Homeಮುಖಪುಟಅರವಿಂದ್ ಕೇಜ್ರಿವಾಲ್ ಮೇಲೆ ನೀರು ಎರಚಿ ದಾಳಿಗೆ ಯತ್ನ; ಆರೋಪಿ ಬಂಧನ

ಅರವಿಂದ್ ಕೇಜ್ರಿವಾಲ್ ಮೇಲೆ ನೀರು ಎರಚಿ ದಾಳಿಗೆ ಯತ್ನ; ಆರೋಪಿ ಬಂಧನ

- Advertisement -
- Advertisement -

ಶನಿವಾರ ಸಂಜೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ನೀರು ಎರಚಿ ದಾಳಿಗೆ ಪ್ರಯತ್ನಿಸಿದ ಘಟನೆ ನಡೆದಿದೆ. ವ್ಯಕ್ತಿಯನ್ನು ತಕ್ಷಣವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ ವ್ಯಕ್ತಿಯು ಕೇಜ್ರಿವಾಲ್ ಮೇಲೆ ನೀರು ಎರಚಿರುವುದು ದಾಖಲಾಗಿದೆ. ಆರೋಪಿಯನ್ನು ಖಾನ್ಪುರ್ ಡಿಪೋದ ಬಸ್ ಮಾರ್ಷಲ್ ಅಶೋಕ್ ಝಾ ಎಂದು ಗುರುತಿಸಲಾಗಿದೆ.

ರಾಷ್ಟ್ರ ರಾಜಧಾನಿಯ ಶೇಖ್ ಸರಾಯ್ ಪ್ರದೇಶದಲ್ಲಿ ಕೇಜ್ರಿವಾಲ್ ಅವರು ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದಾಗ ಕೇಜ್ರಿವಾಲ್ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು ಕಿರಿದಾದ ಹಾದಿಯಲ್ಲಿ ನಡೆದು ಜನರಿಗೆ ಶುಭಾಶಯ ಕೋರುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜನಸಂದಣಿ ನಿಯಂತ್ರಣಕ್ಕಾಗಿ ಸರಿಯಾದ ಪೋಲೀಸ್ ನಿಯೋಜನೆಯ ಹೊರತಾಗಿಯೂ, ಸಂಜೆ 5.50 ರ ಸುಮಾರಿಗೆ, ಖಾನ್ಪುರ್ ಡಿಪೋದ ಬಸ್ ಮಾರ್ಷಲ್ ಅಶೋಕ್ ಝಾ ಅವರು ಕೇಜ್ರಿವಾಲ್ ಮೇಲೆ ನೀರು ಎರಚಲು ಪ್ರಯತ್ನಿಸಿದರು. ಸಮೀಪದಲ್ಲಿದ್ದ ಪೊಲೀಸರು ಝಾ ಅವರನ್ನು ಬಂಧಿಸಿದ್ದರಿಂದ ಅವರ ಪ್ರಯತ್ನವನ್ನು ತಕ್ಷಣವೇ ವಿಫಲಗೊಳಿಸಲಾಯಿತು” ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಅಂಕಿತ್ ಚೌಹಾನ್ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಈ ಕೃತ್ಯದ ಹಿಂದಿನ ಉದ್ದೇಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಚೌಹಾಣ್ ಹೇಳಿದ್ದಾರೆ. ಅರಂಭದಲ್ಲಿ ಕೇಜ್ರಿವಾಲ್ ಅವರ ಮೇಲೆ ‘ದ್ರವ’ ಎರಚಲಾಗಿದೆ ಎಂದು ವರದಿಯಾಗಿತ್ತು. ನಂತರ ಎರಚಿದ್ದು ನೀರು ಎಂದು ಸ್ಪಷ್ಟಪಡಿಲಾಗಿದೆ ಎಂದು ವರದಿ ಉಲ್ಲೇಖಿಸಿವೆ.

ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಮೇಲೆ ದಾಳಿ ನಡೆಸಿದ ವ್ಯಕ್ತಿ ಬಿಜೆಪಿಯೊಂದಿಗೆ ನಂಟು ಹೊಂದಿದ್ದಾನೆ ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

“ಬಿಜೆಪಿ ನಾಯಕರು ಎಲ್ಲಾ ರಾಜ್ಯಗಳಲ್ಲಿ ರ‍್ಯಾಲಿಗಳನ್ನು ನಡೆಸುತ್ತಾರೆ, ಆದರೆ ಅವರು ಎಂದಿಗೂ ದಾಳಿಗೆ ಒಳಗಾಗಿಲ್ಲ… ಅರವಿಂದ್ ಕೇಜ್ರಿವಾಲ್ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ… ನಂಗ್ಲೋಯ್‌ನಲ್ಲಿ ಬಿಜೆಪಿ ಅವರ ಮೇಲೆ ಹಲ್ಲೆ ನಡೆಸಿದೆ. ಛತ್ತರ್‌ಪುರದಲ್ಲಿ ಅವರ ಮೇಲೆ ದಾಳಿ ನಡೆದಿದೆ… ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದ್ದು, ಕೇಂದ್ರ ಸರ್ಕಾರ ಮತ್ತು ಗೃಹ ಸಚಿವರು ಏನೂ ಮಾಡುತ್ತಿಲ್ಲ…” ಎಂದು ” ಎಂದು ಗ್ರೇಟರ್ ಕೈಲಾಶ್ ಶಾಸಕ ತಿಳಿಸಿದ್ದಾರೆ.

