Homeಮುಖಪುಟ'ಪೆನ್ ಪಿಂಟರ್' ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡಿದ ಲೇಖಕಿ

- Advertisement -
- Advertisement -

ಖ್ಯಾತ ಲೇಖಕಿ ಹಾಗೂ ಹೋರಾಟಗಾರ್ತಿ ಅರುಂಧತಿ ರಾಯ್ ಅವರು ತಮ್ಮ ‘ಪೆನ್ ಪಿಂಟರ್’ (PEN Pinter) ಪ್ರಶಸ್ತಿಯ ಹಣವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಶಸ್ತಿಗೆ ತನ್ನ ಹೆಸರು ಘೋಷಣೆಯಾಗುತ್ತಿದ್ದಂತೆ ಅರುಂಧತಿ ರಾಯ್ ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳಿಗಾಗಿ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಬ್ರಿಟಿಷ್-ಈಜಿಪ್ಟ್‌ ಬರಹಗಾರ ಮತ್ತು ಹೋರಾಟಗಾರ ಅಲಾ ಅಬ್ದುಲ್ ಫತ್ತಾಹ್ ಅವರನ್ನು ‘ರೈಟರ್ ಆಫ್ ಕರೇಜ್’ (ಧೈರ್ಯದ ಬರಹಗಾರ) ಎಂದು ಹೆಸರಿಸಿದ್ದಾರೆ. ಈಜಿಪ್ಟ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಅಬ್ದುಲ್ ಫತ್ತಾಹ್ ಅವರ ಧೈರ್ಯವನ್ನು ಗುರುತಿಸಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಅಕ್ಟೋಬರ್ 10ರಂದು ಲಂಡನ್‌ನ ಬ್ರಿಟಿಷ್ ಲೈಬ್ರರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಪ್ರಶಸ್ತಿಯ ಮಹತ್ವ ಮತ್ತು ಬರಹಗಾರರ ಪಾತ್ರದ ಬಗ್ಗೆ ಅರುಂಧತಿ ರಾಯ್ ಮಾತನಾಡಿದರು. ಅಲಾ ಅಬ್ದುಲ್ ಫತ್ತಾಹ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ರಾಯ್, “ನೀವು ಈ ಕೋಣೆಯಲ್ಲಿ ನಮ್ಮೊಂದಿಗೆ ಇದ್ದೀರಿ. ನೀವು ಇಲ್ಲಿಯ ಅತ್ಯಂತ ಪ್ರಮುಖ ವ್ಯಕ್ತಿ” ಎಂದರು. ಅಬ್ದುಲ್ ಫತ್ತಾಹ್ ಅವರ ವಾಕ್ಯಗಳನ್ನು ಉಲ್ಲೇಖಿಸಿದ ರಾಯ್ ಜಗತ್ತಿನ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಅಬ್ದುಲ್ ಫತ್ತಾಹ್ ಅವರ ಉತ್ಸಾಹ ಮತ್ತು ಬರಹಗಳಿಗೆ ಗೌರವ ಸಲ್ಲಿಸಿದ ರಾಯ್, ಇದು ಫತ್ತಾಹ್ ಅವರ ‘ಅನ್ಯಾಯದ ಸೆರೆವಾಸದ ಬಗೆಗಿನ ಅತಿ ಮಹತ್ವದ ಜಾಗೃತಿ” ಎಂದರು.

ಬ್ರಿಟಿಷ್-ಈಜಿಪ್ಟಿನ ಬರಹಗಾರ, ಸಾಫ್ಟ್‌ವೇರ್ ಡೆವಲಪರ್ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಅಲಾ ಅಬ್ದುಲ್ ಫತ್ತಾಹ್ ಅವರು ಈಜಿಪ್ಟ್ ಜೈಲಿನಲ್ಲಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರಿಗೆ ಜೈಲು ಶಿಕ್ಷೆ ಪೂರ್ಣವಾದರೂ ಇನ್ನು ಈಜಿಪ್ಟ್ ಜೈಲಿನಲ್ಲಿದ್ದಾರೆ.

