Homeಮುಖಪುಟ'ಪೆನ್ ಪಿಂಟರ್' ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡಿದ ಲೇಖಕಿ

- Advertisement -
- Advertisement -

ಖ್ಯಾತ ಲೇಖಕಿ ಹಾಗೂ ಹೋರಾಟಗಾರ್ತಿ ಅರುಂಧತಿ ರಾಯ್ ಅವರು ತಮ್ಮ ‘ಪೆನ್ ಪಿಂಟರ್’ (PEN Pinter) ಪ್ರಶಸ್ತಿಯ ಹಣವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಶಸ್ತಿಗೆ ತನ್ನ ಹೆಸರು ಘೋಷಣೆಯಾಗುತ್ತಿದ್ದಂತೆ ಅರುಂಧತಿ ರಾಯ್ ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳಿಗಾಗಿ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಬ್ರಿಟಿಷ್-ಈಜಿಪ್ಟ್‌ ಬರಹಗಾರ ಮತ್ತು ಹೋರಾಟಗಾರ ಅಲಾ ಅಬ್ದುಲ್ ಫತ್ತಾಹ್ ಅವರನ್ನು ‘ರೈಟರ್ ಆಫ್ ಕರೇಜ್’ (ಧೈರ್ಯದ ಬರಹಗಾರ) ಎಂದು ಹೆಸರಿಸಿದ್ದಾರೆ. ಈಜಿಪ್ಟ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಅಬ್ದುಲ್ ಫತ್ತಾಹ್ ಅವರ ಧೈರ್ಯವನ್ನು ಗುರುತಿಸಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಅಕ್ಟೋಬರ್ 10ರಂದು ಲಂಡನ್‌ನ ಬ್ರಿಟಿಷ್ ಲೈಬ್ರರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಪ್ರಶಸ್ತಿಯ ಮಹತ್ವ ಮತ್ತು ಬರಹಗಾರರ ಪಾತ್ರದ ಬಗ್ಗೆ ಅರುಂಧತಿ ರಾಯ್ ಮಾತನಾಡಿದರು. ಅಲಾ ಅಬ್ದುಲ್ ಫತ್ತಾಹ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ರಾಯ್, “ನೀವು ಈ ಕೋಣೆಯಲ್ಲಿ ನಮ್ಮೊಂದಿಗೆ ಇದ್ದೀರಿ. ನೀವು ಇಲ್ಲಿಯ ಅತ್ಯಂತ ಪ್ರಮುಖ ವ್ಯಕ್ತಿ” ಎಂದರು. ಅಬ್ದುಲ್ ಫತ್ತಾಹ್ ಅವರ ವಾಕ್ಯಗಳನ್ನು ಉಲ್ಲೇಖಿಸಿದ ರಾಯ್ ಜಗತ್ತಿನ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಅಬ್ದುಲ್ ಫತ್ತಾಹ್ ಅವರ ಉತ್ಸಾಹ ಮತ್ತು ಬರಹಗಳಿಗೆ ಗೌರವ ಸಲ್ಲಿಸಿದ ರಾಯ್, ಇದು ಫತ್ತಾಹ್ ಅವರ ‘ಅನ್ಯಾಯದ ಸೆರೆವಾಸದ ಬಗೆಗಿನ ಅತಿ ಮಹತ್ವದ ಜಾಗೃತಿ” ಎಂದರು.

ಬ್ರಿಟಿಷ್-ಈಜಿಪ್ಟಿನ ಬರಹಗಾರ, ಸಾಫ್ಟ್‌ವೇರ್ ಡೆವಲಪರ್ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಅಲಾ ಅಬ್ದುಲ್ ಫತ್ತಾಹ್ ಅವರು ಈಜಿಪ್ಟ್ ಜೈಲಿನಲ್ಲಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರಿಗೆ ಜೈಲು ಶಿಕ್ಷೆ ಪೂರ್ಣವಾದರೂ ಇನ್ನು ಈಜಿಪ್ಟ್ ಜೈಲಿನಲ್ಲಿದ್ದಾರೆ.

