Homeಮುಖಪುಟಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

ಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

- Advertisement -
- Advertisement -

ಅರುಣಾಚಲ ಪ್ರದೇಶದ ನದಿಯೊಂದು ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿದ್ದು, ಸಾವಿರಾರು ಮೀನುಗಳು ಸಾವನ್ನಪ್ಪಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿದೆ. ಕಮೆಂಗ್ ನದಿಯ ಮೇಲ್ಮೈಯಲ್ಲಿ ತೇಲುತ್ತಿರುವ ಮೀನುಗಳನ್ನು ತಿನ್ನದಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅದು ವರದಿ ಮಾಡಿದೆ.

ಪೂರ್ವ ಕಮೆಂಗ್ ಜಿಲ್ಲೆಯಲ್ಲಿ ಹುಟ್ಟುವ ನದಿಯು ಕಪ್ಪು ಬಣ್ಣಕ್ಕೆ ತಿರುಗಲು ಒಟ್ಟು ಕರಗಿದ ಪದಾರ್ಥಗಳ ( total dissolved substances-ಟಿಡಿಎಸ್‌) ಹೆಚ್ಚಿನ ಅಂಶವೇ ಕಾರಣ ಎಂದು ಜಿಲ್ಲಾ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: ಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

ಟಿಡಿಎಸ್ ಜಲಚರಗಳಿಗೆ ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಮೀನುಗಾರಿಕೆ ಅಧಿಕಾರಿಗಳು ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ. ಹೆಚ್ಚಿನ ಮಟ್ಟದ ಟಿಡಿಎಸ್‌ನಿಂದಾಗಿ ನೀರಿನ ಅಡಿಯಲ್ಲಿರುವ ಮೀನುಗಳು ಕಡಿಮೆ ಗೋಚರತೆಯನ್ನು ಅನುಭವಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಮೆಂಗ್ ನದಿಯಲ್ಲಿನ ಟಿಡಿಎಸ್ ಪ್ರತಿ ಲೀಟರ್‌ಗೆ 6,800 ಮಿ.ಗ್ರಾಂ ಆಗಿತ್ತು, ಇದು ಪ್ರತಿ ಲೀಟರ್‌ಗೆ ಸಾಮಾನ್ಯ ಶ್ರೇಣಿಯ 300-1,200 ಮಿಗ್ರಾಂಗಿಂತ ಹೆಚ್ಚಾಗಿದೆ ಎಂದು ಜಿಲ್ಲಾ ಮೀನುಗಾರಿಕೆ ಅಭಿವೃದ್ಧಿ ಅಧಿಕಾರಿ (ಡಿಎಫ್‌ಡಿಒ) ಹಾಲಿ ತಾಜೋ ಹೇಳಿದ್ದಾರೆ.

“ನದಿಯ ಪರಿಸ್ಥಿತಿ ಹೀಗೇ ಇದ್ದರೆ, ಇನ್ನು ಕಲವೇ ದಿನಗಳಲ್ಲಿ ನದಿಯ ಜಲಚರಗಳು ಸಂಪೂರ್ಣವಾಗಿ ನಾಶವಾಗುತ್ತವೆ” ಎಂದು ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ: ಅರುಣಾಚಲ ಪ್ರದೇಶದಲ್ಲಿ ಒಂದು ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

 

ಈ ಮಧ್ಯೆ, ಘಟನೆ ನಡೆದ ಸೆಪ್ಪಾ ಗ್ರಾಮದ ನಿವಾಸಿಗಳು ಚೀನಾವನ್ನು ದೂಷಿಸಿದ್ದಾರೆ. ಗಡಿಯುದ್ದಕ್ಕೂ ನೆರೆಯ ದೇಶವು ನಡೆಸುತ್ತಿರುವ ನಿರ್ಮಾಣ ಚಟುವಟಿಕೆಗಳಿಂದ ಟಿಡಿಎಸ್ ಮಟ್ಟವು ಅಪಾಯಕಾರಿಯಾಗಿ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

ಕಮೆಂಗ್ ನದಿಯ ನೀರಿನ ಬಣ್ಣ ಹಠಾತ್ ಬದಲಾವಣೆ ಮತ್ತು ಹೆಚ್ಚಿನ ಪ್ರಮಾಣದ ಮೀನುಗಳ ಸಾವಿನ ಹಿಂದಿನ ಕಾರಣವನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ತಕ್ಷಣವೇ ರಚಿಸಬೇಕೆಂದು ಸೆಪ್ಪಾ ಪೂರ್ವ ಶಾಸಕ ತಪುಕ್ ಟಾಕು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

2017 ರಲ್ಲಿ, ಪಾಸಿಘಾಟ್‌ನಲ್ಲಿ ಸಿಯಾಂಗ್ ನದಿಯು ಇದೇ ರೀತಿಯ ಕಪ್ಪಾಗಿರುವುದು ವರದಿಯಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...