Homeಮುಖಪುಟ'ಪೆನ್ ಪಿಂಟರ್' ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡಿದ ಲೇಖಕಿ

- Advertisement -
- Advertisement -

ಖ್ಯಾತ ಲೇಖಕಿ ಹಾಗೂ ಹೋರಾಟಗಾರ್ತಿ ಅರುಂಧತಿ ರಾಯ್ ಅವರು ತಮ್ಮ ‘ಪೆನ್ ಪಿಂಟರ್’ (PEN Pinter) ಪ್ರಶಸ್ತಿಯ ಹಣವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಶಸ್ತಿಗೆ ತನ್ನ ಹೆಸರು ಘೋಷಣೆಯಾಗುತ್ತಿದ್ದಂತೆ ಅರುಂಧತಿ ರಾಯ್ ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳಿಗಾಗಿ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಬ್ರಿಟಿಷ್-ಈಜಿಪ್ಟ್‌ ಬರಹಗಾರ ಮತ್ತು ಹೋರಾಟಗಾರ ಅಲಾ ಅಬ್ದುಲ್ ಫತ್ತಾಹ್ ಅವರನ್ನು ‘ರೈಟರ್ ಆಫ್ ಕರೇಜ್’ (ಧೈರ್ಯದ ಬರಹಗಾರ) ಎಂದು ಹೆಸರಿಸಿದ್ದಾರೆ. ಈಜಿಪ್ಟ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಅಬ್ದುಲ್ ಫತ್ತಾಹ್ ಅವರ ಧೈರ್ಯವನ್ನು ಗುರುತಿಸಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಅಕ್ಟೋಬರ್ 10ರಂದು ಲಂಡನ್‌ನ ಬ್ರಿಟಿಷ್ ಲೈಬ್ರರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಪ್ರಶಸ್ತಿಯ ಮಹತ್ವ ಮತ್ತು ಬರಹಗಾರರ ಪಾತ್ರದ ಬಗ್ಗೆ ಅರುಂಧತಿ ರಾಯ್ ಮಾತನಾಡಿದರು. ಅಲಾ ಅಬ್ದುಲ್ ಫತ್ತಾಹ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ರಾಯ್, “ನೀವು ಈ ಕೋಣೆಯಲ್ಲಿ ನಮ್ಮೊಂದಿಗೆ ಇದ್ದೀರಿ. ನೀವು ಇಲ್ಲಿಯ ಅತ್ಯಂತ ಪ್ರಮುಖ ವ್ಯಕ್ತಿ” ಎಂದರು. ಅಬ್ದುಲ್ ಫತ್ತಾಹ್ ಅವರ ವಾಕ್ಯಗಳನ್ನು ಉಲ್ಲೇಖಿಸಿದ ರಾಯ್ ಜಗತ್ತಿನ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಅಬ್ದುಲ್ ಫತ್ತಾಹ್ ಅವರ ಉತ್ಸಾಹ ಮತ್ತು ಬರಹಗಳಿಗೆ ಗೌರವ ಸಲ್ಲಿಸಿದ ರಾಯ್, ಇದು ಫತ್ತಾಹ್ ಅವರ ‘ಅನ್ಯಾಯದ ಸೆರೆವಾಸದ ಬಗೆಗಿನ ಅತಿ ಮಹತ್ವದ ಜಾಗೃತಿ” ಎಂದರು.

ಬ್ರಿಟಿಷ್-ಈಜಿಪ್ಟಿನ ಬರಹಗಾರ, ಸಾಫ್ಟ್‌ವೇರ್ ಡೆವಲಪರ್ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಅಲಾ ಅಬ್ದುಲ್ ಫತ್ತಾಹ್ ಅವರು ಈಜಿಪ್ಟ್ ಜೈಲಿನಲ್ಲಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರಿಗೆ ಜೈಲು ಶಿಕ್ಷೆ ಪೂರ್ಣವಾದರೂ ಇನ್ನು ಈಜಿಪ್ಟ್ ಜೈಲಿನಲ್ಲಿದ್ದಾರೆ.

