Homeಮುಖಪುಟಅರುಣ್ ಫೆರೇರ: ನತದೃಷ್ಟರ ಕಾನೂನು ನೆರವಿಗೆ ಸದಾ ಲಭ್ಯವಿದ್ದ ಕಾರ್ಯಕರ್ತ

ಅರುಣ್ ಫೆರೇರ: ನತದೃಷ್ಟರ ಕಾನೂನು ನೆರವಿಗೆ ಸದಾ ಲಭ್ಯವಿದ್ದ ಕಾರ್ಯಕರ್ತ

ಜೈಲಿನಲ್ಲಿದ್ದ ದಿನಗಳ ಅನುಭವಗಳ ಕುರಿತು ಅರುಣ್ ಬರೆದ ಪುಸ್ತಕ "ಕಲರ್ಸ್ ಆಫ್ ದಿ ಕೇಜ್" ಭಾರತದಲ್ಲಿ ಜೈಲಿನನುಭವಗಳ ಕುರಿತು ಬಂದ ಪುಸ್ತಕಗಳಲ್ಲೇ ಮಹತ್ವದ್ದು. ಈ ಪುಸ್ತಕವು ಜೈಲಿನಲ್ಲಿನ ಕ್ರೂರ ವಾಸ್ತವಗಳನ್ನು ಬಹಳ ಸೂಕ್ಷ್ಮವಾಗಿ ಭಾರತೀಯರಿಗೆ ಪರಿಚಯಿಸಿತು.

- Advertisement -
- Advertisement -

ಅರುಣ್ ಫೆರೇರ ಅವರದ್ದು ಬಹುಮುಖಿ ವ್ಯಕ್ತಿತ್ವ. ಅವರು ಲೇಖಕರು, ವಕೀಲರು, ವ್ಯಂಗ್ಯಚಿತ್ರಕಾರ, ಚಳುವಳಿಗಾರ, ಉತ್ತಮ ಕತೆಗಾರ ಮತ್ತು ಅದ್ಭುತ ವ್ಯಕ್ತಿತ್ವದ ಸ್ನೇಹಿತ. ವಿಮರ್ಶಕರಿಂದ ಅಪಾರ ಮೆಚ್ಚುಗೆ ಗಳಿಸಿದ ಜೈಲಿನ ಅನುಭವಗಳ ಕುರಿತಾದ ಪುಸ್ತಕ “ಕಲರ್ಸ್ ಆಫ್ ದಿ ಕೇಜ್”ನ ಕತೃ ಅರುಣ್ ಫೆರೇರ. ಸಮಾಜದಂಚಿನಲ್ಲಿರುವ ಜನರಿಗೆ ಉಚಿತವಾಗಿ ಕಾನೂನು ಸಹಾಯಗಳನ್ನು ಒದಗಿಸುವ ಸಂಘಟನೆಯಾದ ’ಇಂಡಿಯನ್ ಅಸೋಸಿಯೇಷನ್ ಆಫ್ ಪೀಪಲ್ಸ್ ಲಾಯರ್ಸ್’ನ (IAPL) ಪ್ರಮುಖ ಸದಸ್ಯರು. ತುರ್ತು ಪರಿಸ್ಥಿತಿಯ ದಮನ ಕಾರ್ಯಗಳ ನಂತರದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ರಕ್ಷಿಸುವ ಸಲುವಾಗಿ ಸ್ಥಾಪಿತವಾದ ’ಕಮಿಟಿ ಫಾರ್ ಪ್ರೊಟೆಕ್ಷನ್ ಆಫ್ ಡೆಮಾಕ್ರೆಟಿಕ್ ರೈಟ್ಸ್’ನ (ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣಾ ಸಮಿತಿ) ಸದಸ್ಯರೂ ಹೌದು.