ರಾಯ್ ತನ್ನ ಭಾಷಣದಲ್ಲಿ ಜಾಗತಿಕವಾಗಿ ನಡೆಯುತ್ತಿರುವ ಅನ್ಯಾಯದ ಗಡಿ ವಿವಾದಗಳು, ಜಾಗತಿಕ, ವಿಶೇಷವಾಗಿ ಭಾರತದ ರಾಜಕೀಯ ಕೈದಿಗಳ ಪರಿಸ್ಥಿತಿಯ ಬಗ್ಗೆ ಒತ್ತಿ ಹೇಳಿದರು. ತನ್ನ ಭಾಷಣದಲ್ಲಿ ಭಾರತ ಜೈಲುಗಳಲ್ಲಿ ಬಂಧಿಯಾಗಿರುವ ತನ್ನ ಸ್ನೇಹಿತರು ಹಾಗೂ ಹೋರಾಟಗಾರರಾದ ಉಮರ್ ಖಾಲಿದ್, ಗುಲ್ಫಿಶಾ ಫಾತಿಮಾ, ಖುರ್ರಮ್ ಫರ್ವೇಝ್ ಸೇರಿದಂತೆ ಹಲವರನ್ನು ನೆನಪಿಸಿದರು. ಅನ್ಯಾಯದ ಬಂಧನಗಳ ಕುರಿತು ಅವರು ಅತಂಕ ವ್ಯಕ್ತಪಡಿಸಿದರು.

ಪೆನ್ ಪಿಂಟರ್ ಪ್ರಶಸ್ತಿಯ ಕುರಿತು ಮಾತನಾಡಿದ ರಾಯ್ ಅವರು, ಹೆರಾಲ್ಡ್ ಪಿಂಟರ್ ಅವರು ‘ಅಚಲವಾದ ಧೈರ್ಯ’ದ ಕಲ್ಪನೆಯೊಂದಿಗೆ ಹೇಗೆ ಗುರುತಿಸಿಕೊಂಡರು ಎಂಬುವುದನ್ನು ವಿವರಿಸಿದರು.

ತನ್ನ ಭಾಷಣದ ಕೊನೆಯ ಭಾಗದಲ್ಲಿ ಗಾಝಾ ಮತ್ತು ಲೆಬನಾನ್‌ ಮೇಲಿನ ಇಸ್ರೇಲ್ ಆಕ್ರಮಣವನ್ನು ಉಲ್ಲೇಖಿಸಿದ ರಾಯ್, ಇಸ್ರೇಲ್‌ನ ಮಿಲಿಟರಿ ಕ್ರಮಗಳ ವಿರುದ್ದ ಕಿಡಿಕಾರಿದರು. ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳು ನರಮೇಧ ನಡೆಸುತ್ತಿವೆ ಎಂದರು. ಇಸ್ರೇಲ್‌ಗೆ ಯುಎಸ್‌ ಸರ್ಕಾರದ ಬೆಂಬಲವನ್ನು ಅವರು ಖಂಡಿಸಿದರು.

ಅಕ್ಟೋಬರ್ 7, 2023ರಿಂದ, ಇಸ್ರೇಲ್ ಗಾಝಾದಲ್ಲಿ ಸಾವಿರಾರು ಜನರನ್ನು ಕೊಂದಿದೆ. ಅದರ ಬಹುಪಾಲು ಜನರನ್ನು ಸ್ಥಳಾಂತರಿಸಿದೆ. ಈ ಕೃತ್ಯಗಳು ಕೇವಲ ಆತ್ಮರಕ್ಷಣೆಯಲ್ಲ, ಬದಲಾಗಿ ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್‌ನ ಆಕ್ರಮಣವನ್ನು ಗಟ್ಟಿಗೊಳಿಸುವ ಮತ್ತು ಅದರ ವರ್ಣಭೇದ ನೀತಿಯನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿರುವ ಆಕ್ರಮಣಕಾರಿ ಯುದ್ಧದ ಲೆಕ್ಕಾಚಾರವಾಗಿದೆ ಎಂದು ರಾಯ್ ಒತ್ತಿ ಹೇಳಿದರು.

ಇದನ್ನೂ ಓದಿ : ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...