Homeಮುಖಪುಟ'ಪೆನ್ ಪಿಂಟರ್' ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡಿದ ಲೇಖಕಿ

- Advertisement -
- Advertisement -

ಖ್ಯಾತ ಲೇಖಕಿ ಹಾಗೂ ಹೋರಾಟಗಾರ್ತಿ ಅರುಂಧತಿ ರಾಯ್ ಅವರು ತಮ್ಮ ‘ಪೆನ್ ಪಿಂಟರ್’ (PEN Pinter) ಪ್ರಶಸ್ತಿಯ ಹಣವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಶಸ್ತಿಗೆ ತನ್ನ ಹೆಸರು ಘೋಷಣೆಯಾಗುತ್ತಿದ್ದಂತೆ ಅರುಂಧತಿ ರಾಯ್ ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳಿಗಾಗಿ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಬ್ರಿಟಿಷ್-ಈಜಿಪ್ಟ್‌ ಬರಹಗಾರ ಮತ್ತು ಹೋರಾಟಗಾರ ಅಲಾ ಅಬ್ದುಲ್ ಫತ್ತಾಹ್ ಅವರನ್ನು ‘ರೈಟರ್ ಆಫ್ ಕರೇಜ್’ (ಧೈರ್ಯದ ಬರಹಗಾರ) ಎಂದು ಹೆಸರಿಸಿದ್ದಾರೆ. ಈಜಿಪ್ಟ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಅಬ್ದುಲ್ ಫತ್ತಾಹ್ ಅವರ ಧೈರ್ಯವನ್ನು ಗುರುತಿಸಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಅಕ್ಟೋಬರ್ 10ರಂದು ಲಂಡನ್‌ನ ಬ್ರಿಟಿಷ್ ಲೈಬ್ರರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಪ್ರಶಸ್ತಿಯ ಮಹತ್ವ ಮತ್ತು ಬರಹಗಾರರ ಪಾತ್ರದ ಬಗ್ಗೆ ಅರುಂಧತಿ ರಾಯ್ ಮಾತನಾಡಿದರು. ಅಲಾ ಅಬ್ದುಲ್ ಫತ್ತಾಹ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ರಾಯ್, “ನೀವು ಈ ಕೋಣೆಯಲ್ಲಿ ನಮ್ಮೊಂದಿಗೆ ಇದ್ದೀರಿ. ನೀವು ಇಲ್ಲಿಯ ಅತ್ಯಂತ ಪ್ರಮುಖ ವ್ಯಕ್ತಿ” ಎಂದರು. ಅಬ್ದುಲ್ ಫತ್ತಾಹ್ ಅವರ ವಾಕ್ಯಗಳನ್ನು ಉಲ್ಲೇಖಿಸಿದ ರಾಯ್ ಜಗತ್ತಿನ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಅಬ್ದುಲ್ ಫತ್ತಾಹ್ ಅವರ ಉತ್ಸಾಹ ಮತ್ತು ಬರಹಗಳಿಗೆ ಗೌರವ ಸಲ್ಲಿಸಿದ ರಾಯ್, ಇದು ಫತ್ತಾಹ್ ಅವರ ‘ಅನ್ಯಾಯದ ಸೆರೆವಾಸದ ಬಗೆಗಿನ ಅತಿ ಮಹತ್ವದ ಜಾಗೃತಿ” ಎಂದರು.

ಬ್ರಿಟಿಷ್-ಈಜಿಪ್ಟಿನ ಬರಹಗಾರ, ಸಾಫ್ಟ್‌ವೇರ್ ಡೆವಲಪರ್ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಅಲಾ ಅಬ್ದುಲ್ ಫತ್ತಾಹ್ ಅವರು ಈಜಿಪ್ಟ್ ಜೈಲಿನಲ್ಲಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರಿಗೆ ಜೈಲು ಶಿಕ್ಷೆ ಪೂರ್ಣವಾದರೂ ಇನ್ನು ಈಜಿಪ್ಟ್ ಜೈಲಿನಲ್ಲಿದ್ದಾರೆ.

