Homeಮುಖಪುಟ'ಪೆನ್ ಪಿಂಟರ್' ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡಿದ ಲೇಖಕಿ

- Advertisement -
- Advertisement -

ಖ್ಯಾತ ಲೇಖಕಿ ಹಾಗೂ ಹೋರಾಟಗಾರ್ತಿ ಅರುಂಧತಿ ರಾಯ್ ಅವರು ತಮ್ಮ ‘ಪೆನ್ ಪಿಂಟರ್’ (PEN Pinter) ಪ್ರಶಸ್ತಿಯ ಹಣವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಶಸ್ತಿಗೆ ತನ್ನ ಹೆಸರು ಘೋಷಣೆಯಾಗುತ್ತಿದ್ದಂತೆ ಅರುಂಧತಿ ರಾಯ್ ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳಿಗಾಗಿ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಬ್ರಿಟಿಷ್-ಈಜಿಪ್ಟ್‌ ಬರಹಗಾರ ಮತ್ತು ಹೋರಾಟಗಾರ ಅಲಾ ಅಬ್ದುಲ್ ಫತ್ತಾಹ್ ಅವರನ್ನು ‘ರೈಟರ್ ಆಫ್ ಕರೇಜ್’ (ಧೈರ್ಯದ ಬರಹಗಾರ) ಎಂದು ಹೆಸರಿಸಿದ್ದಾರೆ. ಈಜಿಪ್ಟ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಅಬ್ದುಲ್ ಫತ್ತಾಹ್ ಅವರ ಧೈರ್ಯವನ್ನು ಗುರುತಿಸಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಅಕ್ಟೋಬರ್ 10ರಂದು ಲಂಡನ್‌ನ ಬ್ರಿಟಿಷ್ ಲೈಬ್ರರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಪ್ರಶಸ್ತಿಯ ಮಹತ್ವ ಮತ್ತು ಬರಹಗಾರರ ಪಾತ್ರದ ಬಗ್ಗೆ ಅರುಂಧತಿ ರಾಯ್ ಮಾತನಾಡಿದರು. ಅಲಾ ಅಬ್ದುಲ್ ಫತ್ತಾಹ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ರಾಯ್, “ನೀವು ಈ ಕೋಣೆಯಲ್ಲಿ ನಮ್ಮೊಂದಿಗೆ ಇದ್ದೀರಿ. ನೀವು ಇಲ್ಲಿಯ ಅತ್ಯಂತ ಪ್ರಮುಖ ವ್ಯಕ್ತಿ” ಎಂದರು. ಅಬ್ದುಲ್ ಫತ್ತಾಹ್ ಅವರ ವಾಕ್ಯಗಳನ್ನು ಉಲ್ಲೇಖಿಸಿದ ರಾಯ್ ಜಗತ್ತಿನ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಅಬ್ದುಲ್ ಫತ್ತಾಹ್ ಅವರ ಉತ್ಸಾಹ ಮತ್ತು ಬರಹಗಳಿಗೆ ಗೌರವ ಸಲ್ಲಿಸಿದ ರಾಯ್, ಇದು ಫತ್ತಾಹ್ ಅವರ ‘ಅನ್ಯಾಯದ ಸೆರೆವಾಸದ ಬಗೆಗಿನ ಅತಿ ಮಹತ್ವದ ಜಾಗೃತಿ” ಎಂದರು.

ಬ್ರಿಟಿಷ್-ಈಜಿಪ್ಟಿನ ಬರಹಗಾರ, ಸಾಫ್ಟ್‌ವೇರ್ ಡೆವಲಪರ್ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಅಲಾ ಅಬ್ದುಲ್ ಫತ್ತಾಹ್ ಅವರು ಈಜಿಪ್ಟ್ ಜೈಲಿನಲ್ಲಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರಿಗೆ ಜೈಲು ಶಿಕ್ಷೆ ಪೂರ್ಣವಾದರೂ ಇನ್ನು ಈಜಿಪ್ಟ್ ಜೈಲಿನಲ್ಲಿದ್ದಾರೆ.

