Homeಮುಖಪುಟಚುನಾವಣಾ ಆಯುಕ್ತ ಅರುಣ್ ಗೋಯಲ್‌ ರಾಜೀನಾಮೆ: ಪ್ರಧಾನಿ ಉತ್ತರಿಸುವಂತೆ ಕಾಂಗ್ರೆಸ್‌ ಆಗ್ರಹ

ಚುನಾವಣಾ ಆಯುಕ್ತ ಅರುಣ್ ಗೋಯಲ್‌ ರಾಜೀನಾಮೆ: ಪ್ರಧಾನಿ ಉತ್ತರಿಸುವಂತೆ ಕಾಂಗ್ರೆಸ್‌ ಆಗ್ರಹ

- Advertisement -
- Advertisement -

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್‌ ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌, ಈ ಕುರಿತು ಪ್ರಧಾನಿ ಮೋದಿ ಉತ್ತರಿಸುವಂತೆ ಆಗ್ರಹಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದೇನು ಚುನಾವಣಾ ಆಯೋಗವೇ ಅಥವಾ ಚುನಾವಣಾ ಲೋಪವೇ?  ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಚುನಾವಣಾ ಆಯೋಗದ ಸಮಿತಿಯಲ್ಲಿ ಕೇವಲ ಒಬ್ಬರು ಸದಸ್ಯರಷ್ಟೇ ಇದ್ದಾರೆ.  ಇದು ಏಕೆ? ಎಂದು ಪ್ರಶ್ನಿಸಿದ್ದಾರೆ.

ನಾನು ಈ ಹಿಂದೆಯೇ ಹೇಳಿದಂತೆ, ಸ್ವತಂತ್ರ ಸಂಸ್ಥೆಗಳ ವ್ಯವಸ್ಥಿತ ನಾಶವನ್ನು ನಿಲ್ಲಿಸದಿದ್ದರೆ, ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಿರಂಕುಶ ಪ್ರಭುತ್ವವು ಅತಿಕ್ರಮಿಸಲಿದೆ. ಕುಸಿಯುತ್ತಿರುವ ಸಾಂವಿಧಾನಿಕ ಸಂಸ್ಥೆಗಳ ಪಟ್ಟಿಗೆ ಇದೀಗ ಚುನಾವಣಾ ಆಯೋಗವೂ ಸೇರ್ಪಡೆಯಾಗಿದೆ. ಚುನಾವಣಾ ಆಯೋಗದ ಸಮಿತಿಯಲ್ಲಿ ಮೂವರು ಸದಸ್ಯರು ಇರಬೇಕು. ಆದರೆ, ಗೋಯಲ್‌ ಅವರು ತಮ್ಮ ಸ್ಥಾನ ತೊರೆದಿರುವುದರಿಂದ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಮಾತ್ರವೇ ಉಳಿದಿದ್ದಾರೆ. ಸಮಿತಿಯಲ್ಲಿದ್ದ ಮತ್ತೊಬ್ಬ ಚುನಾವಣಾ ಆಯುಕ್ತರಾಗಿ ಅನೂಪ್ ಚೌಧರಿ ಪಾಂಡೆ ಅವರು ಫೆಬ್ರುವರಿಯಲ್ಲಿ ನಿವೃತ್ತರಾಗಿದ್ದರು. ಚುನಾವಣಾ ಆಯುಕ್ತರ ನೇಮಕದ ಹೊಸ ಪ್ರಕ್ರಿಯೆ ಆರಂಭವಾದಾಗಿನಿಂದ ಆಡಳಿತ ಪಕ್ಷ ಮತ್ತು ಪ್ರಧಾನಿಗೆ ಪರಿಣಾಮಕಾರಿಯಾದ ಅಧಿಕಾರ ದೊರೆತಿದೆ. ಆದರೂ, ಹಿಂದಿನ ಚುನಾವಣಾ ಆಯುಕ್ತರ ಅವಧಿ ಮುಗಿದ 23 ದಿನಗಳ ನಂತರವೂ ಹೊಸಬರನ್ನು ಏಕೆ ನೇಮಿಸಿಲ್ಲ? ಮೋದಿ ಸರ್ಕಾರ ಇದಕ್ಕೆ ಉತ್ತರಿಸಲೇಬೇಕು. ಸೂಕ್ತ ವಿವರಣೆಯನ್ನೂ ನೀಡಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.

ಅರುಣ್‌ ಗೋಯಲ್‌ ಅವರು ರಾಜೀನಾಮೆ ನೀಡಿರುವ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯ ಕಾರ್ಯಾಚರಣೆಯಲ್ಲಿ ಖಂಡಿತವಾಗಿಯೂ ಪಾರದರ್ಶಕತೆ ಇಲ್ಲ. ಸರ್ಕಾರ ಅವರ ಮೇಲೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಿಂದ ಕ್ಲೀನ್‌ ಚಿಟ್‌ ನೀಡಲಾಗಿತ್ತು. ಆದರೆ, ಆಗಿನ ಚುನಾವಣಾ ಆಯುಕ್ತ ಅಶೋಕ್‌ ಲಾವಸಾ ಅವರು ಆಯೋಗದ ಕ್ರಮವನ್ನು ವಿರೋಧಿಸಿದ್ದರು. ಅದಾದ ನಂತರ ಲಾವಸಾ ವಿರುದ್ಧ ನಿರಂತರವಾಗಿ ತನಿಖೆಗಳನ್ನು ನಡೆಸಲಾಗಿದೆ. ಸರ್ಕಾರವು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ನಾಶಪಡಿಸುತ್ತಿರುವುದು ಈ ರೀತಿಯ ಧೋರಣೆಗಳಿಂದ ಸ್ಪಷ್ಟವಾಗುತ್ತದೆ. ಇದಕ್ಕೆ ಉತ್ತರ ಸಿಗಬೇಕು. ಚುನಾವಣಾ ಆಯೋಗವು ಯಾವಾಗಲೂ ಪಕ್ಷಾತೀತವಾಗಿರಬೇಕು ಎಂದು ಕೆಸಿ ವೇಣುಗೋಪಾಲ್‌ ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ನಿನ್ನೆ ರಾಜೀನಾಮೆ ನೀಡಿದ್ದರು. ರಾಷ್ಟ್ರಪತಿಗಳು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಆದರೆ ಅಧಿಕಾರವಧಿ ಇನ್ನೂ 3 ವರ್ಷಗಳ ಕಾಲ ಇದ್ದರೂ, ಚುನಾವಣೆ ಹೊಸ್ತಿಲಲ್ಲಿ ಅವರು ರಾಜೀನಾಮೆ ನೀಡಿದ್ದೇಕೆ ಎಂಬ ಪ್ರಶ್ನೆಗಳು ವ್ಯಾಪಕವಾಗಿ ಉದ್ಭವಿಸಿದೆ.

ಇದನ್ನು ಓದಿ: ಚುನಾವಣಾ ಆಯುಕ್ತರಾಗಿ ನೇಮಕಾತಿ ವೇಳೆಯೂ ಉದ್ಭವಿಸಿದ್ದ ವಿವಾದ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದೇಕೆ?

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...