Homeಮುಖಪುಟಅರುಣಾಚಲ ಪ್ರದೇಶ: ಚುನಾವಣಾ ಪೂರ್ವ 'ಆಪರೇಷನ್ ಕಮಲ'; 10 ಜನ ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ!

ಅರುಣಾಚಲ ಪ್ರದೇಶ: ಚುನಾವಣಾ ಪೂರ್ವ ‘ಆಪರೇಷನ್ ಕಮಲ’; 10 ಜನ ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ!

- Advertisement -
- Advertisement -

ಬಿಜೆಪಿ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಕೆಯಾಗದ ಹಾಗೂ ಕೆಲ ಕಾಂಗ್ರೆಸ್‌ ಸದಸ್ಯರು ತಮ್ಮ ಉಮೇದುವಾರಿಕೆ ವಾಪಸ್ ಪಡೆದ ನಂತರ, ಬಿಜೆಪಿಯ 10 ಜನರು ಶಾಸಕರಾಗಿ ಅವಿರೋಧ ಆಯ್ಕೆಯಾಗಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. 60 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 10 ಜನ ಈಗಾಗಲೇ ಎದುರಾಳಿಗಳಿಲ್ಲದೆ ಆಯ್ಕೆಯಾಗಿದ್ದು, ಬಿಜೆಪಿಯು ಉಳಿದ 50 ಸ್ಥಾನಗಳನ್ನು ಪೂರ್ಣ ಸ್ವೀಪ್ ಮಾಡುವ ಗುರಿ ಹೊಂದಿದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ನಡೆಸಿದ ಚುನಾವಣಾ ಪೂರ್ವ ‘ಆಪರೇಷನ್ ಕಮಲ’ದಿಂದ ಸಿಎಂ, ಡಿಸಿಎಂ ಸೇರಿದಂತೆ ಉಳಿದ ಎಂಟು ಜನ ಅವಿರೋಧ ಆಯ್ಕೆಯಾಗಿದ್ದಾರೆ.

ಈಗಾಗಲೇ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 10 ವಿಧಾನಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ. ಎಲ್ಲ 60 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳಿಕೊಂಡಿದೆ. ಇಟಾನಗರದಲ್ಲಿ ಬಿಜೆಪಿ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ ಚೌನಾ ಮೇನ್ ಚೌಕಮ್ ಕ್ಷೇತ್ರದಿಂದ ಅವಿರೋಧವಾಗಿ ಗೆದ್ದರೆ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು ಅರುಣಾಚಲ ಪ್ರದೇಶ ವಿಧಾನಸಭೆಗೆ ಅವಿರೋಧವಾಗಿ ಗೆದ್ದರು. ದಸಾಂಗ್ಲು ಪುಲ್ ಅವರು ಹಯುಲಿಯಾಂಗ್ ಅಸೆಂಬ್ಲಿ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾದರು.

ದಸಾಂಗ್ಲು ಪುಲ್ ಅವರ ಏಕೈಕ ಎದುರಾಳಿ ಕಾಂಗ್ರೆಸ್ ಪಕ್ಷದ ಬಫುಟ್ಸೊ ಕ್ರೋಂಗ್ ಹಿಂಪಡೆದ ನಂತರ ಅವರ ನಾಮನಿರ್ದೇಶನವು ಅವಿರೋಧವಾಗಿ ನಡೆಯಿತು. ಅವರು ಮಾಜಿ ಮುಖ್ಯಮಂತ್ರಿ ಕಲಿಖೋ ಪುಲ್ ಅವರ ಪತ್ನಿ. ವಿಧಾನಸಭೆ ಚುನಾವಣೆಯಲ್ಲಿ ಅವಿರೋಧವಾಗಿ ಗೆಲುವು ಸಾಧಿಸುವ ಸೂಚನೆ ನೀಡಿದ್ದಾರೆ. ರಾಜ್ಯದ 60 ಶಾಸಕರ ಪೈಕಿ 10 ಶಾಸಕರ ಅವಿರೋಧ ಗೆಲುವಿನ ಆರಂಭಕ್ಕೆ ಸಿಎಂ ಪೆಮಾ ಖಂಡು ಮತ್ತು ಡಿಸಿಎಂ ಚೌನಾ ಮೇನ್ ಅವರನ್ನು ಅಭಿನಂದಿಸಿದ ಅಶೋಕ್ ಸಿಂಘಾಲ್ ಸಚಿವ ಮತ್ತು ಸಂಸದೀಯ ಚುನಾವಣಾ ಉಸ್ತುವಾರಿ, ‘ಇದು ಮೋದಿ ಕಿ ಗ್ಯಾರಂಟಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಸಿಎಂ ಪೇಮಾ ಖಂಡು ಅವರ ನಾಯಕತ್ವದಲ್ಲಿ ಅರುಣಾಚಲ ಪ್ರದೇಶದ ಜನರ ಅಚಲ ಬೆಂಬಲ ಮತ್ತು ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ಬಿಜೆಪಿ ಎಲ್ಲಾ 60 ಸ್ಥಾನಗಳನ್ನು ಗೆಲ್ಲುತ್ತದೆ’ ಎಂದು ಹೇಳಿದರು.