ರಾಯ್ ತನ್ನ ಭಾಷಣದಲ್ಲಿ ಜಾಗತಿಕವಾಗಿ ನಡೆಯುತ್ತಿರುವ ಅನ್ಯಾಯದ ಗಡಿ ವಿವಾದಗಳು, ಜಾಗತಿಕ, ವಿಶೇಷವಾಗಿ ಭಾರತದ ರಾಜಕೀಯ ಕೈದಿಗಳ ಪರಿಸ್ಥಿತಿಯ ಬಗ್ಗೆ ಒತ್ತಿ ಹೇಳಿದರು. ತನ್ನ ಭಾಷಣದಲ್ಲಿ ಭಾರತ ಜೈಲುಗಳಲ್ಲಿ ಬಂಧಿಯಾಗಿರುವ ತನ್ನ ಸ್ನೇಹಿತರು ಹಾಗೂ ಹೋರಾಟಗಾರರಾದ ಉಮರ್ ಖಾಲಿದ್, ಗುಲ್ಫಿಶಾ ಫಾತಿಮಾ, ಖುರ್ರಮ್ ಫರ್ವೇಝ್ ಸೇರಿದಂತೆ ಹಲವರನ್ನು ನೆನಪಿಸಿದರು. ಅನ್ಯಾಯದ ಬಂಧನಗಳ ಕುರಿತು ಅವರು ಅತಂಕ ವ್ಯಕ್ತಪಡಿಸಿದರು.

ಪೆನ್ ಪಿಂಟರ್ ಪ್ರಶಸ್ತಿಯ ಕುರಿತು ಮಾತನಾಡಿದ ರಾಯ್ ಅವರು, ಹೆರಾಲ್ಡ್ ಪಿಂಟರ್ ಅವರು ‘ಅಚಲವಾದ ಧೈರ್ಯ’ದ ಕಲ್ಪನೆಯೊಂದಿಗೆ ಹೇಗೆ ಗುರುತಿಸಿಕೊಂಡರು ಎಂಬುವುದನ್ನು ವಿವರಿಸಿದರು.

ತನ್ನ ಭಾಷಣದ ಕೊನೆಯ ಭಾಗದಲ್ಲಿ ಗಾಝಾ ಮತ್ತು ಲೆಬನಾನ್‌ ಮೇಲಿನ ಇಸ್ರೇಲ್ ಆಕ್ರಮಣವನ್ನು ಉಲ್ಲೇಖಿಸಿದ ರಾಯ್, ಇಸ್ರೇಲ್‌ನ ಮಿಲಿಟರಿ ಕ್ರಮಗಳ ವಿರುದ್ದ ಕಿಡಿಕಾರಿದರು. ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳು ನರಮೇಧ ನಡೆಸುತ್ತಿವೆ ಎಂದರು. ಇಸ್ರೇಲ್‌ಗೆ ಯುಎಸ್‌ ಸರ್ಕಾರದ ಬೆಂಬಲವನ್ನು ಅವರು ಖಂಡಿಸಿದರು.

ಅಕ್ಟೋಬರ್ 7, 2023ರಿಂದ, ಇಸ್ರೇಲ್ ಗಾಝಾದಲ್ಲಿ ಸಾವಿರಾರು ಜನರನ್ನು ಕೊಂದಿದೆ. ಅದರ ಬಹುಪಾಲು ಜನರನ್ನು ಸ್ಥಳಾಂತರಿಸಿದೆ. ಈ ಕೃತ್ಯಗಳು ಕೇವಲ ಆತ್ಮರಕ್ಷಣೆಯಲ್ಲ, ಬದಲಾಗಿ ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್‌ನ ಆಕ್ರಮಣವನ್ನು ಗಟ್ಟಿಗೊಳಿಸುವ ಮತ್ತು ಅದರ ವರ್ಣಭೇದ ನೀತಿಯನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿರುವ ಆಕ್ರಮಣಕಾರಿ ಯುದ್ಧದ ಲೆಕ್ಕಾಚಾರವಾಗಿದೆ ಎಂದು ರಾಯ್ ಒತ್ತಿ ಹೇಳಿದರು.

ಇದನ್ನೂ ಓದಿ : ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...