Homeಅಂತರಾಷ್ಟ್ರೀಯಅರುಣಾಚಲ ಪ್ರದೇಶ: ನಮ್ಮ ಭೂ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿದ್ದೇವೆ ಎಂದ ಚೀನಾ!

ಅರುಣಾಚಲ ಪ್ರದೇಶ: ನಮ್ಮ ಭೂ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿದ್ದೇವೆ ಎಂದ ಚೀನಾ!

ಜಂಗ್ನಾನ್ ಪ್ರದೇಶದ (ದಕ್ಷಿಣ ಟಿಬೆಟ್) ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟವಾಗಿದೆ. ಅದನ್ನು ಅರುಣಾಚಲ ಪ್ರದೇಶ ಎಂದು ಕರೆಯುವವರನ್ನು ನಾವು ಎಂದಿಗೂ ಕಂಡಿಲ್ಲ- ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನೈಂಗ್

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ 101 ಮನೆಗಳುಳ್ಳ ಗ್ರಾಮವೊಂದನ್ನು ನಿರ್ಮಿಸಿದ್ದ ಚೀನಾ ಈಗ ಅಧಿಕೃತವಾಗಿ, “ನಮ್ಮ ಪ್ರದೇಶದೊಳಗೆ ಅಭಿವೃದ್ಧಿ ಕಾರ್ಯಗಳು ನಡೆಯುವುದು ಸಾಮಾನ್ಯ” ಎಂದು ಗುರುವಾರ ಹೇಳಿದೆ.

“ಜಂಗ್ನಾನ್ ಪ್ರದೇಶದ (ದಕ್ಷಿಣ ಟಿಬೆಟ್) ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟವಾಗಿದೆ. ಅದನ್ನು ಅರುಣಾಚಲ ಪ್ರದೇಶ ಎಂದು ಕರೆಯುವವರನ್ನು ನಾವು ಎಂದಿಗೂ ನೋಡಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನೈಂಗ್ ಅವರು ಮಾಧ್ಯಮ ಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಹೇಳಿದ್ದಾರೆ.

ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್‌ನ ಭಾಗವೆಂದು ಚೀನಾ ಹೇಳುತ್ತದೆ. ಆದರೆ ಈಶಾನ್ಯ ರಾಜ್ಯವು ದೇಶದ ಅವಿಭಾಜ್ಯ ಅಂಗ ಎಂಬುದು ಭಾರತದ ಸ್ಥಿರ ನಿಲುವಾಗಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ: ಅರುಣಾಚಲ ಪ್ರದೇಶದಲ್ಲಿ ಒಂದು ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

“ಚೀನಾದ ಅಭಿವೃದ್ಧಿ ಮತ್ತು ನಿರ್ಮಾಣ ಚಟುವಟಿಕೆಗಳು ನಮ್ಮ ಭೂಪ್ರದೇಶದೊಳಗೆ ಸಾಮಾನ್ಯವಾಗಿದೆ. ಇದು ನಮ್ಮ ಪ್ರದೇಶವಾಗಿರುವುದರಿಂದ ಇಲ್ಲಿ ಟೀಕೆಗೆ ಅವಕಾಶವಿಲ್ಲ” ಎಂದು ಹುವಾ ಹೇಳಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಚೀನಾ, ಅರುಣಾಚಲ ಪ್ರದೇಶದಲ್ಲಿ ಸುಮಾರು 101 ಮನೆಗಳಿರುವ ಹೊಸ ಗ್ರಾಮವನ್ನು ನಿರ್ಮಿಸಿದ್ದು, ಇವುಗಳನ್ನು ತೋರಿಸುವ ಉಪಗ್ರಹ ಚಿತ್ರಗಳು ದೊರಕಿವೆ.

