Homeಅಂತರಾಷ್ಟ್ರೀಯಅರುಣಾಚಲ ಪ್ರದೇಶ: ನಮ್ಮ ಭೂ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿದ್ದೇವೆ ಎಂದ ಚೀನಾ!

ಅರುಣಾಚಲ ಪ್ರದೇಶ: ನಮ್ಮ ಭೂ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿದ್ದೇವೆ ಎಂದ ಚೀನಾ!

ಜಂಗ್ನಾನ್ ಪ್ರದೇಶದ (ದಕ್ಷಿಣ ಟಿಬೆಟ್) ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟವಾಗಿದೆ. ಅದನ್ನು ಅರುಣಾಚಲ ಪ್ರದೇಶ ಎಂದು ಕರೆಯುವವರನ್ನು ನಾವು ಎಂದಿಗೂ ಕಂಡಿಲ್ಲ- ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನೈಂಗ್

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ 101 ಮನೆಗಳುಳ್ಳ ಗ್ರಾಮವೊಂದನ್ನು ನಿರ್ಮಿಸಿದ್ದ ಚೀನಾ ಈಗ ಅಧಿಕೃತವಾಗಿ, “ನಮ್ಮ ಪ್ರದೇಶದೊಳಗೆ ಅಭಿವೃದ್ಧಿ ಕಾರ್ಯಗಳು ನಡೆಯುವುದು ಸಾಮಾನ್ಯ” ಎಂದು ಗುರುವಾರ ಹೇಳಿದೆ.

“ಜಂಗ್ನಾನ್ ಪ್ರದೇಶದ (ದಕ್ಷಿಣ ಟಿಬೆಟ್) ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟವಾಗಿದೆ. ಅದನ್ನು ಅರುಣಾಚಲ ಪ್ರದೇಶ ಎಂದು ಕರೆಯುವವರನ್ನು ನಾವು ಎಂದಿಗೂ ನೋಡಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನೈಂಗ್ ಅವರು ಮಾಧ್ಯಮ ಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಹೇಳಿದ್ದಾರೆ.

ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್‌ನ ಭಾಗವೆಂದು ಚೀನಾ ಹೇಳುತ್ತದೆ. ಆದರೆ ಈಶಾನ್ಯ ರಾಜ್ಯವು ದೇಶದ ಅವಿಭಾಜ್ಯ ಅಂಗ ಎಂಬುದು ಭಾರತದ ಸ್ಥಿರ ನಿಲುವಾಗಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ: ಅರುಣಾಚಲ ಪ್ರದೇಶದಲ್ಲಿ ಒಂದು ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

“ಚೀನಾದ ಅಭಿವೃದ್ಧಿ ಮತ್ತು ನಿರ್ಮಾಣ ಚಟುವಟಿಕೆಗಳು ನಮ್ಮ ಭೂಪ್ರದೇಶದೊಳಗೆ ಸಾಮಾನ್ಯವಾಗಿದೆ. ಇದು ನಮ್ಮ ಪ್ರದೇಶವಾಗಿರುವುದರಿಂದ ಇಲ್ಲಿ ಟೀಕೆಗೆ ಅವಕಾಶವಿಲ್ಲ” ಎಂದು ಹುವಾ ಹೇಳಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಚೀನಾ, ಅರುಣಾಚಲ ಪ್ರದೇಶದಲ್ಲಿ ಸುಮಾರು 101 ಮನೆಗಳಿರುವ ಹೊಸ ಗ್ರಾಮವನ್ನು ನಿರ್ಮಿಸಿದ್ದು, ಇವುಗಳನ್ನು ತೋರಿಸುವ ಉಪಗ್ರಹ ಚಿತ್ರಗಳು ದೊರಕಿವೆ.

