Homeಕರ್ನಾಟಕತಾವಾಡಿದ ಮಾತುಗಳಿಗೆ ಕ್ಷಮೆ ಕೋರಿದ ಅರವಿಂದ್ ಬೆಲ್ಲದ್; 'ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ' ಎಂದ ಸಿಎಂ

ತಾವಾಡಿದ ಮಾತುಗಳಿಗೆ ಕ್ಷಮೆ ಕೋರಿದ ಅರವಿಂದ್ ಬೆಲ್ಲದ್; ‘ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ’ ಎಂದ ಸಿಎಂ

- Advertisement -
- Advertisement -

ಕಳೆದ ಶನಿವಾರ ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ವಿಧಾನಸಭೆ ವಿರೋಧ ಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, “ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ” ಎಂದು ಪದ ಬಳಕೆ ಮಾಡಿದ ನಂತರ ಇಂದು ಕ್ಷಮೆಯಾಚಿಸಿದ್ದಾರೆ. ‘ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಕೂಡಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅರವಿಂದ ಬೆಲ್ಲದ, “ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ವೇಗವಾಗಿ ಹೇಳಿರುತ್ತೇನೆ. ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ. ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ” ಎಂದು ಕೋರಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ” ಎಂದು ಹೇಳಿದ್ದಾರೆ.

“ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ” ಎಂದಿದ್ದಾರೆ.

“ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ” ಎಂದು ಬೆಲ್ಲದ್ ಕ್ಷಮೆಯಾಚನೆಯನ್ನು ಸಿಎಂ ಒಪ್ಪಿಕೊಂಡಿದ್ದಾರೆ.

“ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ” ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ‘ಒಳಮೀಸಲಾತಿ ವಿರೋಧಿಸುವ ಮಾಯಾವತಿ ತೀರ್ಮಾನದ ಬಗ್ಗೆ ಭಿನ್ನಾಭಿಪ್ರಾಯವಿದೆ..’; ರಾಜೀನಾಮೆ ನೀಡಿದ ರಾಜ್ಯ ಬಿಎಸ್‌ಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...