ರಾಯ್ ತನ್ನ ಭಾಷಣದಲ್ಲಿ ಜಾಗತಿಕವಾಗಿ ನಡೆಯುತ್ತಿರುವ ಅನ್ಯಾಯದ ಗಡಿ ವಿವಾದಗಳು, ಜಾಗತಿಕ, ವಿಶೇಷವಾಗಿ ಭಾರತದ ರಾಜಕೀಯ ಕೈದಿಗಳ ಪರಿಸ್ಥಿತಿಯ ಬಗ್ಗೆ ಒತ್ತಿ ಹೇಳಿದರು. ತನ್ನ ಭಾಷಣದಲ್ಲಿ ಭಾರತ ಜೈಲುಗಳಲ್ಲಿ ಬಂಧಿಯಾಗಿರುವ ತನ್ನ ಸ್ನೇಹಿತರು ಹಾಗೂ ಹೋರಾಟಗಾರರಾದ ಉಮರ್ ಖಾಲಿದ್, ಗುಲ್ಫಿಶಾ ಫಾತಿಮಾ, ಖುರ್ರಮ್ ಫರ್ವೇಝ್ ಸೇರಿದಂತೆ ಹಲವರನ್ನು ನೆನಪಿಸಿದರು. ಅನ್ಯಾಯದ ಬಂಧನಗಳ ಕುರಿತು ಅವರು ಅತಂಕ ವ್ಯಕ್ತಪಡಿಸಿದರು.

ಪೆನ್ ಪಿಂಟರ್ ಪ್ರಶಸ್ತಿಯ ಕುರಿತು ಮಾತನಾಡಿದ ರಾಯ್ ಅವರು, ಹೆರಾಲ್ಡ್ ಪಿಂಟರ್ ಅವರು ‘ಅಚಲವಾದ ಧೈರ್ಯ’ದ ಕಲ್ಪನೆಯೊಂದಿಗೆ ಹೇಗೆ ಗುರುತಿಸಿಕೊಂಡರು ಎಂಬುವುದನ್ನು ವಿವರಿಸಿದರು.

ತನ್ನ ಭಾಷಣದ ಕೊನೆಯ ಭಾಗದಲ್ಲಿ ಗಾಝಾ ಮತ್ತು ಲೆಬನಾನ್‌ ಮೇಲಿನ ಇಸ್ರೇಲ್ ಆಕ್ರಮಣವನ್ನು ಉಲ್ಲೇಖಿಸಿದ ರಾಯ್, ಇಸ್ರೇಲ್‌ನ ಮಿಲಿಟರಿ ಕ್ರಮಗಳ ವಿರುದ್ದ ಕಿಡಿಕಾರಿದರು. ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳು ನರಮೇಧ ನಡೆಸುತ್ತಿವೆ ಎಂದರು. ಇಸ್ರೇಲ್‌ಗೆ ಯುಎಸ್‌ ಸರ್ಕಾರದ ಬೆಂಬಲವನ್ನು ಅವರು ಖಂಡಿಸಿದರು.

ಅಕ್ಟೋಬರ್ 7, 2023ರಿಂದ, ಇಸ್ರೇಲ್ ಗಾಝಾದಲ್ಲಿ ಸಾವಿರಾರು ಜನರನ್ನು ಕೊಂದಿದೆ. ಅದರ ಬಹುಪಾಲು ಜನರನ್ನು ಸ್ಥಳಾಂತರಿಸಿದೆ. ಈ ಕೃತ್ಯಗಳು ಕೇವಲ ಆತ್ಮರಕ್ಷಣೆಯಲ್ಲ, ಬದಲಾಗಿ ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್‌ನ ಆಕ್ರಮಣವನ್ನು ಗಟ್ಟಿಗೊಳಿಸುವ ಮತ್ತು ಅದರ ವರ್ಣಭೇದ ನೀತಿಯನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿರುವ ಆಕ್ರಮಣಕಾರಿ ಯುದ್ಧದ ಲೆಕ್ಕಾಚಾರವಾಗಿದೆ ಎಂದು ರಾಯ್ ಒತ್ತಿ ಹೇಳಿದರು.

ಇದನ್ನೂ ಓದಿ : ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...