Homeಮುಖಪುಟಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

ಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

- Advertisement -
- Advertisement -

ಅರುಣಾಚಲ ಪ್ರದೇಶದ ನದಿಯೊಂದು ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿದ್ದು, ಸಾವಿರಾರು ಮೀನುಗಳು ಸಾವನ್ನಪ್ಪಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿದೆ. ಕಮೆಂಗ್ ನದಿಯ ಮೇಲ್ಮೈಯಲ್ಲಿ ತೇಲುತ್ತಿರುವ ಮೀನುಗಳನ್ನು ತಿನ್ನದಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅದು ವರದಿ ಮಾಡಿದೆ.

ಪೂರ್ವ ಕಮೆಂಗ್ ಜಿಲ್ಲೆಯಲ್ಲಿ ಹುಟ್ಟುವ ನದಿಯು ಕಪ್ಪು ಬಣ್ಣಕ್ಕೆ ತಿರುಗಲು ಒಟ್ಟು ಕರಗಿದ ಪದಾರ್ಥಗಳ ( total dissolved substances-ಟಿಡಿಎಸ್‌) ಹೆಚ್ಚಿನ ಅಂಶವೇ ಕಾರಣ ಎಂದು ಜಿಲ್ಲಾ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: ಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

ಟಿಡಿಎಸ್ ಜಲಚರಗಳಿಗೆ ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಮೀನುಗಾರಿಕೆ ಅಧಿಕಾರಿಗಳು ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ. ಹೆಚ್ಚಿನ ಮಟ್ಟದ ಟಿಡಿಎಸ್‌ನಿಂದಾಗಿ ನೀರಿನ ಅಡಿಯಲ್ಲಿರುವ ಮೀನುಗಳು ಕಡಿಮೆ ಗೋಚರತೆಯನ್ನು ಅನುಭವಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಮೆಂಗ್ ನದಿಯಲ್ಲಿನ ಟಿಡಿಎಸ್ ಪ್ರತಿ ಲೀಟರ್‌ಗೆ 6,800 ಮಿ.ಗ್ರಾಂ ಆಗಿತ್ತು, ಇದು ಪ್ರತಿ ಲೀಟರ್‌ಗೆ ಸಾಮಾನ್ಯ ಶ್ರೇಣಿಯ 300-1,200 ಮಿಗ್ರಾಂಗಿಂತ ಹೆಚ್ಚಾಗಿದೆ ಎಂದು ಜಿಲ್ಲಾ ಮೀನುಗಾರಿಕೆ ಅಭಿವೃದ್ಧಿ ಅಧಿಕಾರಿ (ಡಿಎಫ್‌ಡಿಒ) ಹಾಲಿ ತಾಜೋ ಹೇಳಿದ್ದಾರೆ.

“ನದಿಯ ಪರಿಸ್ಥಿತಿ ಹೀಗೇ ಇದ್ದರೆ, ಇನ್ನು ಕಲವೇ ದಿನಗಳಲ್ಲಿ ನದಿಯ ಜಲಚರಗಳು ಸಂಪೂರ್ಣವಾಗಿ ನಾಶವಾಗುತ್ತವೆ” ಎಂದು ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ: ಅರುಣಾಚಲ ಪ್ರದೇಶದಲ್ಲಿ ಒಂದು ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

 

ಈ ಮಧ್ಯೆ, ಘಟನೆ ನಡೆದ ಸೆಪ್ಪಾ ಗ್ರಾಮದ ನಿವಾಸಿಗಳು ಚೀನಾವನ್ನು ದೂಷಿಸಿದ್ದಾರೆ. ಗಡಿಯುದ್ದಕ್ಕೂ ನೆರೆಯ ದೇಶವು ನಡೆಸುತ್ತಿರುವ ನಿರ್ಮಾಣ ಚಟುವಟಿಕೆಗಳಿಂದ ಟಿಡಿಎಸ್ ಮಟ್ಟವು ಅಪಾಯಕಾರಿಯಾಗಿ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

ಕಮೆಂಗ್ ನದಿಯ ನೀರಿನ ಬಣ್ಣ ಹಠಾತ್ ಬದಲಾವಣೆ ಮತ್ತು ಹೆಚ್ಚಿನ ಪ್ರಮಾಣದ ಮೀನುಗಳ ಸಾವಿನ ಹಿಂದಿನ ಕಾರಣವನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ತಕ್ಷಣವೇ ರಚಿಸಬೇಕೆಂದು ಸೆಪ್ಪಾ ಪೂರ್ವ ಶಾಸಕ ತಪುಕ್ ಟಾಕು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

2017 ರಲ್ಲಿ, ಪಾಸಿಘಾಟ್‌ನಲ್ಲಿ ಸಿಯಾಂಗ್ ನದಿಯು ಇದೇ ರೀತಿಯ ಕಪ್ಪಾಗಿರುವುದು ವರದಿಯಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...