Homeಮುಖಪುಟದೆಹಲಿ | ಮಹಿಳೆಯರಿಗೆ ಮಾಸಿಕ ₹1000 ನೀಡುವ ಯೋಜನೆಗೆ ಕೇಜ್ರಿವಾಲ್ ಚಾಲನೆ

ದೆಹಲಿ | ಮಹಿಳೆಯರಿಗೆ ಮಾಸಿಕ ₹1000 ನೀಡುವ ಯೋಜನೆಗೆ ಕೇಜ್ರಿವಾಲ್ ಚಾಲನೆ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯ ಮಹಿಳೆಯರಿಗೆ ಮಾಸಿಕ 1000 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವ ‘ಮುಖ್ಯಮಂತ್ರಿ ಮಹಿಳಾ ಸಮ್ಮಾನ ಯೋಜನೆ’ಗೆ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗುರುವಾರ (ಡಿ.12) ಚಾಲನೆ ನೀಡಿದ್ದಾರೆ.

ದೆಹಲಿ ವಿಧಾನಸಭೆಗೆ ಮುಂದಿನ ವರ್ಷದ(2025) ಫೆಬ್ರವರಿಯಲ್ಲಿ ಅಥವಾ ಅದಕ್ಕಿಂತ ಮೊದಲು ಚುನಾವಣೆಯ ನಡೆಯುವ ಸಾಧ್ಯತೆ ಇದೆ. ಆ ಬಳಿಕ ಆರ್ಥಿಕ ನೆರವನ್ನು 2,100 ರೂ.ಗೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಅದಾಗ್ಯೂ, ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆ, ಮತದಾನದ ಬಳಿಕವಷ್ಟೇ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಗುರುವಾರ ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, “ಮುಂದಿನ 15 ದಿನಗಳಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾಗಿ, ಹಣ ಜಮೆ ಮಾಡುವುದು ಅಸಾಧ್ಯ. ಹೆಚ್ಚುತ್ತಿರುವ ಹಣದುಬ್ಬರದ ನಡುವೆ 1000 ಸಾವಿರ ರೂ.ಆರ್ಥಿಕ ನೆರವು ಬಹಳ ಕಡಿಮೆ ಆಯಿತು ಎಂದು ಹಲವು ಮಹಿಳೆಯರು ನನ್ನ ಬಳಿ ಬಂದು ಹೇಳಿದ್ದಾರೆ. ನಾಳೆಯಿಂದ ಮುಖ್ಯಮಂತ್ರಿ ಮಹಿಳಾ ಸಮ್ಮಾನ ಯೋಜನೆಯ ನೋಂದಣಿ ಪ್ರಾರಂಭವಾಗಲಿದೆ. 2,100 ರೂ.ಗೆ ನೋಂದಣಿ ಮಾಡಲಾಗುತ್ತದೆ” ಎಂದು ತಿಳಿಸಿದ್ದಾರೆ.

“ಮುಂದಿನ ಎರಡ್ಮೂರು ದಿನಗಳಲ್ಲಿ ಎಎಪಿ ಕಾರ್ಯಕರ್ತರು ಮನೆ ಮನೆಗೆ ಹೋಗಿ ಮಹಿಳೆಯರ ಮಾಹಿತಿ ಪಡೆದು, ನೋಂದಣಿ ಕಾರ್ಡ್‌ಗಳನ್ನು ನೀಡಲಿದ್ದಾರೆ. ನೋಂದಣಿ ಕಾರ್ಡ್‌ಗಳನ್ನು ಸುರಕ್ಷಿತವಾಗಿ ಇರಿಸಿ. ದೆಹಲಿ ಚುನಾವಣೆಯ ನಂತರ, ತಿಂಗಳಿಗೆ 1000 ರೂ. ಯೋಜನೆಯನ್ನು 2100 ರೂ. ಯೋಜನೆಯಾಗಿ ಬದಲಾಯಿಸಲಾಗುತ್ತದೆ.ನೀವು ತಿಂಗಳಿಗೆ 2,100 ರೂ.ಪಡೆಯಲಿದ್ದೀರಿ” ಎಂದು ಮುಖ್ಯಮಂತ್ರಿ ಅತಿಥಿ ಇದ್ದ ಕಾರ್ಯಕ್ರಮದಲ್ಲಿ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಅಥವಾ ಪಿಂಚಣಿದಾರರಲ್ಲದಂತಹ ಕೆಲ ಷರತ್ತುಗಳನ್ನು ಪೂರೈಸುವ ದೆಹಲಿಯಲ್ಲಿರುವ ಎಲ್ಲಾ ಮಹಿಳೆಯರು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ವರದಿಗಳು ಹೇಳಿವೆ.

ಈ ವರ್ಷದ ಆರಂಭದಲ್ಲಿ ವಾರ್ಷಿಕ ಬಜೆಟ್ ಭಾಷಣದಲ್ಲಿ 1,000 ರೂ.ನೀಡುವ ಯೋಜನೆ ಪ್ರಾರಂಭಿಸಲಾಗುವುದು ಎಂದು ನಾನು ಹೇಳಿದ್ದೆ. ಆದರೆ ‘ಸುಳ್ಳು ಪ್ರಕರಣದಲ್ಲಿ’ ನನ್ನನ್ನು ಜೈಲಿಗೆ ಹಾಕಿದ್ದರಿಂದ ಯೋಜನೆ ಜಾರಿಗೆ ತರಲು ಸಾಧ್ಯವಾಗಿರಲಿಲ್ಲ ಎಂದು ಇದೇ ವೇಳೆ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ : ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಯಾವುದೇ ಪ್ರಸ್ತಾವನೆ ಇಲ್ಲ : ಸಂಸತ್ತಿಗೆ ತಿಳಿಸಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...