“ತ್ಸಾರ್ ಚು ನದಿ ದಂಡೆ ಪ್ರದೇಶದಲ್ಲಿರುವ ಈ ಗ್ರಾಮ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿದ್ದು. ಇದು ಭಾರತ-ಚೀನಾ ನಡುವಿನ ವಿವಾದಿತ ಪ್ರದೇಶಗಳಲ್ಲೊಂದಾಗಿದೆ. ಆಗಸ್ಟ್ 26, 2019 ರ ಉಪಗ್ರಹ ಚಿತ್ರದಲ್ಲಿ ಅಲ್ಲಿ ಯಾವುದೇ ಗ್ರಾಮದ ಕುರುಹು ಇರಲಿಲ್ಲ. ಹಾಗಾಗಿ ಈ ಗ್ರಾಮ ಕಳೆದ ವರ್ಷ ನಿರ್ಮಾಣವಾಗಿದೆ” ಎಂದು ಅಂದಾಜಿಸಲಾಗಿದೆ.

ನವೆಂಬರ್ 1, 2020 ದಿನಾಂಕ ನಮೂದಿಸಲ್ಪಟ್ಟಿರುವ ಈ ಉಪಗ್ರಹ ಚಿತ್ರಗಳನ್ನು ಹಲವಾರು ತಜ್ಞರು ವಿಶ್ಲೇಷಿಸಿದ್ದಾರೆ. ಭಾರತ-ಚೀನಾ ನಡುವಿನ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಬಳಿಯ ಭಾರತೀಯ ಭೂಭಾಗದಲ್ಲಿ ನಿರ್ಮಾಣಗೊಂಡಿರುವ ಈ ಗ್ರಾಮವು ವಾಸ್ತವಿಕ ಗಡಿ ರೇಖೆಯಿಂದ ಅಂದಾಜು 4.5 ಕಿಮೀ ಒಳಗಿದೆ.

ಇದನ್ನೂ ಓದಿ: ಚೀನಾ ದ್ವೇಷ: ಡ್ಯ್ರಾಗನ್ ಹಣ್ಣಿಗೆ ಬಿಜೆಪಿ ಕಚೇರಿಯ ಹೆಸರಿಟ್ಟ ಗುಜರಾತ್ ಸರ್ಕಾರ!

ಈ ಉಪಗ್ರಹ ಚಿತ್ರಗಳನ್ನು ಪ್ಲಾನೆಟ್ ಲ್ಯಾಬ್ಸ್ ಇಂಕ್ ಮೂಲಕ ಪಡೆದಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ. ಭಾರತ ಸರ್ಕಾರ ತನ್ನ ಅಧಿಕೃತ ನಕ್ಷೆ ಎಂದು ಬಳಸುವ ಸರ್ವೇಯರ್ ಜನರಲ್ ಆಫ್ ಇಂಡಿಯಾದ ಆನ್ಲೈನ್ ನಕ್ಷೆಯಲ್ಲೂ ಚೀನಾದ ಈ ಗ್ರಾಮ ಭಾರತದ ಭೂಭಾಗದಲ್ಲಿರುವುದು ಕಾಣಿಸುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯ, “ಗಡಿ ಪ್ರದೇಶಗಳಲ್ಲಿ ಚೀನಾ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಕುರಿತಂತೆ ಇತ್ತೀಚಿಗಿನ ವರದಿಗಳನ್ನು ನೋಡಿದ್ದೇವೆ. ಹಿಂದೆ ಕೂಡ ಚೀನಾ ಇಂತಹ ನಿರ್ಮಾಣ ಕೆಲಸ ನಡೆಸಿದೆ. ಗಡಿ ಪ್ರದೇಶದಲ್ಲಿನ ಮೂಲಭೂತ ಸೌಲಭ್ಯ ಉತ್ತಮ ಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಗಡಿ ಪ್ರದೇಶದ ಜನರಿಗೆ ಅನುಕೂಲವಾಗಲು ಅಲ್ಲಿ ರಸ್ತೆ, ಸೇತುವೆಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದೆ.


ಇದನ್ನೂ ಓದಿ: ಚೀನಾವನ್ನು ಎದುರಿಸಲು ಭಾರತಕ್ಕೆ ಅಮೆರಿಕಾ ಸಹಕಾರ ಅಗತ್ಯ: ಕೆನ್ನೆತ್ ಜಸ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...