Homeಮುಖಪುಟಅರುಣ್ ಫೆರೇರ: ನತದೃಷ್ಟರ ಕಾನೂನು ನೆರವಿಗೆ ಸದಾ ಲಭ್ಯವಿದ್ದ ಕಾರ್ಯಕರ್ತ

ಅರುಣ್ ಫೆರೇರ: ನತದೃಷ್ಟರ ಕಾನೂನು ನೆರವಿಗೆ ಸದಾ ಲಭ್ಯವಿದ್ದ ಕಾರ್ಯಕರ್ತ

ಜೈಲಿನಲ್ಲಿದ್ದ ದಿನಗಳ ಅನುಭವಗಳ ಕುರಿತು ಅರುಣ್ ಬರೆದ ಪುಸ್ತಕ "ಕಲರ್ಸ್ ಆಫ್ ದಿ ಕೇಜ್" ಭಾರತದಲ್ಲಿ ಜೈಲಿನನುಭವಗಳ ಕುರಿತು ಬಂದ ಪುಸ್ತಕಗಳಲ್ಲೇ ಮಹತ್ವದ್ದು. ಈ ಪುಸ್ತಕವು ಜೈಲಿನಲ್ಲಿನ ಕ್ರೂರ ವಾಸ್ತವಗಳನ್ನು ಬಹಳ ಸೂಕ್ಷ್ಮವಾಗಿ ಭಾರತೀಯರಿಗೆ ಪರಿಚಯಿಸಿತು.

- Advertisement -
- Advertisement -

ಅರುಣ್ ಫೆರೇರ ಅವರದ್ದು ಬಹುಮುಖಿ ವ್ಯಕ್ತಿತ್ವ. ಅವರು ಲೇಖಕರು, ವಕೀಲರು, ವ್ಯಂಗ್ಯಚಿತ್ರಕಾರ, ಚಳುವಳಿಗಾರ, ಉತ್ತಮ ಕತೆಗಾರ ಮತ್ತು ಅದ್ಭುತ ವ್ಯಕ್ತಿತ್ವದ ಸ್ನೇಹಿತ. ವಿಮರ್ಶಕರಿಂದ ಅಪಾರ ಮೆಚ್ಚುಗೆ ಗಳಿಸಿದ ಜೈಲಿನ ಅನುಭವಗಳ ಕುರಿತಾದ ಪುಸ್ತಕ “ಕಲರ್ಸ್ ಆಫ್ ದಿ ಕೇಜ್”ನ ಕತೃ ಅರುಣ್ ಫೆರೇರ. ಸಮಾಜದಂಚಿನಲ್ಲಿರುವ ಜನರಿಗೆ ಉಚಿತವಾಗಿ ಕಾನೂನು ಸಹಾಯಗಳನ್ನು ಒದಗಿಸುವ ಸಂಘಟನೆಯಾದ ’ಇಂಡಿಯನ್ ಅಸೋಸಿಯೇಷನ್ ಆಫ್ ಪೀಪಲ್ಸ್ ಲಾಯರ್ಸ್’ನ (IAPL) ಪ್ರಮುಖ ಸದಸ್ಯರು. ತುರ್ತು ಪರಿಸ್ಥಿತಿಯ ದಮನ ಕಾರ್ಯಗಳ ನಂತರದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ರಕ್ಷಿಸುವ ಸಲುವಾಗಿ ಸ್ಥಾಪಿತವಾದ ’ಕಮಿಟಿ ಫಾರ್ ಪ್ರೊಟೆಕ್ಷನ್ ಆಫ್ ಡೆಮಾಕ್ರೆಟಿಕ್ ರೈಟ್ಸ್’ನ (ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣಾ ಸಮಿತಿ) ಸದಸ್ಯರೂ ಹೌದು.