ರಾಯ್ ತನ್ನ ಭಾಷಣದಲ್ಲಿ ಜಾಗತಿಕವಾಗಿ ನಡೆಯುತ್ತಿರುವ ಅನ್ಯಾಯದ ಗಡಿ ವಿವಾದಗಳು, ಜಾಗತಿಕ, ವಿಶೇಷವಾಗಿ ಭಾರತದ ರಾಜಕೀಯ ಕೈದಿಗಳ ಪರಿಸ್ಥಿತಿಯ ಬಗ್ಗೆ ಒತ್ತಿ ಹೇಳಿದರು. ತನ್ನ ಭಾಷಣದಲ್ಲಿ ಭಾರತ ಜೈಲುಗಳಲ್ಲಿ ಬಂಧಿಯಾಗಿರುವ ತನ್ನ ಸ್ನೇಹಿತರು ಹಾಗೂ ಹೋರಾಟಗಾರರಾದ ಉಮರ್ ಖಾಲಿದ್, ಗುಲ್ಫಿಶಾ ಫಾತಿಮಾ, ಖುರ್ರಮ್ ಫರ್ವೇಝ್ ಸೇರಿದಂತೆ ಹಲವರನ್ನು ನೆನಪಿಸಿದರು. ಅನ್ಯಾಯದ ಬಂಧನಗಳ ಕುರಿತು ಅವರು ಅತಂಕ ವ್ಯಕ್ತಪಡಿಸಿದರು.

ಪೆನ್ ಪಿಂಟರ್ ಪ್ರಶಸ್ತಿಯ ಕುರಿತು ಮಾತನಾಡಿದ ರಾಯ್ ಅವರು, ಹೆರಾಲ್ಡ್ ಪಿಂಟರ್ ಅವರು ‘ಅಚಲವಾದ ಧೈರ್ಯ’ದ ಕಲ್ಪನೆಯೊಂದಿಗೆ ಹೇಗೆ ಗುರುತಿಸಿಕೊಂಡರು ಎಂಬುವುದನ್ನು ವಿವರಿಸಿದರು.

ತನ್ನ ಭಾಷಣದ ಕೊನೆಯ ಭಾಗದಲ್ಲಿ ಗಾಝಾ ಮತ್ತು ಲೆಬನಾನ್‌ ಮೇಲಿನ ಇಸ್ರೇಲ್ ಆಕ್ರಮಣವನ್ನು ಉಲ್ಲೇಖಿಸಿದ ರಾಯ್, ಇಸ್ರೇಲ್‌ನ ಮಿಲಿಟರಿ ಕ್ರಮಗಳ ವಿರುದ್ದ ಕಿಡಿಕಾರಿದರು. ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳು ನರಮೇಧ ನಡೆಸುತ್ತಿವೆ ಎಂದರು. ಇಸ್ರೇಲ್‌ಗೆ ಯುಎಸ್‌ ಸರ್ಕಾರದ ಬೆಂಬಲವನ್ನು ಅವರು ಖಂಡಿಸಿದರು.

ಅಕ್ಟೋಬರ್ 7, 2023ರಿಂದ, ಇಸ್ರೇಲ್ ಗಾಝಾದಲ್ಲಿ ಸಾವಿರಾರು ಜನರನ್ನು ಕೊಂದಿದೆ. ಅದರ ಬಹುಪಾಲು ಜನರನ್ನು ಸ್ಥಳಾಂತರಿಸಿದೆ. ಈ ಕೃತ್ಯಗಳು ಕೇವಲ ಆತ್ಮರಕ್ಷಣೆಯಲ್ಲ, ಬದಲಾಗಿ ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್‌ನ ಆಕ್ರಮಣವನ್ನು ಗಟ್ಟಿಗೊಳಿಸುವ ಮತ್ತು ಅದರ ವರ್ಣಭೇದ ನೀತಿಯನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿರುವ ಆಕ್ರಮಣಕಾರಿ ಯುದ್ಧದ ಲೆಕ್ಕಾಚಾರವಾಗಿದೆ ಎಂದು ರಾಯ್ ಒತ್ತಿ ಹೇಳಿದರು.

ಇದನ್ನೂ ಓದಿ : ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...