Homeಮುಖಪುಟಅರುಣಾಚಲ ಪ್ರದೇಶ: ಚುನಾವಣಾ ಪೂರ್ವ 'ಆಪರೇಷನ್ ಕಮಲ'; 10 ಜನ ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ!

ಅರುಣಾಚಲ ಪ್ರದೇಶ: ಚುನಾವಣಾ ಪೂರ್ವ ‘ಆಪರೇಷನ್ ಕಮಲ’; 10 ಜನ ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ!

- Advertisement -
- Advertisement -

ಬಿಜೆಪಿ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಕೆಯಾಗದ ಹಾಗೂ ಕೆಲ ಕಾಂಗ್ರೆಸ್‌ ಸದಸ್ಯರು ತಮ್ಮ ಉಮೇದುವಾರಿಕೆ ವಾಪಸ್ ಪಡೆದ ನಂತರ, ಬಿಜೆಪಿಯ 10 ಜನರು ಶಾಸಕರಾಗಿ ಅವಿರೋಧ ಆಯ್ಕೆಯಾಗಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. 60 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 10 ಜನ ಈಗಾಗಲೇ ಎದುರಾಳಿಗಳಿಲ್ಲದೆ ಆಯ್ಕೆಯಾಗಿದ್ದು, ಬಿಜೆಪಿಯು ಉಳಿದ 50 ಸ್ಥಾನಗಳನ್ನು ಪೂರ್ಣ ಸ್ವೀಪ್ ಮಾಡುವ ಗುರಿ ಹೊಂದಿದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ನಡೆಸಿದ ಚುನಾವಣಾ ಪೂರ್ವ ‘ಆಪರೇಷನ್ ಕಮಲ’ದಿಂದ ಸಿಎಂ, ಡಿಸಿಎಂ ಸೇರಿದಂತೆ ಉಳಿದ ಎಂಟು ಜನ ಅವಿರೋಧ ಆಯ್ಕೆಯಾಗಿದ್ದಾರೆ.

ಈಗಾಗಲೇ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 10 ವಿಧಾನಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ. ಎಲ್ಲ 60 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳಿಕೊಂಡಿದೆ. ಇಟಾನಗರದಲ್ಲಿ ಬಿಜೆಪಿ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ ಚೌನಾ ಮೇನ್ ಚೌಕಮ್ ಕ್ಷೇತ್ರದಿಂದ ಅವಿರೋಧವಾಗಿ ಗೆದ್ದರೆ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು ಅರುಣಾಚಲ ಪ್ರದೇಶ ವಿಧಾನಸಭೆಗೆ ಅವಿರೋಧವಾಗಿ ಗೆದ್ದರು. ದಸಾಂಗ್ಲು ಪುಲ್ ಅವರು ಹಯುಲಿಯಾಂಗ್ ಅಸೆಂಬ್ಲಿ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾದರು.

ದಸಾಂಗ್ಲು ಪುಲ್ ಅವರ ಏಕೈಕ ಎದುರಾಳಿ ಕಾಂಗ್ರೆಸ್ ಪಕ್ಷದ ಬಫುಟ್ಸೊ ಕ್ರೋಂಗ್ ಹಿಂಪಡೆದ ನಂತರ ಅವರ ನಾಮನಿರ್ದೇಶನವು ಅವಿರೋಧವಾಗಿ ನಡೆಯಿತು. ಅವರು ಮಾಜಿ ಮುಖ್ಯಮಂತ್ರಿ ಕಲಿಖೋ ಪುಲ್ ಅವರ ಪತ್ನಿ. ವಿಧಾನಸಭೆ ಚುನಾವಣೆಯಲ್ಲಿ ಅವಿರೋಧವಾಗಿ ಗೆಲುವು ಸಾಧಿಸುವ ಸೂಚನೆ ನೀಡಿದ್ದಾರೆ. ರಾಜ್ಯದ 60 ಶಾಸಕರ ಪೈಕಿ 10 ಶಾಸಕರ ಅವಿರೋಧ ಗೆಲುವಿನ ಆರಂಭಕ್ಕೆ ಸಿಎಂ ಪೆಮಾ ಖಂಡು ಮತ್ತು ಡಿಸಿಎಂ ಚೌನಾ ಮೇನ್ ಅವರನ್ನು ಅಭಿನಂದಿಸಿದ ಅಶೋಕ್ ಸಿಂಘಾಲ್ ಸಚಿವ ಮತ್ತು ಸಂಸದೀಯ ಚುನಾವಣಾ ಉಸ್ತುವಾರಿ, ‘ಇದು ಮೋದಿ ಕಿ ಗ್ಯಾರಂಟಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಸಿಎಂ ಪೇಮಾ ಖಂಡು ಅವರ ನಾಯಕತ್ವದಲ್ಲಿ ಅರುಣಾಚಲ ಪ್ರದೇಶದ ಜನರ ಅಚಲ ಬೆಂಬಲ ಮತ್ತು ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ಬಿಜೆಪಿ ಎಲ್ಲಾ 60 ಸ್ಥಾನಗಳನ್ನು ಗೆಲ್ಲುತ್ತದೆ’ ಎಂದು ಹೇಳಿದರು.

