Homeಮುಖಪುಟ'ಪೆನ್ ಪಿಂಟರ್' ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡಿದ ಲೇಖಕಿ

- Advertisement -
- Advertisement -

ಖ್ಯಾತ ಲೇಖಕಿ ಹಾಗೂ ಹೋರಾಟಗಾರ್ತಿ ಅರುಂಧತಿ ರಾಯ್ ಅವರು ತಮ್ಮ ‘ಪೆನ್ ಪಿಂಟರ್’ (PEN Pinter) ಪ್ರಶಸ್ತಿಯ ಹಣವನ್ನು ಪ್ಯಾಲೆಸ್ತೀನ್ ಮಕ್ಕಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಶಸ್ತಿಗೆ ತನ್ನ ಹೆಸರು ಘೋಷಣೆಯಾಗುತ್ತಿದ್ದಂತೆ ಅರುಂಧತಿ ರಾಯ್ ಬಹುಮಾನದ ಮೊತ್ತವನ್ನು ಪ್ಯಾಲೆಸ್ತೀನ್ ಮಕ್ಕಳಿಗಾಗಿ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಬ್ರಿಟಿಷ್-ಈಜಿಪ್ಟ್‌ ಬರಹಗಾರ ಮತ್ತು ಹೋರಾಟಗಾರ ಅಲಾ ಅಬ್ದುಲ್ ಫತ್ತಾಹ್ ಅವರನ್ನು ‘ರೈಟರ್ ಆಫ್ ಕರೇಜ್’ (ಧೈರ್ಯದ ಬರಹಗಾರ) ಎಂದು ಹೆಸರಿಸಿದ್ದಾರೆ. ಈಜಿಪ್ಟ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಅಬ್ದುಲ್ ಫತ್ತಾಹ್ ಅವರ ಧೈರ್ಯವನ್ನು ಗುರುತಿಸಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಅಕ್ಟೋಬರ್ 10ರಂದು ಲಂಡನ್‌ನ ಬ್ರಿಟಿಷ್ ಲೈಬ್ರರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಪ್ರಶಸ್ತಿಯ ಮಹತ್ವ ಮತ್ತು ಬರಹಗಾರರ ಪಾತ್ರದ ಬಗ್ಗೆ ಅರುಂಧತಿ ರಾಯ್ ಮಾತನಾಡಿದರು. ಅಲಾ ಅಬ್ದುಲ್ ಫತ್ತಾಹ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ರಾಯ್, “ನೀವು ಈ ಕೋಣೆಯಲ್ಲಿ ನಮ್ಮೊಂದಿಗೆ ಇದ್ದೀರಿ. ನೀವು ಇಲ್ಲಿಯ ಅತ್ಯಂತ ಪ್ರಮುಖ ವ್ಯಕ್ತಿ” ಎಂದರು. ಅಬ್ದುಲ್ ಫತ್ತಾಹ್ ಅವರ ವಾಕ್ಯಗಳನ್ನು ಉಲ್ಲೇಖಿಸಿದ ರಾಯ್ ಜಗತ್ತಿನ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಅಬ್ದುಲ್ ಫತ್ತಾಹ್ ಅವರ ಉತ್ಸಾಹ ಮತ್ತು ಬರಹಗಳಿಗೆ ಗೌರವ ಸಲ್ಲಿಸಿದ ರಾಯ್, ಇದು ಫತ್ತಾಹ್ ಅವರ ‘ಅನ್ಯಾಯದ ಸೆರೆವಾಸದ ಬಗೆಗಿನ ಅತಿ ಮಹತ್ವದ ಜಾಗೃತಿ” ಎಂದರು.

ಬ್ರಿಟಿಷ್-ಈಜಿಪ್ಟಿನ ಬರಹಗಾರ, ಸಾಫ್ಟ್‌ವೇರ್ ಡೆವಲಪರ್ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಅಲಾ ಅಬ್ದುಲ್ ಫತ್ತಾಹ್ ಅವರು ಈಜಿಪ್ಟ್ ಜೈಲಿನಲ್ಲಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರಿಗೆ ಜೈಲು ಶಿಕ್ಷೆ ಪೂರ್ಣವಾದರೂ ಇನ್ನು ಈಜಿಪ್ಟ್ ಜೈಲಿನಲ್ಲಿದ್ದಾರೆ.