ದೆಹಲಿಯ ನಂಗ್ಲೋಯ್ ಪ್ರದೇಶದಲ್ಲಿ ಬುಧವಾರ ಬಿಜೆಪಿ ನೇತೃತ್ವದಲ್ಲಿ ಕೇಜ್ರಿವಾಲ್ ವಿರುದ್ಧ ಪ್ರತಿಭಟನೆ ನಡಸಲಾಗಿತ್ತು. ಹಾಗಾಗಿ ಅವರ ಭೇಟಿಯನ್ನು ಮಧ್ಯದಲ್ಲಿ ರದ್ದುಗೊಳಿಸಬೇಕಾಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಘಟನೆ ಬಗ್ಗೆ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಪ್ರತಿಕ್ರಿಯಿಸಿದ್ದು, “ಇಂದು ಹಗಲು ಹೊತ್ತಿನಲ್ಲಿ ಬಿಜೆಪಿ ಕಾರ್ಯಕರ್ತ ಅರವಿಂದ್ ಕೇಜ್ರಿವಾಲ್ ಮೇಲೆ ಹಲ್ಲೆ ನಡೆಸಿದ್ದಾನೆ. ದೆಹಲಿ ಚುನಾವಣೆಯಲ್ಲಿ ಮೂರನೇ ಬಾರಿಗೆ ಸೋತಿರುವ ಬಗ್ಗೆ ಬಿಜೆಪಿ ಆತಂಕದಲ್ಲಿದೆ. ದೆಹಲಿಯ ಜನರು ಇಂತಹ ಅಗ್ಗದ ಕೃತ್ಯಗಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಾರೆ. ಕಳೆದ ಬಾರಿ ಅವರು [ಬಿಜೆಪಿ] ಎಂಟು ಸ್ಥಾನಗಳನ್ನು ಪಡೆದಿದ್ದರು. ಈ ಬಾರಿ ದೆಹಲಿ ಜನರು ಬಿಜೆಪಿಗೆ ಶೂನ್ಯ ಸ್ಥಾನಗಳನ್ನು ನೀಡುತ್ತಾರೆ” ಎಂದು ಹೇಳಿದ್ದಾರೆ.

ಅದಾಗ್ಯೂ ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ಚುನಾವಣೆಗೆ ಮುನ್ನ ಕೇಜ್ರಿವಾಲ್ ಹಳೆಯ ತಂತ್ರಕ್ಕೆ ಮರಳಿದ್ದಾರೆ ಎಂದು ಹೇಳಿದೆ.

“ಅರವಿಂದ್ ಕೇಜ್ರಿವಾಲ್ ಅವರ ಪ್ರತಿಯೊಂದು ರಾಜಕೀಯ ತಂತ್ರವೂ ವಿಫಲವಾಗಿದೆ. ಈಗ ಅವನು ತನ್ನ ಹಳೆಯ ತಂತ್ರಗಳಿಗೆ ಹೊರಳಿದ್ದಾರೆ. ಈ ಹಳೆಯ ತಂತ್ರಗಳಲ್ಲಿ ಅವರಿಗೆ ಕಪಾಳಮೋಕ್ಷ ಮತ್ತು ಅವನ ಮೇಲೆ ಶಾಯಿಯನ್ನು ಎರಚಲಾಗುತ್ತದೆ. ಅಂತಹದ್ದೇ ಘಟನೆ ಇಂದು ನಡೆದಿದೆ. ಅರವಿಂದ್ ಕೇಜ್ರಿವಾಲ್ ಅವರು ಇಂದು ಯಾವ ಹೊಸ ಆಟವನ್ನು ಪ್ರಾರಂಭಿಸಿದ್ದಾರೆ ಎಂದು ಅವರೇ ಹೇಳಬೇಕು” ಎಂದು ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಹೇಳಿದ್ದಾರೆ.

2016ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಕೇಜ್ರಿವಾಲ್ ಮೇಲೆ ಶಾಯಿ ಎರಚಿದ್ದ. ಆಗ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿದ್ದರು. ದೆಹಲಿಯಲ್ಲಿ ಫೆಬ್ರವರಿ ವೇಳೆ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...