Homeಮುಖಪುಟಅರುಣಾಚಲ ಪ್ರದೇಶ: ಚುನಾವಣಾ ಪೂರ್ವ 'ಆಪರೇಷನ್ ಕಮಲ'; 10 ಜನ ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ!

ಅರುಣಾಚಲ ಪ್ರದೇಶ: ಚುನಾವಣಾ ಪೂರ್ವ ‘ಆಪರೇಷನ್ ಕಮಲ’; 10 ಜನ ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ!

- Advertisement -
- Advertisement -

ಬಿಜೆಪಿ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಕೆಯಾಗದ ಹಾಗೂ ಕೆಲ ಕಾಂಗ್ರೆಸ್‌ ಸದಸ್ಯರು ತಮ್ಮ ಉಮೇದುವಾರಿಕೆ ವಾಪಸ್ ಪಡೆದ ನಂತರ, ಬಿಜೆಪಿಯ 10 ಜನರು ಶಾಸಕರಾಗಿ ಅವಿರೋಧ ಆಯ್ಕೆಯಾಗಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. 60 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 10 ಜನ ಈಗಾಗಲೇ ಎದುರಾಳಿಗಳಿಲ್ಲದೆ ಆಯ್ಕೆಯಾಗಿದ್ದು, ಬಿಜೆಪಿಯು ಉಳಿದ 50 ಸ್ಥಾನಗಳನ್ನು ಪೂರ್ಣ ಸ್ವೀಪ್ ಮಾಡುವ ಗುರಿ ಹೊಂದಿದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ನಡೆಸಿದ ಚುನಾವಣಾ ಪೂರ್ವ ‘ಆಪರೇಷನ್ ಕಮಲ’ದಿಂದ ಸಿಎಂ, ಡಿಸಿಎಂ ಸೇರಿದಂತೆ ಉಳಿದ ಎಂಟು ಜನ ಅವಿರೋಧ ಆಯ್ಕೆಯಾಗಿದ್ದಾರೆ.

ಈಗಾಗಲೇ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 10 ವಿಧಾನಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ. ಎಲ್ಲ 60 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳಿಕೊಂಡಿದೆ. ಇಟಾನಗರದಲ್ಲಿ ಬಿಜೆಪಿ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ ಚೌನಾ ಮೇನ್ ಚೌಕಮ್ ಕ್ಷೇತ್ರದಿಂದ ಅವಿರೋಧವಾಗಿ ಗೆದ್ದರೆ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು ಅರುಣಾಚಲ ಪ್ರದೇಶ ವಿಧಾನಸಭೆಗೆ ಅವಿರೋಧವಾಗಿ ಗೆದ್ದರು. ದಸಾಂಗ್ಲು ಪುಲ್ ಅವರು ಹಯುಲಿಯಾಂಗ್ ಅಸೆಂಬ್ಲಿ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾದರು.

ದಸಾಂಗ್ಲು ಪುಲ್ ಅವರ ಏಕೈಕ ಎದುರಾಳಿ ಕಾಂಗ್ರೆಸ್ ಪಕ್ಷದ ಬಫುಟ್ಸೊ ಕ್ರೋಂಗ್ ಹಿಂಪಡೆದ ನಂತರ ಅವರ ನಾಮನಿರ್ದೇಶನವು ಅವಿರೋಧವಾಗಿ ನಡೆಯಿತು. ಅವರು ಮಾಜಿ ಮುಖ್ಯಮಂತ್ರಿ ಕಲಿಖೋ ಪುಲ್ ಅವರ ಪತ್ನಿ. ವಿಧಾನಸಭೆ ಚುನಾವಣೆಯಲ್ಲಿ ಅವಿರೋಧವಾಗಿ ಗೆಲುವು ಸಾಧಿಸುವ ಸೂಚನೆ ನೀಡಿದ್ದಾರೆ. ರಾಜ್ಯದ 60 ಶಾಸಕರ ಪೈಕಿ 10 ಶಾಸಕರ ಅವಿರೋಧ ಗೆಲುವಿನ ಆರಂಭಕ್ಕೆ ಸಿಎಂ ಪೆಮಾ ಖಂಡು ಮತ್ತು ಡಿಸಿಎಂ ಚೌನಾ ಮೇನ್ ಅವರನ್ನು ಅಭಿನಂದಿಸಿದ ಅಶೋಕ್ ಸಿಂಘಾಲ್ ಸಚಿವ ಮತ್ತು ಸಂಸದೀಯ ಚುನಾವಣಾ ಉಸ್ತುವಾರಿ, ‘ಇದು ಮೋದಿ ಕಿ ಗ್ಯಾರಂಟಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಸಿಎಂ ಪೇಮಾ ಖಂಡು ಅವರ ನಾಯಕತ್ವದಲ್ಲಿ ಅರುಣಾಚಲ ಪ್ರದೇಶದ ಜನರ ಅಚಲ ಬೆಂಬಲ ಮತ್ತು ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ಬಿಜೆಪಿ ಎಲ್ಲಾ 60 ಸ್ಥಾನಗಳನ್ನು ಗೆಲ್ಲುತ್ತದೆ’ ಎಂದು ಹೇಳಿದರು.