2007ರ ಮೇ ತಿಂಗಳಿನಲ್ಲಿ ಅರುಣ್ ಫೆರೇರರನ್ನು ಅಕ್ರಮವಾಗಿ ಬಂಧಿಸಿ, ಹಿಂಸಿಸಲಾಯಿತು. ತದನಂತರ ಅವರಿಗೆ ’ನಕ್ಸಲೈಟ್’ ಎಂಬ ಹಣೆಪಟ್ಟಿ ಹಚ್ಚಿ ಕಠಿಣಾತಿ ಕಠಿಣ ಯುಎಪಿಎ ಕಾಯ್ದೆಯಡಿ ಆರೋಪಪಟ್ಟಿ ದಾಖಲಿಸಲಾಯಿತು. ಪೋಲೀಸರು ಅರುಣ್ ರವರನ್ನು ದೈಹಿಕವಾಗಿ ಹಿಂಸೆಗೆ ಒಳಪಡಿಸಿದ್ದನ್ನು ಮಾಧ್ಯಮಗಳಲ್ಲಿ ಪ್ರಕಟವಾದ ಅವರ ದುರ್ಬಲ ಶರೀರದ ಫೋಟೋಗಳು ಧೃಡಪಡಿಸಿದವು.

ಸುಳ್ಳು ಕೇಸುಗಳಡಿಯಲ್ಲಿ ಬಂಧನಕ್ಕೊಳಪಡಿಸಿ ಕುಟುಂಬಸ್ಥರು, ಸ್ನೇಹಿತರು ಮತ್ತು ಸಂಗಾತಿಗಳಿಂದ ದೂರವಾಗಿಸಿದ ಘಟನೆಗಳು ಮೂಡಿಸಿದ ಆಘಾತವನ್ನು ಅರುಣ್ ರವರ ಸರಳ ನಗು ಮತ್ತು ವ್ಯಕ್ತಿತ್ವವು ಮರೆಮಾಚುತ್ತಿತ್ತು. 2007ರಲ್ಲಿ ಬಂಧನವಾದ ನಂತರ ದಿನಪತ್ರಿಕೆಗಳ ಮುಖಪುಟದಲ್ಲಿ ಪ್ರಕಟವಾದ ಜರ್ಜರಿತ ವ್ಯಕ್ತಿಯೇ ಈ ನಗುಮುಖದ ಮನುಷ್ಯ ಎಂಬುದನ್ನು ಅರಿಯುವುದೇ ಹಲವರಿಗೆ ಕಷ್ಟವಾಗಿರಬಹುದು.

2010ರ ಸೆಪ್ಟೆಂಬರ್ ತಿಂಗಳಿನಲ್ಲಿ ನಾಗಪುರದ ನ್ಯಾಯಾಲಯ ಅರುಣ್‌ರವರನ್ನು ದೋಷಮುಕ್ತರನ್ನಾಗಿಸಿ ಖುಲಾಸೆಗೊಳಿಸುತ್ತದೆ. ಜೈಲಿನ ಆವರಣದಿಂದ ಹೊರಬಂದ ಅರುಣ್‌ರವರನ್ನು ಸಾದಾ ಉಡುಪಿನಲ್ಲಿದ್ದ ಪೋಲೀಸರು ಮತ್ತೆ ಬಂಧಿಸುತ್ತಾರೆ. ಅರುಣ್‌ರವರ ಬರುವಿಕೆಗೆ ಕಾಯುತ್ತಿದ್ದ ಕುಟುಂಬದವರನ್ನು ಕಣ್ತುಂಬಿಕೊಳ್ಳುವ ಅವಕಾಶವೂ ಅವರಿಗೆ ದಕ್ಕುವುದಿಲ್ಲ. ಅರುಣ್ ಜೈಲಿನಲ್ಲಿದ್ದ ಸಮಯದಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಪಟ್ಟಂತೆ ಅವರ ಮೇಲೆ ಕೇಸ್ ದಾಖಲಿಸಿಬಿಡುತ್ತಾರೆ! ಒಟ್ಟು ನಾಲ್ಕು ವರ್ಷ ಎಂಟು ತಿಂಗಳು ಜೈಲುವಾಸವನ್ನನುಭವಿಸಿದ ಅರುಣ್ 2012ರ ಜನವರಿಯಲ್ಲಿ ಸ್ವತಂತ್ರರಾಗುತ್ತಾರೆ. ಆ ಸಮಯದಲ್ಲಿ ನಾರ್ಕೋಅನಾಲಿಸಿಸ್ ಪರೀಕ್ಷೆ ಕಾನೂನಿಗೆ ಹೊರತಾದುದಾಗಿರಲಿಲ್ಲ. ಪೋಲೀಸರು ಅರುಣ್ ರವರನ್ನು ಈ ಪರೀಕ್ಷೆಗೆ ಒಳಪಡಿಸಿದ್ದರು. ಚಳುವಳಿಗಾರರು ನಾರ್ಕೋಅನಾಲಿಸಿಸ್ ಪರೀಕ್ಷೆಯನ್ನು ವಿರೋಧಿಸುವ ಕಾರ್ಯದಲ್ಲಿ ತೊಡಗಲು ಅರುಣ್‌ರವರ ಪ್ರಕರಣ ಕಾರಣವಾಯಿತೆಂದರೆ ತಪ್ಪಲ್ಲ.