2007ರ ಮೇ ತಿಂಗಳಿನಲ್ಲಿ ಅರುಣ್ ಫೆರೇರರನ್ನು ಅಕ್ರಮವಾಗಿ ಬಂಧಿಸಿ, ಹಿಂಸಿಸಲಾಯಿತು. ತದನಂತರ ಅವರಿಗೆ ’ನಕ್ಸಲೈಟ್’ ಎಂಬ ಹಣೆಪಟ್ಟಿ ಹಚ್ಚಿ ಕಠಿಣಾತಿ ಕಠಿಣ ಯುಎಪಿಎ ಕಾಯ್ದೆಯಡಿ ಆರೋಪಪಟ್ಟಿ ದಾಖಲಿಸಲಾಯಿತು. ಪೋಲೀಸರು ಅರುಣ್ ರವರನ್ನು ದೈಹಿಕವಾಗಿ ಹಿಂಸೆಗೆ ಒಳಪಡಿಸಿದ್ದನ್ನು ಮಾಧ್ಯಮಗಳಲ್ಲಿ ಪ್ರಕಟವಾದ ಅವರ ದುರ್ಬಲ ಶರೀರದ ಫೋಟೋಗಳು ಧೃಡಪಡಿಸಿದವು.

ಸುಳ್ಳು ಕೇಸುಗಳಡಿಯಲ್ಲಿ ಬಂಧನಕ್ಕೊಳಪಡಿಸಿ ಕುಟುಂಬಸ್ಥರು, ಸ್ನೇಹಿತರು ಮತ್ತು ಸಂಗಾತಿಗಳಿಂದ ದೂರವಾಗಿಸಿದ ಘಟನೆಗಳು ಮೂಡಿಸಿದ ಆಘಾತವನ್ನು ಅರುಣ್ ರವರ ಸರಳ ನಗು ಮತ್ತು ವ್ಯಕ್ತಿತ್ವವು ಮರೆಮಾಚುತ್ತಿತ್ತು. 2007ರಲ್ಲಿ ಬಂಧನವಾದ ನಂತರ ದಿನಪತ್ರಿಕೆಗಳ ಮುಖಪುಟದಲ್ಲಿ ಪ್ರಕಟವಾದ ಜರ್ಜರಿತ ವ್ಯಕ್ತಿಯೇ ಈ ನಗುಮುಖದ ಮನುಷ್ಯ ಎಂಬುದನ್ನು ಅರಿಯುವುದೇ ಹಲವರಿಗೆ ಕಷ್ಟವಾಗಿರಬಹುದು.

2010ರ ಸೆಪ್ಟೆಂಬರ್ ತಿಂಗಳಿನಲ್ಲಿ ನಾಗಪುರದ ನ್ಯಾಯಾಲಯ ಅರುಣ್‌ರವರನ್ನು ದೋಷಮುಕ್ತರನ್ನಾಗಿಸಿ ಖುಲಾಸೆಗೊಳಿಸುತ್ತದೆ. ಜೈಲಿನ ಆವರಣದಿಂದ ಹೊರಬಂದ ಅರುಣ್‌ರವರನ್ನು ಸಾದಾ ಉಡುಪಿನಲ್ಲಿದ್ದ ಪೋಲೀಸರು ಮತ್ತೆ ಬಂಧಿಸುತ್ತಾರೆ. ಅರುಣ್‌ರವರ ಬರುವಿಕೆಗೆ ಕಾಯುತ್ತಿದ್ದ ಕುಟುಂಬದವರನ್ನು ಕಣ್ತುಂಬಿಕೊಳ್ಳುವ ಅವಕಾಶವೂ ಅವರಿಗೆ ದಕ್ಕುವುದಿಲ್ಲ. ಅರುಣ್ ಜೈಲಿನಲ್ಲಿದ್ದ ಸಮಯದಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಪಟ್ಟಂತೆ ಅವರ ಮೇಲೆ ಕೇಸ್ ದಾಖಲಿಸಿಬಿಡುತ್ತಾರೆ! ಒಟ್ಟು ನಾಲ್ಕು ವರ್ಷ ಎಂಟು ತಿಂಗಳು ಜೈಲುವಾಸವನ್ನನುಭವಿಸಿದ ಅರುಣ್ 2012ರ ಜನವರಿಯಲ್ಲಿ ಸ್ವತಂತ್ರರಾಗುತ್ತಾರೆ. ಆ ಸಮಯದಲ್ಲಿ ನಾರ್ಕೋಅನಾಲಿಸಿಸ್ ಪರೀಕ್ಷೆ ಕಾನೂನಿಗೆ ಹೊರತಾದುದಾಗಿರಲಿಲ್ಲ. ಪೋಲೀಸರು ಅರುಣ್ ರವರನ್ನು ಈ ಪರೀಕ್ಷೆಗೆ ಒಳಪಡಿಸಿದ್ದರು. ಚಳುವಳಿಗಾರರು ನಾರ್ಕೋಅನಾಲಿಸಿಸ್ ಪರೀಕ್ಷೆಯನ್ನು ವಿರೋಧಿಸುವ ಕಾರ್ಯದಲ್ಲಿ ತೊಡಗಲು ಅರುಣ್‌ರವರ ಪ್ರಕರಣ ಕಾರಣವಾಯಿತೆಂದರೆ ತಪ್ಪಲ್ಲ.