“ತ್ಸಾರ್ ಚು ನದಿ ದಂಡೆ ಪ್ರದೇಶದಲ್ಲಿರುವ ಈ ಗ್ರಾಮ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿದ್ದು. ಇದು ಭಾರತ-ಚೀನಾ ನಡುವಿನ ವಿವಾದಿತ ಪ್ರದೇಶಗಳಲ್ಲೊಂದಾಗಿದೆ. ಆಗಸ್ಟ್ 26, 2019 ರ ಉಪಗ್ರಹ ಚಿತ್ರದಲ್ಲಿ ಅಲ್ಲಿ ಯಾವುದೇ ಗ್ರಾಮದ ಕುರುಹು ಇರಲಿಲ್ಲ. ಹಾಗಾಗಿ ಈ ಗ್ರಾಮ ಕಳೆದ ವರ್ಷ ನಿರ್ಮಾಣವಾಗಿದೆ” ಎಂದು ಅಂದಾಜಿಸಲಾಗಿದೆ.

ನವೆಂಬರ್ 1, 2020 ದಿನಾಂಕ ನಮೂದಿಸಲ್ಪಟ್ಟಿರುವ ಈ ಉಪಗ್ರಹ ಚಿತ್ರಗಳನ್ನು ಹಲವಾರು ತಜ್ಞರು ವಿಶ್ಲೇಷಿಸಿದ್ದಾರೆ. ಭಾರತ-ಚೀನಾ ನಡುವಿನ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಬಳಿಯ ಭಾರತೀಯ ಭೂಭಾಗದಲ್ಲಿ ನಿರ್ಮಾಣಗೊಂಡಿರುವ ಈ ಗ್ರಾಮವು ವಾಸ್ತವಿಕ ಗಡಿ ರೇಖೆಯಿಂದ ಅಂದಾಜು 4.5 ಕಿಮೀ ಒಳಗಿದೆ.

ಇದನ್ನೂ ಓದಿ: ಚೀನಾ ದ್ವೇಷ: ಡ್ಯ್ರಾಗನ್ ಹಣ್ಣಿಗೆ ಬಿಜೆಪಿ ಕಚೇರಿಯ ಹೆಸರಿಟ್ಟ ಗುಜರಾತ್ ಸರ್ಕಾರ!

ಈ ಉಪಗ್ರಹ ಚಿತ್ರಗಳನ್ನು ಪ್ಲಾನೆಟ್ ಲ್ಯಾಬ್ಸ್ ಇಂಕ್ ಮೂಲಕ ಪಡೆದಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ. ಭಾರತ ಸರ್ಕಾರ ತನ್ನ ಅಧಿಕೃತ ನಕ್ಷೆ ಎಂದು ಬಳಸುವ ಸರ್ವೇಯರ್ ಜನರಲ್ ಆಫ್ ಇಂಡಿಯಾದ ಆನ್ಲೈನ್ ನಕ್ಷೆಯಲ್ಲೂ ಚೀನಾದ ಈ ಗ್ರಾಮ ಭಾರತದ ಭೂಭಾಗದಲ್ಲಿರುವುದು ಕಾಣಿಸುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯ, “ಗಡಿ ಪ್ರದೇಶಗಳಲ್ಲಿ ಚೀನಾ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಕುರಿತಂತೆ ಇತ್ತೀಚಿಗಿನ ವರದಿಗಳನ್ನು ನೋಡಿದ್ದೇವೆ. ಹಿಂದೆ ಕೂಡ ಚೀನಾ ಇಂತಹ ನಿರ್ಮಾಣ ಕೆಲಸ ನಡೆಸಿದೆ. ಗಡಿ ಪ್ರದೇಶದಲ್ಲಿನ ಮೂಲಭೂತ ಸೌಲಭ್ಯ ಉತ್ತಮ ಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಗಡಿ ಪ್ರದೇಶದ ಜನರಿಗೆ ಅನುಕೂಲವಾಗಲು ಅಲ್ಲಿ ರಸ್ತೆ, ಸೇತುವೆಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದೆ.


ಇದನ್ನೂ ಓದಿ: ಚೀನಾವನ್ನು ಎದುರಿಸಲು ಭಾರತಕ್ಕೆ ಅಮೆರಿಕಾ ಸಹಕಾರ ಅಗತ್ಯ: ಕೆನ್ನೆತ್ ಜಸ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...