ರಾಯ್ ತನ್ನ ಭಾಷಣದಲ್ಲಿ ಜಾಗತಿಕವಾಗಿ ನಡೆಯುತ್ತಿರುವ ಅನ್ಯಾಯದ ಗಡಿ ವಿವಾದಗಳು, ಜಾಗತಿಕ, ವಿಶೇಷವಾಗಿ ಭಾರತದ ರಾಜಕೀಯ ಕೈದಿಗಳ ಪರಿಸ್ಥಿತಿಯ ಬಗ್ಗೆ ಒತ್ತಿ ಹೇಳಿದರು. ತನ್ನ ಭಾಷಣದಲ್ಲಿ ಭಾರತ ಜೈಲುಗಳಲ್ಲಿ ಬಂಧಿಯಾಗಿರುವ ತನ್ನ ಸ್ನೇಹಿತರು ಹಾಗೂ ಹೋರಾಟಗಾರರಾದ ಉಮರ್ ಖಾಲಿದ್, ಗುಲ್ಫಿಶಾ ಫಾತಿಮಾ, ಖುರ್ರಮ್ ಫರ್ವೇಝ್ ಸೇರಿದಂತೆ ಹಲವರನ್ನು ನೆನಪಿಸಿದರು. ಅನ್ಯಾಯದ ಬಂಧನಗಳ ಕುರಿತು ಅವರು ಅತಂಕ ವ್ಯಕ್ತಪಡಿಸಿದರು.

ಪೆನ್ ಪಿಂಟರ್ ಪ್ರಶಸ್ತಿಯ ಕುರಿತು ಮಾತನಾಡಿದ ರಾಯ್ ಅವರು, ಹೆರಾಲ್ಡ್ ಪಿಂಟರ್ ಅವರು ‘ಅಚಲವಾದ ಧೈರ್ಯ’ದ ಕಲ್ಪನೆಯೊಂದಿಗೆ ಹೇಗೆ ಗುರುತಿಸಿಕೊಂಡರು ಎಂಬುವುದನ್ನು ವಿವರಿಸಿದರು.

ತನ್ನ ಭಾಷಣದ ಕೊನೆಯ ಭಾಗದಲ್ಲಿ ಗಾಝಾ ಮತ್ತು ಲೆಬನಾನ್‌ ಮೇಲಿನ ಇಸ್ರೇಲ್ ಆಕ್ರಮಣವನ್ನು ಉಲ್ಲೇಖಿಸಿದ ರಾಯ್, ಇಸ್ರೇಲ್‌ನ ಮಿಲಿಟರಿ ಕ್ರಮಗಳ ವಿರುದ್ದ ಕಿಡಿಕಾರಿದರು. ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳು ನರಮೇಧ ನಡೆಸುತ್ತಿವೆ ಎಂದರು. ಇಸ್ರೇಲ್‌ಗೆ ಯುಎಸ್‌ ಸರ್ಕಾರದ ಬೆಂಬಲವನ್ನು ಅವರು ಖಂಡಿಸಿದರು.

ಅಕ್ಟೋಬರ್ 7, 2023ರಿಂದ, ಇಸ್ರೇಲ್ ಗಾಝಾದಲ್ಲಿ ಸಾವಿರಾರು ಜನರನ್ನು ಕೊಂದಿದೆ. ಅದರ ಬಹುಪಾಲು ಜನರನ್ನು ಸ್ಥಳಾಂತರಿಸಿದೆ. ಈ ಕೃತ್ಯಗಳು ಕೇವಲ ಆತ್ಮರಕ್ಷಣೆಯಲ್ಲ, ಬದಲಾಗಿ ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್‌ನ ಆಕ್ರಮಣವನ್ನು ಗಟ್ಟಿಗೊಳಿಸುವ ಮತ್ತು ಅದರ ವರ್ಣಭೇದ ನೀತಿಯನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿರುವ ಆಕ್ರಮಣಕಾರಿ ಯುದ್ಧದ ಲೆಕ್ಕಾಚಾರವಾಗಿದೆ ಎಂದು ರಾಯ್ ಒತ್ತಿ ಹೇಳಿದರು.

ಇದನ್ನೂ ಓದಿ : ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...