Homeಕರ್ನಾಟಕತಾವಾಡಿದ ಮಾತುಗಳಿಗೆ ಕ್ಷಮೆ ಕೋರಿದ ಅರವಿಂದ್ ಬೆಲ್ಲದ್; 'ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ' ಎಂದ ಸಿಎಂ

ತಾವಾಡಿದ ಮಾತುಗಳಿಗೆ ಕ್ಷಮೆ ಕೋರಿದ ಅರವಿಂದ್ ಬೆಲ್ಲದ್; ‘ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ’ ಎಂದ ಸಿಎಂ

- Advertisement -
- Advertisement -

ಕಳೆದ ಶನಿವಾರ ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ವಿಧಾನಸಭೆ ವಿರೋಧ ಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, “ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ” ಎಂದು ಪದ ಬಳಕೆ ಮಾಡಿದ ನಂತರ ಇಂದು ಕ್ಷಮೆಯಾಚಿಸಿದ್ದಾರೆ. ‘ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಕೂಡಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅರವಿಂದ ಬೆಲ್ಲದ, “ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ವೇಗವಾಗಿ ಹೇಳಿರುತ್ತೇನೆ. ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ. ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ” ಎಂದು ಕೋರಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ” ಎಂದು ಹೇಳಿದ್ದಾರೆ.

“ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ” ಎಂದಿದ್ದಾರೆ.

“ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ” ಎಂದು ಬೆಲ್ಲದ್ ಕ್ಷಮೆಯಾಚನೆಯನ್ನು ಸಿಎಂ ಒಪ್ಪಿಕೊಂಡಿದ್ದಾರೆ.

“ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ” ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ‘ಒಳಮೀಸಲಾತಿ ವಿರೋಧಿಸುವ ಮಾಯಾವತಿ ತೀರ್ಮಾನದ ಬಗ್ಗೆ ಭಿನ್ನಾಭಿಪ್ರಾಯವಿದೆ..’; ರಾಜೀನಾಮೆ ನೀಡಿದ ರಾಜ್ಯ ಬಿಎಸ್‌ಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...