‘ಅರುಣಾಚಲ ಲೋಕಸಭೆಯಲ್ಲಿ ಇಬ್ಬರೂ ಅಭ್ಯರ್ಥಿಗಳು ದಾಖಲೆಯ ಮತಗಳ ಅಂತರದಿಂದ ಗೆಲ್ಲುತ್ತಾರೆ. ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವೀಪ್ ಮಾಡುತ್ತಿದೆ! ಇಟಾನಗರಕ್ಕೆ ನನ್ನ ಭೇಟಿಯ ಸಂದರ್ಭದಲ್ಲಿ, ತಮ್ಮ ಅಸೆಂಬ್ಲಿ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿರುವ ಮುಖ್ಯಮಂತ್ರಿ ಪೆಮಾ ಖಂಡು, ಉಪಮುಖ್ಯಮಂತ್ರಿ ಚೌನಾ ಮತ್ತು ಅರುಣಾಚಲ ಬಿಜೆಪಿ ಶಾಸಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದೇನೆ. ನಮ್ಮ ಸಮರ್ಪಿತ ಪಕ್ಷದ ಕಾರ್ಯಕರ್ತರಲ್ಲಿನ ಜೋಶ್ ಮತ್ತು ಸಂಭ್ರಮವನ್ನು ನೋಡಿ ಅತೀವ ಸಂತೋಷವಾಯಿತು. ಏಪ್ರಿಲ್ 19ರಂದು ಬನ್ನಿ, ಚುನಾವಣೆಯಲ್ಲಿ ನಾವು ಪ್ರಚಂಡ ಗೆಲುವು ಸಾಧಿಸುತ್ತೇವೆ!” ಕೇಂದ್ರ ಸಚಿವ ಮತ್ತು ಅರುಣಾಚಲದ ಲೋಕಸಭಾ ಸಂಸದ ಕಿರಣ್ ರಿಜಿಜು ಅವರು ತಮ್ಮ ಎಕ್ಸ್‌ನಲ್ಲಿ ಹೇಳಿದ್ದಾರೆ.

ಚುನಾವಣೆಗೆ ಪೂರ್ವ ‘ಆಪರೇಷನ್ ಕಮಲ’

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಗೆ ಭಾರೀ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದೆ. ಅರುಣಾಚಲ ಪ್ರದೆಶದಲ್ಲಿ ಅಧೀಕಾರ ಉಳಿಸಿಕೊಳ್ಳಬೇಕು ಎಂದು ಹಠಕ್ಕೆ ಬಿದ್ದಿರುವ ಬಿಜೆಪಿ, ಚುನಾವಣೆಗೆ ಮುಂಚೆ ‘ಆಪರೇಷನ್’ ಆರಂಭಿಸಿದೆ ಎನ್ನಲಾಗುತ್ತಿದೆ.

ಅರುಣಾಚಲ ಪ್ರದೇಶ ವಿಧಾನಸಭೆಯ ಎಲ್ಲಾ 60 ಸದಸ್ಯರಿಗೆ ಬಿಜೆಪಿ ಅಭ್ಯರ್ಥಿಗಳನ್ನು ಹಾಕಿದೆ. ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣೆಯು ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ನಡೆಯಲಿದೆ. ಕಾಂಗ್ರೆಸ್ 34 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. 2019 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 41 ಸ್ಥಾನಗಳನ್ನು ಗೆದ್ದುಕೊಂಡಿತು. ನಂತರ, ಜನತಾ ದಳ-ಯುನೈಟೆಡ್ ಸೇರಿದಂತೆ ಇತರ ಪಕ್ಷಗಳ ಏಳು ಶಾಸಕರು, ಬಿಜೆಪಿಗೆ ಸೇರ್ಪಡೆಗೊಂಡರು. 2019ರಲ್ಲಿ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ತನ್ನ ಮೊದಲ ಚುನಾಯಿತ ಸರ್ಕಾರವನ್ನು ರಚಿಸಿತು. ಮುಖ್ಯಮಂತ್ರಿ ಖಂಡು ಅವರು 2016 ರಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದ್ದರು. ಅವರು ಹಲವಾರು ಶಾಸಕರೊಂದಿಗೆ ಕಾಂಗ್ರೆಸ್ ತೊರೆದು ಅರುಣಾಚಲದ ಪೀಪಲ್ಸ್ ಪಾರ್ಟಿಗೆ ಸೇರಿದರು. ಇತ್ತೀಚೆಗೆ ಇಬ್ಬರು ಎನ್‌ಸಿಪಿ ಮತ್ತು ಮೂವರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ; ’10 ವರ್ಷದ ದುರಾಡಳಿತದ ನಂತರ ಇದ್ದಕ್ಕಿದ್ದಂತೆ ಎಚ್ಚರಗೊಂಡಿದ್ದೀರಿ..; ಮೋದಿ ವಿರುದ್ಧ ಕಿಡಿಕಾರಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...