ವರುಷಗಳ ಕಾಲ ಜೈಲಿನಲ್ಲಿ ಕಳೆದರೂ ಸಹಿತ, ಬಿಡುಗಡೆಯಾದ ನಂತರ ಅರುಣ್ ಸಿದ್ಧಾರ್ಥ ಕಾಲೇಜಿನಲ್ಲಿ 2015 ರಲ್ಲಿ ತಮ್ಮ ಲಾ ಪದವಿಯನ್ನು ಪೂರ್ತಿಗೊಳಿಸಿ 2016ರಿಂದ ವಕೀಲರಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತಾರೆ. ತಮ್ಮ ರಾಜಕೀಯ ಮತ್ತು ಚಳುವಳಿಯನ್ನು ನ್ಯಾಯಾಲಯದ ಅಂಗಳಕ್ಕೆ ತೆಗೆದುಕೊಂಡು ಹೋಗುತ್ತಾರೆ. ವಕೀಲರ ಅವಶ್ಯಕತೆ ಇರುವ, ವಕೀಲರ ದೊಡ್ಡ ಮೊತ್ತದ ಫೀಸನ್ನು ಕಟ್ಟಲು ಅಶಕ್ತರಾಗಿರುವ ಜನರನ್ನು ಪ್ರತಿನಿಧಿಸುತ್ತಾರೆ ಅರುಣ್ ಫೆರೇರ.

ಅರುಣ್

ಜೈಲಿನಲ್ಲಿದ್ದ ದಿನಗಳ ಅನುಭವಗಳ ಕುರಿತು ಅರುಣ್ ಬರೆದ ಪುಸ್ತಕ “ಕಲರ್ಸ್ ಆಫ್ ದಿ ಕೇಜ್” ಭಾರತದಲ್ಲಿ ಜೈಲಿನನುಭವಗಳ ಕುರಿತು ಬಂದ ಪುಸ್ತಕಗಳಲ್ಲೇ ಮಹತ್ವದ್ದು. ಈ ಪುಸ್ತಕವು ಜೈಲಿನಲ್ಲಿನ ಕ್ರೂರ ವಾಸ್ತವಗಳನ್ನು ಬಹಳ ಸೂಕ್ಷ್ಮವಾಗಿ ಭಾರತೀಯರಿಗೆ ಪರಿಚಯಿಸಿತು. ಬಂಧನ ದಿನಗಳಲ್ಲಿನ ಚಿತ್ರಹಿಂಸೆ, ವರುಷಗಳ ಕಾಲ ಸುಳ್ಳು ಕೇಸುಗಳನ್ನಾಕಿ ಹಿಂಸಿಸುವ ಪರಿ ಮತ್ತು ನೆಲದ ಕಾನೂನನ್ನು ಹಾಡಹಗಲಿನಲ್ಲೇ ಮೀರಿನಿಲ್ಲುವ ವ್ಯವಸ್ಥೆಯ ಕುರಿತು ಅರುಣ್ ಬರೆದರು. ಕ್ರೂರತೆಯ ವಿರುದ್ಧ ಸಿಡಿದೆದ್ದು ಮುಷ್ಕರಕ್ಕಿಳಿಯುವ ಖೈದಿಗಳು, ಭರವಸೆ ಕಳೆದುಹೋಗದಂತೆ ಕಾಪಿಡುವ ಪುಟ್ಟ ಸಮಾಧಾನಗಳ ಕುರಿತು ಬರೆದರು. ಕುಖ್ಯಾತ ’ಅಂಡಾ’ ಕೊಠಡಿಯೊಳಗಿನ ಒಂಟಿ ಜೈಲು ವಾಸದ ಕುರಿತು ಬರೆಯುತ್ತಾ ಅರುಣ್ “ಭಯಹುಟ್ಟಿಸುವ ಅಂಡಾ ಸೆಲ್ಲಿನ ವಾತಾವರಣಕ್ಕಿಂತ ಹೆಚ್ಚಾಗಿ ಮನುಷ್ಯರ ಸಂಪರ್ಕವೇ ಇರದಿರುವುದು ಉಸಿರುಗಟ್ಟಿಸುತ್ತದೆ. ಅಂಡಾ ಸೆಲ್ಲಿನೊಳಗಿದ್ದಾಗ ಹದಿನೈದು ಘಂಟೆಗಳ ಕಾಲ ಅಥವಾ ಅದಕ್ಕಿಂತಲೂ ಹೆಚ್ಚಿನ ಸಮಯ ಆ ಕೊಠಡಿಯೊಳಗೆ ನೀವು ಒಬ್ಬರೇ ಕಳೆಯುತ್ತೀರಿ. ನೀವು ನೋಡುವ ಇನ್ನಿತರೆ ಮನುಷ್ಯರೆಂದರೆ ಕಾವಲುಗಾರರು ಮತ್ತು ಅತಿ ಅಪರೂಪಕ್ಕೆ ನಿಮ್ಮ ವಿಭಾಗದಲ್ಲಿರುವ ಇನ್ನಿತರೆ ಖೈದಿಗಳು. ಅಂಡಾ ಸೆಲ್ಲಿನಲ್ಲಿ ಕೆಲವು ವಾರಗಳನ್ನು ಕಳೆದರೆ ಮನುಷ್ಯ ಕುಸಿದುಬಿಡುತ್ತಾನೆ” ಎನ್ನುತ್ತಾರೆ.