ವರುಷಗಳ ಕಾಲ ಜೈಲಿನಲ್ಲಿ ಕಳೆದರೂ ಸಹಿತ, ಬಿಡುಗಡೆಯಾದ ನಂತರ ಅರುಣ್ ಸಿದ್ಧಾರ್ಥ ಕಾಲೇಜಿನಲ್ಲಿ 2015 ರಲ್ಲಿ ತಮ್ಮ ಲಾ ಪದವಿಯನ್ನು ಪೂರ್ತಿಗೊಳಿಸಿ 2016ರಿಂದ ವಕೀಲರಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತಾರೆ. ತಮ್ಮ ರಾಜಕೀಯ ಮತ್ತು ಚಳುವಳಿಯನ್ನು ನ್ಯಾಯಾಲಯದ ಅಂಗಳಕ್ಕೆ ತೆಗೆದುಕೊಂಡು ಹೋಗುತ್ತಾರೆ. ವಕೀಲರ ಅವಶ್ಯಕತೆ ಇರುವ, ವಕೀಲರ ದೊಡ್ಡ ಮೊತ್ತದ ಫೀಸನ್ನು ಕಟ್ಟಲು ಅಶಕ್ತರಾಗಿರುವ ಜನರನ್ನು ಪ್ರತಿನಿಧಿಸುತ್ತಾರೆ ಅರುಣ್ ಫೆರೇರ.

ಅರುಣ್

ಜೈಲಿನಲ್ಲಿದ್ದ ದಿನಗಳ ಅನುಭವಗಳ ಕುರಿತು ಅರುಣ್ ಬರೆದ ಪುಸ್ತಕ “ಕಲರ್ಸ್ ಆಫ್ ದಿ ಕೇಜ್” ಭಾರತದಲ್ಲಿ ಜೈಲಿನನುಭವಗಳ ಕುರಿತು ಬಂದ ಪುಸ್ತಕಗಳಲ್ಲೇ ಮಹತ್ವದ್ದು. ಈ ಪುಸ್ತಕವು ಜೈಲಿನಲ್ಲಿನ ಕ್ರೂರ ವಾಸ್ತವಗಳನ್ನು ಬಹಳ ಸೂಕ್ಷ್ಮವಾಗಿ ಭಾರತೀಯರಿಗೆ ಪರಿಚಯಿಸಿತು. ಬಂಧನ ದಿನಗಳಲ್ಲಿನ ಚಿತ್ರಹಿಂಸೆ, ವರುಷಗಳ ಕಾಲ ಸುಳ್ಳು ಕೇಸುಗಳನ್ನಾಕಿ ಹಿಂಸಿಸುವ ಪರಿ ಮತ್ತು ನೆಲದ ಕಾನೂನನ್ನು ಹಾಡಹಗಲಿನಲ್ಲೇ ಮೀರಿನಿಲ್ಲುವ ವ್ಯವಸ್ಥೆಯ ಕುರಿತು ಅರುಣ್ ಬರೆದರು. ಕ್ರೂರತೆಯ ವಿರುದ್ಧ ಸಿಡಿದೆದ್ದು ಮುಷ್ಕರಕ್ಕಿಳಿಯುವ ಖೈದಿಗಳು, ಭರವಸೆ ಕಳೆದುಹೋಗದಂತೆ ಕಾಪಿಡುವ ಪುಟ್ಟ ಸಮಾಧಾನಗಳ ಕುರಿತು ಬರೆದರು. ಕುಖ್ಯಾತ ’ಅಂಡಾ’ ಕೊಠಡಿಯೊಳಗಿನ ಒಂಟಿ ಜೈಲು ವಾಸದ ಕುರಿತು ಬರೆಯುತ್ತಾ ಅರುಣ್ “ಭಯಹುಟ್ಟಿಸುವ ಅಂಡಾ ಸೆಲ್ಲಿನ ವಾತಾವರಣಕ್ಕಿಂತ ಹೆಚ್ಚಾಗಿ ಮನುಷ್ಯರ ಸಂಪರ್ಕವೇ ಇರದಿರುವುದು ಉಸಿರುಗಟ್ಟಿಸುತ್ತದೆ. ಅಂಡಾ ಸೆಲ್ಲಿನೊಳಗಿದ್ದಾಗ ಹದಿನೈದು ಘಂಟೆಗಳ ಕಾಲ ಅಥವಾ ಅದಕ್ಕಿಂತಲೂ ಹೆಚ್ಚಿನ ಸಮಯ ಆ ಕೊಠಡಿಯೊಳಗೆ ನೀವು ಒಬ್ಬರೇ ಕಳೆಯುತ್ತೀರಿ. ನೀವು ನೋಡುವ ಇನ್ನಿತರೆ ಮನುಷ್ಯರೆಂದರೆ ಕಾವಲುಗಾರರು ಮತ್ತು ಅತಿ ಅಪರೂಪಕ್ಕೆ ನಿಮ್ಮ ವಿಭಾಗದಲ್ಲಿರುವ ಇನ್ನಿತರೆ ಖೈದಿಗಳು. ಅಂಡಾ ಸೆಲ್ಲಿನಲ್ಲಿ ಕೆಲವು ವಾರಗಳನ್ನು ಕಳೆದರೆ ಮನುಷ್ಯ ಕುಸಿದುಬಿಡುತ್ತಾನೆ” ಎನ್ನುತ್ತಾರೆ.

