೂಲಕ ಕನ್ನಡ ಸಿನಿ ರಸಿಕರ ಮನಸೂರೆಗೊಂಡಿದ್ದಾರೆ.

ಇದನ್ನೂ ಓದಿರಿ: ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಸತ್ಯಜಿತ್‌ ಇತ್ತೀಚಿನ ವರ್ಷಗಳಿಂದ ಅನಾರೋಗ್ಯದಿಂದ ತೀವ್ರ ಬಳಲಿದ್ದರು. ಅಲ್ಲದೇ ಇವರ ಪುತ್ರಿ, “ನಮ್ಮ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ” ಎಂದು ಪೊಲೀಸರಿಗೆ ದೂರು ನೀಡಿದ್ದರು. ನಂತರ ಸತ್ಯಜಿತ್‌ ಇದಕ್ಕೆ ಸ್ಪಷ್ಟನೆ ನೀಡಿದ್ದರು.

ಸತ್ಯಜೀತ್ ಅವರಿಗೆ ಕೆಲ ದಿನಗಳ ಹಿಂದೆ ಅವರಿಗೆ ಜಾಂಡೀಸ್ ಆಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಹೃದಯಾಘಾತವೂ ಆಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದ ಬಳಿಕ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟು, ಭಾನುವಾರ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರಿನ್ ಬಲಗಾಲಿಗೂ  ಹರಡಲಾರಂಭಿಸಿತ್ತು.

ವಿಶಿಷ್ಟ ಧ್ವನಿಯ ಮೂಲಕ ಗಮನ ಕನ್ನಡ ಚಿತ್ರಪ್ರೇಮಿಗಳ ಮನದಲ್ಲಿ ನೆಲಸಿರುವ ಸತ್ಯಜಿತ್‌, ಖಳನಾಯಕ ಹಾಗೂ ಪೋಷಕ ಪಾತ್ರಗಳಿಗೆ ಜೀವ ತುಂಬಿದವರು. ‘ಅಂಕುಶ್‌’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ​ಸತ್ಯಜಿತ್​ ಅವರು 1995ರಲ್ಲಿ ಪುಟ್ನಂಜ ಸಿನಿಮಾದಲ್ಲಿ, 1988ರಲ್ಲಿ ಶಿವ ಮೆಚ್ಚಿದ ಕಣ್ಣಪ್ಪ, 1992ರಲ್ಲಿ ಚೈತ್ರಾದ ಪ್ರೇಮಾಂಜಲಿ ಸಿನಿಮಾದಲ್ಲಿ ಅಭಿನಯಿಸಿ ನಟನೆಯಲ್ಲಿ ಗಮನ ಸೆಳೆದರು. 2004ರಲ್ಲಿ ತೆರೆಕಂಡ ‘ಆಪ್ತಮಿತ್ರ’ ಸಿನಿಮಾದಲ್ಲಿನ ಅವರ ಅಭಿನಯ ಅನನ್ಯವಾದದ್ದು.

ಇದನ್ನೂ ಓದಿರಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

‘ಅರುಣ ರಾಗ’, ‘ಅಂತಿಮ ತೀರ್ಪು’, ‘ರಣರಂಗ’, ‘ನಮ್ಮೂರ ರಾಜ’, ‘ನ್ಯಾಯಕ್ಕಾಗಿ ನಾನು’, ‘ಯುದ್ಧಕಾಂಡ’, ‘ಇಂದ್ರಜಿತ್’, ‘ನಮ್ಮೂರ ಹಮ್ಮೀರ’, ‘ಪೊಲೀಸ್ ಲಾಕಪ್’, ‘ಮನೆದೇವ್ರು’, ‘ಮಂಡ್ಯದ ಗಂಡು’, ‘ಪೊಲೀಸ್ ಸ್ಟೋರಿ’, ‘ಸರ್ಕಲ್ ಇನ್ಸ್‌ಪೆಕ್ಟರ್’, ‘ಪಟೇಲ’, ‘ದುರ್ಗದ ಹುಲಿ’, ‘ಅಪ್ಪು’, ‘ಧಮ್’, ‘ಅಭಿ’, ‘ಅರಸು’, ‘ಇಂದ್ರ’, ‘ಭಾಗ್ಯದ ಬಳೇಗಾರ’, ‘ಕಲ್ಪನಾ’, ‘ಗಾಡ್ ಫಾದರ್’, ‘ಲಕ್ಕಿ’, ‘ಉಪ್ಪಿ 2’, ‘ಮಾಣಿಕ್ಯ’, ‘ರನ್ನ’, ‘ರಣವಿಕ್ರಮ’, ‘ಮೈತ್ರಿ’ ಮೊದಲಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.

ಅಂದಹಾಗೆ ಸತ್ಯಜಿತ್‌ ಅವರ ನಿಜವಾದ ಹೆಸರು ನಿಜಾಮುದ್ದೀನ್‌ ಸೈಯದ್‌. ಒಬ್ಬ ಸಾಮಾನ್ಯ ವ್ಯಕ್ತಿ ‘ಸತ್ಯಜಿತ್‌’ ಆಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು ಗಮನಾರ್ಹ. ಹುಬ್ಬಳ್ಳಿಯಲ್ಲಿ ಕೆಎಸ್‌ಆರ್‌ಟಿಸಿಯಲ್ಲಿ ಬಸ್‌ ಡ್ರೈವರ್‌ ಆಗಿದ್ದ ಸೈಯದ್‌, ಇಲ್ಲಿನ ಹವ್ಯಾಸ ರಂಗತಂಡದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ನಾಟಕ ಪ್ರದರ್ಶನಕ್ಕಾಗಿ ಮುಂಬೈಗೆ ಹೋಗಿದ್ದಾಗ ತಂತ್ರಜ್ಞರು ಸೈಯದ್‌ರನ್ನು ಗುರುತಿಸಿ, ಚಿತ್ರರಂಗಕ್ಕೆ ಕರೆತಂದರು.

ಮೇರು ನಟ ನಾನಾ ಪಾಟೇಕರ್‌ ಅವರು ನಾಯಕನಟರಾಗಿ ಅಭಿನಯಿಸಿದ್ದ ‘ಅಂಕುಶ್‌’ ಹಿಂದಿ ಸಿನಿಮಾದಲ್ಲಿ ಸೈಯದ್ ಅಭಿನಯಿಸಿ ಚಿತ್ರಂಗಕ್ಕೆ ಕಾಲಿಟ್ಟರು. ಅಂಕುಶ್‌ ಸಿನಿಮಾದ ಟೈಟಲ್‌ ಕಾರ್ಡ್‌‌ನಲ್ಲೇ ‘ಸತ್ಯಜಿತ್‌’ ಎಂದು ಕರೆಯಲಾಯಿತು. ಮುಂದೆ ಸತ್ಯಜಿತ್‌ ಎಂದೇ ಗುರುತಿಸಿಕೊಂಡ ಸೈಯದ್ ಕನ್ನಡ ಚಿತ್ರರಂಗದಲ್ಲಿ ಮನೆಮಾತಾದರು. ಹಿರಿಯ ನಟ ಸತ್ಯಜಿತ್‌‌ ನಿಧನಕ್ಕೆ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಹಲವು ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...