’ಕಲರ್ಸ್ ಆಫ್ ಕೇಜ್’ ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ಅರುಣ್ “ನಾನೊಬ್ಬ ಚಳುವಳಿಗಾರನಾದರೆ ಏನಾಯಿತು? ಶಂಕಿತ ಮಾವೋವಾದಿಗಳ ಅಥವಾ ಭಯೋತ್ಪಾದಕರ ಪ್ರಕರಣಗಳನ್ನು ನಿಭಾಯಿಸದರೇನಾಯಿತು? ಒಬ್ಬ ವಕೀಲನಾಗಿ ಶಂಕಿತರ ಕೇಸುಗಳನ್ನು ನಾನು ತೆಗೆದುಕೊಂಡರೇನಾಯಿತು? ಈ ಕಾರಣಗಳಿಂದಾಗಿ ನನ್ನನ್ನೂ ಅದೇ ಪ್ರಕರಣಗಳಲ್ಲಿ ಸುಳ್ಳು ಸುಳ್ಳೇ ಸಿಕ್ಕಿಸುವ ಸವಲತ್ತು ಈ ವ್ಯವಸ್ಥೆಗೆ ಸಿಕ್ಕಿದ್ದಾದರೂ ಹೇಗೆ?” ಎಂದು ಪ್ರಶ್ನಿಸುತ್ತಾರೆ.

ದುರದೃಷ್ಟವಶಾತ್ ಈ ಬಾರಿ ಅರುಣ್ ಫೆರೇರರನ್ನು ಸ್ಪಷ್ಟವಾಗಿ ಈ ಕಾರಣಗಳಿಗಾಗಿಯೇ ಬಂಧಿಸಿದ್ದಾರೆ, ಕಾನೂನಾತ್ಮಕ ಸಹಾಯ ಪಡೆಯಲು ಸಾಧ್ಯವಾಗದೆ ಭಾರತದ ಜೈಲುಗಳಲ್ಲಿ ಕೊಳೆಯುತ್ತಿರುವ ಜನರ ಹಕ್ಕುಗಳ ಕುರಿತಾಗಿ ಮಾತನಾಡಿದ ಕಾರಣಕ್ಕೆ ಅರುಣ್ ಫೆರೇರರನ್ನು ಬಂಧಿಸಿದ್ದಾರೆ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ಡಾ. ಕೆ ಆರ್ ಅಶೋಕ್


ಇದನ್ನೂ ಓದಿ; ಜೈಲು ಕಾಣಿಸುವ ಇನ್ನೊಂದು ಸತ್ಯ : ಡಾ.ರಹಮತ್ ತರೀಕೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...