’ಕಲರ್ಸ್ ಆಫ್ ಕೇಜ್’ ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ಅರುಣ್ “ನಾನೊಬ್ಬ ಚಳುವಳಿಗಾರನಾದರೆ ಏನಾಯಿತು? ಶಂಕಿತ ಮಾವೋವಾದಿಗಳ ಅಥವಾ ಭಯೋತ್ಪಾದಕರ ಪ್ರಕರಣಗಳನ್ನು ನಿಭಾಯಿಸದರೇನಾಯಿತು? ಒಬ್ಬ ವಕೀಲನಾಗಿ ಶಂಕಿತರ ಕೇಸುಗಳನ್ನು ನಾನು ತೆಗೆದುಕೊಂಡರೇನಾಯಿತು? ಈ ಕಾರಣಗಳಿಂದಾಗಿ ನನ್ನನ್ನೂ ಅದೇ ಪ್ರಕರಣಗಳಲ್ಲಿ ಸುಳ್ಳು ಸುಳ್ಳೇ ಸಿಕ್ಕಿಸುವ ಸವಲತ್ತು ಈ ವ್ಯವಸ್ಥೆಗೆ ಸಿಕ್ಕಿದ್ದಾದರೂ ಹೇಗೆ?” ಎಂದು ಪ್ರಶ್ನಿಸುತ್ತಾರೆ.

ದುರದೃಷ್ಟವಶಾತ್ ಈ ಬಾರಿ ಅರುಣ್ ಫೆರೇರರನ್ನು ಸ್ಪಷ್ಟವಾಗಿ ಈ ಕಾರಣಗಳಿಗಾಗಿಯೇ ಬಂಧಿಸಿದ್ದಾರೆ, ಕಾನೂನಾತ್ಮಕ ಸಹಾಯ ಪಡೆಯಲು ಸಾಧ್ಯವಾಗದೆ ಭಾರತದ ಜೈಲುಗಳಲ್ಲಿ ಕೊಳೆಯುತ್ತಿರುವ ಜನರ ಹಕ್ಕುಗಳ ಕುರಿತಾಗಿ ಮಾತನಾಡಿದ ಕಾರಣಕ್ಕೆ ಅರುಣ್ ಫೆರೇರರನ್ನು ಬಂಧಿಸಿದ್ದಾರೆ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ಡಾ. ಕೆ ಆರ್ ಅಶೋಕ್


ಇದನ್ನೂ ಓದಿ; ಜೈಲು ಕಾಣಿಸುವ ಇನ್ನೊಂದು ಸತ್ಯ : ಡಾ.ರಹಮತ್ ತರೀಕೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...