Homeಅಂತರಾಷ್ಟ್ರೀಯಅರುಣಾಚಲ ಪ್ರದೇಶ: ನಮ್ಮ ಭೂ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿದ್ದೇವೆ ಎಂದ ಚೀನಾ!

ಅರುಣಾಚಲ ಪ್ರದೇಶ: ನಮ್ಮ ಭೂ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿದ್ದೇವೆ ಎಂದ ಚೀನಾ!

ಜಂಗ್ನಾನ್ ಪ್ರದೇಶದ (ದಕ್ಷಿಣ ಟಿಬೆಟ್) ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟವಾಗಿದೆ. ಅದನ್ನು ಅರುಣಾಚಲ ಪ್ರದೇಶ ಎಂದು ಕರೆಯುವವರನ್ನು ನಾವು ಎಂದಿಗೂ ಕಂಡಿಲ್ಲ- ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನೈಂಗ್

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ 101 ಮನೆಗಳುಳ್ಳ ಗ್ರಾಮವೊಂದನ್ನು ನಿರ್ಮಿಸಿದ್ದ ಚೀನಾ ಈಗ ಅಧಿಕೃತವಾಗಿ, “ನಮ್ಮ ಪ್ರದೇಶದೊಳಗೆ ಅಭಿವೃದ್ಧಿ ಕಾರ್ಯಗಳು ನಡೆಯುವುದು ಸಾಮಾನ್ಯ” ಎಂದು ಗುರುವಾರ ಹೇಳಿದೆ.

“ಜಂಗ್ನಾನ್ ಪ್ರದೇಶದ (ದಕ್ಷಿಣ ಟಿಬೆಟ್) ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟವಾಗಿದೆ. ಅದನ್ನು ಅರುಣಾಚಲ ಪ್ರದೇಶ ಎಂದು ಕರೆಯುವವರನ್ನು ನಾವು ಎಂದಿಗೂ ನೋಡಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನೈಂಗ್ ಅವರು ಮಾಧ್ಯಮ ಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಹೇಳಿದ್ದಾರೆ.

ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್‌ನ ಭಾಗವೆಂದು ಚೀನಾ ಹೇಳುತ್ತದೆ. ಆದರೆ ಈಶಾನ್ಯ ರಾಜ್ಯವು ದೇಶದ ಅವಿಭಾಜ್ಯ ಅಂಗ ಎಂಬುದು ಭಾರತದ ಸ್ಥಿರ ನಿಲುವಾಗಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ: ಅರುಣಾಚಲ ಪ್ರದೇಶದಲ್ಲಿ ಒಂದು ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

“ಚೀನಾದ ಅಭಿವೃದ್ಧಿ ಮತ್ತು ನಿರ್ಮಾಣ ಚಟುವಟಿಕೆಗಳು ನಮ್ಮ ಭೂಪ್ರದೇಶದೊಳಗೆ ಸಾಮಾನ್ಯವಾಗಿದೆ. ಇದು ನಮ್ಮ ಪ್ರದೇಶವಾಗಿರುವುದರಿಂದ ಇಲ್ಲಿ ಟೀಕೆಗೆ ಅವಕಾಶವಿಲ್ಲ” ಎಂದು ಹುವಾ ಹೇಳಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಚೀನಾ, ಅರುಣಾಚಲ ಪ್ರದೇಶದಲ್ಲಿ ಸುಮಾರು 101 ಮನೆಗಳಿರುವ ಹೊಸ ಗ್ರಾಮವನ್ನು ನಿರ್ಮಿಸಿದ್ದು, ಇವುಗಳನ್ನು ತೋರಿಸುವ ಉಪಗ್ರಹ ಚಿತ್ರಗಳು ದೊರಕಿವೆ.