ರಾಯ್ ತನ್ನ ಭಾಷಣದಲ್ಲಿ ಜಾಗತಿಕವಾಗಿ ನಡೆಯುತ್ತಿರುವ ಅನ್ಯಾಯದ ಗಡಿ ವಿವಾದಗಳು, ಜಾಗತಿಕ, ವಿಶೇಷವಾಗಿ ಭಾರತದ ರಾಜಕೀಯ ಕೈದಿಗಳ ಪರಿಸ್ಥಿತಿಯ ಬಗ್ಗೆ ಒತ್ತಿ ಹೇಳಿದರು. ತನ್ನ ಭಾಷಣದಲ್ಲಿ ಭಾರತ ಜೈಲುಗಳಲ್ಲಿ ಬಂಧಿಯಾಗಿರುವ ತನ್ನ ಸ್ನೇಹಿತರು ಹಾಗೂ ಹೋರಾಟಗಾರರಾದ ಉಮರ್ ಖಾಲಿದ್, ಗುಲ್ಫಿಶಾ ಫಾತಿಮಾ, ಖುರ್ರಮ್ ಫರ್ವೇಝ್ ಸೇರಿದಂತೆ ಹಲವರನ್ನು ನೆನಪಿಸಿದರು. ಅನ್ಯಾಯದ ಬಂಧನಗಳ ಕುರಿತು ಅವರು ಅತಂಕ ವ್ಯಕ್ತಪಡಿಸಿದರು.

ಪೆನ್ ಪಿಂಟರ್ ಪ್ರಶಸ್ತಿಯ ಕುರಿತು ಮಾತನಾಡಿದ ರಾಯ್ ಅವರು, ಹೆರಾಲ್ಡ್ ಪಿಂಟರ್ ಅವರು ‘ಅಚಲವಾದ ಧೈರ್ಯ’ದ ಕಲ್ಪನೆಯೊಂದಿಗೆ ಹೇಗೆ ಗುರುತಿಸಿಕೊಂಡರು ಎಂಬುವುದನ್ನು ವಿವರಿಸಿದರು.

ತನ್ನ ಭಾಷಣದ ಕೊನೆಯ ಭಾಗದಲ್ಲಿ ಗಾಝಾ ಮತ್ತು ಲೆಬನಾನ್‌ ಮೇಲಿನ ಇಸ್ರೇಲ್ ಆಕ್ರಮಣವನ್ನು ಉಲ್ಲೇಖಿಸಿದ ರಾಯ್, ಇಸ್ರೇಲ್‌ನ ಮಿಲಿಟರಿ ಕ್ರಮಗಳ ವಿರುದ್ದ ಕಿಡಿಕಾರಿದರು. ಇಸ್ರೇಲ್ ಮತ್ತು ಅದರ ಮಿತ್ರರಾಷ್ಟ್ರಗಳು ನರಮೇಧ ನಡೆಸುತ್ತಿವೆ ಎಂದರು. ಇಸ್ರೇಲ್‌ಗೆ ಯುಎಸ್‌ ಸರ್ಕಾರದ ಬೆಂಬಲವನ್ನು ಅವರು ಖಂಡಿಸಿದರು.

ಅಕ್ಟೋಬರ್ 7, 2023ರಿಂದ, ಇಸ್ರೇಲ್ ಗಾಝಾದಲ್ಲಿ ಸಾವಿರಾರು ಜನರನ್ನು ಕೊಂದಿದೆ. ಅದರ ಬಹುಪಾಲು ಜನರನ್ನು ಸ್ಥಳಾಂತರಿಸಿದೆ. ಈ ಕೃತ್ಯಗಳು ಕೇವಲ ಆತ್ಮರಕ್ಷಣೆಯಲ್ಲ, ಬದಲಾಗಿ ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್‌ನ ಆಕ್ರಮಣವನ್ನು ಗಟ್ಟಿಗೊಳಿಸುವ ಮತ್ತು ಅದರ ವರ್ಣಭೇದ ನೀತಿಯನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿರುವ ಆಕ್ರಮಣಕಾರಿ ಯುದ್ಧದ ಲೆಕ್ಕಾಚಾರವಾಗಿದೆ ಎಂದು ರಾಯ್ ಒತ್ತಿ ಹೇಳಿದರು.

ಇದನ್ನೂ ಓದಿ : ಭಾರತದಲ್ಲಿ ಗಂಭೀರ ಹಸಿವು | 127 ದೇಶಗಳಲ್ಲಿ 105 ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...