‘ಅರುಣಾಚಲ ಲೋಕಸಭೆಯಲ್ಲಿ ಇಬ್ಬರೂ ಅಭ್ಯರ್ಥಿಗಳು ದಾಖಲೆಯ ಮತಗಳ ಅಂತರದಿಂದ ಗೆಲ್ಲುತ್ತಾರೆ. ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವೀಪ್ ಮಾಡುತ್ತಿದೆ! ಇಟಾನಗರಕ್ಕೆ ನನ್ನ ಭೇಟಿಯ ಸಂದರ್ಭದಲ್ಲಿ, ತಮ್ಮ ಅಸೆಂಬ್ಲಿ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿರುವ ಮುಖ್ಯಮಂತ್ರಿ ಪೆಮಾ ಖಂಡು, ಉಪಮುಖ್ಯಮಂತ್ರಿ ಚೌನಾ ಮತ್ತು ಅರುಣಾಚಲ ಬಿಜೆಪಿ ಶಾಸಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದೇನೆ. ನಮ್ಮ ಸಮರ್ಪಿತ ಪಕ್ಷದ ಕಾರ್ಯಕರ್ತರಲ್ಲಿನ ಜೋಶ್ ಮತ್ತು ಸಂಭ್ರಮವನ್ನು ನೋಡಿ ಅತೀವ ಸಂತೋಷವಾಯಿತು. ಏಪ್ರಿಲ್ 19ರಂದು ಬನ್ನಿ, ಚುನಾವಣೆಯಲ್ಲಿ ನಾವು ಪ್ರಚಂಡ ಗೆಲುವು ಸಾಧಿಸುತ್ತೇವೆ!” ಕೇಂದ್ರ ಸಚಿವ ಮತ್ತು ಅರುಣಾಚಲದ ಲೋಕಸಭಾ ಸಂಸದ ಕಿರಣ್ ರಿಜಿಜು ಅವರು ತಮ್ಮ ಎಕ್ಸ್‌ನಲ್ಲಿ ಹೇಳಿದ್ದಾರೆ.

ಚುನಾವಣೆಗೆ ಪೂರ್ವ ‘ಆಪರೇಷನ್ ಕಮಲ’

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಗೆ ಭಾರೀ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದೆ. ಅರುಣಾಚಲ ಪ್ರದೆಶದಲ್ಲಿ ಅಧೀಕಾರ ಉಳಿಸಿಕೊಳ್ಳಬೇಕು ಎಂದು ಹಠಕ್ಕೆ ಬಿದ್ದಿರುವ ಬಿಜೆಪಿ, ಚುನಾವಣೆಗೆ ಮುಂಚೆ ‘ಆಪರೇಷನ್’ ಆರಂಭಿಸಿದೆ ಎನ್ನಲಾಗುತ್ತಿದೆ.

ಅರುಣಾಚಲ ಪ್ರದೇಶ ವಿಧಾನಸಭೆಯ ಎಲ್ಲಾ 60 ಸದಸ್ಯರಿಗೆ ಬಿಜೆಪಿ ಅಭ್ಯರ್ಥಿಗಳನ್ನು ಹಾಕಿದೆ. ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣೆಯು ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ನಡೆಯಲಿದೆ. ಕಾಂಗ್ರೆಸ್ 34 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. 2019 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 41 ಸ್ಥಾನಗಳನ್ನು ಗೆದ್ದುಕೊಂಡಿತು. ನಂತರ, ಜನತಾ ದಳ-ಯುನೈಟೆಡ್ ಸೇರಿದಂತೆ ಇತರ ಪಕ್ಷಗಳ ಏಳು ಶಾಸಕರು, ಬಿಜೆಪಿಗೆ ಸೇರ್ಪಡೆಗೊಂಡರು. 2019ರಲ್ಲಿ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ತನ್ನ ಮೊದಲ ಚುನಾಯಿತ ಸರ್ಕಾರವನ್ನು ರಚಿಸಿತು. ಮುಖ್ಯಮಂತ್ರಿ ಖಂಡು ಅವರು 2016 ರಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದ್ದರು. ಅವರು ಹಲವಾರು ಶಾಸಕರೊಂದಿಗೆ ಕಾಂಗ್ರೆಸ್ ತೊರೆದು ಅರುಣಾಚಲದ ಪೀಪಲ್ಸ್ ಪಾರ್ಟಿಗೆ ಸೇರಿದರು. ಇತ್ತೀಚೆಗೆ ಇಬ್ಬರು ಎನ್‌ಸಿಪಿ ಮತ್ತು ಮೂವರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ; ’10 ವರ್ಷದ ದುರಾಡಳಿತದ ನಂತರ ಇದ್ದಕ್ಕಿದ್ದಂತೆ ಎಚ್ಚರಗೊಂಡಿದ್ದೀರಿ..; ಮೋದಿ ವಿರುದ್ಧ ಕಿಡಿಕಾರಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...