“ತ್ಸಾರ್ ಚು ನದಿ ದಂಡೆ ಪ್ರದೇಶದಲ್ಲಿರುವ ಈ ಗ್ರಾಮ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿದ್ದು. ಇದು ಭಾರತ-ಚೀನಾ ನಡುವಿನ ವಿವಾದಿತ ಪ್ರದೇಶಗಳಲ್ಲೊಂದಾಗಿದೆ. ಆಗಸ್ಟ್ 26, 2019 ರ ಉಪಗ್ರಹ ಚಿತ್ರದಲ್ಲಿ ಅಲ್ಲಿ ಯಾವುದೇ ಗ್ರಾಮದ ಕುರುಹು ಇರಲಿಲ್ಲ. ಹಾಗಾಗಿ ಈ ಗ್ರಾಮ ಕಳೆದ ವರ್ಷ ನಿರ್ಮಾಣವಾಗಿದೆ” ಎಂದು ಅಂದಾಜಿಸಲಾಗಿದೆ.

ನವೆಂಬರ್ 1, 2020 ದಿನಾಂಕ ನಮೂದಿಸಲ್ಪಟ್ಟಿರುವ ಈ ಉಪಗ್ರಹ ಚಿತ್ರಗಳನ್ನು ಹಲವಾರು ತಜ್ಞರು ವಿಶ್ಲೇಷಿಸಿದ್ದಾರೆ. ಭಾರತ-ಚೀನಾ ನಡುವಿನ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಬಳಿಯ ಭಾರತೀಯ ಭೂಭಾಗದಲ್ಲಿ ನಿರ್ಮಾಣಗೊಂಡಿರುವ ಈ ಗ್ರಾಮವು ವಾಸ್ತವಿಕ ಗಡಿ ರೇಖೆಯಿಂದ ಅಂದಾಜು 4.5 ಕಿಮೀ ಒಳಗಿದೆ.

ಇದನ್ನೂ ಓದಿ: ಚೀನಾ ದ್ವೇಷ: ಡ್ಯ್ರಾಗನ್ ಹಣ್ಣಿಗೆ ಬಿಜೆಪಿ ಕಚೇರಿಯ ಹೆಸರಿಟ್ಟ ಗುಜರಾತ್ ಸರ್ಕಾರ!

ಈ ಉಪಗ್ರಹ ಚಿತ್ರಗಳನ್ನು ಪ್ಲಾನೆಟ್ ಲ್ಯಾಬ್ಸ್ ಇಂಕ್ ಮೂಲಕ ಪಡೆದಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ. ಭಾರತ ಸರ್ಕಾರ ತನ್ನ ಅಧಿಕೃತ ನಕ್ಷೆ ಎಂದು ಬಳಸುವ ಸರ್ವೇಯರ್ ಜನರಲ್ ಆಫ್ ಇಂಡಿಯಾದ ಆನ್ಲೈನ್ ನಕ್ಷೆಯಲ್ಲೂ ಚೀನಾದ ಈ ಗ್ರಾಮ ಭಾರತದ ಭೂಭಾಗದಲ್ಲಿರುವುದು ಕಾಣಿಸುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯ, “ಗಡಿ ಪ್ರದೇಶಗಳಲ್ಲಿ ಚೀನಾ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಕುರಿತಂತೆ ಇತ್ತೀಚಿಗಿನ ವರದಿಗಳನ್ನು ನೋಡಿದ್ದೇವೆ. ಹಿಂದೆ ಕೂಡ ಚೀನಾ ಇಂತಹ ನಿರ್ಮಾಣ ಕೆಲಸ ನಡೆಸಿದೆ. ಗಡಿ ಪ್ರದೇಶದಲ್ಲಿನ ಮೂಲಭೂತ ಸೌಲಭ್ಯ ಉತ್ತಮ ಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಗಡಿ ಪ್ರದೇಶದ ಜನರಿಗೆ ಅನುಕೂಲವಾಗಲು ಅಲ್ಲಿ ರಸ್ತೆ, ಸೇತುವೆಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದೆ.


ಇದನ್ನೂ ಓದಿ: ಚೀನಾವನ್ನು ಎದುರಿಸಲು ಭಾರತಕ್ಕೆ ಅಮೆರಿಕಾ ಸಹಕಾರ ಅಗತ್ಯ: ಕೆನ್ನೆತ್ ಜಸ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...