‘ಅರುಣಾಚಲ ಲೋಕಸಭೆಯಲ್ಲಿ ಇಬ್ಬರೂ ಅಭ್ಯರ್ಥಿಗಳು ದಾಖಲೆಯ ಮತಗಳ ಅಂತರದಿಂದ ಗೆಲ್ಲುತ್ತಾರೆ. ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವೀಪ್ ಮಾಡುತ್ತಿದೆ! ಇಟಾನಗರಕ್ಕೆ ನನ್ನ ಭೇಟಿಯ ಸಂದರ್ಭದಲ್ಲಿ, ತಮ್ಮ ಅಸೆಂಬ್ಲಿ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿರುವ ಮುಖ್ಯಮಂತ್ರಿ ಪೆಮಾ ಖಂಡು, ಉಪಮುಖ್ಯಮಂತ್ರಿ ಚೌನಾ ಮತ್ತು ಅರುಣಾಚಲ ಬಿಜೆಪಿ ಶಾಸಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದೇನೆ. ನಮ್ಮ ಸಮರ್ಪಿತ ಪಕ್ಷದ ಕಾರ್ಯಕರ್ತರಲ್ಲಿನ ಜೋಶ್ ಮತ್ತು ಸಂಭ್ರಮವನ್ನು ನೋಡಿ ಅತೀವ ಸಂತೋಷವಾಯಿತು. ಏಪ್ರಿಲ್ 19ರಂದು ಬನ್ನಿ, ಚುನಾವಣೆಯಲ್ಲಿ ನಾವು ಪ್ರಚಂಡ ಗೆಲುವು ಸಾಧಿಸುತ್ತೇವೆ!” ಕೇಂದ್ರ ಸಚಿವ ಮತ್ತು ಅರುಣಾಚಲದ ಲೋಕಸಭಾ ಸಂಸದ ಕಿರಣ್ ರಿಜಿಜು ಅವರು ತಮ್ಮ ಎಕ್ಸ್‌ನಲ್ಲಿ ಹೇಳಿದ್ದಾರೆ.

ಚುನಾವಣೆಗೆ ಪೂರ್ವ ‘ಆಪರೇಷನ್ ಕಮಲ’

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಗೆ ಭಾರೀ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದೆ. ಅರುಣಾಚಲ ಪ್ರದೆಶದಲ್ಲಿ ಅಧೀಕಾರ ಉಳಿಸಿಕೊಳ್ಳಬೇಕು ಎಂದು ಹಠಕ್ಕೆ ಬಿದ್ದಿರುವ ಬಿಜೆಪಿ, ಚುನಾವಣೆಗೆ ಮುಂಚೆ ‘ಆಪರೇಷನ್’ ಆರಂಭಿಸಿದೆ ಎನ್ನಲಾಗುತ್ತಿದೆ.

ಅರುಣಾಚಲ ಪ್ರದೇಶ ವಿಧಾನಸಭೆಯ ಎಲ್ಲಾ 60 ಸದಸ್ಯರಿಗೆ ಬಿಜೆಪಿ ಅಭ್ಯರ್ಥಿಗಳನ್ನು ಹಾಕಿದೆ. ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣೆಯು ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ನಡೆಯಲಿದೆ. ಕಾಂಗ್ರೆಸ್ 34 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. 2019 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 41 ಸ್ಥಾನಗಳನ್ನು ಗೆದ್ದುಕೊಂಡಿತು. ನಂತರ, ಜನತಾ ದಳ-ಯುನೈಟೆಡ್ ಸೇರಿದಂತೆ ಇತರ ಪಕ್ಷಗಳ ಏಳು ಶಾಸಕರು, ಬಿಜೆಪಿಗೆ ಸೇರ್ಪಡೆಗೊಂಡರು. 2019ರಲ್ಲಿ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ತನ್ನ ಮೊದಲ ಚುನಾಯಿತ ಸರ್ಕಾರವನ್ನು ರಚಿಸಿತು. ಮುಖ್ಯಮಂತ್ರಿ ಖಂಡು ಅವರು 2016 ರಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದ್ದರು. ಅವರು ಹಲವಾರು ಶಾಸಕರೊಂದಿಗೆ ಕಾಂಗ್ರೆಸ್ ತೊರೆದು ಅರುಣಾಚಲದ ಪೀಪಲ್ಸ್ ಪಾರ್ಟಿಗೆ ಸೇರಿದರು. ಇತ್ತೀಚೆಗೆ ಇಬ್ಬರು ಎನ್‌ಸಿಪಿ ಮತ್ತು ಮೂವರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ; ’10 ವರ್ಷದ ದುರಾಡಳಿತದ ನಂತರ ಇದ್ದಕ್ಕಿದ್ದಂತೆ ಎಚ್ಚರಗೊಂಡಿದ್ದೀರಿ..; ಮೋದಿ ವಿರುದ್ಧ ಕಿಡಿಕಾರಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...